Connect with us

BANTWAL

ಅ.25ರಂದು ಮಂಗಳವಾರ ಸೂರ್ಯಗ್ರಹಣ ಹಿನ್ನೆಲೆ : ನಾಡಿನ ಅನೇಕ ದೇವಾಲಯಗಳಲ್ಲಿ ದೇವರ ದರ್ಶನ- ಪೂಜೆಗಳಲ್ಲಿ ವ್ಯತ್ಯಯ..!

Published

on

ಬೆಂಗಳೂರು: ಅ.25ರಂದು ಮಂಗಳವಾರ ಸಂಭವಿಸಲಿರುವ ಸೂರ್ಯಗ್ರಹಣದಿಂದಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.

ಬೆಳ್ತಂಗಡಿ: ಅ.25ರಂದು ಸೂರ್ಯಗ್ರಹಣ ಇರುವುದರಿಂದ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಅಂದು ಮಧ್ಯಾಹ್ನ 2.30ರಿಂದ ರಾತ್ರಿ 7.30ರ ವರೆಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ.

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.25ರಂದು ಯಾವುದೇ ಸೇವೆಗಳು ಮತ್ತು ಭೋಜನ ಪ್ರಸಾದ ಇರುವುದಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ.ಅಂದು ಬೆಳಿಗ್ಗೆ 7ರಿಂದ 8.30ರತನಕ, 10.30ರಿಂದ ಮಧ್ಯಾಹ್ನ 1ರತನಕ ಹಾಗೂ ಗ್ರಹಣದ ಸಮಯವಾದ ಸಂಜೆ 5.11ರಿಂದ 6.28ರ ತನಕ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಂತರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಅ.26ರಂದು ಬೆಳಿಗ್ಗೆ ದೇವಳದಲ್ಲಿ ಶುದ್ಧಿ ಕಾರ್ಯದ ಬಳಿಕ ನಿತ್ಯ ಪೂಜೆ ನಡೆಯಲಿದೆ. ಹೀಗಾಗಿ, 9 ಗಂಟೆಯ ನಂತರ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಆ ಬಳಿಕ ಸೇವಾಧಿಗಳು ಆರಂಭಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ಚಿಕ್ಕಮಗಳೂರು : ‘ಅ.25ರಂದು ಹೊರನಾಡು ಅನ್ನಪೂಣೇಶ್ವರಿ ದೇವಸ್ಥಾನದಲ್ಲಿ ಪ್ರಸಾದ ಭೋಜನ ಮತ್ತು ಪೂಜೆಯ ಸಮಯದಲ್ಲಿ ಕೆಲ ಬದಲಾವಣೆ ಇರಲಿದೆ’ ಎಂದು ದೇವಸ್ಥಾನದ ಮುಖ್ಯಸ್ಥ ಜಿ.ಭೀಮೇಶ್ವರ ಜೋಷಿ ಹೇಳಿದರು.

ಗ್ರಹಣ ಸ್ಪರ್ಶ ಕಾಲದಿಂದ ಗ್ರಹಣ ಮೋಕ್ಷ ಕಾಲದವರೆಗೆ ದೇವಿಗೆ ನಿರಂತರ ಅಭಿಷೇಕ ನೆರವೇರುತ್ತದೆ. ಮಧ್ಯಾಹ್ನ 11ರಿಂದ 12ರವರೆಗೆ ಮಾತ್ರ ಪ್ರಸಾದ ಭೋಜನ ಇರುತ್ತದೆ. ಮಹಾಮಂಗಳಾರತಿ 1.30ಕ್ಕೆ ನಡೆಯಲಿದೆ. ಎಂದಿನಂತೆ ದೇವಿಯ ದರ್ಶನ ಮತ್ತು ಅರ್ಚನೆ ಸಂಜೆ 4ರವರೆಗೆ ಇರಲಿದೆ. ಗ್ರಹಣ ಮುಗಿದು ಶುದ್ಧಿ ಕಾರ್ಯ ನಡೆದ ನಂತರ, ಎಂದಿನಂತೆ ಪೂಜೆ, ಪ್ರಸಾದ ಇರುತ್ತದೆ. ಭಕ್ತರು ಈ ಬದಲಾವಣೆ ಗಮನಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಅರಸೀಕೆರೆ: ಹೋಬಳಿಯ ಉಚ್ಚಂಗಿ ದುರ್ಗ ಗ್ರಾಮದ ಐತಿಹಾಸಿಕ ಉತ್ಸವಾಂಬ ದೇವಿ ದರ್ಶನವನ್ನು ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಅ.25ರ ಮಂಗಳವಾರ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಅಂದು ಮಧ್ಯಾಹ್ನ 2.28ರಿಂದ ಸಂಜೆ 6.38ರ ವರೆಗೆ ಗ್ರಹಣ ಸಂಭವಿಸಲಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನ ಪ್ರವೇಶ ನಿಷೇಧಿಸಲಾಗಿದೆ ಎಂದು ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊರಟಗೆರೆ: ಸೂರ್ಯಗ್ರಹಣದ ನಿಮಿತ್ತ ಅ. 25ರಂದು ತಾಲ್ಲೂಕಿನ ಗೊರವನಹಳ್ಳಿ ಮಹಾಲಕ್ಷ್ಮಿ ದೇವಿಯ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.ಅಮಾವಾಸ್ಯೆ ದಿನದಂದು ಸೂರ್ಯಗ್ರಹಣದ ಪ್ರಯುಕ್ತ ಮಂಗಳವಾರ ಮಧ್ಯಾಹ್ನ 2.30 ಗಂಟೆಯಿಂದ ದೇವಿಯ ದರ್ಶನಕ್ಕೆ ಅವಕಾಶವಿರುವುದಿಲ್ಲ. ಸಂಜೆ 6.28 ಗಂಟೆಗೆ ಗ್ರಹಣ ಮೋಕ್ಷವಾಗಲಿದೆ. ಅ. 26ರಂದು ಬೆಳಿಗ್ಗೆ ಎಂದಿನಂತೆ ದೇವಿಯ ದರ್ಶನ ಪ್ರಾರಂಭವಾಗಲಿದೆ ಎಂದು ದೇಗುಲ ಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ: ಅ.25 ರಂದು ತಾಲ್ಲೂಕಿನ ಘಾಟಿ ಕ್ಷೇತ್ರದಲ್ಲಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ದೇವರಿಗೆ ಬೆಳಿಗ್ಗೆ 6.30ಕ್ಕೆ ಅಭಿಷೇಕ ಪ್ರಾರಂಭವಾಗುತ್ತದೆ. ಮಹಾಮಂಗಳಾರತಿ ಬೆಳಗ್ಗೆ 8ಕ್ಕೆ ನೆರವೇರಲಿದೆ. ಬೆಳಿಗ್ಗೆ 10.30ರ ವರೆಗೆ ಮಾತ್ರ ದೇವರ ದರ್ಶನ ಇರುತ್ತದೆ. ನಂತರ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.

ಶ್ರೀ ಕ್ಷೇತ್ರ ಕುದ್ರೊಳಿ : ಅಮಾವಾಸ್ಯೆ ದಿನ ಹಾಗೂ ಸೂರ್ಯಗ್ರಹಣ ನಿಮಿತ್ತ ಮಂಗಳೂರಿನ ಕುದ್ರೊಳಿಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅಂದು ಮಧ್ಯಾಹ್ನದ ಪೂಜೆ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ನಂತರ ರಾತ್ರಿ 7.30ರವರೆಗೆ ದೇವರ ದರ್ಶನಕ್ಕೆ ಅವಕಾಶವಿದೆ. ಯಾವುದೇ ಸೇವೆಗಳು ಇರುವುದಿಲ್ಲ. ಗ್ರಹಣ ಮೋಕ್ಷ ಬಳಿಕ ರಾತ್ರಿ 7.30ರ ನಂತರ ಮಹಾಪೂಜೆ ನಡೆಯಲಿದೆ ಎಂದು ದೇವಳಧ ಆಡಳಿತ ಮಂಡಳಿ ತಿಳಿಸಿದೆ.
ಹಾಸನ : ಇತಿಹಾಸ ಪ್ರಸಿದ್ದ ಪವಾಡ ಕ್ಷೇತ್ರ ಹಾಸನದ ಹಾಸನಾಂಬೆ ದೇವಿ ದರ್ಶನ ಕೂಡ ಇರುವುದಿಲ್ಲ ಜೊತೆಗೆ ಪಕ್ಕದ ಬೇಲೂರು ಚನ್ನಕೇಶವ ದೇವಸ್ಥಾನ ಕೂಡ ಮುಚ್ಚಲಾಗುತ್ತಿದೆ ಎಂದು ದೇವಳದ ಆಡಳಿತ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಮೇಲುಕೋಟೆ ಚಲುವನಾರಾಯಣಸ್ವಾಮಿ, ಶ್ರೀರಂಗಪಟ್ಟಣದ ನಿಮಿಷಾಂಬ ದೇಗುಲವನ್ನು ಸೂರ್ಯಗ್ರಹಣದ ವೇಳೆ ಮುಚ್ಚಲಾಗುತ್ತದೆ. ಮಂತ್ರಾಲಯದಲ್ಲಿ ದರ್ಶನಕ್ಕೆ ಅವಕಾಶವಿದೆ. ಆದರೆ, ಪೂಜೆ ನಡೆಯುವುದಿಲ್ಲ. ಹೊರನಾಡು ಅನ್ನಪೂರ್ಣೆಶ್ವರಿ ದೇವಸ್ಥಾನಕ್ಕೆ ಪ್ರವೇಶ ಇದ್ದು, ಪ್ರಸಾದ ಇರುವುದಿಲ್ಲ. ಸಿಗಂದೂರೇಶ್ವರಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರವೇಶ ಇರುವುದಿಲ್ಲ.

ಕಾಸರಗೋಡು: ಸೂರ್ಯಗ್ರಹಣ ಪ್ರಯುಕ್ತ ಅ.25ರಂದು ಕುಂಬಳೆ ಕಣಿಪುರ ಕಣಿಪುರ ಗೋಪಾಲಕೃಷ್ಣ ದೇವಾಲಯ, ಮಂಜೇಶ್ವರ ಮದನಂತೇಶ್ವರ, ಐಲ ದುರ್ಗಾಪರಮೇಶ್ವರಿ, ಬಾಯಾರು ಪಂಚಲಿಂಗೇಶ್ವರ, ಅನಂತಪುರ ಅನಂತಪದ್ಮನಾಭ, ಮುಜುಂಗಾವು ಪಾರ್ಥಸಾರಥಿ, ಅಡೂರು ಮಹಾಲಿಂಗೇಶ್ವರ, ಮಧೂರು ಮದನಂತೇಶ್ವರ ಸಿದ್ಧಿವಿನಾಯಕ, ಪೆರಡಾಲ ಉದನೇಶ್ವರ, ಕಾರ್ಮಾರು ಮಹಾವಿಷ್ಣು ದೇವಾಲಯ, ಕಾಟುಕುಕ್ಕೆ ಸುಬ್ರಾಯ, ಬಜಕೂಡ್ಲು ಮಹಾಲಿಂಗೇಶ್ವರ, ಬಂಗ್ರಮಂಜೇಶ್ವರ ಕೀರ್ತೇಶ್ವರ, ಶೇಡಿಕಾವು ಶಿವ ದೇವಾಲಯ ಸಹಿತ ವಿವಿಧೆಡೆ ಮಧ್ಯಾಹ್ನ ಪೂಜೆ ಇರುವುದಿಲ್ಲ ಎಂದು ಆಯಾ ದೇವಾಲಯದ ಪ್ರಕಟಣೆ ತಿಳಿಸಿವೆ.

ತಿರುಪತಿ :ಮೂರು ದಿನ ತಿರುಪತಿ ತಿಮ್ಮಪ್ಪನ ದರ್ಶನ ಇಲ್ಲ. ಅಕ್ಟೋಬರ್ 24ರಂದು ದೀಪಾವಳಿ ಆಚರಣೆ, ಅಕ್ಟೋಬರ್ 25ರಂದು ಸೂರ್ಯಗ್ರಹಣ ಮತ್ತು ನವೆಂಬರ್ 8ರಂದು ಚಂದ್ರಗ್ರಹಣದಿಂದಾಗಿ ಮೂರು ದಿನಗಳ ಭಕ್ತರಿಗೆ ಶ್ರೀವೆಂಕಟೇಶ್ವರ ಸ್ವಾಮಿ ದರ್ಶನ ಇರುವುದಿಲ್ಲ ಎಂದು ದೇವಳದ ಆಡಳಿತ ಮಂಡಳಿ ತಿಳಿಸಿದೆ.

 

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

BANTWAL

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ

Published

on

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.

ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.

ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್‌ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending