Connect with us

LATEST NEWS

ಯಶಸ್ವಿ ಜನಪ್ರತಿನಿಧಿಯಾಗಿ ಎರಡು ದಶಕ ಪೂರೈಸಿದ ನಮೋ: ಸೋಲಿಲ್ಲದ ಸರದಾರನಿಗೆ ಅಭಿನಂದನೆಗಳ ಮಹಾಪೂರ..!.

Published

on

ಯಶಸ್ವಿ ಜನಪ್ರತಿನಿಧಿಯಾಗಿ ಎರಡು ದಶಕ ಪೂರೈಸಿದ ನಮೋ: ಸೋಲಿಲ್ಲದ ಸರದಾರನಿಗೆ ಅಭಿನಂದನೆಗಳ ಮಹಾಪೂರ..!

ನವದೆಹಲಿ: ಕಳೆದ ಎರಡು ದಶಕಗಳಿಂದ ಚುನಾವಣೆಗಳಲ್ಲಿ ಒಮ್ಮೆಯೂ ಸೋಲು ಕಾಣದೇ ಯಶಸ್ವಿ ಚುನಾಯಿತ ಪ್ರತಿನಿಧಿಯಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನ ಮಂತ್ರಿಯಂತಹ ಉನ್ನತ ಹುದ್ದೆಗಳಲ್ಲಿ ಮುನ್ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಬಿಜೆಪಿ ಶ್ಲಾಘಿಸಿದೆ.


‘ಮೋದಿ ಅವರು ರಾಜಕೀಯದಲ್ಲಿ ದೊಡ್ಡ ದೊಡ್ಡ ಗೆಲುವುಗಳನ್ನು ಸಾಧಿಸಿದ್ದಾರೆ ಮತ್ತು ಜನಪ್ರಿಯತೆಯ ತುತ್ತ ತುದಿಗೆ ತಲುಪಿದ್ದಾರೆ’,

‘ಅಕ್ಟೋಬರ್ 7, 2001ರಲ್ಲಿ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಅಧಿಕಾರವಹಿಸಿಕೊಂಡಿದ್ದು, ಭಾರತೀಯ ರಾಜಕೀಯ ಇತಿಹಾಸದಲ್ಲೇ ಒಂದು ಮೈಲಿಗಲ್ಲು’ ಎಂದು ಬಣ್ಣಿಸಿದ್ದಾರೆ.

ಎಂದು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಟ್ವೀಟ್‌ ಮಾಡಿದ್ದಾರೆ. ಅಲ್ಲದೇ ‘ಗುಜರಾತ್‌ ಮುಖ್ಯಮಂತ್ರಿಯಾಗಿರಲಿ ಅಥವಾ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪ್ರಧಾನಿಯಾಗಿರಲಿ, ಮೋದಿ ಅವರು ಸದಾ ಜನರ ಕಲ್ಯಾಣಕ್ಕಾಗಿ ದುಡಿಯುತ್ತಿದ್ದಾರೆ’ ಎಂದು ಬಿಜೆಪಿ ಕೂಡ ಮೋದಿಯವರನ್ನು ಶ್ಲಾಘಿಸಿದೆ.
ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಹರದೀಪ್ ಸಿಂಗ್ ಪುರಿ, ’20 ವರ್ಷಗಳ ಕಾಲ ಬದ್ಧತೆ, ದೂರದರ್ಶಿತ್ವ ಹಾಗೂ ನಿಸ್ವಾರ್ಥವಾಗಿ ಭಾರತ ಮಾತೆಗೆ ಸೇವೆ ಸಲ್ಲಿಸಿದ್ದಾರೆ’ ಎಂದು ಹೊಗಳಿದ್ದಾರೆ.

‘ಪ್ರಜಾಪ್ರಭುತ್ವದ ಅನುಸಾರ ಆಯ್ಕೆಯಾಗಿ 20 ವರ್ಷಗಳಿಂದ ನಿರಂತರವಾಗಿ ಜನಸೇವೆ ಮಾಡುತ್ತಿರುವ ವಿಶ್ವದ ಅಪರೂಪದ ನಾಯಕ ಮೋದಿ ಅವರಿಗೆ ಅಭಿನಂದನೆ’ ಎಂದು ಟ್ವೀಟ್ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *

LATEST NEWS

ಸಾಕು ಪ್ರಾಣಿಗಳ ಕೃತ್ಯಕ್ಕೆ ಮಾಲೀಕರೇ ಜವಾಬ್ದಾರಿ : ಕರ್ನಾಟಕ ಹೈಕೋರ್ಟ್

Published

on

ಬೆಂಗಳೂರು : ಅಪಾಯಕಾರಿ ತಳಿಯ ಶ್ವಾನಗಳು ಮಾತ್ರ ಜನರಿಗೆ ಗಾಯವನ್ನುಂಟು ಮಾಡಲ್ಲ. ಯಾವ ನಾಯಿಯೂ ಉಗ್ರವಾಗಬಹುದು ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್ ಸಾಕುಪ್ರಾಣಿಗಳ ಮಾಲೀಕರ ಜವಾಬ್ದಾರಿಯನ್ನು ನಿಗದಿಪಡಿಸಲು ಸಂಬಂಧಿತ ನಿಯಮಗಳ ಅಡಿಯಲ್ಲಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸುವುದು ಅಗತ್ಯ ಎಂದು ಹೇಳಿದೆ.


ಕೇಂದ್ರ ಸರ್ಕಾರದ ಮೂರು ನಿಯಮಗಳಾದ ಪ್ರಾಣಿಗಳ ಜನನ ನಿಯಂತ್ರಣ (ನಾಯಿಗಳು) ನಿಯಮಗಳು, 2001, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ (ನಾಯಿ ಸಂತಾನೋತ್ಪತ್ತಿ ಮತ್ತು ಮಾರುಕಟ್ಟೆ) ನಿಯಮಗಳು, 2017 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ (ಪೆಟ್ ಶಾಪ್) ನಿಯಮಗಳು, 2018 ಅಡಿಯಲ್ಲಿ ಅಂತಹ ಮಾರ್ಗಸೂಚಿಗಳನ್ನು ನೀಡಲು ಪರಿಗಣಿಸಬಹುದು ಎಂದು ಕೋರ್ಟ್ ಹೇಳಿದೆ.

ಸಾಕು ಪ್ರಾಣಿ ಮಾಲೀಕರ ಹೊಣೆ :

ನಾಯಿ ಕಚ್ಚಿದರೆ ಅದು ಯಾವುದೇ ನಾಯಿಯಾಗಿದ್ದರೂ ಅದು ನಾಯಿ ಕಚ್ಚಿದ್ದೇ ಆಗಿರುತ್ತದೆ. ಅದು ಬ್ರಾಂಡೆಡ್ ಅಪಾಯಕಾರಿ ನಾಯಿ ಅಥವಾ ಇತರ ಯಾವುದೇ ಸಾಮಾನ್ಯ ನಾಯಿಯಾಗಿರಬಹುದು. ಸಾಕು ಪ್ರಾಣಿ ಮಾಲೀಕರು ತಮ್ಮ ನಾಯಿಗಳ ಕೃತ್ಯಕ್ಕೆ ಸಂಪೂರ್ಣವಾಗಿ ಜವಾಬ್ದಾರರಾಗುತ್ತಾರೆ. ಸಾಕು ಪ್ರಾಣಿಗಳ ಮಾಲೀಕರು ಜವಾಬ್ದಾರಿಯುತವಾಗಿ ವರ್ತಿಸಬೇಕು. ಸೂಕ್ತವಾಗಿ ರಚಿಸಲಾದ ಸಮಿತಿಯು ಜವಾಬ್ದಾರಿಯುತ ಸಾಕುಪ್ರಾಣಿಗಳ ಮಾಲೀಕತ್ವದ ಪರಿಕಲ್ಪನೆಯನ್ನು ರಕ್ಷಿಸಬೇಕು ಮತ್ತು ಬೇಜವಾಬ್ದಾರಿಯುತ ಸಾಕುಪ್ರಾಣಿ ಮಾಲೀಕತ್ವವನ್ನು ದಂಡನೆಗೆ ಒಳಪಡಿಸಬೇಕು ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ಅಪಾಯಕಾರಿ ಶ್ವಾನಗಳ ಸಾಕಣೆ ನಿಷೇಧಿಸಿ ಮಾರ್ಚ್ 12, 2024 ರಂದು ಹೊರಡಿಸಿದ್ದ ವಿವಾದಾತ್ಮಕ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಏ.10) ರದ್ದುಗೊಳಿಸಿದೆ. ಇಂತಹ ಆಲೋಚನಾ ಪ್ರಕ್ರಿಯೆಯು ಸಮಸ್ಯೆಯನ್ನು ಪರಿಹರಿಸುವುದಿಲ್ಲ ಮತ್ತು ನಾಯಿ ಮಾಲೀಕರು ಅಥವಾ ಯಾವುದೇ ಸಾಕುಪ್ರಾಣಿಗಳು ಮಾಲೀಕರು ಯಾವುದೇ ನಾಗರಿಕರಿಗೆ / ಇತರ ಜೀವಿಗಳಿಗೆ ಹಾನಿಯಾಗದಂತೆ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : ಶ್ವಾನ ಪ್ರಿಯರೇ ಎಚ್ಚರ..ಎಚ್ಚರ..! ಮಾಲಕಿಯ ತಲೆ ಸೀಳಿದೆ ಸಾಕು ನಾಯಿ..!
ಆಯಾ ಪ್ರದೇಶದ ಸುತ್ತಮುತ್ತಲಿನ ನಾಗರಿಕರು ಮತ್ತು ಇತರ ಪ್ರಾಣಿಗಳ ಸಂರಕ್ಷಣೆಗೆ ಸಾಕುಪ್ರಾಣಿ ಮಾಲೀಕರು ಜವಾಬ್ದಾರರಾಗಿರುತ್ತಾರೆ. ಸಾಕುಪ್ರಾಣಿಗಳಿಂದಾಗುವ ಯಾವುದೇ ರೀತಿಯ ಬೇಜವಾಬ್ದಾರಿಯುತ ನಡವಳಿಕೆಗೆ ಸಾಕುಪ್ರಾಣಿ ಮಾಲೀಕರೇ ಜವಾಬ್ದಾರರಾಗಿರುತ್ತಾರೆ ಎಂದು ಕೋರ್ಟ್ ತಿಳಿಸಿದೆ.

Continue Reading

BELTHANGADY

ಶ್ವಾನ ಪ್ರಿಯರೇ ಎಚ್ಚರ..ಎಚ್ಚರ..! ಮಾಲಕಿಯ ತಲೆ ಸೀಳಿದೆ ಸಾಕು ನಾಯಿ..!

Published

on

ಬೆಳ್ತಂಗಡಿ : ಮನೆಯಲ್ಲಿ ಪ್ರಾಣಿಗಳನ್ನು ಸಾಕುವುದೆಂದರೆ ಹೆಚ್ಚಿನವರಿಗೆ ಇಷ್ಟ. ಅದರಲ್ಲೂ ನಾಯಿ ಪ್ರಿಯರು ಅನೇಕ ಮಂದಿ ಇದ್ದಾರೆ. ತಮ್ಮ ಮನೆಗಳಲ್ಲಿ ವಿವಿಧ ತಳಿಯ ನಾಯಿಗಳನ್ನು ಸಾಕುತ್ತಾರೆ. ಈ ನಾಯಿಗಳನ್ನು ಪ್ರೀತಿಸಿದಾಗ ಅವೂ ಅದಕ್ಕೆ ಪ್ರತಿಯಾಗಿ ಪ್ರೀತಿ ಕೊಡೋದು ಸಹಜ. ಆದರೆ, ಅದಕ್ಕೆ ವಿರುದ್ಧವಾದ ಘಟನೆಯೂ ನಡೆಯಬಹುದು ಎಂಬುದಕ್ಕೆ ಗುರುವಾರ(ಏ.18) ಬೆಳ್ತಂಗಡಿಯಲ್ಲಿ ನಡೆದ ಈ ಸುದ್ದಿ ನಿದರ್ಶನವಾಗಿದೆ.


ಮನೆ ಮಾಲಕಿ ತನ್ನ ಸಾಕು ನಾಯಿಯನ್ನು ಮುದ್ದಾಡುವಾಗ ಅದು ಏಕಾಏಕಿ ದಾ*ಳಿ ಮಾಡಿ, ತಲೆ ಭಾಗವನ್ನು ಸೀಳಿ ಹಾಕಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಮುಂಡಾಜೆ ಗ್ರಾಮ ನಿಡಿಕಲ್ ಓಂಕಾರ್ ನಿವಾಸಿ ದಿವಂಗತ ರಾಮ್ ದಾಸ್ ಎಂಬವರ ಪತ್ನಿ 49 ವರ್ಷದ ಪೂರ್ಣಿಮಾ ಗಂಭೀ*ರ ಗಾ*ಯಗೊಂಡ ಮಹಿಳೆ.

ಇದನ್ನೂ ಓದಿ : Viral Video; ಸ್ಮೋಕ್ ಬಿಸ್ಕೆಟ್ ತಿನ್ನುತ್ತಿದ್ದಂತೆಯೇ ಬಾಲಕ ಅಸ್ವಸ್ಥ

ಪೂರ್ಣಿಮಾ ತನ್ನ ಮನೆಯ ಸಾಕು ನಾಯಿಯನ್ನು ಎಂದಿನಂತೆ ಮುದ್ದಾಡುತ್ತಿದ್ದರು. ಈ ವೇಳೆ ಅವರು ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾರೆ. ಅದೇನಾಯ್ತೋ ಗೊತ್ತಿಲ್ಲ, ಸಾಕು ನಾಯಿ ಪೂರ್ಣಿಮಾ ಮೇಲೆ ದಾ*ಳಿ ನಡೆಸಿದೆ. ತಲೆ ಭಾಗ ಸೀ*ಳಿ ಹಾಕಿದೆ. ಕೈ ಕಚ್ಚಿ ಗಂಭೀ*ರ ಗಾ*ಯಗೊಳಿಸಿದೆ. ಸದ್ಯ, ಪೂರ್ಣಿಮಾ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

LATEST NEWS

ಬಿಕಿನಿ ತೊಟ್ಟು ಬಸ್ಸಿನಲ್ಲಿ ಅಡ್ಡಾಡಿದ ಯುವತಿ

Published

on

ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಾ ವಿಡೀಯೋಗಳು ಒಂದಾ.. ಎರಡಾ.. ಪ್ರತಿದಿನವೂ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಕೆಲವರಗೆ ವಿಡಿಯೋಗಳನ್ನು ಟ್ರೋಲ್ ಮಾಡೋದೆ ಒಂದು ಕೆಲಸವಾಗಿರುತ್ತದೆ. ಸದ್ಯ ಅದೇ ರೀತಿಯ ಘಟನೆಯೊಂದು ದೆಹಲಿಯಲ್ಲಿ ವೈರಲ್ ಆಗ್ತಾ ಇದೆ.

ಬೇಸಿಲ ಬೇಗೆಗೆ ಸೆಖೆ ಜಾಸ್ತಿ ಆಗಿ ಹೋಗಿದೆ. ಹಾಗಾಗಿ ಇಲ್ಲೊಬ್ಬಳು ಕೇವಲ ಒಳ ಉಡುಪನ್ನು ಧರಿಸಿ ಅರೆಬೆತ್ತಲೆಯಾಗಿ ಬಸ್ಸಿನಲ್ಲಿ ಅಡ್ಡಾಡ್ಡಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಮಹಿಳೆಯ ಈ ವರ್ತನೆಯನ್ನು ಕಂಡು ಜನರು ಗರಂ ಆಗಿದ್ದಾರೆ.

ಸೆಲೆಬ್ರಿಟಿಗಳು, ಇನ್ಫ್ಲುಯೆನ್ಸರ್ ಗಳು ಫೋಟೋಶೂಟ್ ಗಳಿಗಾಗಿ ಬಿಕಿನಿ ಧರಿಸುವುದು ಹೊಸದೇನಲ್ಲ. ಆದರೆ ಇಲ್ಲೊಬ್ಬಳು ಯುವತಿ ಮಾತ್ರ ಸಾರ್ವಜನಿಕ ಸ್ಥಳದಲ್ಲಿ ಬಿಕಿನಿ ತೊಟ್ಟು ಓಡಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾಳೆ. ಹೌದು ದೆಹಲಿಯಲ್ಲಿ ಯುವತಿಯೊಬ್ಬಳು ಕೇವಲ ಒಳ ಉಡುಪು ಧರಿಸಿ ಸಾರ್ವಜನಿಕವಾಗಿ DTC ಬಸ್ಸಿನಲ್ಲಿ ಅರೆಬೆತ್ತಲೆಯಾಗಿ ಪ್ರಯಾಣಿಸಿದ್ದಾಳೆ.

ಈಕೆ ಬಸ್ಸಿನಲ್ಲಿ ಅರೆಬೆತ್ತಲೆಯಾಗಿ ನಿಂತಿರುವ ದೃಶ್ಯಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಾ ಇದೆ. ಆಕೆಯ ಈ ಅವತಾರವನ್ನು ನೋಡಲಾರದೆ ಆಕೆಯ ಹತ್ತಿರ ಇದ್ದಂತಹ ಸಹ ಪ್ರಯಾಣಿಕರ ಅಲ್ಲಿಂದ ಎದ್ದು ಹೋಗಿದ್ದಾರೆ.

Continue Reading

LATEST NEWS

Trending