ನವದೆಹಲಿ: ಕಾಶಿ ವಿಶ್ವನಾಥ ಧಾಮದ ಆವರಣದಲ್ಲಿ ಲೆದರ್ ಅಥವಾ ರಬ್ಬರ್ ಚಪ್ಪಲಿಗಳನ್ನು ಧರಿಸುವುದನ್ನು ನಿಷೇಧಿಸಿರುವುದರಿಂದ,
ಬರಿಗಾಲಿನಲ್ಲೇ ಕೆಲಸ ಮಾಡುವ ಸಿಬ್ಬಂದಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು 100 ಜೊತೆ ಸೆಣಬಿನ ಪಾದರಕ್ಷೆಗಳನ್ನು ಕಳುಹಿಸಿಕೊಟ್ಟಿದ್ದಾರೆ.
ಅರ್ಚಕರು, ರಕ್ಷಣಾ ಸಿಬ್ಬಂದಿ, ಸ್ವಚ್ಛತಾ ಕಾರ್ಯಕರ್ತರು ಮತ್ತು ಇತರರಿಗಾಗಿ ಇವುಗಳನ್ನು ಕಳುಹಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಕೊರೆಯುವ ಚಳಿಯಲ್ಲಿ ಕರ್ತವ್ಯ ನಿರ್ವಹಿಸುವಾಗ ಸಿಬ್ಬಂದಿಯು ಬರಿಗಾಲಿನಲ್ಲಿ ಇರಬೇಕಾಗಿಲ್ಲ ಎಂದು ಮೋದಿ ಅವರು ಸೆಣಬಿನ ಪಾದರಕ್ಷೆಗಳನ್ನು ಖರೀದಿಸಿ ಧಾಮಕ್ಕೆ ಕಳುಹಿಸಿಕೊಟ್ಟಿದ್ದಾರೆ.
ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಯ ವ್ಯಾಪ್ತಿಯಲ್ಲಿರುವ ಕಾಶಿ ವಿಶ್ವನಾಥ ಧಾಮ ಯೋಜನೆಯ (ಕಾರಿಡಾರ್) ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಉದ್ಘಾಟಿಸಿದ್ದರು.