DAKSHINA KANNADA
Good news: ಬಹುನಿರೀಕ್ಷಿತ ಮಂಗಳೂರು – ಕೊಚ್ಚಿ ನೈಸರ್ಗಿಕ ಅನಿಲ ಕೊಳವೆ ಮಾರ್ಗ ಇಂದು ಪ್ರಧಾನಿಯಿಂದ ದೇಶಕ್ಕೆ ಸಮರ್ಪಣೆ…
Good news: ಬಹುನಿರೀಕ್ಷಿತ ಮಂಗಳೂರು – ಕೊಚ್ಚಿ ನೈಸರ್ಗಿಕ ಅನಿಲ ಕೊಳವೆ ಮಾರ್ಗ ಇಂದು ಪ್ರಧಾನಿಯಿಂದ ದೇಶಕ್ಕೆ ಸಮರ್ಪಣೆ…
ಮಂಗಳೂರು : ಕಳೆದ ಆನೇಕ ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಬಹು ನಿರೀಕ್ಷಿತ ಮಂಗಳೂರು – ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಇಂದು ( ಜನವರಿ 5 ರಂದು ) ಲೋಕಾರ್ಪಣೆಗೊಳ್ಳಲಿದೆ.
ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ.
ಈ ಯೋಜನೆ ‘ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್’ ರಚನೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರೊಂದಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಉಪಸ್ಥಿತರಿರುತ್ತಾರೆ.
450 ಕಿ.ಮೀ. ಉದ್ದದ ಈ ಕೊಳವೆ ಮಾರ್ಗವನ್ನು ಗೇಲ್ ಇಂಡಿಯಾ ಲಿ ನಿರ್ಮಾಣಮಾಡಿದೆ.
ಇದು ಪ್ರತಿನಿತ್ಯ 12 ದಶಲಕ್ಷ ಮೆಟ್ರಿಕ್ ಸ್ಟಾಂಡರ್ಡ್ ಕ್ಯುಬಿಕ್ ಮೀಟರ್ ಅನಿಲ ಸಾಗಿಸುವ ಸಾಮರ್ಥ್ಯವನ್ನು ಹೊಂದಿದ್ದು, ಕೇರಳದ ಕೊಚ್ಚಿಯ ಧ್ರವೀಕೃತ ನೈಸರ್ಗಿಕ ಅನಿಲ (ಎನ್.ಎನ್.ಜಿ) ಮರುಹೊಂದಾಣಿಕೆ ಟರ್ಮಿನಲ್ ನಿಂದ ಎರ್ನಾಕುಲಂ, ತ್ರಿಸ್ಸೂರ್, ಪಾಲಕ್ಕಾಡ್, ಮಲ್ಲಪುರಂ, ಕೋಳಿಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಯ ಮೂಲಕ ಹಾದೂ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿಗೆ ನೈಸರ್ಗಿಕ ಅನಿಲವನ್ನು ಸಾಗಿಸುತ್ತದೆ.
ಯೋಜನೆಯ ಒಟ್ಟು ವೆಚ್ಚ ಸುಮಾರು 3000 ಕೋಟಿ ರೂ.ಗಳಾಗಿದ್ದು, ಅದರ ನಿರ್ಮಾಣವು 12 ಲಕ್ಷ ಮಾನವ-ದಿನಗಳ ಉದ್ಯೋಗವನ್ನು ಸೃಷ್ಟಿಸಿತ್ತು.
ಕೊಳವೆ ಮಾರ್ಗ ಅಳವಡಿಕೆಯು ಎಂಜಿನಿಯರಿಂಗ್ ಸವಾಲಾಗಿತ್ತು, ಏಕೆಂದರೆ ಕೊಳವೆ ಮಾರ್ಗವು 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಜಲಮೂಲಗಳನ್ನು ದಾಟುವುದು ಅನಿವಾರ್ಯವಾಗಿತ್ತು.
ಇದನ್ನು ಅಡ್ಡಡ್ಡ ಕೊರೆಯುವ ವಿಧಾನದ ವಿಶೇಷ ತಂತ್ರಜ್ಞಾನದ ಮೂಲಕ ಮಾಡಲಾಗಿದೆ. ಈ ಕೊಳವೆ ಮಾರ್ಗ ಪರಿಸರ ಸ್ನೇಹಿ ಮತ್ತು ಕೈಗೆಟಕುವ ದರದ ಇಂಧನವನ್ನು ಕೊಳವೆ ಮಾರ್ಗದ ನೈಸರ್ಗಿಕ ಅನಿಲ ಮನೆಗಳಿಗೆ ಪೂರೈಸಲಿದೆ ಮತ್ತು ಸಿ.ಎನ್.ಜಿ ಯನ್ನು ಸಾರಿಗೆ ವಲಯಕ್ಕೆ ಸರಬರಾಜು ಮಾಡಲಿದೆ.
ವಾಣಿಜ್ಯ ಮತ್ತು ಕೈಗಾರಿಕಾ ಘಟಕಗಳಿಗೆ ಕೊಳವೆ ಮಾರ್ಗದಲ್ಲಿ ಪೂರೈಸಲಿದೆ. ಈ ಶುದ್ಧ ಇಂಧನದ ಬಳಕೆಯು ವಾಯು ಮಾಲಿನ್ಯವನ್ನು ನಿಗ್ರಹಿಸಿಸುವ ಮೂಲಕ ವಾಯು ಗುಣಮಟ್ಟವನ್ನು ಸುಧಾರಿಸುತ್ತದೆ.
ನೇರಾ ಪ್ರಸಾರ..Live
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!