ಎಪ್ರಿಲ್ 5 ರಂದು ಭಾರತೀಯರ 9 ನಿಮಿಷಗಳ ಅಮೂಲ್ಯ ಸಮಯ ಕೇಳಿದ ಪ್ರಧಾನಿ ಮೋದಿ
ಎಪ್ರಿಲ್ 5 ರಂದು ಭಾರತೀಯರ 9 ನಿಮಿಷಗಳ ಅಮೂಲ್ಯ ಸಮಯ ಕೇಳಿದ ಪ್ರಧಾನಿ ಮೋದಿ
ನವದೆಹಲಿ: ದೇಶದಾದ್ಯಂತ ಕೊರೋನಾ ವೈರಸ್ ಅಟ್ಟಹಾಸ ಮುಂದವರೆದಿದ್ದು, ಸೋಂಕಿತರ ಸಂಖ್ಯೆ ಮತ್ತು ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ವೈರಸ್ ವಿಚಾರವಾಗಿ ದೇಶದ ಜನರಿಗೆ ವಿಡಿಯೋ ಸಂದೇಶವನ್ನು ಇಂದು (ಎಪ್ರಿಲ್ 3) ಬೆಳಗ್ಗೆ 9 ಗಂಟೆಗೆ ನೀಡಿದ್ದಾರೆ.
ಇಂದಿಗೆ ಲಾಕ್ಡೌನ್ ಜಾರಿಯಾಗಿ 9 ದಿನಗಳು ಕಳೆದಿವೆ. ಮಾರ್ಚ್ 22ರಂದು ಜನತಾ ಕರ್ಫ್ಯೂ ಜಾರಿಯಾಗಿದೆ. ಭಾರತ ಎಲ್ಲಾ ದೇಶಗಳಿಗೆ ಮಾದರಿಯಾಗಿದೆ.
ಭಾರತ ಯಾವುದರ ವಿರುದ್ಧವಾದರೂ ಕೂಡ ಹೋರಾಡಲು ಸಿದ್ದವಾಗಿದೆ. ಲಾಕ್ ಡೌನ್ ಅನ್ನು ಇಡೀ ವಿಶ್ವವೇ ಅನುಸರಿಸುವಂತಾಗಿದೆ. ಇಲ್ಲಿ ಯಾರೂ ಏಕಾಂಗಿ ಅಲ್ಲ ಎಂದು ಹೇಳಿದರು.
ಮಾತು ಮುಂದುವರಿಸಿದ ಅವರು, ಏಪ್ರಿಲ್ 5 ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ನಿಮ್ಮ ಅಮೂಲ್ಯ ಸಮಯ ನನಗೆ ಬೇಕು ಎಂದು ಪ್ರಧಾನಿ ಮೋದಿ 130 ಕೋಟಿ ಭಾರತೀಯರಲ್ಲಿ ಮನವಿ ಮಾಡಿದ್ದಾರೆ.
ಭಾನುವಾರ ರಾತ್ರಿ 9 ಗಂಟೆಗೆ ಪ್ರತಿಯೊಬ್ಬ ಭಾರತೀಯ ಕೂಡ ಮನೆಯ ಲೈಟ್ ಆರಿಸಿ, ಮೊಬೈಲ್ ಟಾರ್ಚ್ ಅಥವಾ ಮೇಣದ ಬತ್ತಿ ಹಿಡಿಯಬೇಕು.
ಆ ಮೂಲಕ ಇಡೀ ವಿಶ್ವಕ್ಕೆ ಭಾರತದ ಬೆಳಕನ್ನು ತೋರಿಸಬೇಕು ಎಂದು ಮೋದಿ ಭಾರತೀಯರಲ್ಲಿ ಮನವಿ ಮಾಡಿದ್ದಾರೆ.
ಮನೆಯ ನಾಲ್ಕು ಕಡೆ ದೀಪ ಹಚ್ಚಿ, ದೀಪ ಹಚ್ಚುವುದರಿಂದ ನಮ್ಮ ಶಕ್ತಿಯ ಅನಾವರಣವಾಗುತ್ತದೆ. ಮನೆಯ ಬಾಲ್ಕನಿಯಲ್ಲಿ ನಿಂತು ದೀಪ, ಮೇಣದಬತ್ತಿ, ಟಾರ್ಚ್, ಮೊಬೈಲ್ ಫ್ಲಾಶ್ ಹಿಡಿದು ಭಾರತ ಮಾತೆಯನ್ನು ನೆನೆಯಿರಿ.
ಯಾರೂ ಕೂಡ ರಸ್ತೆಗಿಳಿಯಬೇಡಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಪ್ರಧಾನಿ ಮೋದಿ ಕರೆ ನೀಡಿದರು.
ಪ್ರಧಾನಿ ಮೋದಿ ಕಳೆದ ಮಾರ್ಚ್ 22ರ ಭಾನುವಾರ ಜನತಾ ಕರ್ಫ್ಯೂಗೆ ಕರೆ ನೀಡಿದ್ದರು.
ಅಂದು ಸಂಜೆ 5 ಗಂಟೆಗೆ ಭಾರತೀಯರು ಮನೆಯ ಬಾಲ್ಕನಿಯಲ್ಲಿ ನಿಂತು ಗಂಟೆ, ಶಂಖ, ಜಾಗಟೆ ಬಾರಿಸುವ ಮೂಲಕ ಕೊರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಧನ್ಯವಾದ ತಿಳಿಸಬೇಕು ಎಂದು ಮೋದಿ ಮನವಿ ಮಾಡಿದ್ದರು.
ಇಂದು ದೇಶದ ಜನರಿಗೆ ವಿಡಿಯೋ ಸಂದೇಶ ರವಾನೆ ಮಾಡುವ ಮೂಲಕ ಏಪ್ರಿಲ್ 5ರ ಭಾನುವಾರ ರಾತ್ರಿ 9 ಗಂಟೆಗೆ 130 ಕೋಟಿ ಭಾರತೀಯರ ಅಮೂಲ್ಯವಾದ 9 ನಿಮಿಷಗಳನ್ನು ನನಗೆ ನೀಡಿ ಎಂದು ಮೋದಿ ಕೇಳಿಕೊಂಡಿದ್ದಾರೆ.
ಅಂದು ದೇಶದೆಲ್ಲೆಡೆ ದೀಪಾವಳಿಯ ವಾತಾವರಣ ಮನೆ ಮಾಡಿರುತ್ತದೆ. ಮನೆಯ ಎಲ್ಲಾ ಲೈಟ್ಗಳನ್ನು ಆರಿಸಿ, ದೀಪ, ಮೇಣದ ಬತ್ತಿ ಅಥವಾ ಮೊಬೈಲ್ ಟಾರ್ಚ್ ಆನ್ ಮಾಡಿ.
ಎಲ್ಲರೂ ಒಂದಾಗಿ ಇಡೀ ವಿಶ್ವಕ್ಕೆ ಸಂದೇಶ ಕೊಡೋಣ. ಮಹಾಮಾರಿ ಕೊರೋನಾ ವಿರುದ್ಧ ಯುದ್ಧ ಸಾರೋಣ ಎಂದಿದ್ದಾರೆ.
LATEST NEWS
ತಿರುಪತಿ ಲಡ್ಡು ಪ್ರಕರಣ: ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ
ಬೆಂಗಳೂರು: ತಿರುಪತಿ ತಿರುಮಲ ದೇಗುಲದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ರಾಜ್ಯದ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಗೆ ನಂದಿನಿ ತುಪ್ಪವನ್ನೇ ಬಳಸುವಂತೆ ಶುಕ್ರವಶರ ಸುತ್ತೋಲೆ ಹೊರಡಿಸಿತ್ತು. ಇದೀಗ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯದಲ್ಲಿ ಪರಿಶೀಲನೆಗೆ ಒಳಪಡಿಸುವಂತೆ ಆದೇಶಿಸಿದೆ.
ಮುಜರಾಯಿ ಇಲಾಖೆ ಅಡಿಯಲ್ಲಿ ರಾಜ್ಯದಲ್ಲಿ 34,000 ಕ್ಕೂ ಹೆಚ್ಚು ದೇವಾಲಯಗಳಿವೆ. ಅವುಗಳಲ್ಲಿ, 205 ದೇಗುಲಗಳ ವಾರ್ಷಿಕ ಆದಾಯ 25 ಲಕ್ಷ ರೂ.ಗಿಂತ ಹೆಚ್ಚಿದ್ದು, ವರ್ಗ-ಎ ಎಂದು ವರ್ಗೀಕರಿಸಲ್ಪಟ್ಟಿವೆ. 193 ದೇಗುಲಗಳನ್ನು 5 ಲಕ್ಷದಿಂದ ರೂ. 25 ಆದಾಯದೊಂದಿಗೆ ವರ್ಗ-ಬಿ ಎಂದು ಗುರುತಿಸಲಾಗಿದೆ. ಉಳಿದವುಗಳನ್ನು 5 ಲಕ್ಷ ರೂ. ಆದಾಯದೊಂದಿಗೆ ವರ್ಗ-ಸಿ ಎಂದು ವರ್ಗೀಕರಿಸಲಾಗಿದೆ. ಇವುಗಳಲ್ಲಿ ಹೆಚ್ಚಿನ ದೇವಾಲಯಗಳು ಭಕ್ತರಿಗೆ ಪ್ರಸಾದವನ್ನು ನೀಡುತ್ತವೆ.
bengaluru
ಜೈಲಿನಲ್ಲೇ ಮೊಬೈಲ್ ಬಳಕೆ !
ಮಂಗಳೂರು/ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಆತಿಥ್ಯ ಪ್ರಕರಣ ನಡೆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು ಸೆಂಟ್ರಲ್ ಜೈಲ್ಗೆ ಮೊಬೈಲ್ ರವಾನೆ ಮಾಡುತ್ತಿದ್ದ ಖೈದಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಕೋಲಾರದ ಕೆಜಿಎಫ್ ನ ವಿಜಯ್ನನ್ನು ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದೆ. ಆಗ್ನೇಯ ವಿಭಾಗದ ಪೊಲೀಸರು ಆತನನ್ನು ಸೆರೆ ಹಿಡಿದಿದ್ದರು.
ಜೈಲಿನೊಳಗೆ ವಿಜಯ್ ಸಿಬ್ಬಂದಿಯೊಬ್ಬರ ನೆರವು ಪಡೆದು ಸ್ಮಾರ್ಟ್ ಫೋನ್ಗಳನ್ನು ಹೊರಗಿನಿಂದ ಖರೀದಿಸಿಕೊಂಡು ಅವುಗಳನ್ನು ಜೈಲಿನಲ್ಲಿರುವ ಇತರ ಖೈದಿಗಳಿಗೆ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ವಿಜಯ್ ಮೊಬೈಲ್ ಪೂರೈಸುವುದಕ್ಕೆ ಸಾಕ್ಷ್ಯಗಳು ಸಿಕ್ಕ ಬೆನ್ನಲ್ಲೇ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಸ್ಟಡಿಯಲ್ಲಿದ್ದ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ್ ನಾಗರಾಜ್ ಹಾಗೂ ವೇಲು ಅವರ ವಿಚಾರಣೆಯೂ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ವಿಜಯ್ ಜೈಲು ಅಧಿಕಾರಿಗಳ ಸಹಾಯದಿಂದಲೇ ಮೊಬೈಲ್ ಗಳನ್ನು ಮಾರಾಟ ಮಾಡುತ್ತಿದ್ದ. ರೌಡಿ ಶೀಟರ್ಗಳು ಸಾವಿರಾರು ಹಣ ಕೊಟ್ಟು ಈತನಿಂದ ಮೊಬೈಲ್ ಖರೀದಿಸುತ್ತಿದ್ದರು ಎಂಬ ವಿಚಾರದ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸೆ. 15 ರಂದು ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ 26 ಮೊಬೈಲ್ ಪತ್ತೆಯಾಗಿದ್ದವು. ಇನ್ನಷ್ಟು ತನಿಖೆ ನಡೆಸಿದಾಗ ವಿಜಯ್ ಮೊಬೈಲ್ ಪೂರೈಸುತ್ತಿದ್ದ ಎಂಬುವುದು ಖಚಿತವಾಗಿದೆ ಎಂದು ವರದಿಯಾಗಿದೆ
LATEST NEWS
ಬಾಲಕನ ಮರ್ಮಾಂಗದೊಂದಿಗೆ ಸಹಪಾಠಿಗಳ ಆಟ; ಆಸ್ಪತ್ರೆಗೆ ದಾಖಲಾದ ಬಾಲಕ
ಸುಳ್ಯ: ಹಾಸ್ಟೇಲ್ನಲ್ಲಿ ಉಳಿದು ಶಾಲೆಗೆ ಹೋಗುತ್ತಿದ್ದ ಬಾಲಕನೋರ್ವನ ಮರ್ಮಾಂಗವೆಳೆದು ಗೆಳೆಯರು ಆಟವಾಡಿದ ಪರಿಣಾಮವಾಗಿ ಮರ್ಮಾಂಗಕ್ಕೆ ಹಾನಿಯಾಗಿರುವ ಘಟನೆ ಸಂಪಾಜೆಯಲ್ಲಿ ನಡೆದಿದೆ.
ಸಂಪಾಜೆಯ ಆಲಡ್ಕ ನಿವಾಸಿಯಾಗಿರುವ 12 ವರ್ಷದ ಬಾಲಕ ಕೆಲ ಸಮಯದಿಂದ ಕೊಡಗು ಸಂಪಾಜೆಯ ಹಾಸ್ಟೇಲ್ನಲ್ಲಿದ್ದುಕೊಂಡು ಶಾಲೆಗೆ ಹೋಗುತ್ತಿದ್ದ. ಸೆ.14 ರಂದು ಇಬ್ಬರು ಸಹಪಾಠಿಗಳು ಬಾಲಕನ ಮರ್ಮಾಂಗವನ್ನು ಹಿಡಿದೆಳೆದಿದ್ದರು. ಬಳಿಕ ಬಾಲಕ ಮೂತ್ರ ವಿಸರ್ಜನೆ ಮಾಡುವ ವೇಳೆ ನೋವು ಬಂತೆಂದು ಮನೆಗೆ ಮರಳಿದ್ದಾನೆ.
ತಾಯಿಯೊಡನೆ ವಿಷಯ ಹೇಳಿಕೊಂಡಾಗ ತಕ್ಷಣವೇ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಬಾಲಕ ಚೇತರಿಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ