ಕೊರೋನಾ ವೈರಸ್ ಬಗ್ಗೆ ಆತಂಕ ಬೇಡ, ದೇಶವಾಸಿಗಳಿಗೆ ಪ್ರಧಾನಿ ಮೋದಿ ಆಭಯ….
ಕೋವಿಡ್ 19 ಬಗ್ಗೆ ಅತಂಕಪಡುವ ಅಗತ್ಯವಿಲ್ಲ: ದೇಶದ ಪ್ರಜೆಗಳಿಗೆ ಪ್ರಧಾನಿ ಮೋದಿ ಕರೆ
ನವದೆಹಲಿ: ಕಳೆದ 48 ಗಂಟೆಗಳಲ್ಲಿ ಮತ್ತೆರಡು ಹೊಸ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿದೆ.
ಹಾಗಾಗಿ ಸದ್ಯ ಭಾರತ ಕೊರೋನಾ ವೈರಸ್ ಸೋಂಕಿನ ಭೀತಿಗೊಳಗಾಗಿದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜನತೆಗೆ ಧೈರ್ಯ ತುಂಬಿದ್ದು, “ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ, ಜನತೆ ಧೈರ್ಯದಿಂದಿರಿ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಅವರು, “ಕೋವಿಡ್-19 ನೋವೆಲ್ ಕೊರೋನಾ ವೈರಸ್ ಸೋಂಕು ಹರಡುವುದನ್ನು ನಿಯಂತ್ರಿಸುವುದಕ್ಕೆ ಸಂಬಂಧಿಸಿ ವ್ಯಾಪಕ ಪುನರ್ ಪರಿಶೀಲನೆ ನಡೆಸಲಾಗಿದೆ. ಭಾರತಕ್ಕೆ ಆಗಮಿಸುವ ಜನರ ತಪಾಸಣೆಯಿಂದ ವೈದ್ಯಕೀಯ ಮುನ್ನೆಚ್ಚರಿಕೆ ತೆಗೆದುಕೊಳ್ಳುವವರೆಗೆ, ವಿವಿಧ ಸಚಿವಾಲಯ ಹಾಗೂ ರಾಜ್ಯಗಳು ಸಂಘಟಿತವಾಗಿ ಕಾರ್ಯ ನಿರ್ವಹಿಸುತ್ತಿವೆ.
ಸ್ವರಕ್ಷಣೆಗಾಗಿ ಸಂಘಟಿತರಾಗಿ ಕಾರ್ಯ ನಿರ್ವಹಿಸಿ ಹಾಗೂ ಸಣ್ಣ ಮತ್ತು ಪ್ರಮುಖ ಕ್ರಮಗಳನ್ನು ಕೈಗೊಳ್ಳಿ.
ಆಗಾಗ ಕೈ ತೊಳೆಯುವುದು ಹಾಗೂ ಸೀನುವಾಗ, ಕೆಮ್ಮುವಾಗ ಟಿಶ್ಯೂ ಪೇಪರಿನಿಂದ ಮುಖ ಮುಚ್ಚಿಕೊಳ್ಳುವುದು ಸೇರಿದಂತೆ ಪ್ರಮುಖ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ಮನವಿ ಮಾಡಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಕೂಡ ಉನ್ನತ ಮಟ್ಟದ ಸಭೆ ನಡೆಸಿದ್ದರು. ಅಲ್ಲದೆ, ಇರಾನ್, ಇಟಲಿ, ದಕ್ಷಿಣ ಕೊರಿಯಾ ಹಾಗೂ ಸಿಂಗಾಪುರಕ್ಕೆ ಅನಗತ್ಯವಾಗಿ ಪ್ರಯಾಣಿಸದಿರುವಂತೆ ಸಲಹೆ ನೀಡಿದ್ದಾರೆ.
LATEST NEWS
ರೋಗಿ ಕೊಳಲು ನುಡಿಸುತ್ತಿದ್ದಾಗಲೇ ಮೆದುಳಿನ ಆಪರೇಷನ್
ಬೆಳಗಾವಿ: ರೋಗಿ ಕೊಳಲು ನುಡಿಸುತ್ತಾ ಮಾತನಾಡುತ್ತಿರುವಾಗಲೇ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಿರುವ ಘಟನೆ ಬೆಳಗಾವಿಯ ಕೊಲ್ಲಾಪುರ ಕನೇರಿ ಮಠದ ಸಿದ್ದಗಿರಿ ಆಸ್ಪತ್ರೆಯಲ್ಲಿ ನಡೆದಿದೆ.
ಮೆದುಳು ಕ್ಯಾನ್ಸರ್ ನಿಂದ ಬಳಲುತ್ತಿದ್ದ ವ್ಯಕ್ತಿಯ ಕ್ಲಿಷ್ಟಕರವಾದ ಶಸ್ತ್ರಚಿಕಿತ್ಸೆ ನಡೆಸುವಾಗ ಮೆದುಳಿಗೆ ಅರಿವಳಿಕೆ ನೀಡಿರಲಿಲ್ಲ. ಹೀಗಾಗಿ ರೋಗಿ ಸಂಪೂರ್ಣವಾಗಿ ಪ್ರಜ್ಞಾಸ್ಥಿತಿಯಲ್ಲೇ ಇದ್ದರು. ಕೇವಲ ಮೆದುಳಿನ ಭಾಗದ ಹೊರಭಾಗದಲ್ಲಿ ಮಾತ್ರ ಅರಿವಳಿಕೆ ನೀಡಲಾಗಿತ್ತು. ಐದು ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆ ವೇಳೆ ರೋಗಿ ನಿರಂತರವಾಗಿ ಕೊಳಲು ನುಡಿಸುತ್ತಿದ್ದರು.
ಸುದ್ದಿಗೋಷ್ಠಿಯಲ್ಲಿ ಶಸ್ತ್ರಚಿಕಿತ್ಸೆ ಕುರಿತು ಮಾಹಿತಿ ನೀಡಿದ ಡಾ| ಶಿವಶಂಕರ ಮರಜಕ್ಕೆ, ಹಳ್ಳಿ ಭಾಗದಲ್ಲಿ ಇಂಥ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಮಾಡಿರುವ ದೇಶದ ಕೆಲವೇ ಆಸ್ಪತ್ರೆಗಳಲ್ಲಿ ಇದೂ ಒಂದು. ಬೇರೆ ಕಡೆಗೆ ಇದಕ್ಕೆ 10 ರಿಂದ 15 ಲಕ್ಷ ರೂ. ವೆಚ್ಚ ಆಗುತ್ತದೆ. ನಮ್ಮಲ್ಲಿ ಕೇವಲ 1.20 ಲಕ್ಷ ರೂ. ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.
LATEST NEWS
ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ : ಸಿಎಂ ಸಿದ್ಧರಾಮಯ್ಯ
ಮೈಸೂರು : ಈ ಬಾರಿಯ ಮೈಸೂರು ದಸರಾವನ್ನು ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಗಜಪಡೆ ತಾಲೀಮು ಆರಂಭವಾಗಿದೆ. ಅಕ್ಟೋಬರ್ 3 ರಂದು ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ.
ಇದನ್ನೂ ಓದಿ : ಮೈಸೂರು ದಸರಾಗೆ ಒಂದು ಲಕ್ಷ ವಿದ್ಯುತ್ ದೀಪಗಳಿಂದ ಅರಮನೆ ಅಲಂಕಾರ
2024ರ ದಸರಾ ಮಹೋತ್ಸವ ಅಕ್ಟೋಬರ್ 3ರಂದು ಆರಂಭಗೊಂಡು ಅದೇ ತಿಂಗಳ 12 ರಂದು ಸಮಾರೋಪಗೊಳ್ಳಲಿದೆ ಎಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬೆಳಗ್ಗೆ 9.15 ರಿಂದ 9.45ರ ಮುಹೂರ್ತದಲ್ಲಿ ದಸರಾ ಉದ್ಘಾಟನೆಗೊಳ್ಳಲಿದೆ.
LATEST NEWS
ಮೈಸೂರು ದಸರಾಗೆ ಒಂದು ಲಕ್ಷ ವಿದ್ಯುತ್ ದೀಪಗಳಿಂದ ಅರಮನೆ ಅಲಂಕಾರ
ಮೈಸೂರು ಅರಮನೆಯಲ್ಲಿ ದಸರಾ ಸಿದ್ಧತೆಗಳು ಭರದಿಂದ ಸಾಗಿದೆ. ಈ ನಡುವೆ ಅರಮನೆಗೆ ಅಳವಡಿಸಿರುವ 20 ಸಾವಿರ ಬಲ್ಸ್ ಬದಲಾಯಿಸುತ್ತಿದ್ದಾರೆ. ಒಂದು ಲಕ್ಷ ವಿದ್ಯುತ್ ದೀಪಗಳಿಂದ ಅಲಂಕಾರಿಸಲಾಗಿದೆ.
ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ಇಲ್ಲಿಗೆ ಅಳವಡಿಸಿರುವ ದೀಪಗಳನ್ನು ಸರಿಪಡಿಸುವ ಕೆಲಸ ಮಾಡಲಾಗುತ್ತೆ. ಅದೇ ರೀತಿ ಈ ಬಾರಿಯು ವಿದ್ಯುತ್ ದೀಪಗಳನ್ನು ಸರಿಪಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಈ ವರ್ಷ ಸುಮಾರು 15-20 ಸಾವಿರದಷ್ಟು ವಿದ್ಯುತ್ ದೀಪಗಳು ಕೆಟ್ಟು ಹೋಗಿದೆ. ಇಡೀ ಅರಮನೆಯ ಪ್ರಾಂಗಣದಲ್ಲಿ ಬಣ್ಣ ಬಳಿಯಲಾಗುತ್ತಿದೆ.
ಅದೇ ರೀತಿ ಅರಮನೆ ಆವರಣವನ್ನು ವಿವಿಧ ಹೂಗಳಿಂದ ಅಲಂಕರಿಸಲಾಗುತ್ತಿದೆ. ಸುಮಾರು 15ಕ್ಕೂ ಹೆಚ್ಚು ಜಾತಿಯ 10 ಸಾವಿರಕ್ಕೂ ಹೆಚ್ಚು ಹೂಕುಂಡಗಳಿಂದ ಅಲಂಕರಿಸಲಾಗುತ್ತಿದೆ ಎಂದಿದ್ದಾರೆ.