LATEST NEWS
ಪೊಳಲಿ ಸೇತುವೆ ಬಂದ್: ಮಂಗಳವಾರ ಗ್ರಾಮಸ್ಥರಿಂದ ಪ್ರತಿಭಟನೆ
ಮಂಗಳೂರು: ಘನ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದ್ದ ಸೇತುವೆಯ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಪೊಳಲಿ – ಅಡ್ಡೂರಿನ ಪಲ್ಗುಣಿ ನದಿಯ ಸೇತುವೆ ಬಿರುಕು ಬಿಟ್ಟ ಕಾರಣಕ್ಕೆ ಘನ ವಾಹನ ಸಂಚಾರ ಸ್ಥಗಿತ ಮಾಡಲಾಗಿತ್ತು. ಸಂಬಂಧಪಟ್ಟ ಇಲಾಖೆ ಸೇತುವೆಯ ಸಾಮರ್ಥ್ಯವನ್ನು ಯಂತ್ರದ ಮೂಲಕ ಪರಿಶೀಲನೆ ನಡೆಸಿ ಎರಡು ತಿಂಗಳಾದ್ರೂ ಏನಾಗಿದೆ ಎಂಬ ಬಗ್ಗೆ ಜನರಿಗೆ ಮಾಹಿತಿಯೇ ಇಲ್ಲ. ಇದರಿಂದ ತೊಂದರೆಗೆ ಒಳಗಾಗಿರುವ ಅಮ್ಮುಂಜೆ , ಕರಿಯಂಗಳ, ಬಡಗಬೆಳ್ಳೂರು, ತೆಂಕಬೆಳ್ಳೂರು ಮತ್ತು ಸುತ್ತಮುತ್ತಲಿನ ಜನ ಸಭೆ ನಡೆಸಿದ್ದಾರೆ. ಜನರ ಸಮಸ್ಯೆಗೆ ಸ್ಪಂದನೆಯೇ ನೀಡದ ಜನಪ್ರತಿಧಿಗಳು, ಹಾಗೂ ಅಧಿಕಾರಿಗಳ ವಿರುದ್ಧ ಅಕ್ಟೋಬರ್ 15 ರಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಪೊಳಲಿಯ ರಾಮಕೃಷ್ಣ ತಪೋವನ ರಾಜರಾಜೇಶ್ವರಿ ಸಭಾಂಗಣದಲ್ಲಿ ಸಭೆ ನಡೆಸಲಾಗಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಾಚೈತನ್ಯನಂದ ಸ್ವಾಮೀಜಿ , ಪೊಳಲಿ ಅಡ್ಡೂರು ಫಲ್ಗುಣಿ ಹೋರಾಟ ಸಮಿತಿಯ ಅಧ್ಯಕ್ಷ ವೆಂಕಟೇಶ್ ನಾವುಡ, ಚಂದ್ರಹಾಸ್ ಪಲ್ಲಿಪಾಡಿ, ಜಯರಾಮಕೃಷ್ಣ ಪೊಳಲಿ, ನೂಯಿ ಬಾಲಕೃಷ್ಣ ರಾವ್, ಅಬೂಬಕ್ಕರ್ ಅಮ್ಮುಂಜೆ ಉಪಸ್ಥಿತರಿದ್ದು ಹೋರಾಟದ ಬಗ್ಗೆ ಜನಾಭಿಪ್ರಾಯ ಪಡೆದುಕೊಂಡಿದ್ದಾರೆ.
LATEST NEWS
ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪ*ಲ್ಟಿ; ಓರ್ವ ಸಾ*ವು, ಹಲವರ ಸ್ಥಿತಿ ಗಂಭೀ*ರ
ಶಿವಮೊಗ್ಗ: ಶಿವಮೊಗ್ಗದ ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರೊಂದು ಪ*ಲ್ಟಿಯಾಗಿರುವ ಘಟನೆ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಬೆಂಗಳೂರು ಮೂಲದ ಯುವಕ ಮೃ*ತಪಟ್ಟಿದ್ದಾನೆ. ನೆಲಮಂಗಲದ ಚಂದನ್ (26) ಮೃ*ತ ಯುವಕ.
ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಭತ್ತದ ಗದ್ದೆಗೆ ಪ*ಲ್ಟಿಯಾಗಿದೆ. ಕೊಡುಗು ಮೂಲದ ನಂದನ್, ಕೋಲಾರದ ಕೋದಂಡ, ಹಾಸನದ ಭರತ್, ಮಂಡ್ಯ ಜಿಲ್ಲೆಯ ಯೋಗೇಶ್ ಎಂಬವರಿಗೆ ಗಂ*ಭೀರ ಗಾ*ಯವಾಗಿದೆ.
ಇದನ್ನೂ ಓದಿ : ನಟಿ ಓವಿಯಾ ಖಾಸಗಿ ವಿಡಿಯೋ ಲೀಕ್? ನಿಜಾನಾ ಎಂದು ಕೇಳಿದ್ದಕ್ಕೆ ಎಂಜಾಯ್ ಮಾಡಿ ಎಂದ ಕಿರಾತಕ ಬೆಡಗಿ
ಯುವಕರ ತಂಡ ಬೆಂಗಳೂರಿನಿಂದ ಸಿಗಂದೂರಿಗೆ ಪ್ರವಾಸಕ್ಕೆ ಬಂದಿತ್ತು. ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃ*ತದೇಹವನ್ನು ಮ*ರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
LATEST NEWS
ಮದರಸ ಹಾಸ್ಟೇಲ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ
ಬ್ರಹ್ಮಾವರ: ಹೇರಾಡಿ ಖಾಸಗಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯೊಬ್ಬ ಮದರಸ ಹಾಸ್ಟೇಲ್ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯು ಮೊಹಮ್ಮದ್ ಜಹೀದ (12) ಎಂದು ಗುರುತಿಸಲಾಗಿದೆ.
ಕಳೆದ 4 ತಿಂಗಳಿನಿಂದ ಬ್ರಹ್ಮಾವರ ತಾಲೂಕಿನ ರಂಗನಕೆರೆಯ ಮಾಲಿಕ್ ದಿನಾರ್ ಮದರಸ ಹಾಸ್ಟೇಲ್ನಲ್ಲಿ ಉಳಿದು ವಿದ್ಯಾಭ್ಯಾಸ ಮಾಡುತ್ತಿದ್ದು, ರಜೆಯನ್ನು ಮುಗಿಸಿ ಅ.11 ರಂದು ಹಾಸ್ಟೇಲ್ಗೆ ಮರಳಿದ್ದಾನೆ.
ರಾತ್ರಿ 9 ಗಂಟೆಗೆ ಊಟಕ್ಕೆ ಬಾರದಿದ್ದನ್ನು ಗಮನಿಸಿ ಹಾಡುಕಿದಾಗ ಹಾಸ್ಟೇಲ್ನ ಬಾತ್ರೂಮ್ನಲ್ಲಿ ಸರಳಿಗೆ ಬೈರಾಸ್ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ.
ಕೂಡಲೇ ಆತನನ್ನು ಚಿಕಿತ್ಸೆಗಾಗಿ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ವೈದ್ಯರು ರಾತ್ರಿ 10.40 ರ ಸುಮಾರಿಗೆ ಆತನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತನ ಮರಣದಲ್ಲಿ ಸಂಶಯವಿರುವುದಾಗಿ ಬಾಲಕನ ತಾಯಿ ರಿಹಾನ ಬೇಗಂ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕನಿಗೆ ಹಾಸ್ಟೇಲ್ಗೆ ಹೋಗಲು ಮನಸ್ಸಿಲ್ಲವೆಂದು, ಹಾಸ್ಟೇಲ್ನ ಇತರ ವಿದ್ಯಾರ್ಥಿಗಳೊಂದಿಗೆ ಸಣ್ನ ಮಟ್ಟಿನ ಜಗಳ ಆಗಿತ್ತು ಎಂದು ತಿಳಿದು ಬಂದಿದದೆ.
FILM
ನಟಿ ಓವಿಯಾ ಖಾಸಗಿ ವಿಡಿಯೋ ಲೀಕ್? ನಿಜಾನಾ ಎಂದು ಕೇಳಿದ್ದಕ್ಕೆ ಎಂಜಾಯ್ ಮಾಡಿ ಎಂದ ಕಿರಾತಕ ಬೆಡಗಿ
ಚೆನ್ನೈ : ಯಶ್ ಜೊತೆ ಕಿರಾತಕ ಸಿನೆಮಾದಲ್ಲಿ ಹಿರೋಯಿನ್ ಆಗಿ ನಟಿಸಿದ್ದ ನಟಿ ಓವಿಯಾ ಅವರದ್ದು ಎನ್ನಲಾದ ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ನಿನ್ನೆಯಿಂದಲೇ ಟ್ರೆಂಡಿಂಗ್ ನಲ್ಲಿರುವ #OviyaLeaked ಭಾರೀ ಸದ್ದು ಮಾಡುತ್ತಿದೆ. ತಮಿಳು, ಮಲೆಯಾಳಂ ಕನ್ನಡ ಸಿನೆಮಾಗಳಲ್ಲಿ ನಟಿಸಿರುವ ಓವಿಯಾ ಕನ್ನಡದಲ್ಲಿ ಎರಡು ಸಿನೆಮಾಗಳಲ್ಲಿ ನಟಿಸಿದ್ದಾರೆ.
ಸಿನೆಮಾಗಳಲ್ಲಿ ಬೇಡಿಕೆ ಕಡಿಮೆಯಾಗುತ್ತಿದ್ದಂತೆ ತಮಿಳಿನ ಬಿಗ್ ಬಾಸ್ ಸೀಸನ್ 1 ರಲ್ಲಿ ಸ್ಪರ್ದಿಯಾಗಿದ್ದ ಓವಿಯಾ ತಮ್ಮ ಕಾಂಟ್ರವರ್ಸಿಗಳಿಂದ ಪೇಮಸ್ ಆಗಿದ್ದಾರೆ. ಬಿಗ್ ಬಾಸ್ ಬಿಳಿಕ ಅಭಿಮಾನಿಗಳ ಬಳಗವನ್ನೇ ಹೊಂದಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಯೋ ಕುರಿತಂತೆ ಓವಿಯಾ ತನ್ನ ಇನ್ಸ್ಟಾಗ್ರಾಮ್ನಲ್ಲಿ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಈ ವೇಳೆ ಅಭಿಮಾನಿಯೊಬ್ಬ ಪುಲ್ ವಿಡಿಯೋ ಬೇಕು ಎಂದು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಓವಿಯಾ, ‘ಮುಂದಿನ ಸಲ ಬ್ರೋ’ ಎಂದು ಲಘು ಕಾಮೆಂಟ್ ಹಾಕಿದ್ದಾರೆ.
ಇದು ಫೇಕ್ ವಿಡಿಯೋ ಎಂದು ಕೆಲವು ಕಮೆಂಟ್ ಮಾಡಿದ್ದಾರೆ. ಹರಿದಾಡುತ್ತಿರುವ ವಿಡಿಯೋ ನಟಿಯದ್ದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹೇಳಿಕೊಳ್ಳುತ್ತಿದ್ದು, ವಿಡಿಯೋದಲ್ಲಿರುವ ಯುವತಿ ತೋಳಿನ ಮೇಲೆ ಅದೇ ಹಚ್ಚೆ ಹಾಕಿಸಿಕೊಂಡಿದ್ದಾರೆ. ಆದರೆ, ಇದೊಂದು ಡೀಪ್ ಫೇಕ್ ವಿಡಿಯೋ ಎಂದು ವಾದಿಸುವವರೂ ಇದ್ದಾರೆ. ’90 ಎಂಎಲ್’ ಚಿತ್ರದ ಓವಿಯಾ ಅವರ ಇಂಟಿಮೇಟ್ ದೃಶ್ಯಗಳು ಕೂಡ ಸದ್ದು ಮಾಡುತ್ತಿವೆ.
- FILM5 days ago
ಎರಡನೇ ಮದುವೆಯಾಗುತ್ತಿರುವ ಬಿಗ್ಬಾಸ್ ಕಂಟೆಸ್ಟೆಂಟ್
- LATEST NEWS5 days ago
ನ.8 ಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ ನಿವೃತ್ತಿ..! 15 ದಿನದಲ್ಲಿ 8 ಪ್ರಮುಖ ತೀರ್ಪು ಸಾಧ್ಯತೆ..!
- DAKSHINA KANNADA6 days ago
ಮಂಗಳೂರು : ರಾತ್ರಿ ಹೊತ್ತಲ್ಲಿ ಯುವಕನ ಬೆತ್ತಲೆ ಓಡಾಟ; ಭಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರು
- BIG BOSS6 days ago
ಇದೇ ಕಾರಣಕ್ಕೆ ಮೊದಲ ವಾರವೇ ಯಮುನಾ ಶ್ರೀ ನಿಧಿ ಬಿಗ್ಬಾಸ್ ಮನೆಯಿಂದ ಔಟ್ ಆದದ್ದು..!