DAKSHINA KANNADA
ಸುರತ್ಕಲ್ ಟೋಲ್ ವಿರುದ್ಧ ಪ್ರತಿಭಟನೆ ನಡೆಸಿದ ಹೋರಾಟಗಾರರ ಮೇಲೆ ಬಿತ್ತು ಪೊಲೀಸ್ ಕೇಸ್..!
ಮಂಗಳೂರು: ವಿವಾದಾತ್ಮಕವಾಗಿರುವ ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ಮುಚ್ಚಿಸಿಯೇ ಸಿದ್ಧ ಎಂದು ಹೋರಾಟಕ್ಕೆ ಧುಮುಕಿ, ಅಕ್ಟೋಬರ್ 18ರಂದು ಬೃಹತ್ ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲೆ ಇದೀಗ ಸುರತ್ಕಲ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರುಗಳು ದಾಖಲಾಗಿವೆ.
ಸುಮಾರು ಸಾವಿರಕ್ಕೂ ಅಧಿಕ ಮಂದಿ ಮಂಗಳವಾರದಂದು ಟೋಲ್ಗೇಟ್ ಬಳಿ ಜಮಾಯಿಸಿ ಬೃಹತ್ ಪ್ರತಿಭಟನೆ ಮಾಡಿದ್ದರು.
ರಾಷ್ಟ್ರೀಯ ಹೆದ್ದಾರಿಯನ್ನು ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎನ್ನುವ ನಿಯಮ ಇದ್ದರೂ ಕೂಡಾ ಬಲವಂತವಾಗಿ ಪ್ರತಿಭಟನೆ ನಡೆಸಿ ಹೆದ್ದಾರಿಗೆ ತಡೆಯೊಡ್ಡಲಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಹೀಗಾಗಿ ಹೋರಾಟಗಾರರ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಟೋಲ್ ಸಂಗ್ರಹ ಏಜನ್ಸಿ ನೂರ್ ಮೊಹಮ್ಮದ್ ಸಂಸ್ಥೆಯ ಮ್ಯಾನೇಜರ್ ಶಿಶುಪಾಲ್ ಹಾಗೂ ಎನ್ ಎಂ ಪಿಸಿ ಆರ್ ಸಿಎಲ್ ಇದರ ಪ್ರಾಜೆಕ್ಟ್ ಡೈರೆಕ್ಟರ್ ಲಿಂಗೇಗೌಡ ಅವರು ಪ್ರತ್ಯೇಕ ಎರಡು ದೂರು ದಾಖಲಿಸಿದ್ದಾರೆ.
ಸುಮಾರು 20ರಿಂದ 25ಕ್ಕೂ ಅಧಿಕ ಮಂದಿ ಟೋಲ್ಗೇಟ್ ವಿರೋಧಿ ಹೋರಾಟಗಾರರು, ಸಮಿತಿಯ ಅಪರಿಚಿತ ಮಂದಿ ಟೋಲ್ಗೇಟ್ ಮುಂಭಾಗದಲ್ಲಿ ಅಕ್ರಮ ಕೂಟ ಸೇರಿ ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಲಾಗಿದೆ.
ಭಾರತೀಯ ದಂಡ ಸಂಹಿತೆ ಐಪಿಸಿ ಸೆಕ್ಷನ್ 143, 147, 341, 283, 149ನಡಿ ಪ್ರಕರಣ ದಾಖಲಿಸಲಾಗಿದೆ.
BELTHANGADY
ಗುರುವಾಯನಕೆರೆ – ಹೊಂಡ ತಪ್ಪಿಸಲು ಹೋಗಿ ಕಾರುಗಳು ಜ*ಖಂ
ಗುರುವಾಯನಕೆರೆ: ಇಂದು (ಅ.12) ಮುಂಜಾನೆ ಎರಡು ಕಾರುಗಳ ನಡೆವೆ ಭೀಕರ ಅ*ಪಘಾತವು ಗುರುವಾಯನಕೆರೆ ಶಕ್ತಿನಗರದಲ್ಲಿ ಸಂಭವಿಸಿದೆ.
ಗುರುವಾಯನಕೆರೆಯಿಂದ ಹೆಬ್ರಿ ಕಡೆಗೆ ಹೋಗುವ ಸ್ಕೋಡಾ ಕಾರು ಮತ್ತು ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಐ20 ಕಾರಿನ ನಡೆವೆ ಅ*ಪಘಾತ ಸಂಭವಿಸಿದೆ.
ಐ 20 ಕಾರು ಚಾಲಕ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಈ ದುರ್ಘಟನೆ ನಡೆದಿದೆ ಎಂಬುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಉಪ್ಪಿನಂಗಡಿ| ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್: ಚಾಲಕ ಮೃ*ತ್ಯು
ಎರಡೂ ಕಾರು ಉಲ್ಟಾ ಬಿದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿಲ್ಲ ಎಂಬುವುದು ತಿಳಿದು ಬಂದಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಮಂಗಳೂರು – ಕಟೀಲಮ್ಮನ ಮಡಿಲಲ್ಲಿ ಹಲವಾರು ಬಣ್ಣದ ವೇಷಗಳ ವೈಭವ
ಮಂಗಳೂರು: ನಂದಿನಿ ನದಿಯ ಮಧ್ಯದಲ್ಲಿ ರಾರಾಜಿಸುತ್ತಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಅದ್ದೂರಿಯಾಗಿ ನಡೆಯುವ ಶರನ್ನವರಾತ್ರಿ ಉತ್ಸವದ ವೈಭವ ಒಂದು ಕಡೆಯಾದರೆ ಹುಲಿ, ಸಿಂಹ ಸೇರಿದಂತೆ ಸಾವಿರಾರು ಬಣ್ಣದ ವೇಷಗಳು ಸೇವೆ ಸಲ್ಲಿಸುವ ಸೊಬಗು ಇನ್ನೊಂದು ಕಡೆ.
ಹಲವಾರು ತಂಡಗಳು ಹುಲಿ ವೇಷ ಹಾಕಿ ತಿರುಗಾಟ ನಡೆಸಿ ಅಂತಿಮವಾಗಿ ಕಟೀಲಿಗೆ ಬಂದು ದೇವಾಲಯದ ಆವರಣದಲ್ಲಿ ನರ್ತಿಸಿ ವೇಷ ಕಳಚಿ ನಂದಿನಿ ನೀರಿನಲ್ಲಿ ಮಿಂದು ಹೋಗುವುದು ರೂಢಿ. ವೇಷ ಹಾಕುವಾಗಲೇ ಕಟೀಲಿನಲ್ಲಿ ವೇಷ ಬಿಚ್ಚುತ್ತೇವೆ ಎಂದು ಹರಕೆ ಹೊತ್ತವರು ಒಂದೆಡೆಯಾದರೆ, ಕಟೀಲು ಕ್ಷೇತ್ರದಲ್ಲೇ ಸೇವೆ ಸಲ್ಲಿಸಿ ಮರಳಿ ಅಲ್ಲೇ ವೇಷ ಬಿಚ್ಚುತ್ತೇವೆ ಎನ್ನುವವರು ಇನ್ನೊಂದೆಡೆ ಇದ್ದಾರೆ. ಇದು ತಲತಲಾಂತರಗಳಿಂದ ಪಾಲಿಸಿಕೊಂಡು ಬರುತ್ತಿರುವ ಸಂಪ್ರದಾಯವಾಗಿದೆ.
ಶರನ್ನವರಾತ್ರಿ ಸಮಯದಲ್ಲಿ ಕಟೀಲು ದೇವಾಲಯದ ಆವರಣದಲ್ಲಿ ನಿತ್ಯವೂ ಹತ್ತಾರು ತಂಡಗಳ ಹುಲಿ ವೇಷ ನರ್ತನ ಇರುತ್ತದೆ. ಒಟ್ಟಾರೆಯಾಗಿ 2000 ಕ್ಕೂ ಅಧಿಕ ವೇಷಗಳು , 70 ರಿಂದ 80 ತಂಡಗಳು ಕಟೀಲು ಸನ್ನಿಧಿಗೆ ಬಂದು ಸೇವೆ ಸಲ್ಲಿಸುತ್ತವೆ ಎಂದು ಹೇಳಬಹುದು.
DAKSHINA KANNADA
ಮುಂದಿನ ಐದು ದಿನ ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ಈ ಬಾರಿಯ ದಸರಾ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.
ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಚಾರ್ಮಾಡಿ ಘಾಟ್ನಲ್ಲಿ ರಸ್ತೆಯಲ್ಲಿ ನೀರು ರಭಸದಿಂದ ಹರಿದು ಹೋಗುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
- LATEST NEWS7 days ago
ಶಿಕ್ಷಕಿಯ ಅ*ಶ್ಲೀಲ ವಿಡಿಯೋ ಹಂಚಿಕೆ; ನಾಲ್ವರು ವಿದ್ಯಾರ್ಥಿಗಳ ಬಂಧನ
- FILM5 days ago
ಎರಡನೇ ಮದುವೆಯಾಗುತ್ತಿರುವ ಬಿಗ್ಬಾಸ್ ಕಂಟೆಸ್ಟೆಂಟ್
- LATEST NEWS5 days ago
ನ.8 ಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ ನಿವೃತ್ತಿ..! 15 ದಿನದಲ್ಲಿ 8 ಪ್ರಮುಖ ತೀರ್ಪು ಸಾಧ್ಯತೆ..!
- DAKSHINA KANNADA6 days ago
ಮಂಗಳೂರು : ರಾತ್ರಿ ಹೊತ್ತಲ್ಲಿ ಯುವಕನ ಬೆತ್ತಲೆ ಓಡಾಟ; ಭಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರು