Connect with us

    DAKSHINA KANNADA

    ಪೊಲೀಸ್  ಆಯುಕ್ತರು ಅಗತ್ಯ ಖರೀದಿಗೆ ವಾಹನ ನಿಷೇಧ ಆದೇಶ ಹಿಂಪಡೆಯಲಿ: ಕೆ.ಅಶ್ರಫ್  ಆಗ್ರಹ..!

    Published

    on

    ಮಂಗಳೂರು: ನಗರ ಪೊಲೀಸ್ ಆಯುಕ್ತರು ನಿನ್ನೆ ಲಾಕ್ ಡೌನ್ ಬಗ್ಗೆ ಕೆಲವು ಕಟು ನಿಯಮಗಳನ್ನು ಆದೇಶಿಸಿದ್ದು, ಜನರ ದೈನಂದಿನ,ದಿನಸಿ,ಔಷಧ,ಇಂಧನ ಇತ್ಯಾದಿಗಳಿಗೆ ವಾಹನ ಬಳಕೆ ಮಾಡ ಬಾರದು ಎಂದು ಆದೇಶಿಸಿದ್ದಾರೆ.

    ವಾಹನಗಳನ್ನು ಮುಟ್ಟು ಗೋಲು ಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ಆದೇಶಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಕೂಡ  ಜವಾಬ್ದಾರರು ಅವರ ಸಲಹೆಯಂತೆ ಈ ಆದೇಶ ಆಗಿರಲೂ ಬಹುದು.

    ಈ ಆದೇಶ ಅಪ್ರಾಯೋಗಿಕ.ಜನರು ದಿನಸಿ ವಸ್ತುಗಳಿಗೆ ತಮ್ಮ ತಮ್ಮ ಮೊಹಲ್ಲಾವನ್ನು ಮಾತ್ರ ಅವಲಂಬಿಸಿ ಇಲ್ಲ, ಬದಲಾಗಿ ಅಗತ್ಯ ವಸ್ತುಗಳಾದ ಧಾನ್ಯ ಅಕ್ಕಿ,ಮೀನು, ಹಾಲು ,ಔಷದ ಇತ್ಯಾದಿ ವಸ್ತುಗಳು ಒಂದೇ ಮಾರುಕಟ್ಟೆಯಲ್ಲಿ  ಲಭ್ಯವಾಗುವುದಿಲ್ಲ.

    ಇವುಗಳು ನಗರದ ವಿವಿಧ ಕಿಲೋ ಮೀಟರ್  ದೂರದ ಸ್ಥಳಗಳಲ್ಲಿ ಮಾತ್ರ ಲಭ್ಯವಿದೆ.
    ಆದುದರಿಂದ ಕಿಲೋಮೀಟರ್ ಗಟ್ಟಲೆ ನಡೆದು ಹೋಗುವ ಕಷ್ಟಕ್ಕೆ ಜನರನ್ನು ಪೊಲೀಸ್ ಆಯುಕ್ತರು ಹಾಕಬಾರದಾಗಿ , ಮತ್ತು ಆಯುಕ್ತರು ತಕ್ಷಣ ಸೀಮಿತ ಅವಧಿಗೆ ವಾಹನ ಬಳಕೆಗೆ ರಿಯಾಯಿತಿ ಘೋಷಿಸಬೇಕು.

    ಇತರ ರಾಜ್ಯಗಳಂತೆ ಸರಕಾರ ಜನರ ದೈನಂದಿನ ಪಡಿತರ ಪೂರೈಕೆ ಬಗ್ಗೆ ಯಾವುದೇ ಪರಿಹಾರ ನೀಡದ ಕಾರಣ ಸಾರ್ವಜನಿಕರು ಕೋರೋಣ ಸಂಕಷ್ಟದ ಮದ್ಯೆ ಹಸಿವು ಮತ್ತು ಔಷದ ಅಲಭ್ಯತೆ ಕಾರಣದಿಂದ ಜೀವ ಹಾನಿ ಆಗದಂತಹ ಸಂದರ್ಭವನ್ನು ಆಯುಕ್ತರು ಮಾಡಬೇಕಾಗಿ ವಿನಂತಿ.

    ಸರಕಾರದ ಪ್ರತಿ ಬಂಧಕ ಜ್ಯಾರಿಯಾದರೆ ಪ್ರಜೆಗಳಿಗೆ ಆಹಾರ,ಆರೋಗ್ಯ ಮತ್ತು ಭದ್ರತೆ ಒದಗಿಸುವುದು ಸರಕಾರದ ಪ್ರಥಮ ಕರ್ತವ್ಯ ಈ ಸವಲತ್ತನ್ನು ಸಮಗ್ರವಾಗಿ ದ.ಕ. ಜಿಲ್ಲೆಯಲ್ಲಿ ಸರಕಾರದ ವತಿಯಿಂದ ನೀಡಲಿ.

    ಇತರ ರಾಜ್ಯ ಸರಕಾರ ಜನರಿಗೆ ನೀಡಿದ ರೀತಿಯಲ್ಲಿ ಪ್ರತೀ ಕುಟುಂಬಕ್ಕೆ ತಗಲುವ ಅಕ್ಕಿ, ಬೇಳೆ ಎಣ್ಣೆ,ಹಾಲು, ಗ್ಯಾಸ್ ಇತ್ಯಾದಿ ವಸ್ತುಗಳನ್ನು ಸರಕಾರ ಜನರಿಗೆ ತಕ್ಷಣ ಪೂರೈಸಬೇಕು.

    ಹಾಗಾದಲ್ಲಿ ಜನರು ಲಾಕ್ ಡೌನ್ ಸಂದರ್ಭದಲ್ಲಿ ಮನೆಯಿಂದ ಹೊರಗಡೆ ಬರಲಾರರು. ಆಯುಕ್ತರು ತಕ್ಷಣ ಸೀಮಿತ ಅವಧಿ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ವಾಹನ ನಿಷೇಧ ಹಿಂಪಡೆಯಲಿ. ಸಾರ್ವಜನಿಕ ಹಿತಾಸಕ್ತಿ ಕಾಳಜಿಯಿಂದ ಈ ಹೇಳಿಕೆ ನೀಡಲಾಗಿದೆ.ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಹಾಗೂ ಮಾಜಿ ಮೇಯರ್ ಕೆ. ಅಶ್ರಫ್ ಹೇಳಿದ್ದಾರೆ.

    ಕೆ.ಅಶ್ರಫ್(ಮಾಜಿ ಮೇಯರ್)
    ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    DAKSHINA KANNADA

    ಯಕ್ಷಗಾನ ಕಲಾವಿದ ಕುಪ್ಪೆಪದವು ಉಮೇಶ್ ಸಾಲ್ಯಾನ್ ರಿಗೆ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ

    Published

    on

    ಮಂಗಳೂರು : ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಹಿರಿಯ ಅರ್ಚಕ ದಿ.ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಪ್ರಯುಕ್ತ ಕಟೀಲು ಮೇಳದ ಹಿರಿಯ ಯಕ್ಷಗಾನ ವೇಷಧಾರಿ ಕುಪ್ಪೆಪದವು ಉಮೇಶ್ ಸಾಲ್ಯಾನ್ ಅವರಿಗೆ ಈ ವರ್ಷದ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ ನೀಡಲಾಗುವುದು.

    ಆಸ್ರಣ್ಣ ಅಭಿಮಾನಿ ಬಳಗ ಕದ್ರಿ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಚಿನ್ನದ ಪದಕದೊಂದಿಗೆ ಕುಪ್ಪೆಪದವು ಉಮೇಶ್ ಸಾಲ್ಯಾನ್ ರವರನ್ನು ಗೌರವಿಸಲಾಗುವುದು.

    ಇದನ್ನೂ ಓದಿ : ಮಂಗಳೂರು: ‘ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಹಿಂಪಡೆಯುವುದಿಲ್ಲ’ – ಡಿಸಿ ಮುಗಿಲನ್

    ಕಟೀಲು ಲಕ್ಷ್ಮಿ ನಾರಾಯಣ ಆಸ್ರಣ್ಣ ಮತ್ತು ಬಂಧುಗಳು ಸೆಪ್ಟೆಂಬರ್ 14 ರ ಶನಿವಾರ ಸಂಜೆ ಶ್ರೀ ಗೋಪಾಲಕೃಷ್ಣ ಆಸ್ರ ಣ್ಣ ಸಭಾಭವನದಲ್ಲಿ ಹಮ್ಮಿಕೊಡಿರುವ ಸಂಸ್ಮರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಆಸ್ರಣ್ಣ ಅಭಿಮಾನಿ ಬಳಗದ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ನವನೀತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Continue Reading

    DAKSHINA KANNADA

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಸೆ. 12 ರವರೆಗೆ ಕರಾವಳಿಯಲ್ಲಿ ಭಾರೀ ಮಳೆ

    Published

    on

    ಮಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಸೆಪ್ಟೆಂಬರ್ 12 ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಇಂದು ಮೋಡಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    Continue Reading

    LATEST NEWS

    Trending