Connect with us

LATEST NEWS

ಕೂದಲು ಕಸಿ ಮಾಡಿಸಿಕೊಂಡ ಒಂದೇ ದಿನಕ್ಕೆ ಕಾನ್‌ಸ್ಟೇಬಲ್ ಸಾವು..!

Published

on

ಪಾಟ್ನಾ: ಬಿಹಾರ ಮಿಲಿಟರಿ ಪೊಲೀಸ್ (ಬಿಎಂಪಿ) ಕಾನ್‌ಸ್ಟೇಬಲ್​ವೊಬ್ಬರು ಕೂದಲು ಕಸಿ ಚಿಕಿತ್ಸೆ ಮಾಡಿಸಿಕೊಂಡ ಮರುದಿನವೇ ಹೃದಯಸ್ತಂಭನಕ್ಕೊಳಗಾಗಿ ಸಾವನ್ನಪ್ಪಿದ್ದ ಘಟನೆ ಪಾಟ್ನಾ ನಗರದಲ್ಲಿ ನಡೆದಿದೆ.


ಮೃತ ವ್ಯಕ್ತಿ ಕಮಲ್ ಬಿಘಾ ಗ್ರಾಮದ ಮನೋರಂಜನ್​ ಪಾಸ್ವಾನ್​ ಎಂದು ತಿಳಿದುಬಂದಿದೆ. ಇವರು ಬೋರಿಂಗ್ ಕೆನಾಲ್ ರಸ್ತೆಯಲ್ಲಿರುವ ಎನ್‌ಹಾನ್ಸ್ ಎಂಬ ಖಾಸಗಿ ಚಿಕಿತ್ಸಾಲಯದಲ್ಲಿ ಕೂದಲು ಕಸಿ ಮಾಡಿಸಿಕೊಂಡಿದ್ದು, ಮರುದಿನ ಅದರ ಔಷಧದ ಅಡ್ಡ ಪರಿಣಾಮದಿಂದ ಮೃತಪಟ್ಟಿದ್ದಾರೆ ಎಂದು ಮೃತನ ಕುಟುಂಬಸ್ಥರು ದೂರಿದ್ದಾರೆ.

ನಳಂದ ಜಿಲ್ಲೆಯ ರಾಜ್‌ಗಿರ್ ಪೊಲೀಸ್ ಠಾಣೆ ವ್ಯಾಪ್ತಿಯ ಮನೋರಂಜನ್ ಪಾಸ್ವಾನ್​ಗೆ ಗಯಾದಲ್ಲಿ ಪೋಸ್ಟಿಂಗ್​ ಆಗಿತ್ತು. ಪಾಟ್ನಾಗೆ ಕೂದಲು ಕಸಿ ಮಾಡಿಸಿಕೊಳ್ಳಲು ಬಂದಿದ್ದರು.

ಕೂದಲು ಕಸಿ ಮಾಡಿಸಿಕೊಂಡ ತಕ್ಷಣವೇ ಮನೆಗೆ ಹಿಂತಿರುಗಿದ್ದ ಪಾಸ್ವಾನ್​ ಚರ್ಮದಲ್ಲಿ ತುರಿಕೆಯಾಗುತ್ತಿರುವ ಬಗ್ಗೆ ಮನೆಯವರಲ್ಲಿ ಹೇಳಿಕೊಂಡಿದ್ದರು.

ಅವರ ಸ್ನೇಹಿತ ಕಮಲ್​ ಕುಮಾರ್​ ಪಾಸ್ವಾನ್​ ಅವರನ್ನು ಮರುದಿನ ಮತ್ತೆ ಆ ಕ್ಲಿನಿಕ್​ಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಪಾಸ್ವಾನ್​ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟ ಕಾರಣ ಕ್ಲಿನಿಕ್​ನ ಸಿಬ್ಬಂದಿ ಬೇರೊಂದು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಪೊಲೀಸರ ಪ್ರಕಾರ, ಪಾಸ್ವಾನ್ ಅವರನ್ನು ಐಸಿಯುನಲ್ಲಿ ದಾಖಲಿಸಲಾಗಿದ್ದು, ಅಲ್ಲಿ ಪ್ಲಾಸ್ಟಿಕ್ ಸರ್ಜನ್, ಕಾರ್ಡಿಯಾಕ್ ಸರ್ಜನ್, ಇಂಟರ್ನಲ್ ಮೆಡಿಸಿನ್ ಮತ್ತು ಐಸಿಯು ತಜ್ಞರು ಅವರಿಗೆ ಚಿಕಿತ್ಸೆ ನೀಡಿದ್ದಾರೆ.

ಆದರೆ ಒಂದು ಗಂಟೆಯ ನಂತರ ಪಾಸ್ವಾನ್ ಸಾವನ್ನಪ್ಪಿದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಪಾಸ್ವಾನ್​ ಅವರನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಸಮರ್ಪಕ ಕೂದಲು ಕಸಿ ಚಿಕಿತ್ಸೆಯಿಂದ ಉಂಟಾದ ತೊಂದರೆಗಳಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಆದರೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಅವರು ಹೃದಯಸ್ತಂಭನದಿಂದ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಪಾಟ್ಲಿಪುತ್ರ ಕಾಲೊನಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಎಸ್‌ಕೆ ಸಾಹಿ ‘ನಾವು ಅವರ ಅಂಗಾಂಗಗಳನ್ನು ಸಂರಕ್ಷಿಸಿದ್ದೇವೆ.

ಪೂರ್ಣ ವರದಿ ಬಂದ ನಂತರ ಅವರ ಸಾವಿಗೆ ನಿಖರವಾದ ಕಾರಣವನ್ನು ನೀಡುತ್ತವೆ’ ಎಂದು ಹೇಳಿದರು.
ಮೃತರ ಕುಟುಂಬದವರು ಲಿಖಿತ ದೂರು ನೀಡಿದ್ದು, ನಾವು ತನಿಖೆ ನಡೆಸುತ್ತಿದ್ದೇವೆ.

ಮೂಲಗಳ ಪ್ರಕಾರ ಕ್ಲಿನಿಕ್​ನ ಸಿಬ್ಬಂದಿ ಪಾಸ್ವಾನ್​ ಅವರಿಂದ ಪ್ರಿಸ್ಕ್ರಿಪ್ಷನ್​ ಅನ್ನು ಹಿಂದಕ್ಕೆ ಪಡೆದುಕೊಂಡಿದ್ದಾರೆ. ಅವರಿಗೆ ಕೂದಲು ಕಸಿ ಚಿಕಿತ್ಸೆ ಮಾಡಿದ ಕ್ಲಿನಿಕ್ ಬೋರಿಂಗ್ ರಸ್ತೆಯಲ್ಲಿ ಇರುವುದರಿಂದ ಎಸ್‌ಕೆ ಪುರಿ ಪೊಲೀಸ್ ಠಾಣೆಗೂ ಈ ವರದಿಯನ್ನು ವರ್ಗಾಯಿಸಿದ್ದೇವೆ ಎಂದು ಎಸ್‌ಕೆ ಪುರಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸತೀಶ್ ಸಿಂಗ್ ತಿಳಿಸಿದರು.

ಮೃತ ವ್ಯಕ್ತಿಗೆ ಮೇ 11ರಂದು ಮದುವೆ ಕೂಡ ನಿಶ್ಚಯವಾಗಿತ್ತು.

DAKSHINA KANNADA

ಪತಿ ಇನ್ನಿಲ್ಲ ಅನ್ನೋ ಸುದ್ದಿ ಗೊತ್ತಾಗಿ ಮತದಾನದ ಕೊನೆ ಆಸೆ ತೀರಿಸಿದ ಪತ್ನಿ.‌.!

Published

on

ಮಂಗಳೂರು : ಅವರ ಪತಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅದೇ ದಿನ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಕೂಡಾ ನಡೆದಿದೆ. ಆಕೆಗೆ ಪತಿ ಇನ್ನಿಲ್ಲ ಅನ್ನೋ ವಿಚಾರವನ್ನು ಯಾರೋ ತಿಳಿಸಿದ್ದಾರೆ. ಆದ್ರೆ ಆಕೆ ಪತಿಯ ಕೊನೆ ಆಸೆ ಈಡೇರಿಸಿದ ಬಳಿಕ ಪತಿಯ ಅಂತಿಮ ದರ್ಶನ ಪಡೆದಿದ್ದಾರೆ‌.

ಇದು ಮತದಾನ ಮಾಡದೇ ಇರುವವರಿಗೆ ಇವರೊಂದು ಪಾಠವಾಗಿದೆ. ಮಂಗಳವಾರ ರಾಜ್ಯದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ನಡೆದ ಘಟನೆ ಇದು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಪಂಚಾಯತ್ ವ್ಯಾಪ್ತಿಯಲ್ಲಿ ಇದು ನಡೆದಿದೆ. ಇಲ್ಲಿನ ಆಡುಗೋಡಿನ ಕಲಾವತಿ ವೆಂಕಟೇಶ್ ಇವರ ಪತಿ ವೆಂಕಟೇಶ್ ಚುನಾವಣೆಯ ದಿನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ  ಇಹಲೋಕ ತ್ಯಜಿಸಿದ್ದಾರೆ.  ಇನ್ನೇನು ಓಟು ಹಾಕಲು ಹೋಗಬೇಕು ಅನ್ನೋ ಅಷ್ಟರಲ್ಲಿ ಪತಿ ಇಹಲೋಕ ತ್ಯಜಿಸಿದ ಮಾಹಿತಿ ಪತ್ನಿ ಕಲಾವತಿಗೆ ಬಂದಿದೆ. ಆದ್ರೆ ಕಲಾವತಿ ಅವರು ಈ ವೇಳೆ ತಮ್ಮ ಅಮೂಲ್ಯ ಮತ ಚಲಾಯಿಸಿ, ಬಳಿಕ ಪತಿಯ ದೇಹವನ್ನು ನೋಡಲು ತೆರಳಿದ್ದಾರೆ.

ಪತಿ ಒಂದು ಪಕ್ಷದ ಅಭಿಮಾನಿಯಾಗಿದ್ದು ,ಆ ಪಕ್ಷದ ನಾಯಕನನ್ನು ಯಾವಾಗಲು ಜಪಿಸ್ತಾ ಇದ್ರು ಹಾಗಾಗಿ ಪತಿಯ ಕೊ‌‌ನೆಯ ಆಸೆಯಾಗಿ ಅವರ ಪ್ರೀಯಪಟ್ಟವರಿಗೆ ಮತ ಚಲಾಯಿಸಿದೆ ಅಂತ ಕಲಾವತಿ ಹೇಳಿಕೊಂಡಿದ್ದಾರೆ.

Continue Reading

DAKSHINA KANNADA

ಪ್ರಜ್ವಲ್‌ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್‌ಐಟಿ ವಾರ್ನಿಂಗ್..!

Published

on

ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending