BANTWAL
ಬಂಟ್ವಾಳದ ಪೊಲೀಸ್ ಕಾನ್ಸ್ಟೇಬಲರ ‘ಮನ ಮಿಡಿದ’ ಕಥೆ
ಬಂಟ್ವಾಳ: ಪೊಲೀಸರಿಗೆ ಹೃದಯವೇ ಇಲ್ಲ. ಅವರ ಮಾತು ಕಟು, ಮನುಷತ್ವವೇ ಇಲ್ಲದವರು ಎಂಬ ಆರೋಪದ ನಡುವೆ ಪೊಲೀಸ್ ಪೇದೆಯೊಬ್ಬರು ಕೆಲವು ಮನೆಯ ಕಷ್ಟಕ್ಕೆ ಸ್ಪಂದಿಸಿದ ಮನಮುಟ್ಟುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಇಲ್ಲಿನ ಪಾಣೆಮಂಗಳೂರು ವಾರ್ಡ್ ಬೀಟ್ ಪೊಲೀಸ್ ಪ್ರವೀಣ್ ಅವರೇ ಈ ಕಥೆಯ ಹೀರೋ.
ಮೂಲತಃ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶಿವಪುರ ನಿವಾಸಿ ಪ್ರವೀಣ್ ಬಂಟ್ವಾಳ ನಗರ ಠಾಣೆಯ ಪೊಲೀಸ್ ಆಗಿದ್ದು, ಇವರ ಜನಪರ ಕಾಳಜಿ ಸೇವೆ ಇತರರಿಗೆ ಮಾದರಿಯಾಗಿದೆ. ಇವರು ಲಾಕ್ ಡೌನ್ ಅವಧಿಯಲ್ಲಿ ಪಾಣೆಮಂಗಳೂರು ಸಮೀಪ ಇರುವ ಜೈನರಪೇಟೆ ಪರಿಸರದಲ್ಲಿ ಸುತ್ತಾಡುವ ವೇಳೆ ಇವರ ಕಣ್ಣಿಗೆ ಬಿದ್ದ ಎರಡು ಮನೆಯ ಸ್ಥಿತಿ ಮನಸ್ಸಿಗೆ ತುಂಬಾ ಬೇಸರ ತಂದಿತ್ತು. ಆ ದಿನವೇ ಅವರಿಗೇನಾದರೂ ಸಹಾಯಮಾಡಬೇಕು ಎಂದು ನಿಶ್ಚಯ ಮಾಡಿದ್ದರು.
ಸ್ಥಳೀಯ ಪುರಸಭಾ ಸದಸ್ಯ ಇದ್ರೀಸ್ ಅವರಿಗೆ ತಿಳಿಸಿ, ಜೈನರ ಪೇಟೆ ವಾರ್ಡ್ ನಲ್ಲಿ ಅರ್ಥಿಕ ವಾಗಿ ತೀರಾ ಬಡತನದಲ್ಲಿ ರುವ ಒಟ್ಟು ಹತ್ತು ಮನೆಗಳನ್ನು ಗುರುತಿಸಿ, ಸ್ವತಃ ಆ ಮನೆಗಳಿಗೆ ಪ್ರವೀಣ್ ತೆರಳಿ ದೈನಂದಿನ ಆಹಾರದ ಕಿಟ್ ತಲುಪಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿದೆ. ‘ಪೊಲೀಸರಲ್ಲಿ ನಾನು ಬದಲಾದಾಗ ಮಾತ್ರ ಸಮಾಜ ಬದಲಾಗುತ್ತದೆ. ನಾವು ಶುದ್ಧ ವಾಗಿರಬೇಕು ಅವಾಗ ಸಮಾಜ ಸ್ವಚ್ಛವಾಗಿರಬೇಕು’ ಎಂಬುದು ಅವರ ಮಾತು.
ತಂದೆಯ ಅನಾರೋಗ್ಯದ ಮಧ್ಯೆಯೂ ಸಮಾಜಕ್ಕೆ ತಾನು ಏನಾದರೂ ನೀಡಬೇಕು ಎಂಬುದು ಇವರ ಹಂಬಲ, ಅದು ತಾನು ಸ್ವತಃ ದುಡಿದ ಹಣದಲ್ಲಿ ಮಾತ್ರ ಎಂಬುದು ಇವರ ಸಿದ್ದಾಂತವಾಗಿದೆ. ಸದ್ಯ ಇವರ ಈ ಮಹಾತ್ಕಾರ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಏನೇ ಹೇಳಿ ಬಡವರ ಬಗ್ಗೆ ಇವರಿಗೆ ಇದ್ದ ಕಾಳಜಿಗೆ ಸಲಾಂ ಹೊಡೆಯಲೇಬೇಕು.
BANTWAL
Bantwala: ಅಕ್ಕಪಕ್ಕ ಮನೆಯ ಯುವಕ-ಯುವತಿ ಒಂದೇ ದಿನ ನಾಪತ್ತೆ..!
ಬಂಟ್ವಾಳ: ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿ ಒಂದೇ ದಿನ ನಾಪತ್ತೆ ಯಾದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದ್ದು, ಈ ಕುರಿತಂತೆ ಎರಡೂ ಮನೆಯವರು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಆಯಿಷತ್ ರಸ್ಮಾ (18) ಮತ್ತು ಮಹಮ್ಮದ್ ಸಿನಾನ್ (23) ನಾಪತ್ತೆಯಾದವರು. ರಸ್ಮಾ ನಡುಪದವು ಖಾಸಗಿ ಕಾಲೇಜಿನಲ್ಲಿ ಫಾರ್ಮಸಿ ವಿದ್ಯಾರ್ಥಿನಿಯಾಗಿದ್ದಾರೆ. ಅವರು ನ. 23ರ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದು, ಮರುದಿನ ಬೆಳಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು. ಸಿನಾನ್ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಬಳಿಕ ಊರಿಗೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು. ಅವರು ನ. 23ರ ರಾತ್ರಿ ಊಟ ಮಾಡಿ ಮಲಗಿದವರು ಮರುದಿನ ಬೆಳಗಾಗುವಷ್ಟರಲ್ಲಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಎರಡೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
BANTWAL
Bantwala: ಅಕ್ರಮ ಮರ ಸಾಗಾಟ-ಇಬ್ಬರು ಆರೋಪಿಗಳು ವಶ..!
ಬಂಟ್ವಾಳ: ಅಕ್ರಮ ಮರ ಸಾಗಟ ಮಾಡುತ್ತಿದ ಸ್ಥಳಕ್ಕೆ ಖಚಿತ ಮಾಹಿತ ಪಡೆದ ಬಂಟ್ವಾಳ ಅರಣ್ಯ ಇಲಾಖೆಯವರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕಿನ ಸಜೀಪಪಡು ಗ್ರಾಮದ ಕೋಟೆಕಣಿಯಲ್ಲಿ ನಡೆದಿದೆ.
ಮರ ಹಾಗೂ ವಿವಿಧ ಜಾತಿಯ ದಿಮ್ಮಿಗಳನ್ನು ಪಿಕಪ್ ಮೂಲಕ ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಾಗೂ 2 ಪಿಕಪ್ ವಾಹನ,6 ಲಕ್ಷ ರೂ ಮೌಲ್ಯದ ದಿಮ್ಮಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಲು ಪಾಲ್ಗೊಂಡಿದ್ದರು. ವಲಯ ಅರಣ್ಯ ಅಧಿಕಾರಿ ಪ್ರಪುಲ್ ಶೆಟ್ಟಿ ಪಿ.ಅವರು ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.
BANTWAL
ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಬಂಟ್ವಾಳದ ಧನೇಶ್ ಶೆಟ್ಟಿ ಆಯ್ಕೆ
ಬಂಟ್ವಾಳ: ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕ ಇಂಡೋನೇಶ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಕುಕ್ಕಿಪ್ಪಾಡಿ ಹುಣಸೆಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಶ್ಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಶ್ಯಾದಲ್ಲಿ ನೆಲೆಸಿದ್ದು, ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ನಲ್ಲಿ ಆಸಕ್ತಿ ಹೊಂದಿದ್ದ ಇವರು ಇದೀಗ ಇಂಡೋನೇಸ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
- FILM3 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA6 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!