DAKSHINA KANNADA
PSI ಪರೀಕ್ಷೆ ಅಕ್ರಮದ ತನಿಖೆ ಬದಲು ಮಾಹಿತಿ ನೀಡಿದವರಿಗೆ ನೋಟೀಸ್ ಕೊಡೋದು ಸರ್ಕಾರದ ವ್ಯವಸ್ಥೆಯಾ-ಖಾದರ್ ಪ್ರಶ್ನೆ
ಮಂಗಳೂರು: ಪಿಎಸ್ಐ ಅಕ್ರಮ ನೇಮಕದ ಬಗ್ಗೆ ತಪ್ಪು ಮಾಡಿದವರ ಮೇಲೆ ಕ್ರಮ ಆಗಲಿ. ಅಧಿಕಾರಿಗಳ ಬೆಂಬಲ ಇಲ್ಲದೆ ಈ ನೇಮಕಾತಿ ಸಾಧ್ಯವಿಲ್ಲ, ನೇಮಕಾತಿ ಮುಖ್ಯಸ್ಥ ಯಾರು? ಇದನ್ನ ತನಿಖೆ ಮಾಡಿ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವ ಬದಲು ಪ್ರಿಯಾಂಕ್ ಖರ್ಗೆ ನೋಟೀಸ್ ಮಾಡ್ತಾರೆ ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದರು.
ಪಿಎಸ್ಐ ಅಕ್ರಮ ಪರೀಕ್ಷಾ ನೇಮಕಾತಿ ಹಿನ್ನೆಲೆ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ “ಪ್ರಿಯಾಂಕ್ ಖರ್ಗೆ ಸಾರ್ವಜನಿಕವಾಗಿ ಇರೋ ಮಾಹಿತಿಯನ್ನೇ ಕೊಟ್ಟಿದ್ದಾರೆ. ಸಾಮಾಜಿಕ ತಾಣಗಳಲ್ಲಿ ಬಂದ ವಿಚಾರವನ್ನೇ ಅವರು ಮಾತನಾಡಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ಇಲ್ವಾ? ಇದು ಗುಪ್ತಚರ ವೈಫಲ್ಯ.
ಪ್ರಕರಣದ ತನಿಖೆ ಮಾಡುವ ಬದಲು ಹೇಳಿದವರಿಗೆ ನೋಟೀಸ್ ಕೊಡೋದು ಸರ್ಕಾರದ ವ್ಯವಸ್ಥೆಯಾ? ಅಷ್ಟೇ ಅಲ್ಲದೆ ಜನ ಕೂಡ ಈ ಸರ್ಕಾರವನ್ನ ಕ್ಷಮಿಸಲು ಹೋಗಲ್ಲ, ಇನ್ನು ಮುಂದೆ ಬೆದರಿಕೆಗಳಿಗೆಲ್ಲ ಕಾಂಗ್ರೆಸ್ ಬಗ್ಗಲ್ಲ ಮತ್ತು ಹೆದರುವುದು ಕೂಡ ಇಲ್ಲ. ಅದನ್ನು ಲೆಕ್ಕಕ್ಕೆ ತಗೊಳಲ್ಲ ಎಂದು ಕಿಡಿಕಾರಿದರು.
ಪಿಡಬ್ಲ್ಯುಡಿಯಲ್ಲೂ ಬ್ಲೂಟೂತ್ ಬಳಸಿರೋದು ಬೆಳಕಿಗೆ ಬಂದಿದೆ. ಬಿಜೆಪಿ ಸರ್ಕಾರ ಇರೋವಾಗಲೇ ಇದೆಲ್ಲ ಯಾಕೆ ಆಗುತ್ತೆ. ಇಲಾಖೆ ಮೇಲೆಯೇ ಈ ಬಗ್ಗೆ ತನಿಖೆ ಆಗಲಿ, ಮುಖ್ಯಸ್ಥರನ್ನ ಕರೆಸಿ ಕೇಳಲಿ.
ಪೊಲೀಸ್ ಇಲಾಖೆ ಮೇಲೆ ಪೊಲೀಸ್ ಇಲಾಖೆ ತನಿಖೆ ಮಾಡಿದ್ರೆ ನ್ಯಾಯ ಸಿಗುತ್ತಾ? ನ್ಯಾಯಾಂಗ ತನಿಖೆ, ನಿವೃತ್ತ ನ್ಯಾಯಾಧೀಶರ ಮೂಲಕ ಅಥವಾ ಸಿಬಿಐ ತನಿಖೆಗೂ ಕೊಡಲಿ.
ನೇಮಕಾತಿ ಮುಖ್ಯಸ್ಥ ಯಾರು? ಸಿಐಡಿ ಮುಖ್ಯಸ್ಥ ಯಾರು? ಇದರಿಂದ ಏನಾಗುತ್ತೆ. ಪೊಲೀಸ್ ಇಲಾಖೆ ಮೇಲಾಧಿಕಾರಿಗಳ ಬೆಂಬಲ ಇಲ್ಲದೇ ಅಕ್ರಮ ಆಗಲು ಸಾಧ್ಯವಿಲ್ಲ. ಅದು ಹೇಗಾಗುತ್ತದೆ ಎಂದು ಪ್ರಶ್ನಿಸಿದರು.
ನೋಟೀಸ್ ಕೊಟ್ಟ ಉದ್ದೇಶ ಏನು? ಖರ್ಗೆ ಅದನ್ನು ಸೃಷ್ಟಿ ಮಾಡಿದ್ರಾ? ಸರ್ಕಾರದ ವೈಫಲ್ಯ ಇದೆ, ಪೊಲೀಸ್ ಇಲಾಖೆ ಮತ್ತು ಗುಪ್ತಚರ ಇಲಾಖೆ ವೈಫಲ್ಯ.
ಪೊಲೀಸ್ ಇಲಾಖೆಗೆ ಸಿಗದೆ ಇದ್ದದ್ದು ರಾಜಕೀಯ ನಾಯಕರಿಗೆ ಸಿಗುತ್ತೆ ಅಂದ್ರೆ ಅದು ಸರ್ಕಾರದ ವೈಫಲ್ಯ. ಸಾಕ್ಷ್ಯವನ್ನು ಅವರಿಗೆ ಕೊಡಲೇಬೇಕು ಅಂತ ಏನೂ ಇಲ್ಲ.
ಇದಕ್ಕೂ ಮುನ್ನ ಆರೋಪ ಮಾಡಿದ ಎಲ್ಲರಿಗೂ ನೋಟೀಸ್ ಜಾರಿಯಾಗಿದ್ಯಾ? ಪ್ರಿಯಾಂಕ್ ಖರ್ಗೆಗೆ ನೋಟೀಸ್ ಕಳಿಸಿರೋದು ಅವರು ತಪ್ಪು ಮಾಡಿದ್ದಾರೆ ಅಂತ ಬಿಂಬಿಸೋ ಪ್ರಯತ್ನ.
ಈ ಮೂಲಕ ಸರ್ಕಾರದ ವೈಫಲ್ಯ ಮುಚ್ಚಿ ಹಾಕುವ ಯತ್ನ. ನೇಮಕಾತಿ ಮುಖ್ಯಸ್ಥರ ಮೇಲೆ ಯಾವ ಕ್ರಮ ಆಗಿದೆ. ಅವರಿಗೆ ನೋಟೀಸ್ ಮಾಡಿ ಸಿಐಡಿಯವರು ಕರೆದಿದ್ದಾರಾ ಎಂದು ಹೇಳಿದರು.
DAKSHINA KANNADA
ಡಿ. 14ರಿಂದ 17 ರವರೆಗೆ “ಆಳ್ವಾಸ್ ವಿರಾಸತ್”
ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’ ಡಿ.14ರಿಂದ 17ರವರೆಗೆ ಮೂಡಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಶುಭಾಶೀರ್ವಾದೊಂದಿಗೆ ನಡೆಯುವ ವಿರಾಸತ್ ಅನ್ನು ದೇಶಕ್ಕಾಗಿ ದೇಹತ್ಯಾಗ ಮಾಡಿದ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ ಅರ್ಪಣೆ ಮಾಡಲಾಗಿದೆ ಎಂದು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಡಿ.14ರಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ವಿರಾಸತ್ ಉದ್ಘಾಟಿಸಲಿದ್ದು,ಈ ಬಾರಿಯ ವಿರಾಸತ್ ನಲ್ಲಿ ಬೆನ್ನಿದಯಾಲ್, ವಿಜಯಪ್ರಕಾಶ್, ಶ್ರೇಯಾ ಘೋಷಾಲ್ ಸ್ವರ ಮಾಧುರ್ಯ, ಪ್ರತಿನಿತ್ಯ 13 ಗಂಟೆಗಳ ಕಾಲ 750 ಮಳಿಗೆಗಳಲ್ಲಿ ಪ್ರದರ್ಶನ ಹಾಗೂ ಮಾರಾಟಗಳು ನಡೆಯಲಿವೆ. ಭವ್ಯ ಸಾಂಸ್ಕೃತಿಕ ಮೆರವಣಿಗೆ ಬಳಿಕ ಸಾಂಸ್ಕೃತಿಕ ರಥ ಸಂಚಲನ ಮತ್ತು ರಥಾರತಿ, ಕೃಷಿ ಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪದರ್ಶನ ಮೇಳ, ಚಿತ್ರಕಲಾ ಮೇಳಗಳು ಕಲಾಕೃತಿಗಳ ಪ್ರದರ್ಶನ ನಡೆಯಲಿದೆ. ಸ್ಕೌಟ್ಸ್ ಗೈಡ್ಸ್ ಸಾಹಸಮಯ ಚಟುವಟಿಕೆ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಪತ್ರಿಕಾ ಗೋಷ್ಠಿಯಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.
BELTHANGADY
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ವೇದಿಕೆ ಬೆಳ್ತಂಗಡಿ ಇದರ 2023-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ, ಕೋಶಾಧಿಕಾರಿಯಾಗಿ ರಂಜಿತ್ ಕಳೆಂಜ, ಜೊತೆ ಕಾರ್ಯದರ್ಶಿಯಾಗಿ ತೀಕ್ಷಿತ್ ಕೆ.ಕಲ್ಬೆಟ್ಟು ದಿಡುಪೆ, ಉಪಾಧ್ಯಕ್ಷರುಗಳಾಗಿ ನಿತಿನ್ ಕಲ್ಮಂಜ ಮತ್ತು ಪ್ರಶಾಂತ್ ಅಂತರ ಕಡಿರುದ್ಯಾವರ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೋದ್ ದಿಡುಪೆ, ಕಾನೂನು ಸಲಹೆಗಾರರಾಗಿ ನವೀನ್ ಬಿ.ಕೆ.ಕಲ್ಮಂಜ, ಯಶವಂತ್ ಬನಂದೂರು ಮತ್ತು ಜಯಾನಂದ ಗೌಡ ಬೆಳ್ತಂಗಡಿ ಆಯ್ಕೆಯಾದರು.
ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಯಶವಂತ ಗೌಡ ಪುದುವೆಟ್ಟು, ಮಂಜುನಾಥ ಗೌಡ ಚಾರ್ಮಾಡಿ, ವಿಕ್ರಮ್ ಧರ್ಮಸ್ಥಳ, ಸತೀಶ್ ಬೆಳಾಲು, ಪ್ರಸಾದ್ ಅಡಿಮಾರ್ ಚಾರ್ಮಾಡಿ, ಹೇಮಂತ್ ಕಳಿಯ, ದಿನೇಶ್ ದೇಂತ್ಯಾರು ಕೊಯ್ಯೂರು, ಪ್ರದೀಪ್ ನಾಗಾಜೆ ನಾವೂರು, ಭರತ್ ಗೌಡ ಪುದುವೆಟ್ಟು, ನಿತೇಶ್ ಬೆಳ್ತಂಗಡಿ, ಅಕ್ಷಯ್ ಕುಮಾರ್ ಮಾಚಾರ್, ಕರುಣಾಕರ ಗೌಡ ಉಜಿರೆ, ಗಿರೀಶ್ ನಿಡ್ಲೆ ಮತ್ತು ಕಿಶಾನ್ ಗೌಡ ಸವಣಾಲು ಇವರನ್ನು ಆಯ್ಕೆ ಮಾಡಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಸಂಘದ ನಿಕಟ ಪೂರ್ವ ಕಾರ್ಯದರ್ಶಿ ಮೋಹನ್ ಗೌಡ ಕೊಯ್ಯೂರು ಉಪಸ್ಥಿತರಿದ್ದರು. ಯಶವಂತ್ ಬನಂದೂರು ಸ್ವಾಗತಿಸಿದರು.ಕಾರ್ಯದರ್ಶಿ ಸುರೇಶ್ ಕೌಡಂಗೆ ವಂದಿಸಿದರು.
BELTHANGADY
ಖೋಟ ನೋಟು ಪ್ರಕರಣ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ..!
ಧರ್ಮಸ್ಥಳ: ಖೋಟ ನೋಟು ಪ್ರಕರಣದಲ್ಲಿ ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೋಹನ ಕುಮಾರ್ ಎಂಬಾತನನ್ನು ಬೆಂಗಳೂರು ಗೊಲ್ಲಹಳ್ಳಿ ಬಸ್ಸು ತಂಗುದಾಣದ ಬಳಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿರುವ ಘಟನೆ ನಡೆದಿದೆ.
ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು 4 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಆರೋಪಿ ಕೆಂಪೆರಾಜ್ ಎಂಬಾತನನ್ನು ಚಿಕ್ಕನಾಯಕನಹಳ್ಳಿ ತಾಲೂಕು ಮುಳಬಾಗಿಲು ಬಸ್ಸು ತಂಗುದಾಣದ ಬಳಿಯಿಂದ ಧರ್ಮಸ್ಥಳ ಠಾಣಾ ಪಿ.ಎಸ್.ಐ ಸಮರ್ಥ ಆರ್ ಗಾಣಿಗೇರ್, ಹೆಚ್ ಸಿ 607 ರಾಜೇಶ್ ಎನ್, ಪಿ.ಸಿ 2406 ವಿನಯ ಕುಮಾರ್ ರವರುಗಳ ತಂಡ ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದೆ.
- bangalore6 days ago
ಆಸ್ಟ್ರೇಲಿಯಾ ಬೀಚ್ ನಲ್ಲಿ ಮಂಗ್ಳೂರು ಬೆಡಗಿ ಅನುಶ್ರೀ…
- bangalore6 days ago
“ಎಂಚ ಉಲ್ಲಾರ್ ಮರ್ರೆ”…. ಎಂದು ತುಳುವಿನಲ್ಲಿ ಮಾತನಾಡಿದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್
- LATEST NEWS6 days ago
ಪ್ರಿಯತಮೆಯ ಕೊಂದು ಆಕೆಯ ಮೃತದೇಹವನ್ನು ಸ್ಟೇಟಸ್ ಹಾಕಿದ ಕ್ರೂರಿ..!
- DAKSHINA KANNADA6 days ago
Mangaluru: 4 ತಿಂಗಳ ಮಗುವನ್ನು ಉಸಿರುಕಟ್ಟಿಸಿ ಕೊಂದ ತಾಯಿ ಕೂಡ ಜೀವಾಂತ್ಯ..!