Connect with us

    BIG BOSS

    ಬಿಗ್‌ಬಾಸ್‌ಗೆ ಪೊಲೀಸ್ ನೋಟಿಸ್; ವಿಚಾರಣೆಗೆ ಹಾಜರಾಗಲು ಸೂಚನೆ

    Published

    on

    ಬೆಂಗಳೂರು: ‘ಬಿಗ್ ಬಾಸ್’ ಆಯೋಜಕರಿಗೆ ಕುಂಬಳಗೋಡು ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಬರುವಂತೆ ‘ಬಿಗ್ ಬಾಸ್’ ಆಯೋಜಕರಿಗೆ ನೋಟಿಸ್ ನೀಡಲಾಗಿದೆ.

    ಸ್ವರ್ಗ, ನರಕ ವಿಚಾರವಾಗಿ ಮಹಿಳೆಯರ ಕುರಿತಾದ ಹೇಳಿಕೆಯ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು.

    ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗದಿಂದ ದೂರು ದಾಖಲಿಸಿದ್ದು, ಮಹಿಳಾ ಆಯೋಗದ ದೂರು ಆಧರಿಸಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

    ‘ಬಿಗ್ ಬಾಸ್’ ಸೆಟ್ ಗೆ ತೆರಳಿ ಇನ್ ಸ್ಪೆಕ್ಟರ್ ಮಂಜುನಾಥ್ ಹೂಗಾರ ಅವರು ನೋಟಿಸ್ ನೀಡಿದ್ದಾರೆ. ಸ್ವರ್ಗ ನರಕ ವಿಚಾರವಾಗಿ ನಡೆದ ಸಂಭಾಷಣೆಯ ರಾ ಫುಟೇಜ್ ನೀಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಒಂದು ವೇಳೆ ಅಸಡ್ಡೆ ತೋರಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

    BIG BOSS

    ಬಿಗ್​ಬಾಸ್ ಮನೆಯಲ್ಲಿ ಜಗದೀಶ್- ಹಂಸಾ ಡುಯೇಟ್ ! ಶುರುವಾಯ್ತು ಪ್ರೇಮ್ ಕಹಾನಿ

    Published

    on

    ಬಿಗ್​ಬಾಸ್ ಗ್ರ್ಯಾಂಡ್ ಓಪನಿಂಗ್ ಪಡೆದು ಯಶಸ್ವಿಯಾಗಿ ಸಾಗುತ್ತಿದೆ. ಬಿಗ್ ಮನೆಯೊಳಗೆ ಸ್ಪರ್ಧಿಗಳು ಕೂಡ ತಮ್ಮ ಆಟವನ್ನು ಮುಂದುವರೆಸಿದ್ದಾರೆ. ಶನಿವಾರ-ಭಾನುವಾರ ಬಂದರೆ ಸಾಕು ಪ್ರೇಕ್ಷಕರೆಲ್ಲ ಕಿಚ್ಚನ ಪಂಚಾಯತಿಗಾಗಿ ಕಾಯುತ್ತಿರುತ್ತಾರೆ. ಶನಿವಾರದ ಪಂಚಾಯತಿಯಲ್ಲಿ ಸ್ಪರ್ಧಿಗಳಿಗೆ ಬಹುಮಾನ ನೀಡಲಾಗಿತ್ತು. ಇದರ ಜೊತೆಗೆ ಏನೇನು ಆಗಿದೆ ಎಂದು ನಿಮಗೆಲ್ಲ ಗೊತ್ತಿದೆ. ಸದ್ಯ ಇಂದಿನ ಕಿಚ್ಚನ ಪಂಚಾಯತಿಯಲ್ಲಿ ಏನೆಲ್ಲ ನಡೆಯಲಿದೆ?

    ಇಂದಿನ ಕಿಚ್ಚನ ಪಂಚಾಯತಿ ಫುಲ್ ಜೋಶ್​ನಲ್ಲಿ ಇರಬಹುದೆಂದು ಸೋಶಿಯಲ್ ಮೀಡಿಯಾದಲ್ಲಿ ರಿಲೀಸ್ ಆದ ವಿಡಿಯೋ ನೋಡಿದರೆ ಗೊತ್ತಾಗುತ್ತದೆ. ಹಂಸಾ ಅವರ ಕ್ಯಾಪ್ಟನ್ಸಿಯಲ್ಲಿ ಏನೇನು ಫೆಸಲಿಟಿ ಇತ್ತು ಎಂದು ಲಾಯರ್ ಜಗದೀಶ್​ಗೆ ಸುದೀಪ್ ಅವರು ಪ್ರಶ್ನಿಸಿದ್ದಾರೆ. ಇದಕ್ಕೆ ಲಾಯರ್ ಜಗದೀಶ್ ಫುಲ್ ಕಾಮಿಡಿಯಾಗಿ ಉತ್ತರಿಸಿದ್ದು ಬೇಜಾರ ಎಂದರೆ ನನ್ನ ಜೊತೆ ಡುಯೇಟ್ ಮಾಡಿದ್ದು ಅಂತ ಹೇಳಿ ಎಲ್ಲ ಸ್ಪರ್ಧಿಗಳನ್ನ ನಕ್ಕು ನಲಿಸಿದ್ದಾರೆ.

    ಇನ್ನು ಹಂಸಾನೂ ಮಾತನಾಡಿ ಲಾಯರ್ ಬಳಿ ಮಾತಿನಿಂದ ಗೆಲ್ಲಲು ಆಗಲ್ಲ. ಮನಸಾದ್ರೂ ಗೆದ್ದರೇ ನನ್ನ ಕೆಲಸ ಮಾಡಿಕೊಳ್ಳಬಹುದು ಎಂದಿದ್ದಾರೆ. ಹೀಗೆ ಹೇಳುತ್ತಿದ್ದಂತೆ ಕಿಚ್ಚ ಏನ್​ ಗೆದ್ದರೇ ಎಂದು ಪ್ರಶ್ನಿಸುತ್ತಿದ್ದಂತೆ ಎಲ್ಲರೂ ನಕ್ಕಿದ್ದಾರೆ. ಇನ್ನು ಧನ್​ರಾಜ್ ಕೂಡ ಪಂಚಾಯತಿಯಲ್ಲಿ ಲಾಯರ್​ ಬಗ್ಗೆ ಮಾತನಾಡಿ, ರಾತ್ರಿ ಮಲಗಿಕೊಳ್ಳಬೇಕಾದರೆ, ನನಗೆ ಫೀಲ್ ಆಗ್ತಿದೆ. ನನ್ನ ಹೆಂಡತಿ ಜೊತೆ ಒಂದು ಸಾರಿನೂ ಈ ತರ ಡುಯೇಟ್ ಮಾಡಿಲ್ಲ ಎಂದು ಹೇಳಿದ್ದಾರೆ ಎಂದಿದ್ದಾರೆ. ಇನ್ನು ಜಗದೀಶ್ ಹಾಗೂ ಹಂಸಾ ಸಾಂಗ್​ಗೆ ಡ್ಯಾನ್ಸ್ ಕೂಡ ಮಾಡಿದ್ದಾರೆ. ಇದೆಲ್ಲ ನೋಡಲು ಇನ್ನು ಕೆಲ ಗಂಟೆ ಕಾಯಬೇಕಾಗಿದೆ.

    Continue Reading

    BIG BOSS

    ಯಾರೂ ಊಹಿಸದ ವ್ಯಕ್ತಿಗೆ ಈ ವಾರ ಕಿಚ್ಚನ ಚಪ್ಪಾಳೆ, ಬಿಗ್​ಬಾಸ್ ಮನೆಯಲ್ಲಿ ಇದೇ ಮೊದಲು

    Published

    on

    ಬಿಗ್​ಬಾಸ್​ ಕನ್ನಡದ ಪ್ರತಿ ಸೀಸನ್​ನಲ್ಲೂ ಕೆಲವು ವಿಷಯಗಳು ಪಕ್ಕಾ ಇರುತ್ತವೆ. ಜನರು ಗಿಫ್ಟ್​ ಕಳಿಸುವುದು, ಕಿಚ್ಚ ಅಡುಗೆ ಕಳಿಸುವುದು, ಪ್ರತಿ ವಾರ ಕ್ಯಾಪ್ಟನ್ ಆಗುವುದು, ಭಾನುವಾರದ ಎಲಿಮಿನೇಷನ್ ಇದೆಲ್ಲವೂ ಒಂದು ರೀತಿ ಫಿಕ್ಸ್​ ಕಾರ್ಯಕ್ರಮಗಳು. ಇದೇ ರೀತಿ ಕಿಚ್ಚನ ಚಪ್ಪಾಳೆ ಸಹ ಕಳೆದ ಕೆಲ ಸೀಸನ್​ನಿಂದ ಫಿಕ್ಸ್ ಕಾರ್ಯಕ್ರಮವಾಗಿದೆ. ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಜನ ಕಾಯುವಂತೆ ಈ ವಾರ ಕಿಚ್ಚ ಚಪ್ಪಾಳೆ ಯಾರಿಗೆ ಸಿಗುತ್ತದೆ ಎಂದು ಸಹ ಜನ ಕಾಯುತ್ತಾರೆ. ಆದರೆ ಕಳೆದ ವಾರ ಕಿಚ್ಚ ಯಾರಿಗೂ ಚಪ್ಪಾಳೆ ನೀಡಿರಲಿಲ್ಲ. ಕಳೆದ ವಾರ ಮಾಡದಿದ್ದನ್ನು ಕಿಚ್ಚ ಈ ವಾರ ಮಾಡಿದ್ದಾರೆ.

    ಕಳೆದ ವಾರದ ಪಂಚಾಯ್ತಿಯಲ್ಲಿ ಕಿಚ್ಚ ಯಾರಿಗೂ ಚಪ್ಪಾಳೆ ನೀಡಿರಲಿಲ್ಲ. ಮೊದಲ ವಾರ ಮನೆಯಲ್ಲಿ ಸಾಕಷ್ಟು ಜಗಳ, ತರ್ಲೆ ತಾಪತ್ರಯಗಳು ನಡೆದಿದ್ದವು. ಲಾಯರ್ ಜಗದೀಶ್ ಅಂತೂ ಬಿಗ್​ಬಾಸ್​ ಮನೆಯಲ್ಲಿದ್ದುಕೊಂಡೆ ಬಿಗ್​ಬಾಸ್​ಗೆ ಧಮ್ಕಿ ಹಾಕಿದ್ದರು. ಹಲವರು ನಿಯಮ ಮೀರಿದ್ದರು. ಮನೆಯಲ್ಲಿ ಮೊದಲ ದಿನದಿಂದಲೂ ಬರೀ ಜಗಳಗಳೇ ನಡೆದಿದ್ದವು. ಸುದೀಪ್ ಮೊದಲ ವಾರದ ಪಂಚಾಯ್ತಿಯ ಎರಡೂ ದಿನದಲ್ಲಿ ಸುದೀಪ್​ ಮನೆಯವರಿಗೆ ವ್ಯಕ್ತಿತ್ವದ ಪಾಠ ಮಾಡಿ ಸುಸ್ತಾದರು. ಮೊದಲ ವಾರದ ಗಲಾಟೆಯ ನಡುವೆ ಆ ವಾರ ಚೆನ್ನಾಗಿ ಆಡಿದ್ದ ಸ್ಪರ್ಧಿಗೆ ಚಪ್ಪಾಳೆ ಕೊಡುವುದನ್ನೇ ಸುದೀಪ್ ಮರೆತಿದ್ದರು.

    ಎರಡನೇ ವಾರಾಂತ್ಯದ ವಾರದ ಪಂಚಾಯ್ತಿಯ ಆರಂಭದಲ್ಲಿಯೇ ಒಂದು ಚಿತ್ರವೊಂದನ್ನು ಹಂಸ ಅವರಿಗೆ ಹೇಳಿ ಸ್ಟೋರ್ ರೂಂನಿಂದ ತರಲು ಹೇಳಿದರು ಸುದೀಪ್. ಆ ಚಿತ್ರ ಒಂದು ಕಾರ್ಟೂನ್ ಆಗಿತ್ತು, ವ್ಯಕ್ತಿಯೊಬ್ಬನ ತಲೆ ಬಳಿಯ ಏನೇನೋ ಚಿತ್ರಗಳಿದ್ದವು. ತಲೆ ಚಿಟ್ಟು ಹಿಡಿದ ವ್ಯಕ್ತಿಯೊಬ್ಬ ಕಾರ್ಟೂನ್ ಅದು. ಆ ಚಿತ್ರದ ಬಗ್ಗೆ ವಿವರಣೆ ನೀಡಿದ ಸುದೀಪ್, ಅದು ನನ್ನದೇ ಚಿತ್ರ. ಮೊದಲ ವಾರ ಎಪಿಸೋಡ್ ನೋಡಿ, ನಿಮ್ಮ ಬಳಿ ಎರಡು ವಾರ ಮಾತನಾಡಿದ ಬಳಿಕ ಆ ಸ್ಥಿತಿ ಆಗಿತ್ತು ಎಂದರು. ಅಲ್ಲದೆ, ಮೊದಲ ವಾರ ಯಾರಿಗೂ ಚಪ್ಪಾಳೆ ನೀಡಿರಲಿಲ್ಲ. ಆದರೆ ಈಗ ನೀಡುತ್ತಿದ್ದೇನೆ. ಇದೇ ಮೊದಲ ಬಾರಿಗೆ ಕಿಚ್ಚನಿಗೆ ಕಿಚ್ಚನ ಚಪ್ಪಾಳೆ ನೀಡುತ್ತಿದ್ದೇನೆ ಎಂದರು.

    ನಿಮ್ಮ ಮೊದಲ ವಾರದ ಎಪಿಸೋಡ್ ಎಲ್ಲ ನೋಡಿ, ನಿಮ್ಮ ಬಳಿ ಮಾತನಾಡಿ, ನಿಮಗೆ ಅರ್ಥ ಮಾಡಿಸುವುದು, ತಪ್ಪು ತಿದ್ದುವುದು, ಮಾರ್ಗದರ್ಶನ ಮಾಡುವುದು ಸುಲಭದ ಕೆಲಸ ಆಗಿರಲಿಲ್ಲ. ಹಾಗಾಗಿ ಆ ಚಪ್ಪಾಳೆಗೆ ನಾನೇ ಅರ್ಹ ಎನಿಸಿತು, ಅದಕ್ಕೆ ಇದೇ ಮೊದಲ ಬಾರಿಗೆ ಕಿಚ್ಚನ ಚಪ್ಪಾಳೆಯನ್ನು ನನಗೆ ನಾನೇ ಕೊಟ್ಟುಕೊಳ್ಳುತ್ತಿದ್ದೇನೆ ಎಂದರು. ಆ ಕಾರ್ಟೂನ್ ಚಿತ್ರವನ್ನು ಮನೆಯಲ್ಲಿ ನೇತು ಹಾಕಿಸಿದರು.

    Continue Reading

    BIG BOSS

    ಬಿಗ್ ಬಾಸ್​ನಲ್ಲಿ ಈ ವಾರ ಇರಲ್ಲ ಯಾವುದೇ ಎಲಿಮಿನೇಷನ್; ಕಾರಣ ಏನು ಗೊತ್ತಾ?

    Published

    on

    ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಎರಡನೇ ವಾರಾಂತ್ಯಕ್ಕೆ ಸ್ಪರ್ಧಿಗಳು ರೆಡಿ ಆಗಿದ್ದಾರೆ. ಈಗಾಗಲೇ ಸ್ಪರ್ಧಿಗಳ ಮಧ್ಯೆ ಸಾಕಷ್ಟು ಕಾಂಪಿಟೇಷನ್ ಮೂಡಿದ್ದು, 16 ಮಂದಿ ಮಾತ್ರ ಉಳಿದುಕೊಂಡಿದ್ದಾರೆ. ಈ ವಾರ ಬಹುತೇಕರು ನಾಮಿನೇಟ್ ಆಗಿದ್ದು, ಹೊರ ಹೋಗುವವರು ಯಾರು ಎನ್ನುವ ಪ್ರಶ್ನೆ ಮೂಡಿದೆ. ಈ ಬಾರಿ ಯಾವುದೇ ಎಲಿಮಿನೇಷನ್ ಇರುವುದಿಲ್ಲ ಎನ್ನುವ ಮಾತು ಕೂಡ ಕೇಳಿ ಬಂದಿದೆ.

    ಈ ವಾರ ನಿಯಮ ಬ್ರೇಕ್ ಮಾಡಿ ಬಿಗ್ ಬಾಸ್​ನಲ್ಲಿ ಎಲ್ಲರೂ ನಾಮಿನೇಟ್ ಆದರು. ನಂತರ ಬಿಗ್ ಬಾಸ್ ನಾಮಿನೇಷನ್​ನಿಂದ ಬಚಾವ್ ಆಗಲು ಕೆಲವು ಚಾನ್ಸ್ ಕೊಟ್ಟರು. ಅಂತಿಮವಾಗಿ ಭವ್ಯಾ ಗೌಡ, ಧನರಾಜ್, ಧರ್ಮ ಕೀರ್ತಿರಾಜ್​, ರಂಜಿತ್, ತ್ರಿವಿಕ್ರಂ, ಮಾನಸಾ, ಐಶ್ವರ್ಯಾ, ಗೋಲ್ಡ್ ಸುರೇಶ್, ಹಂಸಾ, ಜಗದೀಶ್, ಅನುಷಾ ರೈ ನಾಮಿನೇಷನ್ ಲಿಸ್ಟ್​ನಲ್ಲಿ ಇದ್ದಾರೆ.

    ಹಾಗಾದರೆ ಇವರ ಪೈಕಿ ಹೊರ ಹೋಗುವವರು ಯಾರು? ಈ ಪ್ರಶ್ನೆಗೆ ಉತ್ತರ ಸಿಗಬೇಕು ಎಂದರೆ ಭಾನುವಾರ (ಅಕ್ಟೋಬರ್ 13) ರಾತ್ರಿವರೆಗೆ ಕಾಯಲೇಬೇಕು. ಈ ವಾರ ನಾಮಿನೇಷನ್ ಇಲ್ಲದೆಯೂ ಇರಬಹುದು ಎಂದು ಕೆಲವರು ಅಭಿಪ್ರಾಯವನ್ನು ಹೊರಹಾಕಿದ್ದಾರೆ. ಏಕೆಂದರೆ ಜಿಯೋ ಸಿನಿಮಾದಲ್ಲಿ ಈವರೆಗೆ ಯಾವುದೇ ವೋಟಿಂಗ್ ಲೈನ್ ಬಿಟ್ಟಿಲ್ಲ.

    ಕಳೆದ ನವರಾತ್ರಿ ಸಂದರ್ಭದಲ್ಲಿ ಬಿಗ್ ಬಾಸ್ ಯಾವುದೇ ಎಲಿಮಿನೇಷನ್ ಮಾಡಿರಲಿಲ್ಲ. ಎಲಿಮಿನೇಷನ್ ಪ್ರಕ್ರಿಯೆ ನಡೆಸಿದ್ದರೂ ಕೊನೆಯಲ್ಲಿ ಡ್ರಾಮಾ ಮಾಡಿ ಸ್ಪರ್ಧಿಗಳನ್ನು ಹಿಂದಕ್ಕೆ ಕರೆಯಲಾಯಿತು. ಈ ಬಾರಿಯೂ ಅದೇ ರೀತಿಯಲ್ಲಿ ನಡೆಯಬಹುದು ಎಂದು ಊಹಿಸಿಲಾಗಿದೆ. ಇಂದು (ಅಕ್ಟೋಬರ್ 12) ಸುದೀಪ್ ಈ ಬಗ್ಗೆ ಅನೌನ್ಸ್ ಕೂಡ ಮಾಡಬಹುದು.

    ಸದ್ಯ ಇರುವ ಎಲ್ಲರೂ ಸ್ಟ್ರಾಂಗ್ ಸ್ಪರ್ಧಿಗಳು ಎನಿಸಿಕೊಂಡಿದ್ದಾರೆ. ಯಾರೇ ಎಲಿಮಿನೇಟ್ ಆದರೂ ಅದು ಮನೆಗೆ ನಷ್ಟವೇ. ಈ ಕಾರಣಕ್ಕೆ ಈ ಬಾರಿ ಯಾವುದೇ ಎಲಿಮಿನೇಷನ್ ನಡೆಸದೇ ಇರಲು ನಿರ್ಧರಿಸಲಾಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

    Continue Reading

    LATEST NEWS

    Trending