Connect with us

LATEST NEWS

ಕೋರಿದ ಕಟ್ಟದ ಮೇಲೆ ಪೊಲೀಸ್‌ ರೈಡ್‌: 8 ಮಂದಿ ಬಂಧನ-10 ಹುಂಜ ವಶ

Published

on

ಉಡುಪಿ: ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು 8 ಮಂದಿಯನ್ನು ಬಂಧಿಸಿ, 10 ಹುಂಜಗಳನ್ನು ವಶಪಡಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಇಂದ್ರಾಳಿಯ ದೆಂದೂರುಕಟ್ಟೆಯಲ್ಲಿ ನಡೆದಿದೆ.


ನಿನ್ನೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ದೆಂದೂರುಕಟ್ಟೆ ಎಂಬಲ್ಲಿ ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಕಾಪು ಠಾಣೆಯ ಪೊಲೀಸ್ ಉಪನಿರೀಕ್ಷಕ ಭರತೇಶ ಕಂಕಣವಾಡಿ ಸಿಬ್ಬಂದಿ ಜೊತೆ ದಾಳಿ ನಡೆಸಿದ್ದಾರೆ.

ಈ ವೇಳೆ ಸ್ಥಳದಲ್ಲಿದ್ದವರು ಓಡಿಹೋಗಲು ಪ್ರಯತ್ನಿಸಿದ್ದಾರೆ. ತಕ್ಷಣ ಬೆನ್ನಟ್ಟಿದ್ದ ಪೊಲೀಸರು ಸದಾನಂದ ಪೂಜಾರಿ, ತೇಜಸ್, ಸುರೇಶ್, ನಿತೇಶ್, ಸಂತೋಷ್, ಸ್ವಾಮಿನಾಥ್, ಅಣ್ಣಪ್ಪ ಪೂಜಾರಿ, ಸಂದೀಪ್ ಶೆಟ್ಟಿ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಸ್ಥಳದಲ್ಲಿದ್ದ 10 ಕೋಳಿ ಸಹಿತ ಬಾಳು (ಸಣ್ಣ ಕತ್ತಿ) ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

DAKSHINA KANNADA

ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವದ ಸಂಭ್ರಮ

Published

on

ಬಂಟ್ವಾಳ : ಬಾಳ್ತಿಲ ಗ್ರಾಮದ ಕುದ್ರಬೆಟ್ಟು ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ 75 ರ ದಕ್ಷಿಣ ಭಾಗದ ಗುಡ್ಡಗಳ ನಡುವೆ ಹಚ್ಚ ಹಸುರಿನ ಮೇರು ವೃಕ್ಷಗಳಿಂದ ನಯನಮನೋಹರ ಪರಿಸರದ ನಡುವೆ ಕಂಗೊಳಿಸುತ್ತಿರುವ ಊರಿನ ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಶ್ರದ್ಧಾ ಭಕ್ತಿಯ ಕೇಂದ್ರ ಶ್ರೀ ಮಣಿಕಂಠ ಮಂದಿರದ ವಠಾರದಲ್ಲಿರುವ ಸಾನಿಧ್ಯವೇ “ಶ್ರೀ ಕಲ್ಲುರ್ಟಿ ದೈವಸ್ಥಾನ ಕುದ್ರೆಬೆಟ್ಟು”.

ಇಲ್ಲಿ ಶ್ರದ್ಧಾ ಭಕ್ತಿಯಿಂದ ತಾಯಿ ಕಲ್ಲುರ್ಟಿಯಲ್ಲಿ ಪ್ರಾರ್ಥಿಸಿದರೆ, ಭಕ್ತರ ಇಷ್ಟಾರ್ಥಗಳು ಕ್ಷಣಮಾತ್ರದಲ್ಲಿ ಈಡೇರುತ್ತದೆ ಎಂಬ ನಂಬಿಕೆಯಿದೆ. ಈ ಕ್ಷೇತ್ರದಲ್ಲಿ ದಿನೇ ದಿನೇ ಹರಕೆ ಸೇವೆಗಳು, ಅಗೆಲು ಸೇವೆಗಳ ಸಂಖ್ಯೆ ಗಣನೀಯ ಏರುತ್ತಿವೆ. ಸುಮಾರು 15 ವರ್ಷಗಳ ಹಿಂದೆ ಈ ಸಾನಿಧ್ಯದ ಪ್ರತಿಷ್ಠಾ ಕಾರ್ಯಗಳು ನಡೆದಿವೆ.

ಇದೀಗ ಶಿಥಿಲಾವಸ್ಥೆಯಲ್ಲಿರುವ ಈ ಸಾನಿಧ್ಯವನ್ನು ಊರ ಪರ ಊರ ಭಗವತ್ ಭಕ್ತರ ಸಹಕಾರದೊಂದಿಗೆ ಜೀರ್ಣೋದ್ಧಾರ ಮಾಡಲು ನಿರ್ಧರಿಸಿದ್ದು, ಆ ಪ್ರಕಾರ ಜನಶಕ್ತಿ ಸೇವಾ ಟ್ರಸ್ಟ್ (ರಿ )ಕುದ್ರೆಬೆಟ್ಟು, ಶ್ರೀ ಮಣಿಕಂಠ ಯುವಶಕ್ತಿ( ರಿ) ಕುದ್ರೆಬೆಟ್ಟು, ಶ್ರೀ ಮಣಿಕಂಠ ಮಾತೃಶಕ್ತಿ ಕುದ್ರೆಬೆಟ್ಟು ಜವಾಬ್ದಾರಿಯನ್ನು ಹೆಗಲಿಗೇರಿಸಿಕೊಂಡಿದೆ. ಅಂತೆಯೇ, ಇದೀಗ ಕೇವಲ ಒಂದೇ ತಿಂಗಳ ಅವಧಿಯಲ್ಲಿ ನೂತನ ಸಾನಿಧ್ಯ ನಿರ್ಮಿಸಲಾಗಿದ್ದು, ಅದರ ಪುನಃ ಪ್ರತಿಷ್ಠಾ ಮಹೋತ್ಸವ ಶುಕ್ರವಾರ ನಡೆದಿದೆ.

ಬೆಳಿಗ್ಗೆ ಗಣಹೋಮ ಬಳಿಕ 10.00 ರಿಂದ 10.25ರ ಒಳಗೆ ಒದಗುವ ಮಿಥುನ ಲಗ್ನದ ಸುಮೂಹೂರ್ತದಲ್ಲಿ ಸೂರ್ಯನಾರಾಯಣ ಭಟ್ ಕಶೆಕೋಡಿ ಇವರ ವೈದಿಕತ್ವದಲ್ಲಿ ಶ್ರೀಕಲ್ಲುರ್ಟಿ ದೈವದ ಪ್ರತಿಷ್ಠೆ, ಸಾನಿಧ್ಯ ನವಕ ಕಲಶಾಭಿಷೇಕ, ಪರ್ವ ಸೇವೆ ನಡೆಯಿತು.

ಇದನ್ನೂ ಓದಿ : ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!

ಕಲ್ಲಡ್ಕ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಶ್ರೀಕಲ್ಲುರ್ಟಿ ದೈವಸ್ಥಾನದಲ್ಲಿ ಶ್ರೀಕಲ್ಲುರ್ಟಿ ದೈವದ ಪುನಃ ಪ್ರತಿಷ್ಠಾ ಮಹೋತ್ಸವ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ನೇಮ ನಡೆಯಿತು. ಇದೇ ಸಂದರ್ಭ ದೈವಸ್ಥಾನದ ಪುನಃ ಪ್ರತಿಷ್ಠಾ ಕಾರ್ಯಕ್ಕಾಗಿ ಶ್ರಮಿಸಿದವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜನಶಕ್ತಿ ಸೇವಾ ಟ್ರಸ್ಟ್ ಕುದ್ರೆಬೆಟ್ಟು, ಶ್ರೀ ಮಣಿಕಂಠ ಯುವಶಕ್ತಿ ಕುದ್ರೆಬೆಟ್ಟು, ಶ್ರೀ ಮಣಿಕಂಠ ಮಾತೃಶಕ್ತಿ ಕುದ್ರೆಬೆಟ್ಟು ಸಂಘದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸರ್ವ ಸದಸ್ಯರುಗಳು, ಊರಿನ ಪರ ಊರಿನ ಅಪಾರ ಭಕ್ತಾದಿಗಳು ಉಪಸ್ಥಿತರಿದ್ದರು.

Continue Reading

DAKSHINA KANNADA

ಸಿಡಿಲ ಬಡಿತಕ್ಕೆ ನವವಿವಾಹಿತ ದುರ್ಮರ*ಣ..!10 ದಿನಗಳ ಹಿಂದೆಯಷ್ಟೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ವಿಧಿಯಾಟಕ್ಕೆ ಬ*ಲಿ!!

Published

on

ಕಡಬ:  ಹದಿನೈದು ದಿನಗಳ ಹಿಂದೆಯಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನವವಿವಾಹಿತ ಸಿಡಿಲು ಬಡಿದು ಸಾವನಪ್ಪಿರುವ ಘಟನೆ ಮೇ.3ರ ಸಂಜೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಇಲ್ಲಿನ ಪರ್ವತಮುಖಿ ನಿವಾಸಿ ಸೋಮಸುಂದರ್(34 ವ)ಮೃತಪಟ್ಟವರು.

death

ಸುಬ್ರಹ್ಮಣ್ಯದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭಗೊಡಿತ್ತು. ಮನೆಯಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದ ವೇಳೆ ಸೋಮಸುಂದರ್‌ರವರಿಗೆ ಸಿಡಿಲು ಬಡೆದಿದೆ. ಆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ.

ಮುಂಧೆ ಓದಿ..; ಉಳ್ಳಾಲ : ಕಾರು ಡಿ*ಕ್ಕಿ; ಇಹಲೋಕ ಇಹಲೋಕ ತ್ಯಜಿಸಿದ ಬಿಜೆಪಿ ಕಾರ್ಯಕರ್ತ

10 ದಿನಗಳ ಹಿಂದೆಯಷ್ಟೆ ಏ.18ರಂದು ಮೋಹಿನಿ(ಪವಿತ್ರ) ಎಂಬವರ ಜೊತೆ ಸುಬ್ರಹ್ಮಣ್ಯದ ಆದಿಸುಬ್ರಹ್ಮಣ್ಯ ಸಭಾಭವನದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ವಿಧಿಯಾಟಕ್ಕೆ ಸೋಮಸುಂದರ್ ಬಲಿಯಾಗಿದ್ದಾರೆ. ಹೊಸೋಳಿಕೆ ಪರ್ವತಮುಖಿ ದಿ.ಸಾಂತಪ್ಪ ಗೌಡರ ಪುತ್ರ ಸೋಮಸುಂದರ್ ಪರ್ವತಮುಖಿ ಬಳಿ ಕಾರ್ ವಾಷಿಂಗ್ ಉದ್ಯಮವನ್ನು ನಡೆಸುತ್ತಿದ್ದರು. ಮದುವೆ ಸಂಭ್ರಮ ಮಾಸುವ ಮುನ್ನವೇ ಮನೆಯಲ್ಲಿ ಸಾವಿನ ಛಾಯೆ ಮೂಡಿದೆ. ಮನೆಯವರ ಆಕ್ರಂದನ ಮುಗಿಲುಮುಟ್ಟಿದೆ. ಮೃತರು ತಾಯಿ, ತಂಗಿ ಮತ್ತು ಪತ್ನಿಯನ್ನು ಅಗಲಿದ್ದಾರೆ.

Continue Reading

DAKSHINA KANNADA

ಉಳ್ಳಾಲ : ಕಾರು ಡಿ*ಕ್ಕಿ; ಇಹಲೋಕ ತ್ಯಜಿಸಿದ ಬಿಜೆಪಿ ಕಾರ್ಯಕರ್ತ

Published

on

ಉಳ್ಳಾಲ : ಕಾರು ಡಿ*ಕ್ಕಿ ಹೊಡೆದು ಪಾದಚಾರಿ ಬಿಜೆಪಿ ಕಾರ್ಯಕರ್ತ ಮೃ*ತಪಟ್ಟ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ನಡೆದಿದೆ. ಕೋಟೆಕಾರು ನೆಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46)ಮೃ*ತಪಟ್ಟವರು. ಶ್ರೀಕಾಂತ್ ಆಟೋ ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದರು.

ಶುಕ್ರವಾರ ಮಧ್ಯಾಹ್ನ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕೇರಳದಿಂದ ಧಾವಿಸುತ್ತಿದ್ದ ಕಾರು ಶ್ರೀಕಾಂತ್ ಗೆ ಡಿ*ಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಶ್ರೀಕಾಂತ್ ರನ್ನು ಅಪಘಾ*ತ ನಡೆಸಿದ ಕಾರು ಚಾಲಕನೇ ಮಂಗಳೂರಿನ‌ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಕೊಡದೆ ಮೃ*ತಪಟ್ಟಿದ್ದಾರೆ.

ಇದನ್ನೂ ಓದಿ : ಮಂಗಳೂರು : ನಾಳೆಯಿಂದ ರೇಶನಿಂಗ್ ಆರಂಭ; ಎಲ್ಲೆಲ್ಲಿ ನೀರಿಲ್ಲ?

ಮೃ*ತ ಶ್ರೀಕಾಂತ್ ತುಳುನಾಡು ಫ್ರೆಂಡ್ಸ್ ಕೋಟೆಕಾರುವಿನ ಸಕ್ರಿಯ ಸದಸ್ಯರಾಗಿದ್ದು, ಬಿಜೆಪಿಯ ಕಾರ್ಯಕರ್ತರಾಗಿದ್ದರು. ಶ್ರೀಕಾಂತ್ ಅವಿವಾಹಿತರಾಗಿದ್ದು ತಾಯಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending