Connect with us

LATEST NEWS

ಪಡುಕೆರೆ ಬೀಚ್‌ನಲ್ಲಿ ಎಚ್ಚರಿಕೆಯ ಬ್ಯಾನರ್‌ಗೆ ಪೊಲೀಸರ ರೆಸ್ಪಾನ್ಸ್-ಸಂತಸಪಟ್ಟ ಸ್ಥಳೀಯರು

Published

on

ಉಡುಪಿ: ಉಡುಪಿಯ ಮಲ್ಪೆ ಪಡುಕೆರೆಯ ಕಡಲತೀರದಲ್ಲಿ ದೂರದ ಊರಿನಿಂದ ಆಗಮಿಸುವ ಪ್ರವಾಸಿಗರಿಂದ ಆಗುತ್ತಿರುವ ತೊಂದರೆಗಳನ್ನು ತಪ್ಪಿಸುವುದಕ್ಕೆ ಇಲ್ಲಿನ ನಿವಾಸಿಗಳು ಹಾಕಿದ ಬ್ಯಾನರ್ ಗೆ ಇದೀಗ ಪೊಲೀಸ್ ಅಧಿಕಾರಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅಲ್ಲಿನ ನಿವಾಸಿಗಳು ಪ್ರವಾಸಕ್ಕಾಗಿ ಇಲ್ಲಿನ ಪಡುಕೆರೆ ಬೀಚ್ ಗೆ ಪ್ರವಾಸಕ್ಕಾಗಿ ಆಗಮಿಸುವ ಪ್ರವಾಸಿಗರಿಂದ ಹಲವಾರು ಸಮಸ್ಯೆಗಳು ಉಂಟಾಗುತ್ತಿತ್ತು.

ರಾತ್ರಿ 7 ಗಂಟೆಯಿಂದ ಹೆಂಗಸರು ಮನೆಯಿಂದ ಹೊರ ಬರಲು ಆಗದಂತಹ ವಾತಾವರಣ ಇಲ್ಲಿ ನಿರ್ಮಾಣವಾಗುತ್ತಿತ್ತು.

ಪ್ರಾರಂಭದಲ್ಲಿ ನಾವು ಸಂಬಂಧ ಪಟ್ಟವರಿಗೆ ಮಾಹಿತಿಯನ್ನು ನೀಡಿದ್ರೂ , ಯಾವುದೇ ರೀತಿಯ ಸ್ಪಂದನೆ ಸಿಕ್ಕಿರಲಿಲ್ಲ. ಜೊತೆಗೆ ಈ ವಿಚಾರ ಸುದ್ದಿ ಮಾಧ್ಯಮಗಳಲ್ಲಿ ಸಾಕಷ್ಟು ವೈರಲ್ ಆದ ಸ್ಥಳಕ್ಕೆ ಭೇಟಿ ನೀಡಿದ ಠಾಣಾಧಿಕಾರಿಗಳು ಇಲ್ಲಾಗುತ್ತಿರುವ ಸಮಸ್ಯೆ ನಿವಾರಿಸುವ ಹಾಗು ಸಂಸ್ಕೃತಿಯನ್ನು ಉಳಿಸುವ ಭರವಸೆ ನೀಡಿದ್ದಾರೆ ಎಂದು ಎಂದು ಸಂತಸ ಹಂಚಿಕೊಂಡರು.


ಇನ್ನು ಕೆಲವು ದಿನಗಳ ಹಿಂದೆಯಷ್ಟೇ ಯಾವುದೇ ಪ್ರವಾಸಿಗರು ಈ ಊರಿನಲ್ಲಿ ರಾತ್ರಿ ಗಂಟೆ 8:00ರಿಂದ ಬೆಳಗ್ಗೆ 6:00ರ ತನಕ ತಿರುಗಾಡುವುದು, ಬೀಜ್‌ನಲ್ಲಿ ಕೂರುವುದು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಈ ನಿಯಮವನ್ನು ಉಲ್ಲಂಘಿಸಿದಲ್ಲಿ ಮುಂದಾಗುವ ಯಾವುದೇ ಪ್ರತಿಕ್ರಿಯೆಗಳಿಗೆ ಊರಿನವರು ಹೊಣೆಯಾಗಿರುವುದಿಲ್ಲ ಅಂತ ಬ್ಯಾನರ್‌ನಲ್ಲಿ ಬರೆಯಲಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತಾದ ವಿಡಿಯೋ ಎಲ್ಲಡೆ ವೈರಲ್ ಆಗಿತ್ತು.

FILM

ಮತ್ತೆ ಬಾಯ್‌ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!

Published

on

ಮಂಗಳೂರು : ಪ್ರೀತಿ ಎಂಬ ಎರಡಕ್ಷರವನ್ನ ಬಣ್ಣದ ಲೋಕದಲ್ಲಿರುವ ಅನೇಕರು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಹೀಗಾಗಿಯೇ ದಿನಕ್ಕೊಂದು ಸಂಬಂಧ ಇಲ್ಲಿ ಬದಲಾಗುತ್ತೆ. ಲವ್ ಬೆನ್ನಲ್ಲಿಯೇ ಬ್ರೇಕ್‌ಪ್ ಆಗುತ್ತೆ. ಇದಕ್ಕೆ ಮತ್ತೊಂದು ಉದಾಹರಣೆ ಶ್ರುತಿ ಹಾಸನ್ ಮತ್ತು ಶಾಂತನು ಹಜಾರಿಕಾ.

ಹೌದು, ನಿಮಗೆ ಗೊತ್ತಿರಲಿ.. ಮೂರ್ನಾಲ್ಕು ವರ್ಷಗಳ ಹಿಂದೆ, ಕಮಲ ಹಾಸನ್ ಅವರ ಮುದ್ದಿನ ಮಗಳು ಶ್ರುತಿ ಹಾಸನ್, ಬ್ರಿಟಿಷ್ ನಟ ಮೈಕಲ್ ಕೋರ್ಸೆಲ್ ಜೊತೆ ಪ್ರೇಮದ ಖಾತೆ ತೆರೆದಿದ್ದರು. ಜೊತೆ ಜೊತೆಯಲ್ಲಿ ಇಬ್ಬರು ಅನೇಕ ಕಡೆ ಕಾಣಿಸಿಕೊಂಡಿದ್ದರು. ಆದರೆ ಆ ನಂತರ ಏನಾಯಿತೋ ಗೊತ್ತಿಲ್ಲ. ಸಂಬಂಧ ಮುರಿದು ಬಿತ್ತು.

ಎರಡನೇ ಬಾಯ್‌ಫ್ರೆಂಡ್‌:

ಮೈಕಲ್ ಕೋರ್ಸೆಲ್ ಅವರಿಂದ ದೂರವಾದ ನಂತರ ಶ್ರುತಿ ಹಾಸನ್ ಬದುಕಿನಲ್ಲಿ ಬಂದ ವ್ಯಕ್ತಿ ಶಾಂತನು ಹಜಾರಿಕಾ. ಶಾಂತನು ಜೊತೆ ಎರಡು ವರ್ಷ ಪ್ರೇಮದ ತಪಸ್ಸು ಮಾಡಿದ್ದ ಶ್ರುತಿ ಹಾಸನ್ ಅನೇಕ ಸಲ ತಮ್ಮ ಈ ಪ್ರೇಮ ಕಥೆಯನ್ನ ಹೆಮ್ಮೆಯಿಂದ ಹೇಳಿಕೊಂಡಿದ್ದರು. ತನ್ನ ಮೇಲೆ ಶಾಂತನುಗೆ ಇರುವ ಕಾಳಜಿ ಪ್ರೀತಿಯನ್ನೂ ಮೆಚ್ಚಿ ಮಾತನಾಡಿದ್ದರು. ಇನ್ನು ಎರಡು ವರ್ಷದ ಹಿಂದೆ ಅಂದರೆ 2022ರ ಸಮಯದಲ್ಲಿ ತಮ್ಮ ಮದುವೆ ಆಗಿದೆ ಎಂಬ ವಿಚಾರವನ್ನ ಕದ್ದು ಶಾಂತನು ಹೇಳಿದ್ದರು.

ಮದುವೆ ಆದ ನಂತರದಿಂದ ನಮ್ಮ ಸಂಬಂಧ ಇನ್ನು ಗಟ್ಟಿಯಾಗಿದೆ ಹಾಗೂ ಉತ್ತಮವಾಗಿದೆ. ಒಬ್ಬರಿಗೊಬ್ಬರು ಪರಸ್ಪರ ಅರ್ಥ ಮಾಡಿಕೊಂಡು ಜೀವನ ನಡೆಸಲು ನಮ್ಮ ಮದುವೆ ನಮಗೆ ದಾರಿ ಮಾಡಿಕೊಟ್ಟಿದೆ. ಮುಂದೆಯೂ ಹೀಗೆ ಸಂತೋಷದಿಂದ ದಿನಗಳನ್ನು ಕಳೆಯಲು ತೀರ್ಮಾನಿಸಿದ್ದೇವೆ ಎಂದಿದ್ದರು.

ಇದನ್ನೂ ಓದಿ  “ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?

ಆದರೆ ಈಗ ಶ್ರುತಿ ಹಾಸನ್ ಮತ್ತು ಶಾಂತನು ನಡುವೆ ಇದ್ದ ಪ್ರೇಮ ಸೇತುವೆ ಮುರಿದು ಬಿದ್ದಿದೆ ಅನ್ನುವ ಎಂಬ ಸುದ್ದಿ ಎಲ್ಲೆಡೆ ಕೇಳಿ ಬರುತ್ತಿದೆ. ಇದಕ್ಕೆ ಪೂರಕವಾಗಿ ಶ್ರುತಿ ಹಾಸನ್ ಸಾಮಾಜಿಕ ಜಾಲತಾಣದಲ್ಲಿ ಶಾಂತನು ಜೊತೆ ಫೋಟೋಗಳೆಲ್ಲ ಮಾಯವಾಗಿವೆ. ಶಾಂತನು ಅವರನ್ನ ಶ್ರುತಿ ಹಾಸನ್ ಅನ್ ಫ್ರೆಂಡ್ ಮಾಡಿದ್ದಾರೆ. ಒಟ್ಟಿನಲ್ಲಿ

ಸದ್ಯಕ್ಕೆ ಶ್ರುತಿ ಹಾಸನ್ ಮತ್ತು ಶಾಂತನು ನಡುವೆ ಮೊಳಕೆಯೊಡೆದಿದ್ದ ಪ್ರೀತಿ ಈಗ ಕಮರಿಹೋಗಿದೆ ಅನ್ನುವ ಮಾತು ಎಲ್ಲೆಡೆ ಕೇಳಿ ಬರುತ್ತಿದೆ. ಹರಿದಾಡುತ್ತಿರುವ ಈ ಸುದ್ದಿಯ ಬಗ್ಗೆ ಶ್ರುತಿ ಹಾಸನ್ ಸ್ಪಷ್ಟೀಕರಣ ಕೊಡ್ತಾರಾ ಅನ್ನುವುದನ್ನ ಕಾದು ನೋಡಬೇಕಿದೆ.

Continue Reading

LATEST NEWS

ಇವಿಎಂನಲ್ಲಿ ಪ್ರಧಾನಿ ಮೋದಿ ಚಿತ್ರ ಕಾಣದೆ ಕಂಗಾಲಾದ ಮಹಿಳೆ; ಅಧಿಕಾರಿಗಳೊಂದಿಗೆ ಜಗಳ!

Published

on

ಮಂಗಳೂರು/ನವದೆಹಲಿ : ದೇಶದಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ಶುಕ್ರವಾರ ಬಿರುಸಾಗಿ ನಡೆಯುತ್ತಿದೆ. ಈ ನಡುವೆ ಮೊದಲ ಹಂತದ ಚುನಾವಣೆ ಸಂದರ್ಭ ನಡೆದಿದ್ದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಡೆದಿರುವುದು ರಾಜಸ್ಥಾನದಲ್ಲಿ. ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ರಾಜಸ್ಥಾನದಲ್ಲಿ ನಡೆದಿತ್ತು.

ಈ ವೇಳೆ ಮತದಾರರೊಬ್ಬರು ಅಧಿಕಾರಿಗಳೊಂದಿಗೆ ಜಗಳವಾಡಿರುವ ವಿಚಾರ ಬೆಳಕಿಗೆ ಬಂದಿದೆ. ಇವಿಎಂನಲ್ಲಿ ಪ್ರಧಾನಿ ಮೋದಿ ಚಿತ್ರ ಪ್ರದರ್ಶಿಸಿಲ್ಲ ಏಕೆ ಎಂದು ಮಹಿಳೆ ಮತಗಟ್ಟೆ ಅಧಿಕಾರಿಗಳೊಂದಿಗೆ ಜಗಳ ಮಾಡಿಕೊಂಡಿದ್ದಾರೆ. ಈ ಸುದ್ದಿ ಸದ್ಯ ವೈರಲ್ ಆಗುತ್ತಿದೆ. ಪ್ರಧಾನಿ ಮೋದಿ ಅವರೂ ಪ್ರತಿಕ್ರಿಯೆ ನೀಡಿದ್ದಾರೆ.

ಏನಿದು ಘಟನೆ?

ಏಪ್ರಿಲ್‌ 19 ರಂದು ರಾಜಸ್ಥಾನದಲ್ಲಿ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆದಿದೆ. ಪಿಪ್ರಾಲಿಯ ಬೂತ್‌ಗೆ ಮಹಿಳೆಯರ ಗುಂಪೊಂದು ಮತ ಚಲಾಯಿಸಲು ಬಂದಿದೆ. ಎಲ್ಲರೂ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದರು. ಅಷ್ಟರಲ್ಲಿ ಒಬ್ಬ ಮಹಿಳೆ ಮತ ಚಲಾಯಿಸುವಾಗ, ಇವಿಎಂ ಮಶೀನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಕಾಣಿಸಿಲ್ಲ ಎಂದು ಆಕೆ ಕಂಗಾಲಾಗಿದ್ದಾಳೆ.

ಮಹಿಳೆ ಪೋಲಿಂಗ್ ಅಧಿಕಾರಿಗಳನ್ನು ಕರೆದು ನನ್ನ ಪ್ರೀತಿಯ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಎಲ್ಲಿದೆ ಎಂದು ಕಿಡಿಕಾರಿದ್ದಾರೆ ಎಂದು ತಿಳಿದು ಬಂದಿದೆ. ಆಗ ಅಲ್ಲಿದ್ದ ಅಧಿಕಾರಿಗಳು ವಸ್ತು ಸ್ಥಿತಿಯನ್ನು ವಿವರಿಸಿದರು.

ಫೋಟೋ ಹಾಗೂ ಚುನಾವಣೆ ಚಿಹ್ನೆ ಪ್ರಧಾನಿ ಮೋದಿ ಅವರದ್ದಲ್ಲ. ಅವರ ಪಕ್ಷವನ್ನು ಪ್ರತಿನಿಧಿಸುವ ಅಭ್ಯರ್ಥಿಯದ್ದಾಗಿದೆ ಎಂದು ತಿಳಿಸಿದರು. ಅಲ್ಲದೆ, ಇದು ಮೋದಿ ಅವರ ಚುನಾವಣೆಯಲ್ಲ. ಅವರ ಪಕ್ಷದ ಚುನಾವಣೆ. ಅವರ ಪಕ್ಷದ ಪರವಾಗಿ ಈ ಕ್ಷೇತ್ರದಲ್ಲೂ ಒಬ್ಬ ಅಭ್ಯರ್ಥಿಗೆ ಟಿಕೆಟ್‌ ನೀಡಲಾಗುತ್ತದೆ ಎಂದು ತಿಳಿಸಿದರು. ಇದಾದ ಬಳಿಕ ಅವರು ಮತ ಚಲಾಯಿಸಿದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

ಭಾವುಕರಾದ ಪ್ರಧಾನಿ ಮೋದಿ :

ಈ ಸುದ್ದಿ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ತಲುಪಿದೆ.  ಈ ಬಗ್ಗೆ ಪ್ರಧಾನಿ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ತಾಯಂದಿರು ಮತ್ತು ಸಹೋದರಿಯರ ಈ ವಾತ್ಸಲ್ಯವನ್ನು ನೋಡಿದ ನಂತರ ನನ್ನ ಕಣ್ಣಲ್ಲಿ ನೀರು ಬಂದಿದೆ. ಈ ಋಣವನ್ನು ತೀರಿಸುವ ಸಂಕಲ್ಪ ನನಗೂ ಇದೆ ಎಂದು ಬರೆದುಕೊಂಡಿದ್ದಾರೆ.

ಇನ್ನು ಲಕ್ಷ್ಮಿಕಾಂತ್‌ ಅವರೇ, ಇದು ನಮ್ಮ ಕಾರ್ಯಕರ್ತರ ಜವಾಬ್ದಾರಿಯಾಗಿದೆ. ನಾವೆಲ್ಲಾ ಈ ಸಣ್ಣ ಸಣ್ಣ ಕೆಲಸಗಳತ್ತವೂ ಗಮನ ಹರಿಸಬೇಕಿದೆ. ಮನೆ ಮನೆಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದ್ದಾರೆ.

ಈ ಘಟನೆಯ ಪತ್ರಿಕೆಯ ಕಟಿಂಗ್ ಅನ್ನು ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಪಕ್ಷದ ಕಾರ್ಯಕರ್ತ ಲಕ್ಷ್ಮೀಕಾಂತ್ ಭಾರದ್ವಾಜ್ ಅವರು ಫೋಟೋದೊಂದಿಗೆ ಈ ವಿಚಾರ ಹಂಚಿಕೊಂಡಿದ್ದರು. ಅದನ್ನು ರಿಟ್ವೀಟ್ ಮಾಡಿದ್ದಾರೆ ಪ್ರಧಾನಿ ಮೋದಿ.

ಭಾರತದಲ್ಲಿ ಒಟ್ಟು ಏಳು ಹಂತಗಳಲ್ಲಿ ಚುನಾವಣೆಗಳು ನಡೆಯುತ್ತಿವೆ. ಶುಕ್ರವಾರ (ಏ.26)ರಂದು ಎರಡನೇ ಹಂತದ ಮತದಾನ ನಡೆಯುತ್ತಿದೆ. ಫಲಿತಾಂಶಗಳು ಜೂನ್ 4 ರಂದು ಹೋರ ಬೀಳಲಿದೆ.

Continue Reading

FILM

ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

Published

on

ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು,  ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.

ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.

Continue Reading

LATEST NEWS

Trending