LATEST NEWS
ತಾರಕಕ್ಕೇರಿದ ಕೈ- ಕಮಲ ಸಮರ, ‘ವಿರೋಧ ಪಕ್ಷದ ನಾಯಕ ಬೇಕಾಗಿದ್ದಾರೆ’ :ಬಿಜೆಪಿಗೆ ಟಾಂಗ್ ಕೊಟ್ಟ ಕಾಂಗ್ರೆಸ್.!
ಕಾಂಗ್ರೆಸ್ ಪಕ್ಷ ಮಾಡಿರುವ ಟ್ವೀಟ್ ಬಿಜೆಪಿಯನ್ನು ಕೆಣಕುವಂತೆ ಇದ್ದು, ಅದರ ಶೀರ್ಷಿಕೆ “ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ” ಎಂದು ಇದ್ದು ವೈರಲ್ ಆಗಿದೆ.
ಬೆಂಗಳೂರು: ರಾಜ್ಯಲ್ಲಿ ಕೈ- ಕಮಲದ ನಡುವಿನ ಸಮರ ಸಾಮಾಜಿಕ ಜಾಲತಾಣಗಳಲ್ಲಿ ತಾರಕಕ್ಕೇರಿದೆ.
ಕಾಂಗ್ರೆಸ್ ಪಕ್ಷ ಮಾಡಿರುವ ಟ್ವೀಟ್ ಬಿಜೆಪಿಯನ್ನು ಕೆಣಕುವಂತೆ ಇದ್ದು, ಅದರ ಶೀರ್ಷಿಕೆ “ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ” ಎಂದು ಇದ್ದು ವೈರಲ್ ಆಗಿದೆ.
ರಾಜ್ಯ ವಿಧಾನ ಸಭಾ ಚುನಾವಣೆ ಮುಗಿದು ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದು 50 ದಿನಗಳಾಗುತ್ತಿದ್ದು ಕೆಲಸವೂ ಶುರು ಮಾಡಿದೆ.
ಆದರೆ, ವಿಪಕ್ಷ ಸ್ಥಾನದಲ್ಲಿರುವ ಬಿಜೆಪಿಗೆ ಇನ್ನೂ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟಾಗಿ ಉಳಿದಿದೆ.
ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಇಂದು ಬಿಜೆಪಿಗೆ ಟಾಂಗ್ ನೀಡಿದ್ದು ಅದರ ಶೀರ್ಷಿಕೆ “ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ” ಎಂದು ಇದ್ದು ವೈರಲ್ ಆಗಿದೆ.
ಮುಂದುವರಿದು, ನಾಯಕರಿಗೆ ಇರಬೇಕಾದ ಅರ್ಹತೆಯನ್ನು ಅದು ವಿವರಿಸಿದೆ.
ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
ಆರ್ಎಸ್ಎಸ್ ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು.
ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ!
ಇಷ್ಟು ಅಂಶಗಳನ್ನು ಒಳಗೊಂಡ ಟ್ವೀಟ್ ಮಾಡಿ ಕೆಲ ಹೊತ್ತಿನ ಬಳಿಕ ಮತ್ತೊಂದು ಟ್ವೀಟ್ ಮೂಲಕ ಕಾಂಗ್ರೆಸ್, ಬಿಜೆಪಿಯನ್ನು ಮತ್ತೊಮ್ಮೆ ಚುಚ್ಚಿದೆ.
👉ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ
🔹ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
🔹ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
🔹RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
ಅದರಲ್ಲಿ, ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು.
ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ. ಬಿಜೆಪಿ ಪಕ್ಷ ಆಡಳಿತ ಮಾಡಲು ಆಸಮರ್ಥರು ಎಂದು ಈಗಾಗಲೇ ಜನರು ಸರ್ಟಿಫಿಕೇಟ್ ಕೊಟ್ಟಾಗಿದೆ, ಈಗ ವಿರೋಧ ಪಕ್ಷವಾಗಿರಲೂ ಸಹ ಆಸಮರ್ಥರು ಎಂದು ತಿಳಿಯುತ್ತಿದೆ. ಪ್ರಜಾಪ್ರಭುತ್ವದ ಸೌಂದರ್ಯಕ್ಕಾಗಿ ಸಮರ್ಥ ವಿಪಕ್ಷ ನಾಯಕನನ್ನು ಎದುರು ನೋಡುತ್ತಿದ್ದೇವೆ. ನಮ್ಮ ಆಸೆ ಈಡೇರುತ್ತದೋ ಇಲ್ಲವೋ ಗೊತ್ತಿಲ್ಲ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಟಾಂಗ್ ನೀಡಿದೆ.
👉ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು.
👉ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು.
👉ಮಂತ್ರಿಮಂಡಲವೂ ರಚನೆಯಾಯ್ತು.
👉ಸರ್ಕಾರ ಕೆಲಸ ಶುರು ಮಾಡಿಯಾಯ್ತು.
👉ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು.
👉ಮೂರು ಗ್ಯಾರಂಟಿಗಳೂ ಜಾರಿಯಾದವು.
ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿಲ್ಲ ಎಂದು ಚುಚ್ಚಿದೆ..
bengaluru
ಕಾಂತಾರ ಚಿತ್ರಕ್ಕೆ 1 ವರ್ಷ-ನಾಳೆ ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್
ಜಗತ್ತೆ ನಿಬ್ಬೆರಗಾಗಿ ನೋಡಿದ ಕಾಂತಾರ ಸಿನೆಮಾ ರಿಲೀಸ್ ಆಗಿ ನಾಳೆಗೆ ಭರ್ತಿ 1 ವರ್ಷ. ಇದೇ ಖುಷಿಯಲ್ಲಿ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಹೊಸ ಘೋಷಣೆಯಾಗಿದ್ದು ಸೆ.30ರಂದು ಕಾಂತಾರ ಚಿತ್ರದ ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್ ಮಾಡುವ ಪ್ಲಾನ್ ನಡೆಯುತ್ತಿದೆ.
ಜಗತ್ತೆ ನಿಬ್ಬೆರಗಾಗಿ ನೋಡಿದ ಕಾಂತಾರ ಸಿನೆಮಾ ರಿಲೀಸ್ ಆಗಿ ನಾಳೆಗೆ ಭರ್ತಿ 1 ವರ್ಷ.
ಇದೇ ಖುಷಿಯಲ್ಲಿ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಹೊಸ ಘೋಷಣೆಯಾಗಿದ್ದು ಸೆ.30ರಂದು ಕಾಂತಾರ ಚಿತ್ರದ ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್ ಮಾಡುವ ಪ್ಲಾನ್ ನಡೆಯುತ್ತಿದೆ.
ಸಣ್ಣ ಬಜೆಟ್ ನಲ್ಲಿ ಕಾಂತಾರ ಸಿನೆಮಾ ನಿರ್ಮಾಣವಾಗಿದ್ದು ಚಿತ್ರ ಗಳಿಸಿದ್ದು ಮಾತ್ರ ಬರೋಬ್ಬರಿ 400 ಕೋಟಿಗಿಂತಲೂ ಅಧಿಕ ಮೊತ್ತ.
ರಿಷಬ್ ಶೆಟ್ಟಿ, ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿ ಅನೇಕ ಕಲಾವಿದರು ಕಾಂತಾರ ಚಿತ್ರದಲ್ಲಿ ನಟಿಸಿ ಪ್ರತಿಯೊಬ್ಬ ಸಿನಿ ರಸಿಕರ ಮನದಲ್ಲಿ ಹಚ್ಚೊತ್ತಿದ್ರು.
ನಿರೀಕ್ಷೆಗೂ ಮೀರಿ ನೇಮು-ಫೇಮು ಎಲ್ಲವೂ ಸಿಕ್ಕಿತು.
ಇದೀಗ ಚಿತ್ರ ಬಿಡುಗಡೆಯಾಗಿ ಒಂದು ವರ್ಷ ಆಗಿದೆ. ಈ ಹಿನ್ನಲೆ ನಾಳೆ ಸೆ. 30 ರಂದು ಬೆಳಿಗ್ಗೆ ಕಾಂತಾರ ಚಿತ್ರದಲ್ಲಿ ಭರ್ಜರಿ ಯಶಸ್ಸು ಕಂಡ ‘ವರಾಹ ರೂಪಂ’ ಹಾಡಿನ ವಿಡಿಯೋ ವರ್ಷನ್ ರಿಲೀಸ್ ಆಗಲಿದೆ.
ಈ ಕುರಿತು ಹೊಂಬಾಳೆ ಫಿಲ್ಮ್ಸ್ ಮಾಹಿತಿ ಹಂಚಿಕೊಂಡಿದೆ.
DAKSHINA KANNADA
ಕಡಲ ಮಧ್ಯೆ ಸಿಲುಕಿದ ಮೀನುಗಾರಿಕಾ ಬೋಟ್- ಮೀನುಗಾರರನ್ನು ರಕ್ಷಿಸಿದ ಕೋಸ್ಟ್ಗಾರ್ಡ್
ಮಂಗಳೂರು: ಮಂಗಳೂರು ನಗರದ ಹಳೆ ಬಂದರು ಧಕ್ಕೆಯಿಂದ ಮೀನುಗಾರಿಕೆಗೆ ಹೋಗಿದ್ದ ಬೋಟೊಂದು 39 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ತಾಂತ್ರಿಕ ಸಮಸ್ಯೆಗೆ ಸಿಲುಕಿದಾಗ ಅದರಲ್ಲಿದ್ದ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ನೌಕೆ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ.
ತಿರುಚೆಂದೂರ್ ಮುರುಗನ್ ಹೆಸರಿನ ಬೋಟ್ ಸಮುದ್ರ ಮಧ್ಯೆ ತಾಂತ್ರಿಕ ಅಡಚಣೆಗೆ ಸಿಲುಕಿತ್ತು.
ಈ ಬಗ್ಗೆ ಬೋಟ್ನಿಂದ ಮುಂಬೈನ ತಟ ರಕ್ಷಣಾ ಕೇಂದ್ರಕ್ಕೆ ತುರ್ತು ಸಂದೇಶ ರವಾನಿಸಲಾಗಿತ್ತು.
ಈ ಸಂದೇಶ ಸ್ವೀಕರಿಸಿದ ಮುಂಬೈನ ಎಂಆರ್ಸಿಸಿ ಕೇಂದ್ರದ ಅಧಿಕಾರಿಗಳು ತಕ್ಷಣ ಕೋಸ್ಟ್ಗಾರ್ಡ್ಗೆ ಮಾಹಿತಿ ನೀಡಿದ್ದರು.
ಅದರಂತೆ ಕೋಸ್ಟ್ಗಾರ್ಡ್, ಮೀನುಗಾರಿಕಾ ಇಲಾಖೆ ಹಾಗೂ ಬೋಟ್ ಮಾಲಕರ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ನ ಎರಡು ಇಂಟರ್ಸೆಪ್ಟರ್ ಬೋಟ್ಗಳು ತಾಂತ್ರಿಕ ತೊಂದರೆಗೆ ಸಿಲುಕಿದ ಬೋಟ್ನ್ನು ನವಮಂಗಳೂರು ಬಂದರು ತೀರಕ್ಕೆ ಎಳೆದು ತಂದು ರಕ್ಷಿಸಿವೆ ಎಂದು ಕೋಸ್ಟ್ಗಾರ್ಡ್ ತಿಳಿಸಿದೆ.
LATEST NEWS
Lucknow: ಪುತ್ರಿ ಮದುವೆ ಮಾಡಲು ಎಂದು ಲಾಕರ್ ನಲ್ಲಿಟ್ಟ 18 ಲಕ್ಷ ರೂ. ಗೆದ್ದಲು ಪಾಲು..!
ಲಕ್ನೋ: ಮಗಳ ಮದುವೆಗೆಂದು ತಾಯಿಯೊಬ್ಬರು ರೂಪಾಯಿ-ರೂಪಾಯಿ ಹಣವನ್ನು ಜೋಪಾನವಾಗಿ ಬ್ಯಾಂಕ್ನ ಲಾಕರ್ನಲ್ಲಿ ಕೂಡಿ ಇಟ್ಟ ಸುಮಾರು 18 ಲಕ್ಷ ರೂ. ಹಣವು ಗೆದ್ದಲು ಹಿಡಿದು ನಾಶವಾಗಿರುವ ಘಟನೆ ಉತ್ತರಪ್ರದೇಶದ ಮೊರಾದಾಬಾದ್ನಲ್ಲಿ ವರದಿಯಾಗಿದೆ.
ಮೊರಾದಾಬಾದ್ ನಿವಾಸಿ ಅಲ್ಕಾ ಪಠಾಕ್ ಅವರು ಕಳೆದ ವರ್ಷ ಅಕ್ಟೋಬರ್ನಲ್ಲಿ ಅಶಿಯಾನಾದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ 18 ಲಕ್ಷ ರೂ.ಗಳನ್ನು ಇಟ್ಟಿದ್ದರು.
ಇತ್ತೀಚಿಗೆ ಬ್ಯಾಂಕ್ ಸಿಬಂದಿ ಲಾಕರ್ ಅಗ್ರಿಮೆಂಟ್ ರಿನೀವಲ್ಗೆ ಎಂದು ಅಲ್ಕಾ ಅವರಿಗೆ ಕರೆ ಮಾಡಿ ಬರಲು ಹೇಳಿದ್ದಾರೆ.
ಈ ವೇಳೆ ಲಾಕರ್ ತೆರೆದರೆ ನೋಟುಗಳಿಗೆ ಗೆದ್ದಲು ಹಿಡಿದಿರುವುದು ಕಂಡು ಬಂದಿದೆ.
ಈ ಬಗ್ಗೆ ಬ್ಯಾಂಕ್ನ ಮುಖ್ಯ ಕಚೇರಿಗೆ ತಿಳಿಸಿರುವುದಾಗಿ ಸಿಬಂದಿ ಹೇಳಿದ್ದಾರೆ.
ತನಗಾದ ನಷ್ಟಕ್ಕೆ ಬ್ಯಾಂಕ್ನವರೇ ಪರಿಹಾರ ನೀಡಬೇಕೆಂದು ಮಹಿಳೆ ಪಟ್ಟು ಹಿಡಿದಿರುವುದು ವರದಿಯಾಗಿದೆ.