HomeDAKSHINA KANNADAರಾಜಕೀಯ ಪ್ರೇರಿತ ಅಕ್ರಮ ದಾಳಿ ಖಂಡನೀಯ-SDPI ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ

ರಾಜಕೀಯ ಪ್ರೇರಿತ ಅಕ್ರಮ ದಾಳಿ ಖಂಡನೀಯ-SDPI ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ

ಮಂಗಳೂರು: ಇಂದು ಬೆಳಿಗ್ಗೆ ಎಸ್‌ಡಿಪಿಐ ಮತ್ತು ಪಿಎಫ್‌ಐ ನಾಯಕರ ಮನೆ ಹಾಗೂ ಕಚೇರಿ ಮೇಲಿನ ಎನ್‌ಐಎ ದಾಳಿಯನ್ನು ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಖಂಡಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಿಗ್ಗೆ 3.30ರಿಂದ ಅಕ್ರಮವಾಗಿ ಪಕ್ಷದ ಕಚೇರಿಗೆ, ಮನೆಗಳಿಗೆ ನುಗ್ಗಿ ದಾಂಧಲೆ ಮಾಡಿ ದಾಖಲೆ ಪತ್ರಗಳನ್ನು ಹಿಡಿದುಕೊಂಡು ಹೋಗಿದ್ದಾರೆ.

ನಮ್ಮ ಕಚೇರಿಗೆ ಬರುವ ಆದೇಶ ಅವರ ಬಳಿ ಇರಲಿಲ್ಲ. ಇದು ಅಕ್ರಮ ದಾಳಿಯಾಗಿದೆ. ಕಟ್ಟಡದ ಅಗ್ರಿಮೆಂಟ್ ಕಾಪಿ, ನಾವು ಮಾಡಿದ ಕಾರ್ಯಕ್ರಮದ ಫೈಲ್‌, ಫೋಟೋ ಆಲ್ಬಂ, ಲ್ಯಾಪ್‌ಟಾಪ್‌ ಕೊಂಡು ಹೋಗಿದ್ದಾರೆ ಬಿಟ್ಟರೆ ಇನ್ನೇನೂ ಸಿಕ್ಕಿಲ್ಲ. ಎನ್‌ಐಎ ಅಕ್ರಮ ಪ್ರವೇಶವನ್ನು ನಾವು ಖಂಡಿಸಿ, ಉನ್ನತ ಮಟ್ಟದ ಹೋರಾಟ ಮಾಡಲು ಯೋಚಿಸುತ್ತಿದ್ದೇವೆ.


ಪಿಎಫ್‌ಐ ಒಂದು ಸಾಮಾಜಿಕ ಸಂಘಟನೆಯಾಗಿದೆ. ಅಕ್ರಮವಾಗಿ ಬಂಧಿಸಿದ ನಮ್ಮ ಪಕ್ಷದ ನಾಯಕರನ್ನು ಕೂಡಲೇ ಬಿಡುಗಡೆ ಮಾಡಬೇಕು. ಇಲ್ಲದೇ ಹೋದಲ್ಲಿ ನಾವು ರಾಜ್ಯದಾದ್ಯಂತ ಹೋರಾಟ ಮಾಡಲಿದ್ದೇವೆ ಎಂದರು.

ಇದು ರಾಜಕೀಯ ಪ್ರೇರೇಪಿತವಾದ ದಾಳಿ ಎಂದ ಅವರು ನಮ್ಮ ಪಕ್ಷದ ಏಳಿಗೆಯನ್ನು ಸಹಿಸದೇ ಮಟ್ಟ ಹಾಕಲು ದಾಳಿ ಆಯೋಜಿಸಲಾಗಿದೆ.

ಜನಸಾಮಾನ್ಯರ ನೋವಿಗೆ ಸ್ಪಂದಿಸದ ಬಿಜೆಪಿ ಇಂತಹ ದಾಳಿಗಳನ್ನು ಆಯೋಜಿಸುವ ಮೂಲಕ ಇಲ್ಲಿನ ಸಮಸ್ಯೆಗಳನ್ನು ಮರೆಮಾಚಲು ಯತ್ನಿಸಿದೆ.

ಮುಂದಿನ 24 ಗಂಟೆಯೊಳಗೆ ನೀವು ಬಂಧನ ಮಾಡಿರುವ ನಮ್ಮ ನಾಯಕರನ್ನು ಬಿಡುಗಡೆ ಮಾಡಬೇಕು ಇಲ್ಲದೇ ಹೋದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ, ಜಲೀಲ್‌ ಕೃಷ್ಣಾಪುರ ಮೊದಲಾದವರಿದ್ದರು.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...