ಬೆಂಗಳೂರು : ಸದ್ಯ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ರಾಜ್ಯದಲ್ಲಿ ಸದಾ ಸುದ್ದಿಯಲ್ಲಿರುವ ವಿಚಾರ. ಕೇಸ್ ಬೆನ್ನಲ್ಲೇ ನಾಪತ್ತೆಯಾಗಿದ್ದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಇದಕ್ಕೆ ಸಾಕ್ಷಿ ಎಂಬಂತೆ ಮಂಗಳವಾರ(ಮೇ 29) ಪ್ರಜ್ವಲ್ ರೇವಣ್ಣ ವೀಡಿಯೋವೊಂದನ್ನು ಹರಿಬಿಟ್ಟಿದ್ದರು. ಮೇ 31 ರಂದು ಎಸ್ ಐ ಟಿ ಮುಂದೆ ಹಾಜರಾಗುವುದಾಗಿ ಅವರು ಹೇಳಿದ್ದರು. ಈ ನಡುವೆ ಪ್ರಜ್ವಲ್ ವೀಡಿಯೋ ಮಾಡಿರುವ ಸ್ಥಳವನ್ನು ಎಸ್ ಐ ಟಿ ಪತ್ತೆ ಹಚ್ಚಿದೆ.
ಪ್ರಜ್ವಲ್, ಯುರೋಪ್ ನ ಜಂಗೇರಿಯ ಬುಡಾಪೆಸ್ಟ್ ನಿಂದ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ವೀಡಿಯೋ ರಿಲೀಸ್ ಆದ ಮೊಬೈಲ್ ಐಪಿ ಅಡ್ರೆಸ್ ಟ್ರೇಸ್ ಮಾಡುವ ಮೂಲಕ ಎಸ್ ಐಟಿ ಈ ಮಹತ್ವದ ವಿಚಾರ ಪತ್ತೆ ಹಚ್ಚಿದೆ. ಅಲ್ಲದೇ, ವೀಡಿಯೋ ಹೇಳಿಕೆ ಬಿಡುಗಡೆಗೂ ಎರಡು ದಿನ ಮೊದಲೇ ರೆಕಾರ್ಡ್ ಆಗಿತ್ತು ಎಂಬ ವಿಚಾರವನ್ನು ಎಸ್ ಐಟಿ ಪತ್ತೆ ಮಾಡಿದೆ. ಸದ್ಯ, ಮೇ 31 ರಂದು ಪ್ರಜ್ವಲ್ ದೇಶಕ್ಕೆ ಮರಳುತ್ತಿದ್ದು, ವಿಮಾನ ನಿಲ್ದಾಣದಲ್ಲಿಯೇ ಬಂಧಿಸಲು ಎಸ್ ಐ ಟಿ ಅಧಿಕಾರಿಗಳು ಸನ್ನದ್ಧರಾಗಿದ್ದಾರೆ.
ಇತ್ತ ದೇಶದಾದ್ಯಂತ ಪ್ರಜ್ವಲ್ ಪ್ರಕರಣ ಸಂಚಲನ ಸೃಷ್ಟಿಸಿದ್ದರೆ, ಅತ್ತ ವಿದೇಶ ಸೇರಿದ್ದ ಪ್ರಜ್ವಲ್ ಒಂದು ತಿಂಗಳ ಬಳಿಕ ವೀಡಿಯೋ ಬಿಡುಗಡೆ ಮಾಡಿದ್ದರು. ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್ ಕಾರ್ಯಕರ್ತರಲ್ಲಿ ಕ್ಷಮೆಯಾಚಿಸುತ್ತೇನೆ.
ನಾನು ಮೇ 31 ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ ಎಂದು ಹೇಳಿದ್ದರು.
ಇದನ್ನೂ ಓದಿ : ಸ್ನೇಹಿತರ ನಡುವೆ ವೈಮನಸ್ಸು..! ಸ್ಕೆಚ್ ಹಾಕಿದ್ದು ಸ್ನೇಹಿತನಿಗೆ, ಬಲಿಯಾಗಿದ್ದು ತಂದೆ.. !
ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ ಎಂದಿದ್ದರು.
Pingback: ಕಾಂಗ್ರೆಸ್ ಅಭ್ಯರ್ಥಿಯ ಕರಪತ್ರದಲ್ಲಿ ಬಿಜೆಪಿ ನಾಯಕನ ಫೋಟೋ! ನಗೆಪಾಟಲಿಗೀಡಾದ ಕಾಂಗ್ರೆಸ್ - NAMMAKUDLA NEWS - ನಮ್ಮಕುಡ್ಲ