Connect with us

    LATEST NEWS

    ವಿದೇಶದಲ್ಲೇ ಠಿಕಾಣಿ ಹೂಡಿದ ಪ್ರಜ್ವಲ್..! ತಾತಾ, ಚಿಕ್ಕಪ್ಪನ ಮನವಿಗೂ ಡೋಂಟ್ ಕ್ಯಾರ್..!

    Published

    on

    ಹಾಸನ/ಮಂಗಳೂರು: ಪ್ರಜ್ವಲ್‌ ರೇವಣ್ಣ ಪೆಂಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಬಾರಿ ಎಫ್‌ಐಆರ್‌ ಆಗಿದ್ದು, ಎಸ್‌ ಐಟಿ ಕೂಡಾ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿದೆ. ಆದರೆ ಇದಕ್ಕೆಲ್ಲಾ ಕ್ಯಾರೆ ಅನ್ನದ ಪ್ರಜ್ವಲ್ ವಿದೇಶದಲ್ಲಿ ಆರಾಮವಾಗಿ ಕಾಲ ಕಳೆಯುತ್ತಿದ್ದಾರೆ. ಇನ್ನು ಮೊಮ್ಮಗನಿಂದಾಗಿ ಹೆಚ್‌ಡಿ ದೇವೇಗೌಡ ಹಾಗೂ ಚಿಕ್ಕಪ್ಪ ಕುಮಾರಸ್ವಾಮಿ ಮುಜುಗರಕ್ಕೆ ಒಳಗಾಗಿದ್ದಾರೆ. ದೇವೇಗೌಡರು ಮೊಮ್ಮಗನಿಗೆ ಪತ್ರ ಬರೆಯುವ ಮೂಲಕ ವಿಚಾರಣೆಗ ಹಾಜರಾಗುವಂತೆ ಮನವಿ ಮಾಡಿದರು. ಇನ್ನು ಚಿಕ್ಕಪ್ಪ ಕುಮಾರಸ್ವಾಮಿ ಮನವಿಗೂ ಕ್ಯಾರೇ ಅನ್ನುತಿಲ್ಲ.

    ಹೆಚ್‌ಡಿಡಿ, ಹೆಚ್‌ಡಿಕೆ ಮನವಿಗೂ ಕ್ಯಾರೇ ಅನ್ನುತ್ತಿಲ್ಲ ಪ್ರಜ್ವಲ್:

    ವಿದೇಶದಲ್ಲಿ ತಲೆಮರಿಸಿಕೊಂಡಿರುವ ಪ್ರಜ್ವಲ್ ರೇವಣ್ಣ ಕಾನೂನಿಗೆ ಮಾತ್ರವಲ್ಲದೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಕ್ಕೆ ತಲೆ ನೋವಾಗಿದ್ದಾರೆ. ರಾಜ್ಯಕ್ಕೆ ವಾಪಾಸ್ ಆಗಿ ವಿಚಾರಣೆಗೆ ಹಾಜರಾಗುವಂತೆ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದರು. ಇವರ ಮನವಿ ಜೊತೆಗೆ ಮಾಜಿ ಪ್ರಧಾನಿ ಹೆಚ್‌ಡಿಡಿ  ಪತ್ರ ಕೂಡಾ ಬರೆದಿದ್ದರು. ಇದೆಲ್ಲವನ್ನೂ ಪ್ರಜ್ವಲ್ ಡೋಂಟ್ ಕ್ಯಾರ್‌ ಮಾಡಿದ್ದಾರೆ. ದೇವೇಗೌಡರ ಮಾನಸಿಕ ಆರೋಗ್ಯದ ದೃಷ್ಟಿಯಿಂದಾದರೂ ಪ್ರಜ್ವಲ್‌ ರಾಜ್ಯಕ್ಕೆ ವಾಪಾಸಗಬೇಕಿತ್ತು. ಆದರೆ ಇದೆಲ್ಲವನ್ನೂ ಕ್ಯಾರೇ ಅನ್ನದ ಪ್ರಜ್ವಲ್ ವಿದೇಶದಲ್ಲಿ ಹಾಯಾಗಿದ್ದಾರೆ. ಇನ್ನು ಜೆಡಿಎಸ್ ಶಾಸಕ ಜಿ. ಟಿ ದೇವೇಗೌಡ ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

    ಇದನ್ನೂ ಓದಿ..;  ಪೆನ್ ಡ್ರೈವ್ ಪ್ರಕರಣ : ಪುತ್ರ ಪ್ರಜ್ವಲ್ ಬಗ್ಗೆ ಹಾಸನದಲ್ಲಿ ರೇವಣ್ಣ ಪ್ರತಿಕ್ರಿಯೆ

    ಎರಡು ದಿನಗಳಲ್ಲಿ ರಾಜ್ಯಕ್ಕೆ ಪ್ರಜ್ವಲ್ ಬರುವಿಕೆಯ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ನೀಡಿದ್ದಾರೆ.  ಈ ಪ್ರಕರಣವನ್ನು ವಿನಾ ಕಾರಣ ಡ್ರ್ಯಾಗ್‌ ಮಾಡೋದು ಬೇಡ, ತನಿಖೆಗೆ ಸಹಕರಿಸುವಂತೆ ಮನವಿ ಮಾಡಿದ್ದರು. ಇದರಿಂದ ಟೀಕೆಗಳು ತಪ್ಪಬಹುದು ಎಂಬ ಲೆಕ್ಕಾಚಾರದಲ್ಲಿ ದಳಪತಿಗಳಿದ್ದರು. ಇದೇ ಪ್ರಕರಣ ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ನಿರಂತರ ಟೀಕಿಸಿಕೊಂಡು ಬಂದಿದೆ.

    ಇನ್ನು ಯಾವುದೇ ಮನವಿಗೂ ತಲೆಕೆಡಿಸಿಕೊಳ್ಳದ ಪ್ರಜ್ವಲ್ ವಿದೇಶದಲ್ಲಿ ಆರಾಮವಾಗಿದ್ದಾರೆ.  ತಮ್ಮ ಮೇಲೆ ಯಾವುದೇ ಆರೋಪ ಬಂದರೂ ಕೂಡಾ ರಾಜ್ಯದಲ್ಲೇ ಇದ್ದು ಎದುರಿಸಬೇಕಿತ್ತು.  ನಾನು ರಾಜ್ಯಕ್ಕೆ ವಾಪಾಸ್‌ ಆಗದೆ ವಿದೇಶದಲ್ಲಿದ್ದು ಪ್ರಕರಣದಿಂದ ಪಾರಾಗಬಹುದು ಅನ್ನೋದು ಅವರ ಲೆಕ್ಕಾಚಾರ. ಆದರೆ ಅದೇನೆ ಇರಲಿ ವಿಚಾರಣೆಗ ಹಾಜರಾಗುವ ಮೂಲಕ ಕುಟುಂಬಕ್ಕೆ ಆಗುವ ಮುಜುಗರವನ್ನು ಪ್ರಜ್ವಲ್ ತಪ್ಪಿಸಬೇಕಾಗಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ..!

    Published

    on

    ನವದೆಹಲಿ / ಮಂಗಳೂರು : ರಾಯ್‌ ಬರೇಲಿ ಹಾಗೂ ವಯನಾಡು ಎರಡೂ ಕಡೆಯಿಂದ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ, ವಯನಾಡು ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಪ್ರಿಯಾಂಕಾ ಗಾಂಧಿ ವಯನಾಡಿನಲ್ಲಿ ಚುನಾವಣೆ ಸ್ಪರ್ಧಿಸುವುದು ಖಚಿತವಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ರಾಹುಲ್ ಗಾಂಧಿ ಮಾಹಿತಿ ನೀಡಿದ್ದಾರೆ.


    2019 ರ ಚುನಾವಣೆಯಲ್ಲಿ ರಾಹುಲ್‌ ಗಾಂಧಿಗೆ ಮರು ಜೀವ ನೀಡಿದ ಕ್ಷೇತ್ರ ವಯನಾಡು. ಅಮೇಠಿ ಹಾಗೂ ವಯನಾಡಿನಿಂದ ಸ್ಪರ್ಧೆ ಮಾಡಿದ್ದ ರಾಹುಲ್ ಗಾಂಧಿ ಅಮೇಠಿಯಲ್ಲಿ ಸೋಲು ಕಂಡಿದ್ದರು. ಬಿಜೆಪಿಯ ಸ್ಮೃತಿ ಇರಾನಿ ಗೆಲುವು ಸಾಧಿಸಿ ಸಚಿವೆ ಕೂಡಾ ಆಗಿದ್ದರು. 2024 ರ ಚುನಾವಣೆಯಲ್ಲಿ ಅಮೇಠಿಯಲ್ಲಿ ಗಾಂಧಿ ಕುಟುಂಬದ ಆಪ್ತ ಕಿಶೋರಿಲಾಲ್ ಶರ್ಮ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದಾರೆ.
    ರಾಯಬರೇಲಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ ಸ್ಪರ್ಧೆ ಮಾಡುತ್ತಿದ್ದು, ಈ ಬಾರಿ ಅವರು ರಾಜ್ಯಸಭೆಯಿಂದ ಸಂಸದರಾಗಿ ಕ್ಷೇತ್ರವನ್ನು ರಾಹುಲ್ ಗಾಂಧಿಗೆ ಬಿಟ್ಟುಕೊಟ್ಟಿದ್ದರು. ರಾಯಬರೇಲಿಯಲ್ಲಿ ರಾಹುಲ್‌ ಗಾಂಧಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಇನ್ನು ವಯನಾಡಿನಲ್ಲೂ ನಿರೀಕ್ಷೆಯಂತೆ ಗೆಲುವು ಸಾಧಿಸಿದ್ದರು. ಇದೀಗ ವಯನಾಡು ಕ್ಷೇತ್ರವನ್ನು ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ.


    ಈ ಎರಡೂ ಕ್ಷೇತ್ರಗಳ ಜನರ ಜೊತೆ ನನ್ನ ಉತ್ತಮ ಬಾಂಧವ್ಯವಿದ್ದು, ವಯನಾಡು ಕ್ಷೇತ್ರ ಬಿಟ್ಟಿರುವುದಕ್ಕೆ ತುಂಬಾ ಬೇಸರವಾಗಿದೆ. ಆದ್ರೆ, ನನ್ನ ಸಹೋದರಿ ಅಲ್ಲಿ ಗೆದ್ದು ಜನರ ಜೊತೆ ಇರಲಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

    ಇದನ್ನು ಓದಿ:ಪ್ರತಿಭಟನೆ ವೇಳೆ ಸುಸ್ತಾದ ಬಿಜೆಪಿಯ ಹಿರಿಯ ನಾಯಕ ಭಾನುಪ್ರಕಾಶ್ ನಿಧನ

    Continue Reading

    LATEST NEWS

    ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತ; 8 ಮಂದಿ ಸಾವು

    Published

    on

    ನವದಹಲಿ: ಪಶ್ಚಿಮ ಬಂಗಾಳದ ರಂಗಪಾಣಿ ನಿಲ್ದಾಣದ ಬಳಿ ಸೋಮವಾರ(ಜೂ.17) ಗೂಡ್ಸ್ ರೈಲು ಸೀಲ್ದಾಹ್ ಕಡೆಗೆ ಹೋಗುವ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ನಂತರ ಕನಿಷ್ಠ 19 ರೈಲುಗಳನ್ನು ರದ್ದುಗೊಳಿಸಲಾಗಿದೆ. ಈ ದುರ್ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ.

    ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

    Read More..; ಉಪ್ಪಿನಂಗಡಿ: ಮಹಿಳೆ ಸಾ*ವಿನಲ್ಲಿ ಅನುಮಾನ; ಕೊ*ಲೆ ಶಂಕೆ

    ನ್ಯೂ ಜಲ್ಪೈಗುರಿ ಬಳಿ ಗೂಡ್ಸ್ ರೈಲು ಸಿಗ್ನಲ್ ಅನ್ನು ನಿರ್ಲಕ್ಷಿಸಿದ ಕಾರಣ ಮತ್ತು ಅಗರ್ತಲಾದಿಂದ ಸೀಲ್ದಾಹ್‌ಗೆ ತೆರಳುತ್ತಿದ್ದ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಿದ್ದರಿಂದ ಸಂಭವಿಸಿದೆ ಎಂದು ರೈಲ್ವೇ ಮಂಡಳಿಯ ಅಧ್ಯಕ್ಷ ಜಯ ವರ್ಮ ಸಿನ್ಹಾ ಹೇಳಿದ್ದಾರೆ.

    Continue Reading

    DAKSHINA KANNADA

    ಚಿಕ್ಕಮೇಳದ ಹೆಸರಿನಲ್ಲಿ ಯಕ್ಷಗಾನ ಕಲೆಗೆ ಅಪಚಾರ ಮಾಡದಿರಿ; ಒಕ್ಕೂಟ ಮನವಿ

    Published

    on

    ಮಂಗಳೂರು: ಇಂದು ದೇಶ, ವಿದೇಶಗಳಲ್ಲಿ ಯಕ್ಷಗಾನದ ಹಿರಿಮೆ ಸಾರಲಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕಲೆಯ ಹೆಸರಿನಲ್ಲಿ ಕಲೆಯ ಗಂಧಗಾಳಿ ಇಲ್ಲದವರು ಕೂಡಾ ಯಕ್ಷ ಕಲೆಯನ್ನು ವಿರೂಪಗೊಳಿಸುತ್ತಿವುದು ವಿಷಾದನೀಯ ಸಂಗತಿ. ಇತ್ತೀಚಿನ ದಿನಗಳಲ್ಲಿ ಮಳೆಗಾಲದಲ್ಲಿ ತಿರುಗಾಟದ ಇಲ್ಲದ ಸಂದರ್ಭದಲ್ಲಿ ಮನೆ ಮನೆಗೆ ಚಿಕ್ಕ ಮೇಳಗಳು ಹೊರಡುತ್ತವೆ. ಆದರೆ ಯಕ್ಷಗಾನದ ಬಾಲಪಾಠವೂ ಆಗದವರಿಂದ ಚಿಕ್ಕ ಮೇಳ ಎಂದು ಹೆಸರಿಟ್ಟುಕೊಂಡು ಅದೊಂದು ದಂಧೆಯಾಗಿ ವ್ಯಾಪಕವಾಗಿರುವುದು ನೋವಿನ ಸಂಗತಿ ಎಂದು ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರ ಸಮಿತಿ ದೂರಿದೆ.

    ಸಂಪ್ರದಾಯಕ್ಕೆ ಬದ್ಧವಾಗಿ, ಶಿಸ್ತುಬದ್ಧವಾಗಿ ಯಕ್ಷಗಾನ ಮಾಡಲು ಕಲಾವಿದರಲ್ಲಿ ಒಟ್ಟು ಮಾಡಿಕೊಂಡು ತೆಂಕುತಿಟ್ಟು ಚಿಕ್ಕಮೇಳ ಹೆಸರಿನಲ್ಲಿ ತಿರುಗಾಟವನ್ನು ಆರಂಭಿಸಲಾಗಿದೆ. ಒಕ್ಕೂಟದ ಪರವಾನಿಗೆ ಇದ್ದವರಿಗೆ ಮಾತ್ರ ಮನೆಯಲ್ಲಿ ಆಟವಾಡಿಸಲು ಜನತೆ ಅನುವು ಮಾಡಿಕೊಡಬೇಕು ಎಂದು ಒಕ್ಕೂಟದ ಅಧ್ಯಕ್ಷ ಸರಪಾಡಿ ಅಶೋಕ್ ಶೆಟ್ಟಿ ಹೇಳಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು ನಿಜವಾದ ಕಲಾವಿದರಿಗೆ ಅನ್ಯಾಯವಾಗಬಾರದು ಎನ್ನುವ ನಿಟ್ಟಿನಲ್ಲಿ ಒಕ್ಕೂಟವನ್ನು ರಚನೆ ಮಾಡಲಾಗಿದೆ. ಒಕ್ಕೂಟದ ಅಧಿಕೃತ ಪರವಾಣಿಗೆ ಪಡೆದು ತಿರುಗಾಟ ಮಾಡುವವರು ಸಂಜೆ 6ರಿಂದ ರಾತ್ರಿ 10.30ರವರೆಗೆ ಕನ್ನಡ ಇಲ್ಲವೇ ತುಳುಭಾಷೆಗಳ ಗರಿಷ್ಠ 20 ನಿಮಿಷಗಳ ಸಂದೇಶ ಇರುವ ಸನ್ನಿವೇಶದ ಪ್ರದರ್ಶನ ಮಾಡಲಿರುವರು ಎಂದರು.

    ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ರಮೇಶ ಕುಲಶೇಖರ, ಕುಮಾರ್ ಮಾಲೆಮಾರ್‌, ದಿವಾಕರ ದಾಸ್, ಕಡಬ ದಿನೇಶ ರೈ ಮೊದಲಾದವರಿದ್ದರು.

    Continue Reading

    LATEST NEWS

    Trending