Connect with us

    FILM

    ಪ್ರಕಾಶ್ ರೈ ಒಬ್ಬ ಅಜ್ಞಾನಿ; ಪ್ರಧಾನಿ ಮೋದಿ ಬೆಂಬಲಿಸಿ ಪೋಸ್ಟ್ ಮಾಡಿದ ನಟ ಚೇತನ್

    Published

    on

    ಬೆಂಗಳೂರು : ವಿನೇಶ್‌ ಫೋಗಟ್‌ ವಿಚಾರವಾಗಿ ಇಡೀ ಭಾರತ ದೇಶವೇ ನೋವಲ್ಲಿದೆ. ಕೇವಲ 100 ಗ್ರಾಂ ತೂಕದ ಹೆಚ್ಚಳದಿಂದ ವಿನೇಶ್ ಫೋಗಟ್ ಪದಕ ವಂಚಿತರಾಗಿರೋದು ದುಃಖವುಂಟು ಮಾಡಿದೆ. ಈ ನಡುವೆ, ಪ್ರಕಾಶ್ ರೈ ಕಾರ್ಟೂನ್ ವೊಂದನ್ನು ಹಂಚಿಕೊಂಡಿದ್ದರು. ವಿನೇಶ್ ಪದಕ ವಂಚಿತರಾಗಲು ಮೋದಿಯೇ ಕಾರಣ ಎಂಬಂತೆ ಈ ಕಾರ್ಟೂನ್ ನಲ್ಲಿ ಬಿಂಬಿಸಲಾಗಿತ್ತು.

    ಪ್ರಕಾಶ್‌ ರೈ ಈ ನಿಲುವಿನ ವಿರುದ್ಧ ಕಿಡಿಕಾರಿರುವ ನಟ ಚೇತನ್‌ ಅಹಿಂಸಾ, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ವ್ಯಕ್ತಪಡಿಸಿ ಮಾಡಿರುವ ಪೋಸ್ಟ್ ವೊಂದು ಆಶ್ಚರ್ಯ ಉಂಟು ಮಾಡಿದೆ.

    ಚೇತನ್ ಪೋಸ್ಟ್ ಏನು?
    ಯಾವಾಗಲೂ ಪ್ರಧಾನಿ ಮೋದಿ ವಿರುದ್ಧ ಮಾತನಾಡುತ್ತಿದ್ದ ಚೇತನ್ ಈ ಬಾರಿ ಮೋದಿ ಪರವಾಗಿ ಪೋಸ್ಟ್ ಮಾಡಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌-2024ರ ಫೈನಲ್‌ ಕುಸ್ತಿ ಪಂದ್ಯದಿಂದ ಹೊರ ಬಿದ್ದ ವಿನೇಶ್‌ ಫೋಗಟ್ ಪರ, ಮೋದಿ ವಿರುದ್ಧ ಪೋಸ್ಟ್‌ ಹಾಕಿದ್ದ ಪ್ರಕಾಶ್‌ ರೈ ನಡೆಯನ್ನು ಚೇತನ್‌ ಟೀಕಿಸಿದ್ದಾರೆ.

    ವಿನೇಶ್ ಫೋಗಟ್ ಅನರ್ಹತೆಗೆ ಪ್ರಧಾನಿ ಮೋದಿ ಕಾರಣ ಎಂದು ಪ್ರಕಾಶ್ ರೈ ಪೋಸ್ಟ್ ಸಜೆಸ್ಟ್ ಮಾಡುತ್ತೆ. ಇದು ಸಣ್ಣತನ. ಭಾರತದ ಎಲ್ಲಾ ಲಾಭಗಳಿಗೆ ಮೋದಿಯನ್ನು ಕುರುಡಾಗಿ ಹೊಗಳುವವರು, ಹೇಗೆ ಅಜ್ಞಾನಿಗಳೋ, ಹಾಗೆಯೇ ಭಾರತದ ಎಲ್ಲಾ ಸಮಸ್ಯೆಗಳನ್ನು ಮೋದಿಯ ಮೇಲೆ ದೂಷಿಸುವ ರೈ ಅವರಂತಹವರೂ ಅಜ್ಞಾನಿಗಳಾಗಿದ್ದಾರೆ. ಪ್ರಕಾಶ್ ರೈ ಒಳ್ಳೆಯ ನಟ. ಆದರೆ, ಕೆಟ್ಟ ಹೋರಾಟಗಾರ ಎಂದು ಚೇತನ್ ಟೀಕಿಸಿದ್ದಾರೆ.

    ಇದನ್ನೂ ಓದಿ : ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಿದ ಮಕ್ಕಳು; ಮುಂದೆ ಆಗಿದ್ದೇನು ಗೊತ್ತಾ?

    ಪ್ರಕಾಶ್ ರೈ ಮಾಡಿದ್ದ ಪೋಸ್ಟ್ ಏನು?
    ಯಾವಾಗಲೂ ಪ್ರಧಾನಿ ಮೋದಿ ಅವರನ್ನು ಟೀಕಿಸುವ ಪ್ರಕಾಶ್ ರೈ, ಕಾರ್ಟೂನ್​ ವೊಂದನ್ನು ಶೇರ್ ಮಾಡಿದ್ದರು. ಈ ಕಾರ್ಟೂನ್ ನಲ್ಲಿ ಕುಸ್ತಿಪಟು ವಿನೇಶ್​ ಫೋಗಟ್ ಅವರು ತೂಕದ ಯಂತ್ರದ ಮೇಲೆ ನಿಂತಿದ್ದು, ಅವರ ಹಿಂಭಾಗದಲ್ಲಿ ಮತ್ತೊಬ್ಬರು ಕಾಲಿನ ಒಂದು ಬೆರಳನ್ನಿಟ್ಟು 100 ಗ್ರಾಂ ತೂಕ ಹೆಚ್ಚಾಗುವಂತೆ ಮಾಡುತ್ತಿರುವುದು ಕಂಡು ಬಂದಿತ್ತು. ಹಿಂದಿರುವ ವ್ಯಕ್ತಿ ಪ್ರಧಾನಿ ಮೋದಿ ಎಂದು ಚಿತ್ರ ಸೂಚಿಸುವಂತಿತ್ತು. ಮೋದಿಯೇ ವಿನೇಶ್ ಫೋಗಟ್  ಚಿನ್ನದ ಪದಕದಿಂದ ವಂಚಿತರಾಗಲು ಕಾರಣವಾಗಿದ್ದಾರೆ ಎಂಬ ಅರ್ಥ ಬರುವಂತೆ ಪೋಸ್ಟ್ ಹಂಚಿಕೊಂಡಿದ್ದರು.

    FILM

    ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅರೆಸ್ಟ್..!

    Published

    on

    ಬೆಂಗಳೂರು/ಮಂಗಳೂರು: ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನವಾಗಿದೆ. 21 ವರ್ಷ ಪ್ರಾಯದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದಡಿಯಲ್ಲಿ ಕೊರಿಯೋಗ್ರಾಫರ್ ಬಂಧನವಾಗಿದೆ.

    ಇತ್ತೀಚಿಗೆ ಖ್ಯಾತ ಕೊರಿಯೋಗ್ರಾಫರ್‌ ಜಾನಿ ಮಾಸ್ಟರ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಮಾಸ್ಟರ್ ವಿರುದ್ಧ 21 ವರ್ಷದ ಸಹಾಯಕ ಡ್ಯಾನ್ಸರ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಹಿಂದಿ, ತೆಲುಗು, ಕನ್ನಡ, ತಮಿಳು ಸಿನೆಮಾಗಳಿಗೆ ಮಾತ್ರವಲ್ಲದೆ ಸ್ಟಾರ್ ನಟರಿಗೆ ಕೊರಿಯೋಗ್ರಫಿ ಮಾಡಿರುವ ಕೋರಿಯೋಗ್ರಾಫರ್ ಇದೀಗ ಬಂಧನಕ್ಕೊಳಗಾಗಿದ್ದಾರೆ.

    ಏನಿದು ಘಟನೆ?
    ಯುವತಿಯ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ ಜೀರೋ ಎಫ್‌ಐಆರ್ ದಾಖಲಾಗಿತ್ತು. ಆ ಬಳಿಕ ನೃತ್ಯ ನಿರ್ದೇಶಕ ತಲೆ ಮರೆಸಿಕೊಂಡಿದ್ದರು. ಮೂರು ದಿನಗಳಿಂದ ಹುಡುಕಾಡುತ್ತಿದ್ದ ಹೈದರಾಬಾದ್‌ನ ಪೊಲೀಸರು ನಾಲ್ಕು ತಂಡಗಳಾಗಿ ಶೋಧ ನಡೆಸಿದ್ದರು. ಇಂದು (ಸೆಪ್ಟೆಂಬರ್ 19) ಬೆಳಗ್ಗೆ ಗೋವಾದಲ್ಲಿ ಹೈದರಾಬಾದ್‌ ಪೊಲೀಸರು ಬಂಧಿಸಿದ್ದಾರೆ. ಇನ್ನೊಂದು ಕಡೆ ಜಾನಿ ಮಾಸ್ಟರ್ ವಿರುದ್ಧ ಪೋಕ್ಸೊ ಪ್ರಕರಣ ಕೂಡ ಇವರ ಮೇಲೆ ದಾಖಲಾಗಿದೆ. ಮಹಿಳಾ ನೃತ್ಯ ನಿರ್ದೇಶಕಿಯೊಬ್ಬರ ಮೇಲೆ ಚಿತ್ರೀಕರಣದ ವೇಳೆ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿ ದೂರು ನೀಡಿದ್ದರು. ಅಲ್ಲದೆ ಔಟ್ ಡೋರ್ ಶೂಟಿಂಗ್ ವೇಳೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾಗಿ ಆರೋಪ ಮಾಡಿದ್ದಾರೆ.

    ನಟ ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್ ಗೆ ಕೊ*ಲೆ ಬೆದರಿಕೆ ಹಾಕಿದ ಮಹಿಳೆ

    ಈ ದೂರಿನ ಬೆನ್ನಲ್ಲೇ ಪೊಲೀಸರು ಜಾನಿ ಮಾಸ್ಟರ್ ವಿರುದ್ಧ ಸೆಕ್ಷನ್ 376, 506, 323 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ನರಸಿಂಗಿ ಠಾಣೆಯ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ಝೀರೊ ಎಫ್‌ಐಆರ್ ಕೂಡ ದಾಖಲಾಗಿತ್ತು. ಜಾನಿ ಮಾಸ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಯುವತಿಯನ್ನು ವಿಚಾರಣೆ ಮಾಡಿದ್ದರು. ಆಕೆಯ ಮನೆಯಲ್ಲಿಯೇ ಸುಮಾರು ಮೂರು ಗಂಟೆಗಳಿಗೂ ಅಧಿಕ ಕಾಲ ವಿಚಾರಣೆ ನಡೆಸಿ, ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿದ್ದರು.

    Continue Reading

    FILM

    ನಟ ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್ ಗೆ ಕೊ*ಲೆ ಬೆದರಿಕೆ ಹಾಕಿದ ಮಹಿಳೆ

    Published

    on

    ಮಂಗಳೂರು/ಮುಂಬೈ : ನಟ ಸಲ್ಮಾನ್‌ ಖಾನ್‌ ತಂದೆ, ಹಿರಿಯ ಸಾಹಿತಿ ಸಲೀಂ ಖಾನ್ ಅವರಿಗೆ ವಾಕಿಂಗ್ ವೇಳೆ ಮಹಿಳೆಯೊಬ್ಬರು ಬೆದರಿ*ಕೆ ಹಾಕಿದ್ದಾರೆ ಎನ್ನಲಾಗಿದೆ.  ಮುಂಜಾನೆಯ ವಾಕಿಂಗ್ ಸಮಯದಲ್ಲಿ ಮಹಿಳೆಯೊಬ್ಬಳು ಡಾನ್‌ ಲಾರೆನ್ಸ್‌ ಬಿಷ್ಣೋಯ್‌ ಹೆಸರಿನಲ್ಲಿ ಬೆದರಿ*ಕೆ ಹಾಕಿದ್ದಾಗಿ ವರದಿಯಾಗಿದೆ. ಈ ಬಗ್ಗೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ವಾಕಿಂಗ್ ವೇಳೆ ಹತ್ತಿರಕ್ಕೆ ಬಂದಿದ್ದ ಮಹಿಳೆ ಸಲೀಂ ಖಾನ್‌ ಅವರಿಗೆ, ಸರಿಯಾಗಿ ನಡೆದುಕೊಳ್ಳಿ, ಇಲ್ಲದೆ ಇದ್ದರೆ ಸಲ್ಮಾನ್‌ ಖಾನ್‌ ಅವರಿಗೆ ಕೊ*ಲೆ ಬೆದರಿ*ಕೆ ಹಾಕಿರುವ ಡಾನ್‌ ಲಾರೆನ್ಸ್‌ಗೆ ಕರೆ ಮಾಡುವುದಾಗಿ ಹೇಳಿದ್ದಾಗಿ ದೂರು ನೀಡಲಾಗಿದೆ. ಮಹಿಳೆ ಯಾರು? ಎಲ್ಲಿಂದ ಬಂದವಳು ? ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಆದ್ರೆ ಸಲ್ಮಾನ್‌ ಖಾನ್‌ ನಗರದಿಂದ ಹೊರಟ ಕೆಲವೇ ಗಂಟೆಯಲ್ಲಿ ಈ ಘಟನೆ ನಡೆದಿದೆ

    ಎಪ್ರಿಲ್‌ ತಿಂಗಳಲ್ಲಿ ಸಲ್ಮಾನ್ ಖಾನ್‌ ಅವರ ಬಾಂದ್ರದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಹೊರಗೆ ಗುಂಡಿನ ದಾ*ಳಿ ನಡೆಸಲಾಗಿತ್ತು. ಇದು ಲಾರೆನ್ಸ್ ಬಿಷ್ಣೋಯ್‌ ಸಹೋದರ ಅನ್ಮೋಲ್ ಬಿಷ್ಣೋಯ್‌ ಮಾಡಿರುವುದಾಗಿ ಫೇಸ್‌ಬುಕ್‌ನಲ್ಲಿ ಹೇಳಿಕೊಂಡಿದ್ದ. ಸಲ್ಮಾನ್ ಖಾನ್‌ ವಿಚಾರಣೆಯ ವೇಳೆಯಲ್ಲಿ ತನ್ನ ಕುಟುಂಬಕ್ಕೆ ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ನಿಂದ ಬೆದರಿ*ಕೆ ಇದೆ ಎಂದು ಹೇಳಿಕೆ ನೀಡಿದ್ದರು.

    ಇದನ್ನೂ ಓದಿ : ಶಾಸಕ ಮುನಿರತ್ನ ಸೇರಿದಂತೆ 7 ಮಂದಿ ವಿರುದ್ಧ ಅತ್ಯಾಚಾ*ರ ಕೇಸ್ ದಾಖಲು

    ಇದೀಗ ಸಲ್ಮಾನ್ ಖಾನ್‌ ತಂದೆ ಸಲೀಂ ಖಾನ್‌ ಅವರಿಗೆ ಬೆದರಿಕೆ ಹಾಕಿರುವ ಹಿನ್ನಲೆಯಲ್ಲಿ ಸಲ್ಮಾನ್ ಖಾನ್ ಕುಟುಂಬಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಮಹಿಳೆ ಯಾರು ಎಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ.

    Continue Reading

    FILM

    ಮೊದಲ ಬಾರಿಗೆ ದರ್ಶನ್ ಭೇಟಿಗೆ ಬಂದ ತಾಯಿ..! ದರ್ಶನ್‌ಗಾಗಿ ತಾಯಿ ತಂದಿದ್ದೇನು ಗೊತ್ತಾ?

    Published

    on

    ಮೈಸೂರು/ಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಗೆ ಬಿಡುಗಡೆ ಭಾಗ್ಯ ಇನ್ನೂ ದೊರೆತಿಲ್ಲ. ಇನ್ನು ಜೈಲಲ್ಲಿರುವ ದರ್ಶನ್ ಭೇಟಿಗೆ ಚಿತ್ರರಂಗದ ನಟ ನಟಿಯರು ಭೇಟಿ ನೀಡುತ್ತಿದ್ದಾರೆ. ಕೆಲ ದಿನಗಳ ಹಿಂದ ಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್ ತೂಗುದೀಪ ಅವರಲ್ಲಿ ತಾಯಿಯಯನ್ನು ಕಾಣುವ ಹಂಬಲ ವ್ಯಕ್ತಪಡಿಸಿದ್ದರು. ಈ ಹಿಂದೆಯೇ ತಾಯಿ ಮೀನಾ ಕೂಡಾ ದರ್ಶನ್ ಭೇಟಿ ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ.

    ದರ್ಶನ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ; ಸೆ.30ರವರೆಗೆ ಜೈಲೇ ಗತಿ

    ಇದೀಗ ದರ್ಶನ್ ತಾಯಿ ಮೀನಾ ತೂಗುದೀಪ ಹಾಗೂ ಅಕ್ಕ, ಭಾವ ಮತ್ತು ಅವರ ಮಕ್ಕಳು ಕೇಂದ್ರ ಕಾರಾಗ್ರಹಕ್ಕೆ ಭೇಟಿ ನೀಡಿದ್ದಾರೆ.  ಪರಪ್ಪನ ಅಗ್ರಹಾರದಲ್ಲಿದ್ದಾಗ ದರ್ಶನ್​​ರನ್ನು ಕಾಣಲು ಮಗ ದಿನಕರ್​ ತೂಗುದೀಪ ಜೊತೆ ಬಂದಿದ್ದರು. ಬಳ್ಳಾರಿ ಜೈಲಿಗೆ ಇದೇ ಮೊದಲ ಬಾರಿಗೆ ತಾಯಿ ಮೀನಾ ತೂಗುದೀಪ ಬಂದಿದ್ದಾರೆ. ಮಗನನ್ನು ಕಾಣುವ ತವಕದಲ್ಲಿ ತನ್ನ ಮಗಳ ಜೊತೆಗೆ ಕೇಂದ್ರ ಕಾರಾಗೃಹಕ್ಕೆ ಬಂದಿದ್ದಾರೆ.

    ದರ್ಶನ್​ ನೋಡಲು ಬಂದ ವೇಳೆ ತಾಯಿ ಮೀನು ತೂಗುದೀಪ ಮತ್ತು ಕುಟುಂಬಸ್ಥರು ಕೈಯಲ್ಲಿ ಎರಡು ಬ್ಯಾಗ್ ತಂದಿದ್ದಾರೆ. ಸ್ವೀಟ್ಸ್, ಊಟದ ಬಾಕ್ಸ್, ಹಣ್ಣು ತಂದಿದ್ದಾರೆ. ಮಡದಿ ವಿಜಯಲಕ್ಷ್ಮೀ, ಸ್ನೇಹಿತರು ಈಗಾಗಲೇ ದರ್ಶನ್​​ರನ್ನು ಭೇಟಿ ಮಾಡಿದ್ದಾರೆ. ಆದರೆ ಬೆಂಗಳೂರಿನಿಂದ ಬಳ್ಳಾರಿಗೆ 300ಕಿಮೀ ಅಂತರವಿರುವ ಕಾರಣ ತಾಯಿ ಮೀನಾ ತೂಗುದೀಪ್​ ದರ್ಶನ್​​ರನ್ನು ಭೇಟಿ ಮಾಡಿರಲಿಲ್ಲ.

    Continue Reading

    LATEST NEWS

    Trending