Connect with us

    ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರತಾಪ್ ಸಿಂಹ ನಾಯಕ್…

    Published

    on

    ವಿಧಾನಪರಿಷತ್‌ ಚುನಾವಣೆಗೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರತಾಪ್ ಸಿಂಹ ನಾಯಕ್…

    ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗುವುದು ಖಚಿತವಾಗಿದೆ.

    ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಇದೇ ಜೂನ್ 29 ರಂದು ಚುನಾವಣೆ ನಡೆಯಬೇಕಾಗಿತ್ತು.

    ಆದರೆ 7 ಸ್ಥಾನಗಳಿಗೆ 7 ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿರುವುದರಿಂದ ಅಭ್ಯರ್ಥಿಗಳ ಆಯ್ಕೆ ಅವಿರೋಧವಾಗಲಿದೆ.

    ವಿಧಾನ ಪರಿಷತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇವತ್ತು (ಜೂ.18) ಕೊನೆಯ ದಿನ. ಕೊನೆಯ ದಿನ ಬಿಜೆಪಿಯಿಂದ 4, ಕಾಂಗ್ರೆಸ್ ಪಕ್ಷದಿಂದ 2 ಹಾಗೂ ಜೆಡಿಎಸ್ ಪಕ್ಷದಿಂದ ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.

    ಹೀಗಾಗಿ ಎಲ್ಲ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆ ಬಾಕಿಯಿದೆ.

    ಇನ್ನು ವಿಧಾನ ಪರಿಷತ್‌ ಚುನಾವಣೆಗೆ ಅಭ್ಯರ್ಥಿಗಳಾಗಿ ಆಯ್ಕೆಯಾದ ಪ್ರತಾಪಸಿಂಹ ನಾಯಕ್, ಸುನಿಲ್ ವಲ್ಯಾಪುರೆ, ಎಂ.ಟಿ.ಬಿ.‌ನಾಗರಾಜ್, ಆರ್.ಶಂಕರ್ ಅವರ ನಾಮಪತ್ರ ಸಲ್ಲಿಕೆ ಮಾಡಿದರು.

    ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಎಂ.ಗೋವಿಂದ ಕಾರಜೋಳ, ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ ಲಿಂಬಾವಳಿ,

    ಮುಜರಾಯಿ ಮೀನುಗಾರಿಕಾ ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ್,

    ಸಹಕಾರ ಸಚಿವರಾದ ಎಸ್.‌ಟಿ.ಸೋಮಶೇಖರ್‌ ಮತ್ತು ಇತರ ಗಣ್ಯರು ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    LATEST NEWS

    ಫರಂಗಿಪೇಟೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಮೂವರಿಗೆ ಗಾಯ

    Published

    on

    ವಿಟ್ಲದಿಂದ ಮಂಗಳೂರು ವಿಮಾನ ನಿಲ್ದಾಣದ ಕಡೆಗೆ ಸಾಗುತ್ತಿದ್ದ ಕಾರೊಂದು ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಮೂವರು ಗಾಯಗೊಂಡ ಘಟನೆ ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ಸಂಭವಿಸಿದೆ.

    ಬೆಳಗ್ಗೆ 6.15 ರ ವೇಳೆಗೆ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಮೂವರು ಪ್ರಯಾಣಿರಿಗೆ ತುರ್ತಾಗಿ ವಿಮಾನ ನಿಲ್ದಾಣಕ್ಕೆ ಹೋಗಬೇಕಾಗಿದ್ದರಿಂದ ಅವರನ್ನು ಆಟೋ ರಿಕ್ಷಾದಲ್ಲಿ ವಿಮಾನ ನಿಲ್ದಾಣಕ್ಕೆ ಕಳುಹಿಸಿ ಕೊಡಲಾಯಿತು.

    ವೇಗವಾಗಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದು ಬಳಿಕ ಮನೆಯೊಂದರ ಅಂಗಳದಲ್ಲಿ ಮಗುಚಿ ಬಿದ್ದಿದೆ. ಬೆಳಗ್ಗಿನ ವೇಳೆ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಚಾಲಕನ ನಿಯಂತ್ರಣ ಕಳೆದುಕೊಂಡಿರ ಬೇಕೆಂದು ಶಂಕಿಸಲಾಗಿದೆ.

    Continue Reading

    LATEST NEWS

    ಮೆಟ್ರೋ ನಿಲ್ದಾಣದಲ್ಲಿಅನಾಹುತ; ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

    Published

    on

    ದೆಹಲಿ/ಮಂಗಳೂರು: ದೆಹಲಿಯ ಲೋಕ ಕಲ್ಯಾಣ್ ಮಾರ್ಗದ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಹಳಿಗೆ ಹಾರಿ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ನಡೆದಿದೆ. 28 ವರ್ಷದ ದೇವೇಂದ್ರಕುಮಾರ್ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

    ರಾಜಸ್ಥಾನ್‌ ಅಲ್ವಾರ್ ನಿವಾಸಿಯಾಗಿರುವ ದೇವೆಂದ್ರ ಕುಮಾರ್ ಲೋಕಕಲ್ಯಾಣ್ ಮಾರ್ಗ ಮೆಟ್ರೋ ನಿಲ್ದಾಣದ ಪ್ಲಾಟ್‌ ಫಾರ್ಮ್‌ ಸಂಖ್ಯೆ 2ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಶವವನ್ನು ಆರ್‌ಎಂಎಲ್‌ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

    Continue Reading

    LATEST NEWS

    ಶಿರೂರು ಗುಡ್ಡ ಕುಸಿತ; ಮೂಳೆ ಸಿಕ್ಕಿದ್ದು ದನದ್ದು, ಮನುಷ್ಯನದಲ್ಲ

    Published

    on

    ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತದ ಶೋಧ ಕಾರ್ಯಾಚರಣೆ ವೇಳೆ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದ್ದ ಮೂಳೆ ದನದ ಮೂಳೆ ಎಂದು ವೈಜ್ಞಾನಿಕ ಪರೀಕ್ಷೆಯಿಂದ ದೃಢಪಟ್ಟಿದೆ.

    ಭಾನುವಾರ ಸಂಜೆ ಕಾರ್ಯಾಚರಣೆಯಲ್ಲಿ ಮೂಳೆ ಪತ್ತೆಯಾಗಿದ್ದರಿಂದ ಇದು ಶಿರೂರು ದುರಂತದಲ್ಲಿ ಗಂಗಾವಳಿ ನದಿಯಲ್ಲಿ ಕಣ್ಮರೆಯಾಗಿರುವ ಮೂವರಲ್ಲಿ ಯಾರದಾದರೂ ಮೂಳೆ ಇರಬಹುದು ಎಂಬ ಜಿಜ್ಞಾಸೆಗೆ ಕಾರಣವಾಗಿತ್ತು.

    ಆದರೆ ಇದೀಗ ಮೂಳೆ ಪರೀಕ್ಷೆ ನಡೆಸಿ ವರದಿ ನೀಡಲಾಗಿದ್ದು ದನದ ಮೂಳೆ ಎಂಬುದು ದೃಢಪಟ್ಟಿದೆ.

    Continue Reading

    LATEST NEWS

    Trending