Thursday, March 23, 2023

ಕಟ್ಟೆಯೊಡೆದ ಆಕ್ರೋಶ: ಸಚಿವ ಅಂಗಾರ-ಸುನೀಲ್‌ ಸುತ್ತುವರಿದು ‘ಡೋಂಗಿ ಡೋಂಗಿ’ ಧಿಕ್ಕಾರ

ಪುತ್ತೂರು: ನಿನ್ನೆ ಕೊಲೆಯಾದ ಪ್ರವೀಣ್‌ ಮೃತದೇಹ ಬೆಳ್ಳಾರೆ ಪೇಟೆಗೆ ಆಗಮಿಸಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಈ ವೇಳೆ ಸ್ಥಳದಲ್ಲಿ ಹಿಂದೂ ಕಾರ್ಯಕರ್ತರ ಆಕ್ರೋಶದ ಕಟ್ಟೆ ಓಡೆಯಿತು ‘ಬೇಕೇ ಬೇಕು ನ್ಯಾಯ ಬೇಕು’ ಎಂಬ ಒತ್ತಾಯ ಕೇಳಿಬಂದಿತು.

ಜಿಲ್ಲಾ ಉಸ್ತುವಾರಿ ಸುನೀಲ್‌ ಕುಮಾರ್‌ ಹಾಗೂ ಸಚಿವ ಅಂಗಾರ ಅವರನ್ನು ಸುತ್ತುವರೆದ ಕಾರ್ಯಕರ್ತರು ಡೋಂಗಿ ಡೋಂಗಿ ಎಂದು ಧಿಕ್ಕಾರ ಕೂಗಿದರು. ಕಾರ್ಯಕರ್ತರ ಆಕ್ರೋಶಕ್ಕೆ ಥಂಡಾ ಹೊಡೆದ ಸಚಿವರು ಕುಳಿತಲ್ಲೇ ಕೈಕಟ್ಟಿ ಮೌನಕ್ಕೆ ಶರಣಾದರು.


ಬಿಜೆಪಿ ಹಾಗೂ ಸಂಘಪರಿವಾರದ ಹಲವು ನಾಯಕರು ಕಾರ್ಯಕರ್ತರನ್ನು ಸಮಾಧಾನಿಸಿದರೂ ಕೇಳ ಕಾರ್ಯಕರ್ತರು ಕಿರುಚಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳದಲ್ಲಿ ಕಲ್ಲಡ್ಕ ಪ್ರಭಾಕರ್‌ ಭಟ್‌ ಸಹಿತ, ಸಂಸದ ನಳಿನ್‌ ಕುಮಾರ್‌ ಆದಿಯಾಗಿ ಸಚಿವರು ಕಾರ್ಯಕರ್ತರನ್ನು ಸಮಾಧಾನಿಸಲು ಯತ್ನಿಸಿದರೂ ಕೇಳದ ಕಾರ್ಯಕರ್ತರು ಬಿಜೆಪಿಗೆ ಧಿಕ್ಕಾರ ಕೂಗಿದರು.

ಪೊಲೀಸರು ಸಹ ಯಾರನ್ನು ಸಮಾಧಾನಿಸಲು ಯತ್ನಿಸಿದರೂ ಯಾರು ಕೇಳುವ ಸ್ಥಿತಿಯಲ್ಲಿಲ್ಲ.

LEAVE A REPLY

Please enter your comment!
Please enter your name here

Hot Topics

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...