Connect with us

BANTWAL

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ಬೇಧಿಸಿದ 82 ಅಧಿಕಾರಿ, ಸಿಬ್ಬಂದಿಗೆ ಪ್ರಶಂಸೆ

Published

on

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣವನ್ನು ಬೇಧಿಸಿದ ಪಶ್ಚಿಮ ವಲಯ ಪೊಲೀಸ್‌ ತಂಡವನ್ನು ಐಜಿಪಿ ದೇವಜ್ಯೋತಿ ರೇ ಅಭಿನಂದಿಸಿದರು ಹಾಗೂ ತನಿಖೆಯಲ್ಲಿ ಭಾಗವಹಿಸಿದ 82 ಅಧಿಕಾರಿಗಳಿಗೆ ಪ್ರಶಂಸಾ ಪತ್ರ ವಿತರಿಸಿದರು.


ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಿಜೆಪಿ ಯುವಮೋರ್ಚಾ ಮುಖಂಡನ ಕೊಲೆ ಪ್ರಕರಣದ ಯಾವುದೇ ಸುಳಿವು ಇಲ್ಲದೇ ಇದ್ದ ಕಾರಣ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚುವುದು ಪೊಲೀಸರಿಗೆ ಸವಾಲಾಗಿತ್ತು.

ಆರೋಪಿತರನ್ನು ಪತ್ತೆ ಹಚ್ಚಲು ಬೆಳ್ಳಾರೆ, ಸುಳ್ಯ, ಸುಬ್ರಹ್ಮಣ್ಯ, ಕಡಬ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ಠಾಣೆಯ ಪೊಲೀಸರನ್ನು ಬಳಸಿ ತನಿಖೆ ನಡೆಸಲಾಗಿತ್ತು. ಇದರಲ್ಲಿ ಒಟ್ಟು 82 ಜನ ಅಧಿಕಾರಿ/ಸಿಬ್ಬಂದಿಯ ತಂಡ ಹಗಲು ರಾತ್ರಿ ಕರ್ತವ್ಯ ನಿರ್ವಹಿಸಿ, ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ಅಂತಿಮವಾಗಿ ಆರೋಪಿತರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದರು.

ಈ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಮೊಲೀಸ್ ಘಟಕದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ದೇವಜ್ಯೋತಿ ರೇ ಅವರು ಅಧಿಕಾರಿ,

ಸಿಬ್ಬಂದಿಗೆ ಪ್ರಶಂಸನಾ ಪತ್ರ ಹಾಗೂ ಬಹುಮಾನ ವಿತರಿಸಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ್‌ ಸೋನಾವಣೆ ಸೇರಿ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

BANTWAL

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ

Published

on

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.

ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.

ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್‌ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

LATEST NEWS

Trending