Connect with us

DAKSHINA KANNADA

‘ಪ್ರವೀಣ್‌’ ಬೇಟೆಗೆ 6 ವೆಹಿಕಲ್‌ 10 ಹತ್ಯೆಕೋರರು..!: ಪಿನ್‌ ಟು ಪಿನ್‌ ಡಿಟೇಲ್ಸ್‌

Published

on

ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ನಡೆದ 16 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಪ್ರಕರಣ ಸಂಬಂಧ ಒಟ್ಟು 10 ಆರೋಪಿಗಳ ಹೆಡೆಮುರಿ ಕಟ್ಟಿ ತಾರ್ಕಿಕ ಅಂತ್ಯ ಕಂಡಿದ್ದಾರೆ.

ಪ್ರಮುಖ ಆರೋಪಿಗಳಾದ ಬಶೀರ್‌, ರಿಯಾಝ್‌, ಶಿಯಾಬ್‌  

ಶಿಯಾಬ್‌(33), ರಿಯಾಝ್‌ ಅಂಕತ್ತಡ್ಕ (27), ಬಶೀರ್‌ ಏಳಿಮಲೆ (29) ಬಂಧಿತರಾಗಿದ್ದು ಇವರೆಲ್ಲರೂ ಸುಳ್ಯ ತಾಲೂಕಿನರಾಗಿದ್ದರು. ಶಿಯಾಬ್‌ ಕ್ಯಾಂಪ್ಕೊಗೆ ಕೋಕೋ ಸರಬರಾಜಿನ ವ್ಯವಹಾರ ಮಾಡುತ್ತಿದ್ದನು.

ರಿಯಾಝ್‌ ಕೋಳಿ ಲೈನ್‌ ಸೇಲ್‌ ಮಾಡುತ್ತಿದ್ದರೆ ಬಶೀರ್‌ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದನು. ಉಳಿದಂತೆ ಈ ಹಿಂದೆ ಈ ಕೃತ್ಯಕ್ಕೆ ಪರೋಕ್ಷವಾಗಿ ಸಹಕರಿಸಿದ್ದ ಶಫೀಕ್‌ ಬೆಳ್ಳಾರೆ,

ಝಾಕಿರ್‌ ಸವಣೂರು, ನೌಫಾಲ್‌ ಗೌರಿಹೊಳೆ, ಅಬೀದ್‌ ನಾವೂರು, ಅಬ್ದುಲ್‌ ಕಬೀರ್‌ ಜಟ್ಟಿಪಳ್ಳ, ಸದ್ದಾಂ ಪಳ್ಳಿಮಜಲು ಹಾಗೂ ಹ್ಯಾರಿಸ್‌ ಬೆಳ್ಳಾರೆಯನ್ನು ಈ ಹಿಂದೆ ಬಂಧಿಸಿದ್ದರು.

ಕಪ್ಪು ಬಣ್ಣದ ಸ್ಪ್ಲೆಂಡರ್‌ ಬೈಕ್‌ನಲ್ಲಿ ಬಂದಿದ್ದರು 
ಜುಲೈ.26 ರಂದು ಪೂರ್ವ ಯೋಜನೆಯಂತೆ ರಾತ್ರಿ 8.30 ರ ಸುಮಾರಿಗೆ ಮೂವರು ಆರೋಪಿಗಳು ಎರಡು ಬೈಕುಗಳಲ್ಲಿ ಬೆಳ್ಳಾರೆಗೆ ಬಂದಿದ್ದರು. ಒಂದು ಬೈಕನ್ನು ಬೆಳ್ಳಾರೆಯಲ್ಲಿರುವ ಪ್ರವೀಣ್‌ ನಡೆಸುತ್ತಿದ್ದ ಅಕ್ಷಯ ಫ್ರೆಶ್‌ ಚಿಕನ್‌ ಸೆಂಟರ್‌ ಅಂಗಡಿಯ 200 ಮೀಟರ್‌ ದೂರದಲ್ಲಿ ಬಿಟ್ಟು ಮತ್ತೊಂದು ಕಪ್ಪು ಬಣ್ಣದ ಸ್ಪ್ಲೆಂಡರ್‌ ಬೈಕ್‌ನಲ್ಲಿ ಬಂದು

                                 ಬೆಳ್ಳಾರೆ ಪೊಲೀಸ್‌ ಠಾಣೆ

ಆಗ ತಾನೆ ಅಂಗಡಿ ಮುಚ್ಚಿ ಕೆಲಸದವನ ಜೊತೆ ಮನೆಗೆ ತೆರಳಲು ಅಣಿಯಾಗುತ್ತಿದ್ದಂತೆ ಪ್ರವೀಣ್ ಮೇಲೆ ಮಾರಕಾಸ್ತರಗಳಿಂದ ದಾಳಿ ನಡೆಸಿ 200 ಮೀಟರ್‌ ದೂರದಲ್ಲಿ ನಿಲ್ಲಿಸಿದ್ದ ಬೈಕ್‌ ಸೇರಿ ಎರಡು ಬೈಕ್ ಗಳಲ್ಲಿ ಎಸ್ಕೇಪ್ ಆಗಿದ್ದರು. ಅದರಲ್ಲಿ ಒಂದು ಬೈಕ್ ಚಿಕ್ಕಮಗಳೂರು ಮತ್ತೊಂದು ಬೈಕ್ ಪಕ್ಕದ ಕೇರಳ ಕಡೆಗೆ ತೆರಳಿ ನಾಪತ್ತೆಯಾಗಿದ್ದರು.

ಮರ್ಡರ್ ಕನ್ಫರ್ಮ್ ಆಗುತ್ತಿದ್ದಂತೆ ಎರಡು ಕಡೆ ಡೈವರ್ಟ್‌ ಆದ ಆರೋಪಿಗಳು 
ಇತ್ತ ತೀವ್ರ ರಕ್ತಸ್ರಾವದಲ್ಲಿ ಮುಳುಗಿದ್ದ ಪ್ರವೀಣನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವ ವ್ಯವಸ್ಥೆಯಾಯಿತಾದರೂ ದಾರಿ ಮಧ್ಯೆ ಪ್ರವೀಣ್ ಇಹಲೋಕ ತ್ಯಜಿಸಿದ್ದರು.

ಇತ್ತ ಪ್ರವೀಣ್ ಕೊಲೆಯಾಗಿರುವುದು ಕನ್ಫರ್ಮ್ ಆಗುತ್ತಿದ್ದಂತೆ ಕೃತ್ಯ ನಡೆಸಿದ ಇಬ್ಬರು ಆರೋಪಿಗಳು ಸುಳ್ಯ ಮೂಲಕ ನೇರವಾಗಿ ಕಾಸರಗೋಡಿನ ಬೇಕಲ್‌ ಫೋರ್ಟ್‌ ಕಡೆಗೆ ತೆರಳಿದರೆ.

ಮತ್ತೊಂದು ಬೈಕ್‌ ಮೂಲಕ ಮತ್ತೋರ್ವ ಆರೋಪಿ ಚಿಕ್ಕಮಗಳೂರು ಕಡೆಗೆ ಎಸ್ಕೇಪ್‌ ಆಗಿದ್ದನು. ಕಾಸರಗೋಡಿಗೆ ತೆರಳಿದ ಇಬ್ಬರು ಕಣ್ಣೂರು, ತ್ರಿಶೂರ್, ಮಲಪ್ಪುರಂ ಗಳಲ್ಲಿ ಸುತ್ತಾಡಿ ಅಲ್ಲಲ್ಲಿ ವಾಸ್ತವ್ಯ ಬದಲಿಸಿದ್ದಾರೆ.

ಆರೋಪಿಗಳ ಜಾಡು ಹಿಡಿದ ಕರ್ನಾಟಕ ಪೊಲೀಸರು ಕೇರಳಕ್ಕೆ ಲಗ್ಗೆ ಇಟ್ಟಿದ್ದ ಮಾಹಿತಿ ಸಿಗುತ್ತಿದ್ದಂತೆ ಅಲ್ಲಿಂದ ಆರೋಪಿಗಳು ತಮಿಳುನಾಡು ಕಡೆ ಪಲಾಯನಗೈದು ತಲೆಮರೆಸಿಕೊಂಡಿದ್ದರು.

ಇತ್ತ ಚಿಕ್ಕಮಗಳೂರು ಕಡೆ ಹೋಗಿ ನಾಪತ್ತೆಯಾದ ಆರೋಪಿ ಮಂಡ್ಯ, ಚಾಮರಾಜನಗರ ಕಡೆ ತಲೆಮರೆಸಿಕೊಂಡಿದ್ದರು.

ಬೆಳ್ಳಾರೆಯಲ್ಲೇ ಆರು ಜಿಲ್ಲೆಗಳ ಎಸ್ಪಿ ಸಭೆ ಕರೆದಿದ್ದ ಎಡಿಜಿಪಿ
ಈ ಪ್ರಕರಣದ ತನಿಖೆಯ ಹೊಣೆ ಹೊತ್ತಿದ್ದ ಎಡಿಜಿಪಿ ಅಲೋಕ್ ಕುಮಾರ್ ಬುಧವಾರ ತುರ್ತಾಗಿ ಮಂಗಳೂರಿಗೆ ಧಾವಿಸಿ ಬಂದಿದ್ದರು.

ಮಂಗಳೂರಿಗೆ ಬಂದ ಎಡಿಜಿಪಿ ತನಿಖೆಯ ಪ್ರಗತಿ ಕುರಿತಂತೆ ಮಾಹಿತಿ ಪಡೆಯಲು ಬೆಳ್ಳಾರೆಗೆ ಧಾವಿಸಿದ್ದರು. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ಉಡುಪಿ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿಗಳು ಮತ್ತು ಎನ್‌ ಐಎ ಅಧಿಕಾರಿಗಳ ಜಂಟಿ ಸಭೆ ಕರೆದು ಪರಾಮರ್ಶೆ ನಡೆಸಿ ತನಿಖೆಗೆ ಮಾರ್ಗದರ್ಶನ ನೀಡಿದ್ದರು.

5 ಬೈಕ್‌ ಜೊತೆ ಕಾರು ಬಳಸಿದ ಹಂತಕರು..!
ಆರೋಪಿಗಳು ಕೊಲೆಗೆ ಎರಡು ಬೈಕ್‌ ಬಳಸಿದ್ದರೆ ಕೊಲೆಯಾದ ಬಳಿಕ ಪರಾರಿಯಾಗಲು ಮೂರು ಬೈಕ್‌ ಜೊತೆಗೆ ಒಂದು ಆಲ್ಟೋ ಕಾರು ಸೇರಿ ಒಟ್ಟು ಆರು ವಾಹಗಳನ್ನು ಬಳಸಿದ್ದ ಅಂಶ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಇವುಗಳಲ್ಲಿ ಕೆಲವನ್ನು ಈಗಾಗಲೇ ಜಪ್ತಿ ಮಾಡಲಾಗಿದೆ. ಜೊತೆಗೆ ಪ್ರವೀಣ್‌ ಹತ್ಯೆಗೆ ಬಳಸಿದ್ದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

16 ದಿನಗಳಲ್ಲಿ 7 ಸ್ಥಳ ಬದಲಾಯಿಸಿದ್ದ ಹಂತಕರು
ಪ್ರವೀಣ್ ಕೊಲೆ ಒಂದು ಪೂರ್ವನಿಯೋಜಿತ ಕೃತ್ಯವಾಗಿದ್ದರಿಂದ ಪ್ರವೀಣ್‌ ನೆಟ್ಟಾರುವಿನ ಚಲನ ವಲನಗಳ ಮೇಲೆ ನಿಗಾ ಇಡಲು ಪ್ರಮುಖ ಆರೋಪಿಗಳು ಶಫೀಕ್‌ ಮನೆಯಲ್ಲಿಯೇ ಉಳಿದುಕೊಂಡಿದ್ದರು.

ಜೊತೆಗೆ ಮೊದಲೇ ರೆಡಿಯಾಗಿದ್ದ ಆರೋಪಿಗಳು ಬೈಕ್‌ ಮೂಲಕ ಕೇರಳ, ಚಿಕ್ಕಮಗಳೂರು ಕಡೆಗೆ ಡೈವರ್ಟ್‌ ಆಗುತ್ತಿದ್ದಂತೆ ಅವರಿಗೆ ಹಲವು ಕಡೆಗಳಲ್ಲಿ ಆಶ್ರಯ ನೀಡಿದ್ದರು. ಕೇವಲ 16 ದಿನಗಳಲ್ಲಿ ಒಟ್ಟು 7 ಕಡೆ ಸ್ಥಳ ಬದಲಿಸಿದ್ದರು ಎಂಬ ಬಗ್ಗೆ ಅಂಶ ಕೂಡ ತನಿಖೆಯಲ್ಲಿ ಬಯಲಾಗಿದೆ.

3-4 ದಿನಗಳಲ್ಲಿ ಎನ್‌ಐಗೆ ಹಸ್ತಾಂತರ
ಈ ಪ್ರಕರಣ ಈಗಾಗಲೇ ಎನ್‌ಐಎಗೆ ಹಸ್ತಾಂತರಿಸಲಾಗಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ನೇತೃತ್ವದಲ್ಲಿ ಬಂಧಿಸಿದ 10 ಆರೋಪಿಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನ ಸೇರಿದಂತೆ ಎಲ್ಲಾ ಪ್ರಕ್ರಿಯೆ ಮುಗಿಸಿ 3-4 ದಿನಗಳಲ್ಲಿ ಎನ್‌ಐಎಗೆ ಹಸ್ತಾಂತರಿಸುತ್ತೇವೆ. ಮತ್ತೆ ಎನ್‌ಐಎ ಅಧಿಕಾರಿಗಳು ಈ ಪ್ರಕರಣವನ್ನು ತನಿಖೆ ನಡೆಸಲಿದ್ದಾರೆ ಎಂದು ಅಲೋಕ್‌ ಕುಮಾರ್‌ ಹೇಳಿದ್ದಾರೆ.

ಪಿಎಫ್‌ಐ ಹಾಗೂ ಎಸ್‌ಡಿಪಿಐ ಲಿಂಕ್‌
ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಈವರೆಗೆ ಬಂಧಿತರಲ್ಲಿ ಹೆಚ್ಚಿನವರಿಗೆ ಪಿಎಫ್‌ಐ ಹಾಗೂ ಎಸ್‌ಡಿಪಿಐ ಲಿಂಕ್‌ ಇದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ಈಗಾಗಲೇ ತಿಳಿಸಿದ್ದಾರೆ. ಪಿಎಫ್‌ಐನಲ್ಲಿ ತನ್ನ ಸಂಸ್ಥೆಯ ಸದಸ್ಯರ ಹೆಸರು ನೋಂದಣಿಯ ಪ್ರಕ್ರಿಯೆ ಇಲ್ಲ. ಆದರೂ ಅವರು ಅದರಲ್ಲಿ ಸಕ್ರಿಯವಾಗಿದ್ದ ಬಗ್ಗೆ ಚಾರ್ಜ್‌ಶೀಟ್‌ನಲ್ಲಿ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.
ಸದ್ಯ 16 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಯ ಪೊಲೀಸರ ಸಂಯುಕ್ತ ಕಾರ್ಯಾಚರಣೆಯಿಂದ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?

Published

on

ಮಂಗಳೂರು : ಕೆಲವೊಮ್ಮೆ ನಾವು ಕೆಟ್ಟ ಮಾತುಗಳನ್ನಾಡುವಾಗ ನಮ್ಮ ಹಿರಿಯರು ತಡೆಯುತ್ತಾರೆ. ಬಿಡ್ತು ಅಂತಾ ಹೇಳು ಎಂದು ಹೇಳಿದ ಅನುಭವ ನಿಮಗೂ ಆಗಿರಬಹುದು. ನಮ್ಮ ಹಿರಿಯರು ಹೇಳುವ ಪ್ರಕಾರ ನಾವು ಕೆಟ್ಟ ಮಾತುಗಳನ್ನಾಡುವಾಗ ಅಶ್ವಿನಿ ದೇವತೆಗಳು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುತ್ತಾರೆ. ಈ ಕಾರಣಕ್ಕಾಗಿ ಅವರು ನಾವು ಬೇಜಾರಲ್ಲಿ ಏನಾದರೂ ತಪ್ಪಿ ಮಾತನಾಡಿದಾಗ ಬಿಡ್ತು ಎಂದು ಹೇಳುವಂತೆ ನಮಗೆ ಹೇಳುತ್ತಿದ್ದರು. ಹಾಗಾದರೆ ಈ ಅಸ್ತು ದೇವತೆಗಳು ಯಾರು.? ಇವರು ಅಸ್ತು ಅಂದಾಕ್ಷಣ ನಾವು ಆಡಿದ ಮಾತುಗಳು ನಿಜವಾಗುತ್ತದೆಯೇ..?

ಅಶ್ವಿನಿ ದೇವತೆಗಳು ಯಾರು.?

ಅಶ್ವಿನಿ ದೇವತೆಯರು ಅಂದರೆ ಸೂರ್ಯಪುತ್ರರು. ಭಗವಾನ್‌ ಸೂರ್ಯ ದೇವನಿಗೆ ಮತ್ತು ಸಂಧ್ಯಾದೇವಿಗೆ ಜನಿಸಿದ ಅವಳಿ ಮಕ್ಕಳು. ಇವರು ಅದೃಷ್ಟದ ದೇವತೆಗಳಾಗಿದ್ದು, ಅಸ್ತು ಅಸ್ತು ಎಂದು ಸದಾ ಪಠಿಸುವ ದೇವರು. ಇವರನ್ನು ಅಶ್ವಿನಿ ಕುಮಾರರೆಂದು, ದೇವತೆಗಳ ವೈದ್ಯರೆಂದು ಪರಿಗಣಿಸಲಾಗುತ್ತದೆ. ಅಶ್ವಿನಿ ದೇವತೆಗಳ ರೂಪವೇ ವಿಚಿತ್ರ. ಯಾಕೆಂದರೆ ಈ ಅವಳಿ ಅಶ್ವಿನಿ ಕುಮಾರರದ್ದು ಮಾನವ ದೇಹವಾದರೆ, ಕುದುರೆಯ ಮುಖ. ಆದರೂ ನೋಡಲು ಅತ್ಯಂತ ಆಕರ್ಷಕರಾಗಿದ್ದರು.

ಅಶ್ವಿನಿ ದೇವತೆಗಳಿಗೆ ಕುದುರೆ ಮುಖ ಬರಲು ಕಾರಣವೇನು.?

ಒಮ್ಮೆ ಸೂರ್ಯ ದೇವನ ಪತ್ನಿಯಾದ ಸಂಧ್ಯಾ ದೇವಿಯು ಸೂರ್ಯ ದೇವನ ತಾಪವನ್ನು ತಡೆಯಲಾರದೆ ಕಷ್ಟಕ್ಕೆ ಸಿಲುಕಿಕೊಳ್ಳುತ್ತಾಳೆ. ಇದನ್ನು ನೋಡಿದ ಸೂರ್ಯ ದೇವನು ತನ್ನ ತಾಪವನ್ನು ಕಡಿಮೆ ಮಾಡಿಕೊಳ್ಳಲು ಮುಂದಾಗುತ್ತಾನೆ. ಆಗ ಸಂಧ್ಯಾ ದೇವಿಯು ಸೂರ್ಯದೇವನು ನನಗಾಗಿ ತನ್ನ ತಾಪವನ್ನು ಇನ್ನೂ ಕಡಿಮೆ ಮಾಡಿಕೊಂಡರೆ ಜಗತ್ತಿನಲ್ಲಿರುವ ಎಲ್ಲಾ ಜೀವರಾಶಿಗಳಿಗೆ ಅಪಾರ ಕಷ್ಟಗಳು ಉಂಟಾಗುತ್ತವೆ ಎಂದು ಯೋಚಿಸಿ, ಹಿಮಾಲಯ ಪರ್ವತ ದತ್ತ ಸ್ವಲ್ಪ ವಿಶ್ರಾಂತಿಯನ್ನು ಪಡೆದುಕೊಳ್ಳಲು ಹೋಗುತ್ತಾಳೆ.

ಅಲ್ಲಿ ಯಾರಿಗೂ ಗುರುತು ಸಿಗದ ಹಾಗೆ ಕುದುರೆಯ ಅವತಾರವನ್ನು ತಾಳಿ ಹಿಮಾಲಯದ ತಪ್ಪಲಿನಲ್ಲಿ ಹೋಗುತ್ತಿರುವಾಗ ಸೂರ್ಯ ದೇವನು ಕುದುರೆಯ ರೂಪದಲ್ಲಿ ಇರುವ ಸಂಧ್ಯಾ ದೇವಿಯನ್ನು ಗುರುತಿಸಿ ತಾನು ಕೂಡ ಕುದುರೆಯ ರೂಪವನ್ನು ತೆಗೆದುಕೊಳ್ಳುತ್ತಾನೆ. ಅಶ್ವಗಳ ಅವತಾರದಲ್ಲಿ ಇವರಿಬ್ಬರ ನಡುವೆ ನಡೆದ ಮಿಲನದ ಸಂಕೇತವಾಗಿ ಜನಿಸಿದವರೇ ಅಶ್ವಿನಿ ದೇವತೆಗಳು. ಹಾಗಾಗಿ ಅವರಿಗೆ ಹುಟ್ಟಿದ ಮಕ್ಕಳಿಗೂ ಕುದುರೆಯ ಮುಖ ಇರುತ್ತದೆ. ಇನ್ನು ಕೆಲವು ಕಥೆಗಳಲ್ಲಿ ಅಶ್ವಿನಿ ದೇವತೆಗಳು ಸೂರ್ಯ ಮತ್ತು ಮೋಡದ ಪುತ್ರರು ಎಂದು ಹೇಳಲಾಗಿದೆ.

ಅಶ್ವಿನಿ ದೇವತೆಗಳ ಮಹತ್ವ:

ಅಶ್ವಿನಿ ದೇವತೆಗಳಿಗೆ ಹಿಂದೂ ಧರ್ಮದಲ್ಲಿ ಮಹತ್ತರ ಸ್ಥಾನವನ್ನು ನೀಡಲಾಗಿದೆ. ಮುಸ್ಸಂಜೆ ಸಮಯವನ್ನು ಅಂದರೆ ಸೂರ್ಯ ಮುಳುಗುವುದಕ್ಕಿಂತ ಮೊದಲು 24 ನಿಮಿಷಗಳನ್ನು ಅಶ್ವಿನಿ ದೇವತೆಗಳ ಸಮಯವೆಂದು ಹೇಳುತ್ತಾರೆ. ಈ ಸಮಯದಲ್ಲಿ ಅಶ್ವಿನಿ ದೇವತೆಗಳು ಚಿನ್ನದ ಕುದುರೆಯಲ್ಲಿ ಸಂಚಾರವನ್ನು ಮಾಡುತ್ತಾರೆ ಎನ್ನುವುದು ನಂಬಿಕೆ. ಈ ಸಮಯದಲ್ಲಿ ಅಪಶಕುನದಂತಹ ಮಾತುಗಳನ್ನು ಆಡಬಾರದು, ಸುಳ್ಳನ್ನು ಹೇಳಬಾರದು, ಇನ್ನೊಬ್ಬರ ಮನಸ್ಸಿಗೆ ನೋವಾಗುವಂತಹ ಪದಗಳನ್ನು ಬಳಸಬಾರದು, ಮಲಗಬಾರದು ಎಂದು ಹೇಳಲಾಗುತ್ತದೆ. ಅಶ್ವಿನಿ ದೇವತೆಗಳು ಅಸ್ತು, ಅಸ್ತು ಎಂದು ನುಡಿಯುತ್ತಿರುತ್ತಾರೆ. ನಾವು ಒಂದು ವೇಳೆ ಅಪಶಕುನ ಮಾತನಾಡಿದಾಗ ಅವರು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುವ ಕಾರಣಕ್ಕಾಗಿ ಯಾವಾಗಲೂ ನಾವು ಒಳ್ಳೆಯದನ್ನೇ ಮಾತನಾಡಬೇಕು.

ಒಟ್ಟಾರೆಯಾಗಿ ಹೇಳುವುದಾದರೆ ಅಶ್ವಿನಿ ದೇವತೆಗಳು ನಾವು ಒಳ್ಳೆಯದನ್ನ ಮಾತನಾಡಿದರೆ ಒಳ್ಳೆಯದೇ ಬಯಸುತ್ತಾರೆ ಹಾಗೆಯೇ ಕೆಟ್ಟದ್ದನ್ನೇ ಮಾತನಾಡಿದರೇ ಕೆಟ್ಟದ್ದು ಬಯಸುತ್ತಾರೆ ಎನ್ನುವುದು ಜನರ ನಂಬಿಕೆ.

Continue Reading

DAKSHINA KANNADA

ವೋಟ್ ಮಾಡಿ, ಊಟ ಮಾಡಿ: ಹೋಟೆಲ್‌ಗಳಲ್ಲಿ ಸಿಗಲಿದೆ ಫ್ರೀ ದೋಸೆ, ಸಿಹಿ ತಿಂಡಿ!

Published

on

ಬೆಂಗಳೂರು: ಮತದಾನದ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಮತ್ತು ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಕೆಲವು ಹೋಟೆಲ್‌ಗಳು ವಿಶಿಷ್ಟ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿವೆ. ಕಳೆದ ವರ್ಷ ವಿಧಾನ ಚುನಾವಣೆಯಲ್ಲಿ ಮಾಡಿದಂತೆಯೇ ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿ ಬಂದವರಿಗೆ ಉಚಿತ ಆಹಾರ, ರಿಯಾಯಿತಿ ದರದಲ್ಲಿ ತಿಂಡಿ ನೀಡುವ ಬಗ್ಗೆ ಘೋಷಣೆ ಮಾಡಿವೆ.

ವೋಟ್ ಮಾಡಿ, ಊಟ ಮಾಡಿ:

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಹೋಟೆಲ್‌ ವೋಟ್ ಮಾಡಿ, ಊಟ ಮಾಡಿ’ ಅಭಿಯಾನದಡಿ ಮತದಾನದ ದಿನದಂದು ಮತದಾನ ಮಾಡಿದ ಗುರುತು ತೋರಿಸಿದವರಿಗೆ ಬೆಣ್ಣೆ ದೋಸೆ, ಲಡ್ಡು ಮತ್ತು ಜ್ಯೂಸ್ ನೀಡುವುದಾಗಿ ಘೋಷಿಸಿದೆ. 2018 ರ ವಿಧಾನಸಭಾ ಚುನಾವಣೆ ವೇಳೆಯೂ ಹೋಟೆಲ್ ಇಂತಹ ಕೊಡುಗೆ ನೀಡಿತ್ತು.

ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ನಮ್ಮ ಹಕ್ಕು. ಈ ಕುರಿತು ಜಾಗೃತಿ ಮೂಡಿಸುವ ನಮ್ಮ ನಿರಂತರ ಪ್ರಯತ್ನದ ಭಾಗವಾಗಿ ಕೆಲವು ಹೋಟೆಲ್​​ಗಳು ಕೆಲವು ತಿನಿಸುಗಳನ್ನು ರಿಯಾಯಿತಿ ದರದಲ್ಲಿ ಅಥವಾ ಉಚಿತವಾಗಿ ಮತದಾನದ ದಿನದಂದು ನೀಡುತ್ತವೆ. ಸಿಹಿತಿಂಡಿಗಳು ಮತ್ತು ಕೇಕ್‌ಗಳಂತಹ ಕೆಲವು ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡುತ್ತಿವೆ.

SawaariZimmedariKi ಅಭಿಯಾನದಡಿ ಶುಕ್ರವಾರ ಹಿರಿಯ ನಾಗರಿಕರು ಮತ್ತು ವಿಕಲಚೇತನ ಮತದಾರರಿಗೆ ಉಚಿತ ಆಟೋರಿಕ್ಷಾ ಮತ್ತು ಕ್ಯಾಬ್ ಸೇವೆ ದೊರೆಯಲಿದೆ.
ಈ ವಿಶೇಷ ಸೇವೆಯನ್ನು ಪಡೆಯಲು ಮತದಾರರು ‘VOTENOW’ ಕೋಡ್ ಅನ್ನು ಬಳಸಬಹುದು ಎಂದು Rapido ತಿಳಿಸಿದೆ.

ಬಿಡದಿ ಬಳಿಯ ಜನಪ್ರಿಯ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್ಲಾ, ಮತದಾನದ ಗುರುತು ಪ್ರದರ್ಶಿಸುವವರಿಗೆ ಏಪ್ರಿಲ್ 26, 27 ಮತ್ತು 28 ರಂದು ಟಿಕೆಟ್‌ ಮೇಲೆ ಶೇಕಡಾ 15 ರಷ್ಟು ರಿಯಾಯಿತಿಯನ್ನು ಘೋಷಿಸಿದೆ.

Continue Reading

BANTWAL

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ

Published

on

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.

ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.

ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್‌ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.

Continue Reading

LATEST NEWS

Trending