ಅದಮಾರು ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಕಲಸಿದ್ದತೆ….
ಪಡುಬಿದ್ರಿ: ಲಾಕ್ ಡೌನ್ ಹಿನ್ನಲೆ ಬಾಕಿಯುಳಿದಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯು ಜೂನ್ 18 ರಂದು ನಡೆಸಲು ಸರಕಾರ ನಿರ್ಧರಿಸಿದ್ದು,
ಅದಮಾರು ವಿಶ್ವಪ್ರಿಯತೀರ್ಥ ಸ್ವಾಮೀಜಿ ಅದ್ಯಕ್ಷತೆಯ ಅದಮಾರು ಶ್ರೀ ಪೂರ್ಣ ಪ್ರಜ್ಞ ವಿದ್ಯಾಸಂಸ್ಥೆಯಲ್ಲಿ ಜೂನ್ 18ರ ಗುರುವಾರ ಸುಗಮವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆಯ ಜೊತೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಈ ಬಗ್ಗೆ ಸಂಸ್ಥೆಯ ಪ್ರಾಂಶುಪಾಲರಾದ ರಾಮಕೃಷ್ಣ ಪೈ ಮಾತನಾಡಿ, ಪರೀಕ್ಷೆಯ ಕುರಿತು ಈಗಾಗಲೇ ನಾವು ಪೂರ್ವ ತಯಾರಿಯನ್ನು ನಡೆಸಲಾಗಿದೆ.
ಸುಮಾರು 221 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ವಿದ್ಯಾ ಸಂಸ್ಥೆಯಲ್ಲಿ ಸಿಸಿಟಿವಿ ಅಳವಡಿಸಲಾದ ಸುಸಜ್ಜಿತ ಹತ್ತು ಪರೀಕ್ಷಾ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ.
ಅಲ್ಲದೆ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯುವ ಅವಕಾಶ ನೀಡಲಾಗುವುದು.
ಪರೀಕ್ಷೆಗೆ ಆಗಮಿಸಲಿರುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಸ್ಯಾನಿಟೈಸ್ ಮಾಡಲಾದ ನಾಲ್ಕು ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗಿದೆ.
ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ಪ್ರತಿಯೊಬ್ಬರ ಉಷ್ಣತೆ ತಪಾಸಣೆ ಮಾಡುವ ಮೂಲಕ ಸಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲೆ ಡಾ.ಒಲಿವಿತಾ ಡಿಸೋಜ, ಕಛೇರಿ ಮೇಲ್ವಿಚಾರಕರಾದ ಎಚ್.ಸತೀಶ್ ಹಂದೆ, ಸಂಸ್ಥೆಯ ಕಾರ್ಯದರ್ಶಿ ನ್ಯಾಯವಾದಿ ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.