Connect with us

BELTHANGADY

ಬೆಳ್ತಂಗಡಿಯಲ್ಲಿ ಕೊಲೆಯಾದ ಹಿಂದೂ ಹುಡುಗನ ಬಗ್ಗೆ ಹಾಲಿ ಶಾಸಕ ಒಂದೇ ಒಂದು ಶಬ್ದ ಮಾತನಾಡಿಲ್ಲ: ಮಾಜಿ ಶಾಸಕ ವಸಂತ ಬಂಗೇರ

Published

on

ಮಂಗಳೂರು: ಬೆಳ್ತಂಗಡಿ ಶಾಸಕರು ಹಿಂದೂಗಳ ಪರವಾಗಿರುವವರು, ಕೆಲದಿನಗಳ ಹಿಂದೆ ಬೆಳ್ತಂಗಡಿಯಲ್ಲಿ ಕೊಲೆಯಾದ ಹಿಂದೂ ಹುಡುಗನ ಪರವಾಗಿ ಮಾತನಾಡಬೇಕಿತ್ತು.

ಆದರೆ ಶಾಸಕರು ಒಂದೇ ಒಂದು ಶಬ್ದ ಮಾತನಾಡಿಲ್ಲ. ಕೊಲೆಯಾದ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಎಂದು ಮಾಜಿ ಶಾಸಕ ವಸಂತ ಬಂಗೇರಾ ಹೇಳಿದ್ದಾರೆ.

ಮಂಗಳೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಳ್ತಂಗಡಿಯಲ್ಲಿ ಬಜರಂಗದಳದ ಕಾರ್ಯಕರ್ತ ಕೃಷ್ಣ ಅಲಿಯಾಸ್ ಕಿಟ್ಟನಿಂದ ಕೊಲೆಯಾದ ದಿನೇಶ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ.

ಆರೋಪಿಯ ಸಹೋದರರು ಬಿಜೆಪಿಯಲ್ಲಿದ್ದುಕೊಂಡು ಹೊಯ್ಗೆ, ಮರದ, ಗೋಸಾಗಾಟ, ಗೋಮಾಂಸ ದಂಧೆ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷನ ಸಾವಿನಲ್ಲಿ ಬಿಜೆಪಿಗರು ರಾಜಕೀಯ ಮಾಡಿದರು. ಆದರೆ ನಾವು ಹೆಣ ರಾಜಕೀಯ ಮಾಡಿಲ್ಲ. ಕೊಲೆಯಾದ ದಿನೇಶ್‌ ಅವರಿಗೆ ಪತ್ನಿ, 3 ಮಕ್ಕಳು ಹಾಗೂ ವೃದ್ದೆ ತಾಯಿ ಇದ್ದಾರೆ.

ಕೊಲೆಯ ಬಗ್ಗೆ ಕೆಪಿಸಿಸಿ ಅಧ್ಯಕ್ಷ, ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರಿಗೂ ಮನವಿ ಪತ್ರ ನೀಡಲಿದ್ದೇವೆ. ಮೃತ ದಿನೇಶ್‌ ಅವರಿಗೆ ನಿಧಿ ಸಂಗ್ರಹದ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಹೇಳಿದರು.
ಉಡುಪಿ ಮೂಲದ ಮುಸ್ಲಿಂ ಯುವಕ ಹಿಂದೂ ಯುವತಿಗೆ ಆರೋಪಿಯ ಅಣ್ಣ ಹಾಗೂ ಬಜರಂಗದಳದ ಜಿಲ್ಲಾ ಸಂಚಾಲಕ ಭಾಸ್ಕರ ಎಂಬಾತನು ದೇವಸ್ಥಾನದಲ್ಲಿ ಮದುವೆ ಮಾಡಿಸಿದ್ದಾನೆ. ಇದು ಯಾವ ಜಿಹಾದ್‌ ಎಂಬುವುದು ತಿಳಿಯುತ್ತಿಲ್ಲ.


ಪೊಲೀಸ್‌ ಠಾಣೆಗೂ ಬಂದು ಧಮ್ಕಿ ಹಾಕಿದ್ದ ಆರೋಪಿ
ಮೃತ ದಿನೇಶನ ತಾಯಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಿಸುತ್ತಿದ್ದಾಗ ಅಲ್ಲಿಗೆ ಬಂದ ಭಾಸ್ಕರ ಕೇಸು ದಾಖಲಿಸದಂತೆ ಧಮ್ಕಿ ಸಹ ಹಾಕಿದ್ದ, ಪೊಲೀಸರಿಗೂ ಟ್ರಾನ್ಸ್‌ಫರ್‌ ಮಾಡುವ ಬೆದರಿಕೆಯನ್ನೊಡ್ಡಿದ್ದ ಎಂದು ಹೇಳಿದರು.

ಆದರೂ ಪೊಲೀಸರು ಕೇಸು ದಾಖಲಿಸಿ ಯಾವುದೇ ಬೆದರಿಕೆ ಬಗ್ಗದೇ ಆರೋಪಿಯನ್ನು ಬಂಧಿಸಿರುವುದು ಶ್ಲಾಘನೀಯ ಎಂದು ಹೇಳಿದರು.

‘ಅವರು ರಕ್ತ ಕುಡಿಯುವವರು’
ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ಮೃತ ದಿನೇಶ್‌ ತಾಯಿ ಮಾತನಾಡಿ, ನನ್ನ ಮಗ ಸಾಧು ಸ್ವಭಾದವ.

ಯಾರೊಂದಿಗೂ ಜಗಳ ಮಾಡುತ್ತಿರಲಿಲ್ಲ. ಕೊಲೆಗೈದ ಕೃಷ್ಣ ಅಲಿಯಾಸ್ ಕಿಟ್ಟ ಹಾಗೂ ದಿನೇಶ್‌ ಮಧ್ಯೆ ಪೂರ್ವ ದ್ವೇಷ ಇರಲಿಲ್ಲ.

‘ನಿನಗೆ ಆಸ್ತಿಯ ದಾಖಲೆ ಪತ್ರವನ್ನು ನಾನು ಕಾಂಗ್ರೆಸ್‌ ಶಾಸಕ ವಸಂತ ಬಂಗೇರ ಅವರ ಮಾಡಿಸಿದ್ದೇ ನಾನು ಎಂದಾಗ ಆರೋಪಿ ಕಾಂಗ್ರೆಸ್‌ನವರ ಸುದ್ದಿ ನನ್ನ ಹತ್ತಿರ ಮಾತನಾಡಬೇಡ ಎಂದು ದೊಣ್ಣೆಯಿಂದ ಹೊಡೆದು ಗಂಭೀರ ಗಾಯಗೊಳಿಸಿ ಸಾಯಿಸಿದ್ದಾನೆ ಎಂದು ಆರೋಪಿ ತಾಯಿ ಪದ್ಮಾವತಿ ಆರೋಪಿಸಿದ್ದಾರೆ.

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

LATEST NEWS

Trending