Connect with us

LATEST NEWS

ಉಪ್ಪಿನಂಗಡಿ ಅಶಾಂತಿ ಪ್ರಕರಣ; ಪಿಎಫ್‌ಐ, ಸಂಘ ಪರಿವಾರ ಮತ್ತು ಪೊಲೀಸ್ ಇಲಾಖೆ ಸಮಾನ ಹೊಣೆಗಾರರು-ಸಿಪಿಐ(ಎಂ) ಆರೋಪ

Published

on

ಮಂಗಳೂರು: ಉಪ್ಪಿನಂಗಡಿ ಪೊಲೀಸ್ ಠಾಣೆಯ ಎದುರು ಸಂಭವಿಸಿದ ಲಾಠಿಚಾರ್ಜ್ ಮತ್ತು ಅಶಾಂತಿಯ ಪ್ರಕರಣಗಳು ಜಿಲ್ಲೆಯಲ್ಲಿ ಕಳೆದ 8 ತಿಂಗಳಿನಿಂದ ನಡೆದುಕೊಂಡು ಬರುತ್ತಿರುವ ಸಂಘ ಪರಿವಾರ ಮತ್ತು ಪಿಎಫ್‌ಐ ಸಂಘಟನೆಗಳು ಸಂಯೋಜಿಸಿ ನಿರ್ದೇಶಿಸುತ್ತಿರುವ ಮತೀಯ ಹುನ್ನಾರ ಮತ್ತು ಕೋಮು ಗಲಭೆಗೆ ವೇದಿಕೆ ನಿರ್ಮಿಸುವ ಪೂರ್ವ ಯೋಜಿತ ಕೃತ್ಯಗಳ ಮುಂದುವರಿದ ಭಾಗವೇ ಆಗಿದೆ.

ವಿದ್ಯಾರ್ಥಿಗಳ ಮೇಲೆ ಹಲ್ಲೆ, ಭಿನ್ನ ಧರ್ಮಿಯ ಸಹಭೋಜನ ಮತ್ತು ಸಹಕೂಟಗಳ ಮೇಲೆ ಗುಂಪು ಹಲ್ಲೆ, ಪರಸ್ಪರ ವ್ಯಾಪಾರ-ವ್ಯವಹಾರಗಳ ಮೇಲೆ ದಾಂಧಲೆ,

ಲವ್ ಜಿಹಾದ್ ಕಟ್ಟುಕತೆಗಳು, ದನ ಕಳ್ಳತನ ಮತ್ತು ನಾಗಬನ ಧ್ವಂಸದ ಪ್ರಕರಣ ಹಾಗೂ ಪೂಜಾ ಸ್ಥಳಗಳ ಅಪವಿತ್ರ ಇವೇ ಮೊದಲಾದ ಸಮಾಜ ಬಾಹಿರ ಕೃತ್ಯಗಳು ಒಂದಾದ ಮೇಲೆ ಒಂದರಂತೆ ಜಿಲ್ಲೆಯಲ್ಲಿ ಕಳೆದ ೪ ತಿಂಗಳಿನಿಂದ ನಿರಂತರವಾಗಿ ನಡೆಯುತ್ತಿದೆ.

ಇವುಗಳ ಹಿಂದೆ ಸಂಘ ಪರಿವಾರದ ಸಂಘಟನೆಗಳ ಸಿದ್ಧಾಂತ ಮತ್ತು ಕರ‍್ಯಕರ್ತರು ಭಾಗಿಯಾಗಿದ್ದಾರೆ. ಅದೇ ರೀತಿ ಅದಕ್ಕೆ ಪ್ರತಿಯಾಗಿ ಪಿ.ಎಫ್.ಐ.ನ ಸಿದ್ಧಾಂತದಿಂದ ಪ್ರಭಾವಿತರಾದ ಕಾರ‍್ಯಕರ್ತರು ಕ್ರಿಯೆಗೆ ಪ್ರತಿಕ್ರಿಯೆ ಎಂಬ ನೆಲೆಯಲ್ಲಿ ಸಕ್ರೀಯವಾಗಿ ಸಮಾಜ ಬಾಹಿರ ಶಾಂತಿ ಭಂಗದ ಕೃತ್ಯಗಳಲ್ಲಿ ಭಾಗವಹಿಸಿ ಕಾನೂನನ್ನು ಕೈಗೆತ್ತಿಕೊಂಡಿರುತ್ತಾರೆ.

ಇಂತಹ ಸಂದರ್ಭಗಳಲ್ಲಿ ನೆಲದ ಕಾನೂನನ್ನು ಎತ್ತಿ ಹಿಡಿದು ಕಾನೂನಿನನ್ವಯ ಕಾರ‍್ಯ ಪ್ರವೃತ್ತರಾಗಿ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರು ಮತ್ತೆ ಇದೇ ಸಂಘಟನೆಗಳ ನಾಯಕರೊಂದಿಗೆ ಒಪ್ಪಂದ ನಡೆಸಿ ಅಪರಾಧಿಗಳನ್ನು ಹಸ್ತಾಂತರ ಮತ್ತು ಕೆಲವು ಘಟನೆಗಳಲ್ಲಿ ಅಪರಾಧಿಗಳ ಅದಲು ಬದಲಿನಂತಹ ಪರಸ್ಪರ ಸಂಯೋಜನೆಯನ್ನು ರೂಪಿಸುವ ಮೂಲಕ ಸಂಘ ಪರಿವಾರ ಮತ್ತು ಪಿಎಫ್‌ಐನಂತಹ ಸಮಾಜಬಾಹಿರ ಸಂಘಟನೆಗಳಿಗೆ ಕುಮ್ಮಕ್ಕು ನೀಡಿರುವುದನ್ನು ಕಾಣಬಹುದು.

ಆದುದರಿಂದ ಉಪ್ಪಿನಂಗಡಿಯಲ್ಲಿ ನಡೆದ ಅಹಿತಕರ ಘಟನೆಗಳು ಈ ಎರಡು ಸಮಾಜ ಬಾಹಿರ ಕೃತ್ಯಗಳ ವಾರೀಸುದಾರ ಸಂಘಟನೆಗಳೊಂದಿಗೆ ಪೊಲೀಸ್ ಇಲಾಖೆಯೂ ಹೊಣೆಯಾಗಿದೆ ಎಂದು ಸಿ.ಪಿ.ಐ(ಎಂ) ದ.ಕ.ಜಿಲ್ಲಾ ಸಮಿತಿ ಕಾರ‍್ಯದರ್ಶಿ ಕೆ.ಯಾದವ ಶೆಟ್ಟಿ ಅಭಿಪ್ರಾಯ ಪಟ್ಟಿದ್ದಾರೆ.

ಸಂಘ ಪರಿವಾರ ಹಾಗೂ ಪಿಎಫ್‌ಐ ಇತ್ತೀಚಿನ ಪೊಲೀಸ್ ಠಾಣೆಗಳ ಮುಂಭಾಗದ ಪ್ರತಿಭಟನೆಯಲ್ಲಿ ಭಜನೆ, ನಮಾಜಿನಂತಹ ಪವಿತ್ರ ಧಾರ್ಮಿಕ ಆಚರಣೆಗಳನ್ನು ಬಳಕೆ ಮಾಡಿರುವುದು ಸಮಾಜದಲ್ಲಿ ಮತೀಯ ದ್ರುವೀಕರಣ ಮತ್ತಷ್ಟು ಆಳಗೊಳಿಸುವ ವ್ಯವಸ್ಥಿತ ಹುನ್ನಾರವಾಗಿದೆ.

ಇಂತಹ ಅಪಾಯಕಾರಿ ಬೆಳವಣಿಗೆಗಳನ್ನು ಜನತೆ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ.

ಜಿಲ್ಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೂದಿಮುಚ್ಚಿದ ಕೆಂಡದಂತಿರುವ ಕೋಮು ಉದ್ವಿಘ್ನತೆಯ ಸಮಯದಲ್ಲಿ ಕಳೆದ ಎರಡು ತಿಂಗಳ ಹಿಂದೆ ನೀಡಿರುವ ಹೇಳಿಕೆ ಸಮಾಜ ಬಾಹಿರ ಕೃತ್ಯಗಳಲ್ಲಿರುವ ಸಂಘ ಪರಿವಾರದ ಕರ‍್ಯಕರ್ತರನ್ನು ಹುರಿದುಂಬಿಸಿದೆ.

ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ಮುಖ್ಯಮಂತ್ರಿ, ಉಸ್ತುವಾರಿ ಸಚಿವರು ಮತ್ತು ಬಿಜೆಪಿ ಪಕ್ಷದ ಸಂಸದರು, ಶಾಸಕರು ಮತ್ತು ನಾಯಕರುಗಳು ಪೊಲೀಸ್ ಇಲಾಖೆಯ ಸ್ವತಂತ್ರ ಕಾರ‍್ಯನಿರ್ವಹಣೆಯ ಮೇಲೆ ಪ್ರಭಾವ ಬೀರಿದ್ದಾರೆ.

ಇದರ ಪರಿಣಾಮವಾಗಿ ಜಿಲ್ಲೆಯ ಕೆಲವು ಪೊಲೀಸ್ ಠಾಣೆಗಳಲ್ಲಿ ಆಯುಧ ಪೂಜೆ ಆಚರಣೆಯು ಸಂಘ ಪರಿವಾರದ ಡ್ರೆಸ್ ಕೋಡಿನೊಂದಿಗೆ ನಡೆದಿದೆ. ಇದನ್ನು ಬಲವಾಗಿ ಉನ್ನತ ಪೊಲೀಸರು ಬೆಂಬಲಿಸಿ ಪ್ರತಿಪಾದಿಸಿರುವುದನ್ನು ಈ ಹಿನ್ನೆಲೆಯಲ್ಲಿ ಗಮನಿಸಬೇಕು.

ಅದೇ ರೀತಿ ಇತ್ತೀಚೆಗೆ ಕರಾವಳಿ ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಸಂಘ ಪರಿವಾರ ಪ್ರತಿಭಟನೆಯ ಭಾಗವಾಗಿ ಭಜನೆ ಹಾಡುವ ಕ್ರಮವನ್ನು ಪೊಲೀಸರು ತಡೆಯದಿರುವುದು.

ಇದೇ ರೀತಿಯಲ್ಲಿ ಉಪ್ಪಿನಂಗಡಿ ಠಾಣೆ ಆವರಣದಲ್ಲಿ ಪ್ರತಿಭಟನಾಕಾರರು ಧಾರ್ಮಿಕ ನಮಾಜನ್ನು ಕೂಡಾ ಮಾಡಲು ಅವಕಾಶ ನೀಡಿರುವುದು ಪೊಲೀಸ್ ಇಲಾಖೆಯ ದೌರ್ಬಲ್ಯವಾಗಿದೆ.

ಅಷ್ಟು ಮಾತ್ರವೇ ಅಲ್ಲದೆ ಕೆಲವು ಪೊಲೀಸ್ ಠಾಣೆಗಳಲ್ಲಿ ಗರ್ಭಿಣೆ ಮಹಿಳೆಯರಿಗೆ ಸಂಪ್ರದಾಯದ ಹಿನ್ನೆಲೆಯ ಸೀಮಂತನ ಇವೇ ಮೊದಲಾದ ಕರ‍್ಯಕ್ರಮಗಳನ್ನು ನಡೆಸುವ ಮೂಲಕ ಪೊಲೀಸ್ ಕರ್ತವ್ಯದ ಪರಿಧಿಯನ್ನು ದಾಟಿರುವ ಪ್ರಕರಣಗಳು ನಡೆದಿವೆ.

ಈ ರೀತಿಯ ಸಂಘ ಪರಿವಾರದ ಕ್ರಿಯೆ ಪಿಎಫ್‌ಐನಂತಹ ಸಂಘಟನೆಗಳ ಪ್ರತಿತಂತ್ರ ಮತ್ತು ಪೊಲೀಸರ ಓಲೈಕೆಯ ಅಧಿಕಾರ ತಂತ್ರಗಳು ಜಿಲ್ಲೆಯನ್ನು ಕೋಮು ಉದ್ವಿಘ್ನತೆ ಅಗ್ನಿ ಕುಂಡದ ಬಳಿ ತಂದಿರಿಸಿದೆ. ಜಿಲ್ಲೆಯ ಶಾಂತಿ, ಸಾಮರಸ್ಯ, ಸಹಬಾಳ್ವೆ ಮರೀಚಿಕೆಯಾಗಿದೆ.

ಕೊರೋನಾ ಸಾಂಕ್ರಮಿಕದಿಂದ ಮತ್ತು ಕೇಂದ್ರ, ರಾಜ್ಯ ಸರಕಾರದ ತಪ್ಪು ಆರ್ಥಿಕ ನೀತಿ, ಕೈಗಾರಿಕಾ ನೀತಿಯಿಂದ ವ್ಯಾಪಕ ಬಡತನ, ಹಸಿವು, ಬೆಲೆ ಏರಿಕೆ, ನಿರುದ್ಯೋಗದಿಂದ ಜಿಲ್ಲೆಯ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಹಿಳೆಯರ ಮೇಲೆ, ಅಪ್ರಾಪ್ತ ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರದ ಘಟನೆಗಳು ಹೆಚ್ಚಾಗುತ್ತಿದೆ.

ಇಂತಹ ಜ್ವಲಂತ ಸಮಸ್ಯೆಗಳು ಜನರನ್ನು ಕಾಡುತ್ತಿರುವಾಗ ಸಂಘ ಪರಿವಾರದ ಸಂಘಟನೆಗಳು ಮತ್ತು ಪಿ.ಎಫ್.ಐ. ಜನರನ್ನು ದಾರಿ ತಪ್ಪಿಸಿ ರಾಜಕೀಯ ಲಾಭ ಪಡೆಯಲು ಕೋಮು ದ್ವೇಷದ ವಿಷ ಪ್ರಸರಿಸುತ್ತಿರುವುದು ತೀವ್ರ ಖಂಡನೀಯ ಎಂದು ಕೆ.ಯಾದವ ಶೆಟ್ಟಿ ತಿಳಿಸಿದ್ದಾರೆ.

FILM

ಬಾಲಿವುಡ್ ಜನಪ್ರಿಯ ನಿರೂಪಕಿ ಭಾರತಿ ಸಿಂಗ್ ಆಸ್ಪತ್ರೆ ದಾಖಲು..!

Published

on

ಮುಂಬೈ: ಬಾಲಿವುಡ್ ನಿರೂಪಕಿ, ಹಾಸ್ಯ ನಟಿ ಭಾರತಿ ಸಿಂಗ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಡ್ಯಾನ್ಸ್ ದೀವಾನೆ ಸೀಸನ್ 4 ಅನ್ನು ಹೋಸ್ಟ್ ಮಾಡುತ್ತಿರುವ ಖ್ಯಾತ ನಿರೂಪಕಿ ಭಾರತಿ ಸಿಂಗ್  ತೀವ್ರ ಹೊಟ್ಟೆ ನೋವಿನಿಂದ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

bharathi

‘ಕಳೆದ ಮೂರು ದಿನಗಳಿಂದ ತೀವ್ರವಾದ ಹೊಟ್ಟೆ ನೋವನ್ನು ಅನುಭವಿಸುತ್ತಿದ್ದೇನೆ’ ಎಂದು ತನ್ನ ವ್ಲಾಗ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಆರಂಭದಲ್ಲಿ ಅದನ್ನು ಗ್ಯಾಸ್ಟ್ರೊನಲ್ ಅಥವಾ ಆಮ್ಲೀಯ ಅಸ್ವಸ್ಥತೆ ಆಗಿರಬಹುದೆಂದು ಭಾವಿಸಿ ನಿರ್ಲಕ್ಷ ಮಾಡಿದ್ದರಂತೆ. ಆದರೆ, ನೋವು ತಡೆದುಕೊಳ್ಳಲಾಗದೆ ವೈದ್ಯಕೀಯ ಚಿಕಿತ್ಸೆ ಪಡೆಯಲು ನಿರ್ಧರಿಸಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ವ್ಲಾಗ್‌ನಲ್ಲಿ ಹೇಳಿದ್ದಾರೆ. ಇನ್ನು ವೈದ್ಯಕೀಯ ಪರೀಕ್ಷೆ ಬಳಿಕ ಭಾರತಿಗೆ ಪಿತ್ತಕೋಶದಲ್ಲಿ ಕಲ್ಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.  ಏನೂ ತಿನ್ನಲು ಆಗುತ್ತಿಲ್ಲ ತಿಂದರೂ ವಾಂತಿ ಆಗುತ್ತಿದೆ ಎಂದ ಹೇಳಿದ ಅವರು ಭಾವುಕರಾದರು.

ಮುಂದೆ ಓದಿ..;‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?

ಈ ನಡುವೆ ಭಾರತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವುದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಬೇಗ ಚೇತರಿಸಿಕೊಳ್ಳುವಂತೆ ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಕಮೆಂಟ್‌ಗಳನ್ನು ಹಾಕಿದ್ದಾರೆ.

 

Continue Reading

DAKSHINA KANNADA

ಪ್ರವಾಸಿಗರಿಗೆ ಗುಡ್ ನ್ಯೂಸ್ : ಮತ್ತೆ ಆರಂಭವಾಯ್ತು ಲಕ್ಷದ್ವೀಪ – ಮಂಗಳೂರು ಸ್ಪೀಡ್ ಪ್ಯಾಸೆಂಜರ್ ಹಡಗು

Published

on

ಮಂಗಳೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಲಕ್ಷದ್ವೀಪದ ಬೀಚ್‌ನಲ್ಲಿ ವಾಯುವಿಹಾರ ನಡೆಸುವ ಮೂಲಕ ಲಕ್ಷದ್ವೀಪ ಬಾರಿ ಸುದ್ದಿಯಾಗಿತ್ತು. ಈ ವೇಳೆ ಮಂಗಳೂರು ಲಕ್ಷದ್ವೀಪ ನಡುವೆ ಈ ಹಿಂದೆ ಇದ್ದ ಪ್ರಯಾಣಿಕರ ಹಡಗು ಆರಂಭಿಸಲು ಬೇಡಿಕೆ ಕೂಡಾ ಆರಂಭವಾಗಿತ್ತು.

ಇದೀಗ ಲಕ್ಷದ್ವೀಪದ ಆಡಳಿತ ಮಂಗಳೂರಿಗೆ ಸ್ಪೀಡ್ ಪ್ಯಾಸೆಂಜರ್ ಹಡಗನ್ನು ಆರಂಭಿಸಿದೆ. ಗುರುವಾರ ಸಂಜೆ ಮಂಗಳೂರಿಗೆ ಆಗಮಿಸಿದ ಸ್ಪೀಡ್ ಪ್ಯಾಸೆಂಜರ್ ಬೋಟ್‌ನಲ್ಲಿ 150 ಜನ ಲಕ್ಷದ್ವೀಪವಾಸಿಗಳು ಆಗಮಿಸಿದ್ದಾರೆ.

ಪ್ರಯಾಣ ದರ ಎಷ್ಟು?


ಮಂಗಳೂರು ಲಕ್ಷದ್ವೀಪದ ನಡುವೆ ಮತ್ತೆ ಸಂಪರ್ಕ ಸೇತುವೆ ನಿರ್ಮಿಸಲು ಲಕ್ಷದ್ವೀಪ ಆಡಳಿತ ಸ್ಪೀಡ್ ಪ್ಯಾಸೆಂಜರ್ ಹಡಗು ಆರಂಭಿಸಿದೆ. ಕೋವಿಡ್ ಆರಂಭಕ್ಕೂ ಮೊದಲು ಮಂಗಳೂರು ಲಕ್ಷದ್ವೀಪದ ನಡುವೆ ಎರಡು ಪ್ರಯಾಣಿಕ ಹಡಗುಗಳು ಸಂಚಾರ ಮಾಡುತ್ತಿತ್ತು. ಸಾಕಷ್ಟು ಪ್ರಯಾಣಿಕರು ಮಂಗಳೂರು ಲಕ್ಷದ್ವೀಪ ನಡುವೆ ಪ್ರಯಾಣ ಮಾಡುವ ಮೂಲಕ ಅದರ ಅನುಕೂಲ ಪಡೆದುಕೊಂಡಿದ್ದರು.


ಲಕ್ಷದ್ವೀಪದವರಿಗೆ ತಮ್ಮ ದೈನಂದಿನ ಅವಶ್ಯಕತೆಗೆ ಮಂಗಳೂರು ಅವಲಂಬಿತರಾಗಿದ್ದರೆ, ಮಂಗಳೂರಿನ ಜನರಿಗೆ ಲಕ್ಷದ್ವೀಪ ವೀಕೆಂಡ್ ಪಾಯಿಂಟ್. ಆದ್ರೆ ಕೋವಿಡ್ ಕಾರಣದಿಂದ ಲಕ್ಷಾದ್ವೀಪಕ್ಕೆ ಇದ್ದ ಹಡಗಿನ ವ್ಯವಸ್ಥೆ ನಿಂತು ಹೋಗಿದ್ದು, ಈಗ ಮತ್ತೆ ಆರಂಭವಾಗಿದೆ. ಹಿಂದೆ 24 ಗಂಟೆ ಇದ್ದ ಪ್ರಯಾಣ ಕೇವಲ 5.30 ರಿಂದ 6 ಗಂಟೆಗಳಿಗೆ ಇಳಿದಿದೆ. ಹಡಗಿನಲ್ಲಿ ಎಲ್ಲಾ ವ್ಯವಸ್ಥೆ ಇರೋ ಕಾರಣದಿಂದ ಜನರು ಕೂಡಾ ಉತ್ಸಾಹದಿಂದ ಟಿಕೆಟ್ ಬುಕ್ ಮಾಡಿಕೊಂಡಿದ್ದಾರೆ. ಅಂದಹಾಗೆ, ಈ ಹೈ-ಸ್ಪೀಡ್ ಪ್ರಯಾಣಿಕ ಹಡಗಿನ ದರ ಕೇವಲ 450 ರೂ. ಆಗಿದೆ.

ಹೆಚ್ಚಿನ ಹಡಗಿಗೆ ಬೇಡಿಕೆ :


ಲಕ್ಷದ್ವೀಪದ ನಡುವೆ ಪ್ರಯಾಣಿಕರ ಹಡಗು ಆರಂಭದಿಂದ ಮಂಗಳೂರಿನಲ್ಲಿ ವ್ಯಾಪಾರ ವಹಿವಾಟು ಇನ್ನಷ್ಟು ಹೆಚ್ಚಾಗಲಿದೆ. ಅಷ್ಟೇ ಅಲ್ಲದೆ, ಲಕ್ಷದ್ವೀಪಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮಂಗಳೂರಿನಿಂದ ತೆರಳುವ ಮೂಲಕ ಅಲ್ಲೂ ಕೂಡಾ ಆರ್ಥಿಕ ಅಭಿವೃದ್ದಿ ಆಗಲಿದೆ.


ಸ್ಪೀಡ್ ಪ್ಯಾಸೆಂಜರ್ ಹಡಗು ಕನಿಷ್ಟ ಎರಡು ದಿನಕ್ಕೊಮ್ಮೆ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೋಗುವ ವ್ಯವಸ್ಥೆ ಮಾಡಬೇಕು ಅನ್ನೋದು ಸ್ಥಳೀಯರ ಆಗ್ರಹ. ಈಗ ಆರಂಭವಾಗಿರೋ ಹಡಗಿನಲ್ಲಿ ಸುಖಕರ ಪ್ರಯಾಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಪ್ರಯಾಣಿಕರಿಗೆ ಟಿವಿ, ಎಸಿ, ಸೇರಿದಂತೆ ಅಗತ್ಯ ಸೇವೆಗಳು ಲಭ್ಯವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಈ ಹಡಗಿನ ಬಳಕೆ ಮಾಡುವ ಸಾಧ್ಯತೆ ಇರುವ ಕಾರಣ ಹೆಚ್ಚಿನ ಹಡಗಿನ ವ್ಯವಸ್ಥೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಇದೀಗ ಆರಂಭಗೊಂಡಿರೋ ಪ್ರಯಾಣಿಕರ ಹಡಗು ಸೇವೆ ಜೂನ್ ತಿಂಗಳ ಬಳಿಕ ಸ್ಥಗಿತವಾಗಲಿದೆ.

ಇದನ್ನೂ ಓದಿ :  ‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?

ಮಳೆಗಾಲ ಕಳೆದ ಬಳಿಕ ಇದು ಮತ್ತೆ ಆರಂಭವಾಗುತ್ತದೆಯೋ ಇಲ್ಲವೋ ಅನ್ನೋದು ಇನ್ನೂ ನಿರ್ಧಾರವಾಗಿಲ್ಲ. ಆದ್ರೆ, ಮತ್ತೆ ಆರಂಭಿಸುವ ಬಗ್ಗೆ ಲಕ್ಷಾದ್ವೀಪ ಆಡಳಿತ ಭರವಸೆ ನೀಡಿದೆ. ಒಟ್ಟಾರೆ ಹೇಳೋದಾದ್ರೆ ಸದ್ಯಕ್ಕಂತೂ ಲಕ್ಷದ್ವೀಪಕ್ಕೆ ಸ್ಪೀಡ್ ಪ್ಯಾಸೆಂಜರ್ ಹಡಗು ಆರಂಭದಿಂದ ಮಂಗಳೂರಿನ ಜನರಿಗಂತೂ ಸಾಕಷ್ಟು ಖುಷಿಯಾಗಿರೋದಂತು ನಿಜ.

Continue Reading

LATEST NEWS

ಈಜಲು ಹೋದ ಅಣ್ಣ ನೀರು*ಪಾಲು.! ತಂಗಿಯ ವೀಡಿಯೋದಲ್ಲಿ ಸೆರೆಯಾಯ್ತು ಅಣ್ಣನ ಸಾ*ವಿನ ಕೊನೆ ಕ್ಷಣ..!

Published

on

ಕೋಲಾರ: ಕೃಷಿ ಹೊಂಡದಲ್ಲಿ ಈಜುತ್ತಿರುವುದನ್ನು ತಂಗಿ ವೀಡಿಯೋ ಮಾಡುತ್ತಿದ್ದಾಗಲೇ ಸಹೋದರ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆಯೊಂದು ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ನಾಗವಾಳ ಗ್ರಾಮದಲ್ಲಿಈ ಘಟನೆ ನಡೆದಿದೆ.

swim death

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ಮೈಸೂರಿನ ರಾಘವೇಂದ್ರ ನಗರ ನಿವಾಸಿ ಗೌತಮ್(26 ವ) ಮೃತ ದುರ್ದೈವಿ. ಗೌತಮ್ ತನ್ನ ತಂದೆಯ ಊರು ವೇಮಗಲ್ ಸಮೀಪದ ನಾಗಾವಾಳಕ್ಕೆ ಬಂದಿದ್ದರು. ಈ ವೇಳೆ ಕುಟುಂಬ ಸದಸ್ಯರು ಹಾಗೂ ತಂಗಿಯ ಜೊತೆ ಕೃಷಿ ಹೊಂಡದ ಬಳಿ ಹೋಗಿದ್ದಾರೆ.  ಅಲ್ಲಿ ತಂಗಿಯ ಬಳಿ ವೀಡಿಯೋ ಮಾಡಲು ಮೊಬೈಲ್ ಕೊಟ್ಟು ಹೊಂಡಕ್ಕೆ ಈಜಲು ಧುಮುಕಿದ್ದಾರೆ. ಸರಿಯಾಗಿ ಈಜಲು ಗೊತ್ತಿರದ ಗೌತಮ್ ನೀರಿಗೆ ಧುಮುಕಿದ್ದು, ಇತ್ತ ತಂಗಿ ಈಚೆ ಬಾ ಎಂದು ಕೂಗುವುದು ವೀಡಿಯೋದಲ್ಲಿ ರೆಕಾರ್ಡ್‌ ಆಗಿದೆ. ನೋಡು ನೋಡುತ್ತಿದ್ದಂತೆ ಗೌತಮ್ ನೀರಲ್ಲಿ ಮುಳುಗಿ ಉಸಿರು ಚೆಲ್ಲಿದ್ದಾರೆ. ಇನ್ನು ಈ ವೀಡಿಯೋದಲ್ಲಿ ಗೌತಮ್ ನೀರಿನಲ್ಲಿ ಮುಳುಗುವ ದೃಶ್ಯ ಸೆರಯಾಗಿದೆ. ಈ ಕುರಿತಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Continue Reading

LATEST NEWS

Trending