ಕುಕ್ಕೆ ಸುಬ್ರಹ್ಮಣ್ಯನ ಗರ್ಭಗುಡಿಯಲ್ಲಿ ನಡೆಯುವ ಪೂಜಾ ವಿಧಿವಿಧಾನದ ಲೈವ್ ನೀಡುವುದು ಅಸಾಧ್ಯದ ಮಾತು..
ಕುಕ್ಕೆ ಸುಬ್ರಹ್ಮಣ್ಯನ ಗರ್ಭಗುಡಿಯಲ್ಲಿ ನಡೆಯುವ ಪೂಜಾ ವಿಧಿವಿಧಾನದ ಲೈವ್ ನೀಡುವುದು ಅಸಾಧ್ಯದ ಮಾತು..
ಸುಳ್ಯ: ಕಳೆದ ಮಾ.23ರಂದು ಕೊರೊನಾ ಲಾಕ್ ಡೌನ್ ಘೋಷಣೆ ಆದ ಬಳಿಕ. ಕರಾವಳಿಯ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳನ್ನು ನಿರ್ಬಂಧಿಸಲಾಗಿತ್ತು.
ಮಾ.27ರ ಬಳಿಕ ದೇವಸ್ಥಾನವನ್ನು ಸಾರ್ವಜನಿಕರಿಗೆ ಮುಚ್ಚಲಾಗಿತ್ತು. ಆದರೆ ದೈನಂದಿನ ಪೂಜಾ ಕಾರ್ಯವನ್ನು ಮಾತ್ರ ನಡೆಸಲಾಗುತ್ತಿತ್ತು.
ಮೇ.3ರ ಬಳಿಕ ಲಾಕ್ ಡೌನ್ ನಿಯಮಗಳು ಸಡಿಲಿಕೆ ಆಗಿದ್ದು ಜಿಲ್ಲಾವಾರು, ರಾಜ್ಯವಾರು ಸಂಚಾರ ಆರಂಭವಾಗಿದೆ.
ಅಲ್ಲದೇ ಹೆಚ್ಚಿನ ಅಂಗಡಿಗಳು ತೆರೆದುಕೊಂಡಿದ್ದವು. ಬಾರ್, ವೈನ್ ಶಾಪ್ಗಳು ತೆರೆದುಕೊಂಡಿವೆ. ಆದರೆ ದೇವಸ್ಥಾನಗಳನ್ನು ತೆರೆದಿಲ್ಲ.
ಸರಕಾರ ಮದ್ಯದಂಗಡಿಗೆ ಅವಕಾಶ ಕೊಟ್ಟಿದೆ. ಆದರೆ ಪವಿತ್ರವಾದ ದೇವರ ದರ್ಶನ ಮತ್ತು ಪೂಜೆಗೆ ಅವಕಾಶ ಕೊಟ್ಟಿಲ್ಲ ಎಂದು ಸಾರ್ವಜನಿಕರು ಹೇಳಲಾರಂಭಿಸಿದ್ದರು.
ಇದರಿಂದಾಗಿ ಧಾರ್ಮಿಕ ದತ್ತಿ ಸಚಿವರು ಆನ್ ಲೈನ್ ಪೂಜಾ ಕ್ರಮದ ಬಗ್ಗೆ ಚಿಂತಿಸಿ ಸಲಹೆ ಪಡೆಯಲಾರಂಭಿಸಿದರು.
ಭಕ್ತರು ಆನ್ಲೈನ್ನಲ್ಲಿ ಪೂಜಾ ಹಣ ಪಾವತಿಸಿ, ದೇವಸ್ಥಾನದಲ್ಲಿ ಅವರಿಗೆ ಬೇಕಾದ ಪೂಜೆ ಮಾಡಿಸಿದರೆ ಅವರ ಮನೆಗೆ ಅಂಚೆ ಮೂಲಕ ಪ್ರಸಾದವನ್ನು ತಲುಪಿಸುವ ವ್ಯವಸ್ಥೆ ಮೊದಲೇ ಇದ್ದುದರಿಂದ,
ಅದೇ ಆನ್ಲೈನ್ ಪೂಜಾ ವ್ಯವಸ್ಥೆಯನ್ನು ರಾಜ್ಯದ ಪ್ರಮುಖ 50 ದೇವಸ್ಥಾನಗಳಲ್ಲಿ ಮಾಡುವಂತೆ ಸರಕಾರ ಆದೇಶಿಸಿದೆ.
ದ.ಕ. ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಗಳು ಆನ್ ಲೈನ್ ಪೂಜೆಯ 50 ದೇವಾಲಯಗಳ ಪಟ್ಟಿಯಲ್ಲಿವೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೇ. 26 ರಿಂದ ಆನ್ ಲೈನ್ ಪೂಜೆಯನ್ನು ಮಾಡಿಸಬಹುದಾಗಿದೆ ಹಾಗೂ ಪೂಜೆಯನ್ನು ಲೈವ್ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಸರ್ಕಾರ ಹೇಳಿಕೊಂಡಿದೆ.
ಈ ಬಗ್ಗೆ ಕೆಲವು ಗೊಂದಲಗಳು ದೇವಸ್ಥಾನದವರಿಗೆ, ಭಕ್ತರಿಗೆ ಉಂಟಾಗಿದೆ. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಇತ್ತೀಚೆಗೆ ಪತ್ರಿಕಾ ಹೇಳಿಕೆ ನೀಡಿದ್ದು,
ಅದರಂತೆ ಮೇ.26 ರ ಬಳಿಕ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಆನ್ ಲೈನ್ ಪೂಜೆಯ ವ್ಯವಸ್ಥೆ ಮಾಡುವುದಾಗಿ ಘೋಷಿಸಿದ್ದರು.
ಆದರೆ ಈ ಬಗ್ಗೆ ಯಾವುದೇ ದೇವಸ್ಥಾನಗಳು ರೆಡಿಯಾದಂತೆ ಕಾಣುವುದಿಲ್ಲ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದಲೂ ಈ ಬಗ್ಗೆ ಅಭಿಪ್ರಾಯವನ್ನು ಸರ್ಕಾರ ಕೇಳಿದ್ದು,
ಒಂದೊಮ್ಮೆ ಆನ್ ಲೈನ್ ಪೂಜೆಗೆ ಅವಕಾಶ ಮಾಡಿಕೊಟ್ಟರೆ ಯಾವೆಲ್ಲಾ ಪೂಜೆಯನ್ನು ಮಾಡಲು ಅವಕಾಶವಿದೆ ಎಂದು ಮಾಹಿತಿ ಕೇಳಿದ್ದು ಪೂರಕ ಮಾಹಿತಿ ಒದಗಿಸಲಾಗಿದೆ.
ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯಲ್ಲಿ ನಡೆಯುವ ಯಾವುದೇ ಪೂಜೆಯನ್ನು ಕ್ಯಾಮರಾ, ವಿಡಿಯೋ ಮುಖಾಂತರ ಸೆರೆ ಹಿಡಿಯವ ಪದ್ದತಿಯಿಲ್ಲ.
ಆದ ಕಾರಣ ಗರ್ಭ ಗುಡಿಯಲ್ಲಿ ನಡೆಯುವ ಧಾರ್ಮಿಕ ಪುಜಾ ವಿಧಿ ವಿಧಾನಗಳನ್ನು ಕ್ಯಾಮರಾ ಮೂಲಕ ಕ್ಲಿಕ್ಕಿಸಿ ಲೈವ್ ಮುಖಾಂತರ,
ಆನ್ಲೈನ್ ಪೂಜಾ ಆರ್ಡರ್ ಮಾಡಿದವರಿಗೆ ತಲುಪಿಸುವುದು ಅಷ್ಟೊಂದು ಸಮಂಜಸವಲ್ಲ ಎಂಬ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ.
ದೇವಸ್ಥಾನದ ಪ್ರಧಾನ ಅರ್ಚಕರ ಅಭಿಪ್ರಾಯ ಕೂಡ ಸಂಗ್ರಹಿಸಲಾಗಿದ್ದು ಇದೇ ಅಭಿಪ್ರಾಯ ಅವರು ಕೂಡ ನೀಡಿರುವುದಾಗಿದೆ.
ಇದನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ಗರ್ಭಗುಡಿ ಬಿಟ್ಟು ಹೊರ ಭಾಗದಲ್ಲಿ ನಡೆಯುವ ಪೂಜಾ ಸೇವೆಗಳನ್ನು ಭಾಗಶಃ ಲೈವ್ ವಿಡಿಯೋ ಮುಖಾಂತರ ಮಾಡಲು ಅವಕಾಶಗಳಿವೆ ಎನ್ನಲಾಗಿದೆ.
ಇಲ್ಲಿ ಹಿಂದೆಯೇ ಹಲವು ಸೇವೆಗಳನ್ನು ಆನ್ ಲೈನ್ ಮುಖಾಂತರ ಹಣ ಪಾವತಿಸಿ ಪೂಜೆ ಮಾಡಿಸುವ ವ್ಯವಸ್ಥೆ, ಪ್ರಸಾದವನ್ನು ಅಂಚೆ ಮೂಲಕ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿತ್ತು.
ಭಕ್ತರು ದೇವಸ್ಥಾನಕ್ಕೆ ಸಂಬಂಧಿಸಿದ ಎರಡು ಸೈಟ್ ಗಳಲ್ಲಿ ಬುಕ್ಕಿಂಗ್ ಮಾಡುತಿದ್ದರು.
ಒಂದೊಮ್ಮೆ ಆನ್ ಲೈನ್ ಮುಖಾಂತರ ಪೂಜೆ ಮಾಡಿಸುವುದಿದ್ದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಪೂಜೆ,
ಶೇಷ ಸೇವೆ, ಕಾರ್ತಿಕ ಪೂಜೆ, ಪಂಚಾಮೃತ ಅಭಿಷೇಕ, ಪವಮಾನ ಪಂಚಾಮೃತ ಅಭಿಷೇಕ, ಮಹಾಪೂಜೆ, ಕ್ಷೀರಾಭಿಷೇಕ, ರಾತ್ರಿ ಮಹಾಪೂಜೆ ಇನ್ನಿತರ ಸೇವೆಗಳನ್ನು ಮಾಡಿಸಬಹುದಾಗಿದೆ.
ಇಷ್ಟರವರೆಗೆ ಸುಬ್ರಹ್ಮಣ್ಯ ದೇವಸ್ಥಾನದ ಪೂಜಾ ಕಾರ್ಯಗಳನ್ನು ಲೈವ್ ನಡೆಸಿದ ಉದಾಹರಣೆಗಳಿಲ್ಲ.
ಷಷ್ಠಿ ಮಹೋತ್ಸವ ಸಂದರ್ಭದಲ್ಲಿ ಹೊರಾಂಗಣದಲ್ಲಿ ನಡೆಯುವ ಉತ್ಸವಾದಿಗಳು, ರಥೋತ್ಸವವನ್ನು ಲೈವ್ ಮಾಡಲಾಗಿತ್ತು.
ಲೈವ್ ಮಾಡುವುದಿದ್ದರೆ ಪೂಜಾ ಕಾರ್ಯ ನಡೆಯುವ ಕಡೆ ವಿಡಿಯೋ ಮಾಡಲು ವ್ಯವಸ್ಥೆ ಮಾಡಬೇಕು.
ಅಲ್ಲದೆ ಅದಕ್ಕಾಗಿ ಪ್ರತ್ಯೇಕ ಆಪ್ ಬಿಡುಗಡೆ ಮಾಡಬೇಕು.
ಅಲ್ಲದೆ ಕೆಲವೊಂದು ಸೇವೆಗಳ ಶುಲ್ಕ ರೂ ನೂರು ಇದ್ದು ಇದನ್ನು ಲೈವ್ ಗೆ ಹೇಗೆ ವ್ಯವಸ್ಥೆಗೊಳಿಸುವುದು?.ಆನ್ ಲೈನ್, ಲೈವ್ ಮಾಡಲು ಟೆಂಡರ್ ಆಗಬೇಕು.
ಇಷ್ಟೆಲ್ಲಾ ಆಗುವಾಗ ಲಾಕ್ ಡೌನ್ ಸಡಿಲಿಕೆ ಆಗಿ ದೇವಾಲಯ ಮುಕ್ತ ಪ್ರವೇಶ ಆರಂಭವಾಗಬಹುದು ಎನ್ನಲಾಗಿದೆ.
ಹಾಗೊಂದು ವೇಳೆ ಪೂಜಾ ಕಾರ್ಯಗಳ ಲೈವ್ ವಿಡಿಯೋ ಮಾಡಲು ಸರ್ಕಾರ ಹಟಕ್ಕೆ ಬಿದ್ದರೆ ಭಕ್ತಾಧಿಗಳು ತಿರುಗಿ ಬೀಳುವ ಲಕ್ಷಣ ಕಂಡು ಬಂದಿದೆ.
ಈಗಾಗಲೆ ಕೆಲವರು ಗರ್ಭಗುಡಿಯ ಫೋಟೋ, ವಿಡಿಯೋ ತೆಗೆಯಲು ಅವಕಾಶ ಇಲ್ಲದಿರುವ ಕಾರಣ ಇದಕ್ಕೂ ಅವಕಾಶ ನೀಡಬಾರದು ಎಂಬ ಆಕ್ರೋಶ ಸಾಮಾಜಿಕ ಜಾಲತಾಣಗಳಲ್ಲಿ ಹೊರ ಹಾಕತೊಡಗಿದ್ದಾರೆ.
ಇಲ್ಲಿಯ ಪದ್ದತಿ ಪ್ರಕಾರ ಗರ್ಭ ಗುಡಿಯೊಳಗೆ ನಡೆಯುವ ವಿಧಿವಿಧಾನಗಳ ವಿಡಿಯೋ, ಫೋಟೋ ತೆಗೆಯುವ ಪದ್ದತಿ ಇಲ್ಲ.
ಆದ ಕಾರಣ ಆನ್ ಲೈನ್ ವಿಡಿಯೋ ಮಾಡುವ ವಿಚಾರ ಸರಿಯಲ್ಲ ಎಂದು ಅರ್ಚಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
bangalore
ಮಹಿಳೆಯ ಅತಿಯಾದ ಕಾಮದಾಹ…! ದಾಹಕ್ಕೆ ಅಂತ್ಯ ಹಾಡಿದ ಯುವಕ..!
ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್ರೂಮಿನಲ್ಲಿ ಪತ್ತೆಯಾಗಿತ್ತು. ಎಪ್ರಿಲ್ 19 ರಂದು ನಡೆದಿದ್ದ ಈ ಘಟನೆಯನ್ನು ಭೇದಿಸಿದ ಪೊಲೀಸರಿಗೆ ಶಾಕ್ ಆಗುವಂತ ವಿಚಾರಗಳು ಗೊತ್ತಾಗಿದೆ.
ಕೊಡಿಗೆ ಹಳ್ಳಿಯ ಭದ್ರಪ್ಪ ಲೇಔಟ್ನಲ್ಲಿ ನಡೆದಿದ್ದ ಶೋಭಾ ಎಂಬ ಮಹಿಳೆಯ ಕೊ*ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವ ನವೀನ್ ಎಂಬ ಯುವಕನನ್ನು ಕೊಡಿಗೆ ಹಳ್ಳಿಯ ಪೊಲೀಸರು ಬಂದಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟ ವಿಚಾರ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ. ಬಳಿಕ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ ಶೋಭಾಳ ಕಾಮದಾಹ ಬೆಳಕಿಗೆ ಬಂದಿದೆ.
ಶೋಭಾಳಿಗೆ ಇನ್ಸ್ಟಾಗ್ರಾಂ ಮೂಲಕ ಪರಿಚಿತನಾಗಿದ್ದ ನವೀನ್ ಬಳಿಕ ಸ್ನೇಹಿತನಾಗಿ, ಅದು ಪ್ರೀತಿಗೆ ತಿರುಗಿ ಬಳಿಕ ಇಬ್ಬರ ನಡುವೆ ಅನೈತಿಕ ಸಂಬಂಧದವರೆಗೂ ಬಂದು ನಿಂತಿತ್ತು. ಮಗನ ವಯಸ್ಸಿನ ಹುಡುಗನ ಜೊತೆಯಲ್ಲಿ ನಿರಂತರ ಸೆಕ್ಸ್ ಮಾಡುತ್ತಿದ್ದ ಶೋಭಾಳ ಅತಿಯಾದ ಕಾಮಧಾಹದಿಂದ ಬೇಸತ್ತು ಆಕೆಯನ್ನು ಕೊಲೆ ಮಾಡಿದ್ದಾಗಿ ಹೇರೋಹಳ್ಳಿ ಮೂಲದ ಆರೋಪಿ ನವೀನ್ ಹೇಳಿಕೆ ನೀಡಿದ್ದಾನೆ.
ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್ಗೆ ಸೆಕ್ಸ್ಗೆ ಒತ್ತಾಯಿಸಿದ್ದು ನಿರಾಕರಿಸಿದಾಗ ಬ್ಲ್ಯಾಕ್ಮೇಲ್ ಮಾಡಿದ್ದಾಳೆ. ಈಕೆ ಅತಿಯಾಗಿ ಸೆಕ್ಸ್ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್ ಬೆಡ್ ರೂಮಿನಲ್ಲೇ ಆಕೆಯ ಕಥೆ ಮುಗಿಸಿದ್ದ.
48ರ ಮಹಿಳೆಗೆ ಯುವಕರ ಮೇಲೆ ಹುಚ್ಚು
48ರ ಶೋಭಾ ಕೇವಲ ನವೀನ್ ಮಾತ್ರವಲ್ಲದೇ ಅನೇಕ ಯುವಕರ ಸಹವಾಸ ಬೆಳೆಸಿದ್ದಳು. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿದ್ದು, ನವೀನ್ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ. ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಆ್ಯಪ್ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20 ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು. ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೇ ಅಲ್ಲದೆ ಆ ಯುವಕರ ಮದುವೆಗೂ ಅಡ್ಡಿ ಪಡಿಸಿ ಮದುವೆ ನಿಲ್ಲಿಸಿದ್ದಳು.
ಕೊಲೆಯಾದ ದಿನವೂ ನವೀನ್ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್, ಶೋಭಾಳ ಕತ್ತು ಹಿಸುಕಿ ಕೊ*ಲೆ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.
LATEST NEWS
ನ್ಯೂಡಲ್ಸ್ ಪ್ಯಾಕೇಟ್ ನಲ್ಲಿ ಸಿಕ್ಕಿತು 6 ಕೋಟಿ ರೂ. ಮೌಲ್ಯದ ಡೈಮಂಡ್!
ಮುಂಬೈ : ಹಣ, ಚಿನ್ನವನ್ನು ಖದೀಮರು ಎಲ್ಲೆಲ್ಲೋ ಅಡಗಿಸಿಟ್ಟುಕೊಂಡು ಸಾಗಿಸುವ ಸುದ್ದಿಗಳನ್ನು ಕೇಳುತ್ತಿರುತ್ತೇವೆ. ಆದರೆ, ಇಲ್ಲೊಬ್ಬ ನೂಡಲ್ಸ್ ಪ್ಯಾಕೇಟ್ ನಲ್ಲಿ ಡೈಮಂಡ್ಸ್ ಸಾಗಿಸಲು ಯತ್ನಿಸಿ ಸಿಕ್ಕಿ ಹಾಕಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುವ ವೇಳೆ ನೂಡಲ್ಸ್ ಪ್ಯಾಕೆಟ್ಗಳಲ್ಲಿ ಹುದುಗಿಸಿಟ್ಟಿದ್ದ ವಜ್ರಗಳ ಹರಳುಗಳು ಪತ್ತೆಯಾಗಿವೆ. 6.48 ಕೋಟಿ ರೂಪಾಯಿ ಎಂದು ಮೌಲ್ಯದ ಹರಳನ್ನು ವಶಕ್ಕೆ ಪಡೆಯಲಾಗಿದೆ.
ಮುಂಬೈನಿಂದ ಬ್ಯಾಂಕಾಕ್ ಪ್ರಯಾಣಿಸುತ್ತಿದ್ದ ಭಾರತೀಯ ಪ್ರಜೆಯನ್ನು ವಶಕ್ಕೆ ಪಡೆಯಲಾಯಿತು. ಈ ವೇಳೆ ಆತನ ಟ್ರಾಲಿ ಬ್ಯಾಗ್ನಲ್ಲಿ ನೂಡಲ್ಸ್ ಪ್ಯಾಕೆಟ್ಗಳಿದ್ದವು. ಅದರಲ್ಲಿ ಅಡಗಿಸಿಟ್ಟಿದ್ದ ವಜ್ರಗಳಿದ್ದು ಅವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಹಲವರು ವಶಕ್ಕೆ
ಕೊಲಂಬೋದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವಿದೇಶಿ ಪ್ರಜೆಯೊಬ್ಬರು ಚಿನ್ನದ ಗಟ್ಟಿಗಳು ಮತ್ತು ಕತ್ತರಿಸಿದ ತುಂಡನ್ನು ಸಾಗಿಸುತ್ತಿರುವುದು ಕಂಡುಬಂದಿದೆ. 321 ಗ್ರಾಂ ತೂಕದ ಚಿನ್ನವನ್ನು ತನ್ನ ಒಳ ಉಡುಪುಗಳಲ್ಲಿ ಅಡಗಿಸಿಟ್ಟಿದ್ದ ಆತನನ್ನು ವಶಕ್ಕೆ ಪಡೆಯಲಾಗಿದೆ.
ದುಬೈ ಮತ್ತು ಅಬುಧಾಬಿಯಿಂದ ತಲಾ ಇಬ್ಬರು, ಬಹ್ರೇನ್, ದೋಹಾ, ರಿಯಾದ್, ಮಸ್ಕತ್, ಬ್ಯಾಂಕಾಕ್ ಮತ್ತು ಸಿಂಗಾಪುರದಿಂದ ತಲಾ ಒಬ್ಬರು ಸೇರಿದಂತೆ ಕನಿಷ್ಠ 10 ಭಾರತೀಯ ಪ್ರಜೆಗಳನ್ನು ತಡೆಹಿಡಿಯಲಾಯಿತು. ಈ ವೇಳೆ 4.04 ಕೋಟಿ ಮೌಲ್ಯದ 6.199 ಕೆ.ಜಿ ಚಿನ್ನ ಸಾಗಿಸುತ್ತಿರುವುದು ಕಂಡುಬಂದಿದೆ. ಅವರಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ : ರಜೆಯಿದೆ ಎಂದು ಪ್ರವಾಸಕ್ಕೆ ಹೊರಟಿದ್ದೀರಾ? ಗಮನಿಸಿ, ಈ ಪ್ರವಾಸಿ ತಾಣಗಳಿಗಿದೆ ನಿರ್ಬಂಧ
ಮುಂಬೈ ವಿಮಾನ ನಿಲ್ದಾಣದಿಂದ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಹೊರತರಲು ಸಹಾಯ ಮಾಡಿದ್ದ ಆರೋಪದ ಮೇಲೆ ಅಲ್ಲಿನ ಫಾಸ್ಟ್ ಫುಡ್ ರೆಸ್ಟೋರೆಂಟ್ 38 ವರ್ಷದ ಉದ್ಯೋಗಿಯನ್ನು ಮುಂಬೈ ಕಸ್ಟಮ್ಸ್ನ ಏರ್ ಇಂಟೆಲಿಜೆನ್ಸ್ ಯುನಿಟ್ ಬಂಧಿಸಿದೆ. ಸುಮಾರು 1.86 ಕೋಟಿ ಮೌಲ್ಯದ 6 ಅಂಡಾಕಾರದ ಚಿನ್ನದ ಕ್ಯಾಪ್ಸೂಲ್ಸ್ನಲ್ಲಿ ತನ್ನ ಬೆಲ್ಟ್ನಲ್ಲಿ ಅಡಗಿಸಿಟ್ಟಿದ್ದ ಬಗ್ಗೆ ವರದಿಯಾಗಿದೆ.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.
- DAKSHINA KANNADA6 days ago
ಮಂಗಳೂರು : ಬೈಕ್ಗೆ ಕಾರು ಡಿಕ್ಕಿ; ಇಹಲೋಕ ತ್ಯಜಿಸಿದ ವಿದ್ಯಾರ್ಥಿ
- DAKSHINA KANNADA6 days ago
ಸೀರೆ ಉಟ್ರೆ ಕ್ಯಾನ್ಸರ್ ಬರುತ್ತಂತೆ..! ಏನಿದು ಸೀರೆ ಕ್ಯಾನ್ಸರ್?
- DAKSHINA KANNADA7 days ago
ಬಿಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!
- DAKSHINA KANNADA5 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!