FILM
ಚಿತ್ರೋದ್ಯಮಕ್ಕೆ ದ್ವಾರಕೀಶ್ ಕೊಡುಗೆ ಅಪಾರ ಎಂದ ಪ್ರಧಾನಿ ಮೋದಿ
ಬೆಂಗಳೂರು : ಹೃದಯಾ*ಘಾತದಿಂದ ಮಂಗಳವಾರ(ಏ.16) ಹಿರಿಯ ನಟ ದ್ವಾರಕೀಶ್ ಇಹಲೋಕ ತ್ಯಜಿಸಿದ್ದಾರೆ. ಅವರ ಅಗಲಿಕೆಗೆ ಚಿತ್ರರಂಗವೇ ಮರುಗಿದೆ. ಅನೇಕರು ಕಂಬನಿ ಮಿಡಿದಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ದ್ವಾರಕೀಶ್ ಅವರ ನಿ*ಧನಕ್ಕೆ ಸಂತಾಪ ಸೂಚಿಸಿದ್ದಾರೆ.
ದ್ವಾರಕೀಶ್ ಕೊಡುಗೆ ಅಪಾರ :
ದ್ವಾರಕೀಶ್ ಅವರ ಬಗ್ಗೆ ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಚಲನಚಿತ್ರೋದ್ಯಮಕ್ಕೆ ದ್ವಾರಕೀಶ್ ಅವರ ಕೊಡುಗೆ ಅಪಾರವಾಗಿದೆ. ದಶಕಗಳ ಕಾಲ ಸದಾ ನೆನಪಿನಲ್ಲಿ ಉಳಿಯುವ ನಟನೆ ಹಾಗೂ ಸಿನಿಮಾಗಳನ್ನು ನೀಡಿದ್ದಾರೆ.
ಪ್ರೇಕ್ಷಕರನ್ನು ಸೆಳೆದಿಟ್ಟುಕೊಳ್ಳುವ ಹಾಗೂ ಹೊಸಬರನ್ನು ಬೆಂಬಲಿಸುವ ಮೂಲಕ ಕನ್ನಡ ಚಿತ್ರರಂಗವನ್ನು ರೂಪಿಸುವಲ್ಲಿ ಅವರ ಪಾತ್ರ ದೊಡ್ಡದು. ಅವರ ನಿಧನದಿಂದ ದುಃಖವಾಗಿದೆ. ಅವರ ಅದ್ಭುತ ಜರ್ನಿಯನ್ನು ನಾವು ಸ್ಮರಿಸುತ್ತೇವೆ. ಅವರ ಕುಟುಂಬಕ್ಕೆ ಮತ್ತು ಆತ್ಮೀಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ಬ್ರಹ್ಮಾವರ : ಮನೆಯಲ್ಲಿ ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಇಹಲೋಕ ತ್ಯಜಿಸಿದ ವೃದ್ಧೆ
ಅಂತಿಮ ದರ್ಶನ ಪಡೆದ ಗಣ್ಯರು :
ದ್ವಾರಕೀಶ್ ಅವರ ಪಾರ್ಥೀ*ವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆ 11.30ರವರೆಗೂ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಕಿಚ್ಚ ಸುದೀಪ್, ಕೆ.ಮಂಜು, ಮಾಳವಿಕಾ ಅವಿನಾಶ್, ಸುಧಾರಾಣಿ, ರಾಘವೇಂದ್ರ ರಾಜ್ ಕುಮಾರ್, ಶ್ರೀ ಮುರಳಿ ಸೇರಿದಂತೆ ಚಿತ್ರರಂಗದ ಹಲವರು ಅಂತಿಮ ನಮನ ಸಲ್ಲಿಸಿದರು.
FILM
ನೇ*ಣಿಗೆ ಶರಣಾದ ಯುವ ನಟಿ..! ಸಾ*ವಿಗೂ ಮುನ್ನ ವ್ಯಾಟ್ಸಾಪ್ ಸ್ಟೇಟಸ್ನಲ್ಲಿ ಬರೆದಿದ್ದೇನು..!
ಬಿಹಾರ್: ಯುವ ನಟಿಯೊಬ್ಬರು ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎ.27ರಂದು ಬಿಹಾರದಲ್ಲಿ ನಡೆದಿದೆ. ಜೋದ್ಪುರಿ ನಟಿ ಅಮೃತಾ ಪಾಂಡೆ ಆತ್ಮಹ*ತ್ಯೆಗೆ ಶರಣಾದವರು. ಆತ್ಮಹ*ತ್ಯೆಗೂ ಮೊದಲು ನಿಗೂಢಾರ್ಥದಲ್ಲಿ ವ್ಯಾಟ್ಸಪ್ ಸ್ಟೇಟಸ್ ಬರೆದು ಹಾಕಿದ್ದರು.
ಪೊಲೀಸರಿಗೆ ಅದಾಮ್ಪುರದ ದಿವ್ಯಾಧರ್ಮ ಅಪಾರ್ಟ್ಮೆಂಟ್ನಲ್ಲಿ ಆತ್ಮ*ಹತ್ಯೆ ನಡೆದಿದೆ ಎಂದು ಕರೆ ಬರುತ್ತದೆ. ಪೊಲೀಸರು ಬಂದು ಪರಿಶೀಲಿಸಿದಾಗ ಬೆಡ್ ಮೇಲೆ ಅಮೃತಾ ಮೃತದೇಹ ಇತ್ತು. ಇದಕ್ಕೆ ಮೊದಲು ಅಮೃತಾಳ ಸಹೋದರಿ ರೂಂ ನ ಒಳಗಡೆ ಹೋಗಿದ್ದಾರೆ. ಅಕ್ಕನನ್ನು ನೋಡಿ ಶಾಕ್ ಆಗಿದ್ದರು. ಆ ಕೂಡಲೇ ಕೆಳಗಿಳಿಸುವ ಪ್ರಯತ್ನ ಮಾಡಿದ್ದಾರೆ. ಆಗಾಗಲೇ ಸಮಯ ಮಿಂಚಿ ಹೋಗಿತ್ತು.
ಮುಂದೆ ಓದಿ..; ಈ ತಿಂಗಳಿನಲ್ಲಿ ಬರುತ್ತೆ ಪಿಎಂ ಕಿಸಾನ್ ಯೋಜನೆಯ 17ನೇಕಂತು..!
ಅದೇನಿತ್ತು ವ್ಯಾಟ್ಸಾಪ್ ಸ್ಟೇಟಸ್ನಲ್ಲಿ..!
ಅಮೃತಾ ಸಾಯುವುದಕ್ಕೂ ಮೊದಲು ವ್ಯಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ್ದರು. “ಅವರ ಜೀವನ ಎರಡು ದೋಣಿಗಳ ಮೇಲಿದೆ. ನಾವು ನಮ್ಮ ದೋಣಿಯನ್ನು ಮುಳುಗಿಸುವ ಮೂಲಕ ಅವರ ಮಾರ್ಗವನ್ನು ಸಡಿಲಗೊಳಿಸಿದ್ದೇವೆ” ಎಂದು ಬರೆದು ಸ್ಟೇಟಸ್ ಹಾಕಿದ್ದಾರೆ. ಇದನ್ನೆಲ್ಲಾ ಗಮನಿಸಿದಾಗ ಪತಿ ಚಂದ್ರಮಣಿ ಇನ್ನೋರ್ವಳನ್ನು ಪ್ರೀತಿಸುತ್ತಿದ್ದರೇ ಎನ್ನುವ ಅನುಮಾನ ಹುಟ್ಟಿಹಾಕಿದೆ. ಇನ್ನು ಅಮೃತಾಳ ಪತಿ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, 2022ರಲ್ಲಿ ಅಮೃತಾ ಚಂದ್ರಮಣಿಯನ್ನು ಮದುವೆ ಆಗಿದ್ದರು.
ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು
ಇನ್ನೂ ಕುಟುಂಬ ಸದಸ್ಯರು ಅಮೃತಾ ಖಿನ್ನತೆಗೆ ಒಳಗಾಗಿದ್ದಳು. ಸಿನೆಮಾದಲ್ಲಿ ಸರಿಯಾದ ಚಾನ್ಸ್ ಸಿಗುತ್ತಿಲ್ಲ ಎಂದು ಖಿನ್ನತೆ ಒಳಗಾಗಿದ್ದಳು ಎಂದು ಹೇಳಿದ್ದಾರೆ. ಅವರು ‘ಪ್ರತಿಶೋಧ’ ಹೆಸರಿನ ಸೀರಿಸ್ನಲ್ಲಿ ನಟಿಸಿದ್ದರು. ಅವರು ‘ದೀವಾನಪನ್’ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದರು. ಅವರ ಸಾವಿಗೆ ನಿಜಕ್ಕೂ ಖಿನ್ನತೆ ಕಾರಣವೇ ಅಥವಾ ಬೇರೆ ಏನಾದರೂ ಬೇರೆ ಕಾರಣವೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
FILM
ದುಬಾರಿ ಕಾರು ಖರೀದಿಸಿದ ಸಂಭ್ರಮದಲ್ಲಿ ಸಿಂಹಪ್ರಿಯಾ; ಬೆಲೆ ಎಷ್ಟು ಗೊತ್ತಾ?
ಬೆಂಗಳೂರು : ಸೆಲೆಬ್ರಿಟಿಗಳಿಗೆ ಕಾರಿನ ಕ್ರೇಝ್ ಹೆಚ್ಚಾಗಿರುತ್ತದೆ. ದುಬಾರಿ ಬೆಲೆಯ ಕಾರುಗಳನ್ನು ಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾರು ಖರೀದಿಸಿದ್ದ ಸುದ್ದಿ ವೈರಲ್ ಆಗಿತ್ತು. ಅವರು ಆಡಿ ಕ್ಯೂ7 ಮಾದರಿಯ ಗ್ರೇ ಬಣ್ಣದ ಕಾರನ್ನು ಖರೀದಿಸಿದ್ದರು. ಅವರ ಐಷಾರಾಮಿ ಕಾರಿನ ಆನ್ ರೋಡ್ ಬೆಲೆಯು ರೂ.1.10 ಕೋಟಿಯಾಗಿದೆ. ಇದೀಗ ಹರಿಪ್ರಿಯಾ – ವಸಿಷ್ಠ ಸಿಂಹ ಹೊಸ ಕಾರೊಂದನ್ನು ಖರೀದಿಸಿದ್ದಾರೆ.
ಬೆಲೆ ಎಷ್ಟು? :
ಕಾರನ್ನು ಕೊಳ್ಳುವ ಮೂಲಕ ವಸಿಷ್ಠ ಸಿಂಹ ತಮ್ಮ ಕನಸೊಂದನ್ನು ನನಸಾಗಿಸಿಕೊಂಡಿದ್ದಾರೆ. ಮರ್ಸಿಡಿಸ್ ಬೆಂಝ್ ನಿರ್ಮಾಣದ ಜಿಎಲ್ಇ 450ಡಿ ಕಾರನ್ನು ಅವರು ಖರೀದಿಸಿದ್ದಾರೆ. ಮರ್ಸಿಡಿಸ್ ಬೆಂಝ್ ಜಿಎಲ್ಇ 450ಡಿ ಆವೃತ್ತಿಯು ಸದ್ಯ ಬೆಂಗಳೂರಿನಲ್ಲಿ ಆನ್ ರೋಡ್ ಪ್ರಕಾರ ರೂ. 1.44 ಕೋಟಿ ಬೆಲೆ ಹೊಂದಿದೆ.
ಇದನ್ನೂ ಓದಿ : ‘ಮಹಾನಟಿ’ ರಿಯಾಲಿಟಿ ಶೋ ವಿರುದ್ಧ ಬಿತ್ತು ಕೇಸ್; ಯಾಕೆ ಗೊತ್ತಾ!?
ಹೊಸ ಕಾರು ಖರೀದಿ ಮಾಡಿದ ವಿಡಿಯೋವನ್ನು ವಸಿಷ್ಠ ಸಿಂಹ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಸ್ಟಾರ್ ದಂಪತಿ ಕಾರು ಶೋ ರೂಮ್ಗೆ ಎಂಟ್ರಿ ಕೊಡುವುದರೊಂದಿಗೆ ವೀಡಿಯೋ ಆರಂಭಗೊಳ್ಳುತ್ತದೆ.
ಬಳಿಕ ಹೊಸ ದುಬಾರಿ ಕಾರಿನ ವಿತರಣೆಯನ್ನು ಪಡೆದುಕೊಂಡಿದ್ದಾರೆ. ಹೊಸ ಕಾರು ಕೊಂಡ ತಮ್ಮ ನೆಚ್ಚಿನ ನಟ – ನಟಿಗೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. ಸದ್ಯ ಸಿಂಹಪ್ರಿಯಾ ಖರೀದಿಸಿದ ಹೊಸ ಕಾರಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
FILM
‘ಮಹಾನಟಿ’ ರಿಯಾಲಿಟಿ ಶೋ ವಿರುದ್ಧ ಬಿತ್ತು ಕೇಸ್; ಯಾಕೆ ಗೊತ್ತಾ!?
ಬೆಂಗಳೂರು : ಕಿರುತೆರೆಯಲ್ಲಿ ರಿಯಾಲಿಟಿ ಶೋಗಳಿಗೇನೂ ಕಮ್ಮಿ ಇಲ್ಲ. ಹಲವಾರು ರಿಯಾಲಿಟಿ ಶೋಗಳು ಗಮನ ಸೆಳೆಯುತ್ತಿವೆ. ಅದರಲ್ಲಿ ಇತ್ತೀಚೆಗೆ ಆರಂಭವಾದ ‘ಮಹಾನಟಿ’ ಧಾರಾವಾಹಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ನಟಿಯಾಗಲು ಬಯಸುವ ಕಲಾವಿದರಿಗೆ ಝೀ ಕನ್ನಡ ವಾಹಿನಿ ವೇದಿಕೆ ನೀಡಿತ್ತು. ಇದೀಗ ಈ ಶೋ ಗೆ ದೊಡ್ಡ ಶಾಕ್ ಸಿಕ್ಕಿದೆ.
ಏನು ಆರೋಪ? :
ಈ ರಿಯಾಲಿಟಿ ಶೋ ನ ನಿರೂಪಣೆಯನ್ನು ಅನುಶ್ರೀ ಮಾಡುತ್ತಿದ್ದಾರೆ. ನಿರ್ದೇಶಕ ತರುಣ್ ಸುಧೀರ್, ಹಿರಿಯ ನಟಿ ಪ್ರೇಮಾ, ನಟ ರಮೇಶ್ ಅರವಿಂದ್ ಮತ್ತು ನಟಿ ನಿಶ್ವಿಕಾ ನಾಯ್ಡು ತೀರ್ಪುಗಾರರಾಗಿದ್ದಾರೆ. ಇದೀಗ ಈ ಶೋನಲ್ಲಿ ಬಳಕೆಯಾದ ಸಾಲಿನ ಬಗ್ಗೆ ಅಪಸ್ವರ ಕೇಳಿ ಬಂದಿದೆ.
ಹೌದು, ಈ ಶೋನಲ್ಲಿ ಸ್ಪರ್ಧಿಯೊಬ್ಬರು ನಟನೆ ಮಾಡುವಾಗ ಬಳಕೆ ಮಾಡಿದ ಶಬ್ದ ಚರ್ಚೆ ಹುಟ್ಟುಹಾಕಿದೆ. ‘ಮೆಕ್ಯಾನಿಕ್ನ ಮದುವೆ ಆದರೆ ಗ್ರೀಸ್ ತಿಂದು ಬದುಕಬೇಕಾಗುತ್ತದೆ..’ ಎನ್ನುವ ವಾಕ್ಯ ಬಳಕೆ ಆಗಿದೆ. ಇದು ಮೆಕ್ಯಾನಿಕ್ ಕೆಲಸ ಮಾಡುವವರ ಭಾವನೆಗೆ ಧಕ್ಕೆ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ.
ಇದನ್ನೂ ಓದಿ : “ಮದುವೆ ಗೌನ್”ಗೆ ಮತ್ತೊಂದು ಟಚ್ ಕೊಟ್ಟ ‘ಸಮಂತಾ’..!! ಶಾಕ್ನಲ್ಲಿಅಭಿಮಾನಿಗಳು!
ದೂರು ದಾಖಲಿಸಿದ್ದು ಯಾರು? :
‘ಮೆಕ್ಯಾನಿಕ್ನ ಮದುವೆ ಆದರೆ ಗ್ರೀಸ್ ತಿಂದು ಬದುಕಬೇಕಾಗುತ್ತದೆ..’ ಎನ್ನುವ ವಾಕ್ಯದ ಬಗ್ಗೆ ಆಕ್ಷೇಪ ಕೇಳಿ ಬಂದಿದೆ. ಅಲ್ಲದೇ, ಚಿಕ್ಕನಾಯಕನಹಳ್ಳಿಯ ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ದೂರು ದಾಖಲು ಮಾಡಿದ್ದಾರೆ.
ಈ ಶೋನ ನಿರ್ಮಾಪಕರು, ನಿರ್ದೇಶಕರು, ದೃಶ್ಯದಲ್ಲಿ ಆ್ಯಕ್ಟ್ ಮಾಡಿದ ಗಗನಾ ವಿರುದ್ಧವೂ ಕೇಸ್ ದಾಖಲಾಗಿದೆ. ಅಲ್ಲದೇ, ನಿರೂಪಕಿ ಅನುಶ್ರೀ, ಜಡ್ಜ್ಗಳಾದ ರಮೇಶ್ ಅರವಿಂದ್, ನಟಿ ಪ್ರೇಮಾ ಮೇಲೂ ಪ್ರಕರಣ ದಾಖಲಾಗಿದೆ.
- DAKSHINA KANNADA7 days ago
ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?
- BANTWAL7 days ago
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
- bangalore7 days ago
ಮಹಿಳೆಯ ಅತಿಯಾದ ಕಾಮದಾಹ…! ದಾಹಕ್ಕೆ ಅಂತ್ಯ ಹಾಡಿದ ಯುವಕ..!
- LATEST NEWS7 days ago
ಹನುಮಂತ ತನ್ನ ಹೆಂಡತಿಯೊಂದಿಗೆ ಕುಳಿತಿರುವ ವಿಶಿಷ್ಟ ದೇವಾಲಯ ಎಲ್ಲಿದೆ ಗೊತ್ತಾ!?