ಉಡುಪಿಯಲ್ಲಿದೆ ಪ್ರಧಾನಿ ವಾಜಪೇಯಿ ಅವರ ಅಚ್ಚುಮೆಚ್ಚಿನ ಕಾರು..!!
ಉಡುಪಿಯಲ್ಲಿದೆ ಪ್ರಧಾನಿ ವಾಜಪೇಯಿ ಅವರ ಅಚ್ಚುಮೆಚ್ಚಿನ ಕಾರು..!!
ವರದಿ : ಪ್ರಮೋದ್ ಸುವರ್ಣ ಕಟಪಾಡಿ
ಉಡುಪಿ : ನೆಹರು, ಲಾಲ್ ಬಹುದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ ಬಳಿಕ ಪ್ರಧಾನಿ ಹುದ್ದೆಗೆ ಘನತೆ ತಂದಿದ್ದು, ಸ್ವತಂತ್ರ ಭಾರತದಲ್ಲಿ ಜನಮಾನಸದಲ್ಲಿ ಉಳಿದುಕೊಂಡಿರುವ ಏಕೈಕ ವ್ಯಕ್ತಿ ಅಟಲ್ ಬಿಹಾರಿ ವಾಜಪೇಯಿ.
ರಾಜಕೀಯ ಭೀಷ್ಮ, ಅಜಾತಶತ್ರು ವಾಜಪೇಯಿ ತನ್ನ ದೂರದೃಷ್ಟಿ ಚಿಂತನೆಗಳ ಮೂಲಕ ದೇಶವನ್ನು ಹೊಸ ದಿಕ್ಕಿನತ್ತ ಕೊಂಡೊಯ್ದಿದ್ದರು. ಅವರ ಆಡಳಿತ ವೈಖರಿಯನ್ನು ಯಾರೂ ಪ್ರಶ್ನಿಸುವಂತಿಲ್ಲ.
ನಿಷ್ಠೆ, ಪ್ರಾಮಾಣಿಕತೆಗೆ ಮತ್ತೊಂದು ಹೆಸರು ವಾಜಪೇಯಿ. ಅಂದಹಾಗೆ ಅಟಲ್ ಜೀ ಅವರಿಗೂ ಉಡುಪಿಗೂ ಅವಿನಾಭಾವ ಸಂಬಂಧವಿದೆ.
ರಾಜಕೀಯದ ಅಜಾತ ಶತ್ರುವೆಂದೇ ಖ್ಯಾತರಾಗಿದ್ದ ವಾಜಪೇಯಿ ಅವರು ಉಡುಪಿಗೆ ಆಗಮಿಸಿದಾಗ ಓಡಾಟ ಮಾಡುತ್ತಿದ್ದ ಕಾರು, ಇನ್ನೂ ಅವರ ನೆನಪಲ್ಲಿ ಉಡುಪಿಯಲ್ಲಿ ಓಡಾಟ ಮಾಡುತ್ತಿದೆ.
ವಾಜಪೇಯಿ ಆತ್ಮೀಯ ಸ್ನೇಹಿತರಾದ ಉಡುಪಿ ಮೂಲದ ಡಾ. ವಿ.ಎಸ್.ಆಚಾರ್ಯ ಮತ್ತು ರಾಕಿ ಡಯಾಸ್ ಅವರ ಜೊತೆ ಉಡುಪಿಗೆ ಬಂದಾಗಲೆಲ್ಲ ಇದೇ ಕಾರಿನಲ್ಲಿ ಓಡಾಡುತ್ತಿದ್ದರಂತೆ.
ವಾಜಪೇಯಿ ಆಚಾರ್ಯರವರ ಜೊತೆ ಈ ಕಾರಿನಲ್ಲಿ ಗೋವಾ ಮೈಸೂರು-ಬೆಂಗಳೂರು ಕೂಡಾ ಸುತ್ತಾಡಿದ್ದಾರೆ.
ಅಂದ ಹಾಗೇ ಈ ಕಾರನ್ನು ರಾಕಿ ಡಯಾಸ್ ಅವರು ಕೊಲ್ಲಿ ರಾಷ್ಟ್ರದಲ್ಲಿ ಉಪಯೋಗಿಸುತ್ತಿದ್ದರು.
ನಂತರ ಭಾರತಕ್ಕೆ ತರಬೇಕೆಂಬ ದೃಷ್ಟಿಯಲ್ಲಿ 1984ರಲ್ಲಿ ಮಂಗಳೂರು ಬಂದರು ಮೂಲಕ ಈ ಕಾರನ್ನು ಉಡುಪಿಗೆ ತರಲಾಯಿತು.
ಈ ಕಾರನ್ನು ಮಂಗಳೂರು ಬಂದರಿಗೆ ಬಂದ ಪ್ರಥಮ ಕಾರ್ಗೋ ಹಡಗಿನಲ್ಲಿ ತರಲಾಗಿತ್ತಂತೆ. ಅಂದ ಹಾಗೆ ಈ ಕಾರಿನ ಹೆಸರು ಟೊಯೊಟಾ ಕ್ರೌನ್ ಸೂಪರ್ ಸೆಲೂನ್. CNX 8888 ನಂಬರಿನ ಈ ಕಾರಲ್ಲಿ ವಾಜಪೇಯಿ ಉಡುಪಿಗೆ ಬಂದಾಗಲೆಲ್ಲ ಓಡಾಡುತ್ತಿದ್ದರು.
ರಾಕಿ ಡೆಯಾಸ್ ಅವರ ಪತ್ನಿ ವಿಲ್ಮ ಡೆಯಾಸ್ಗೂ ಈ ಕಾರೆಂದರೆ ಇಷ್ಟವಂತೆ. ಮಾಜಿ ಪ್ರಧಾನಿ ವಾಜಪೇಯಿ ತಿರುಗಿದ ಕಾರನ್ನು ಅವರ ನೆನಪಿಗಾಗಿ ಇಂದಿಗೂ ಉಪಯೋಗಿಸಿಕೊಳ್ಳುತ್ತಿದ್ದಾರೆ.
ಮಾಜಿ ಪ್ರಧಾನಿ ಮತ್ತು ರಾಜ್ಯದ ಮಾಜಿ ಗೃಹ ಸಚಿವರು ತಿರುಗಾಟ ಮಾಡಿದ ಕಾರು ಅನ್ನೋ ದೃಷ್ಟಿಯಲ್ಲಿ ರಾಕಿಯವರು ಇದನ್ನು ತುಂಬಾ ಪ್ರೀತಿಸ್ತಾರೆ. ಪ್ರತಿದಿನ ರಾಕಿ ಡಯಾಸ್ ಅವರು ಚರ್ಚಿಗೆ ತೆರಳುವಾಗ ಈ ಕಾರನ್ನು ತೆಗೆದುಕೊಂಡು ಹೋಗುತ್ತಾರೆ.
ತನ್ನ ಬಳಿ ಬೇರೆ ಕಾರು ಇದ್ದರೂ ಈ ಕಾರಿನಲ್ಲಿ ಪ್ರಯಾಣ ಮಾಡುವುದು ಎಂದರೆ ಅದೇನೋ ಪ್ರೀತಿ. ಮತ್ತೊಂದು ವಿಶೇಷತೆ ಎಂದರೆ ರಾಜ್ಯದಲ್ಲಿ ಈ ಮಾಡೆಲ್ ಕಾರು ಬೇರೆಲ್ಲೂ ಇಲ್ಲವಂತೆ. ಈ ಕಾರಿನ ಬಗ್ಗೆ ಉಡುಪಿಯ ಜನರಿಗೂ ಕೂಡ ಹೆಮ್ಮೆ.
ವಿಡಿಯೋಗಾಗಿ..
LATEST NEWS
ಹಿಂದಿಗೆ ರಿಮೇಕ್ ಆಗುತ್ತಿದೆ ಝೀ ಕನ್ನಡದ ಫೇಮಸ್ ಸೀರಿಯಲ್…! ಪ್ರೋಮೋ ರಿಲೀಸ್..!
ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಸೀತಾ ರಾಮ’ ಧಾರಾವಾಹಿ ಪ್ರೇಕ್ಷಕರ ಮನ ಗೆದ್ದಿದೆ. ಈ ಧಾರಾವಾಹಿಗೆ ಒಳ್ಳೆಯ ಟಿಆರ್ಪಿ ಸಿಗುತ್ತಿದೆ. ಗಗನ್ ಚಿನ್ನಪ್ಪ, ವೈಷ್ಣವಿ ಗೌಡ, ರೀತು ಸಿಂಗ್, ಪೂಜಾ ಲೋಕೇಶ್, ಅಶೋಕ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈಗ ಈ ಧಾರಾವಾಹಿ ಹಿಂದಿಗೆ ರಿಮೇಕ್ ಆಗುತ್ತಿದೆ. ಇದಕ್ಕೆ ‘ಮೇ ಹೂ ಸಾತ್ ತೆರೆ’ ಎನ್ನುವ ಶೀರ್ಷಿಕೆ ಇಡಲಾಗಿದೆ.
‘ಸೀತಾ ರಾಮ’ ಧಾರಾವಾಹಿ ಮರಾಠಿಯ ‘ಮಜಿ ತುಜಿ ರೆಶಿಮಗತ್’ ಧಾರಾವಾಹಿಯ ಕಥೆಯನ್ನು ಆಧರಿಸಿದೆ. ಜೀ ಮರಾಠಿಯಲ್ಲಿ 2021 ಆಗಸ್ಟ್ ತಿಂಗಳಿಂದ 2023 ಜನವರಿವರೆಗೆ ಈ ಧಾರಾವಾಹಿ ಪ್ರಸಾರ ಕಂಡಿತ್ತು. ಈ ಧಾರಾವಾಹಿ ಒಟ್ಟೂ 458 ಎಪಿಸೋಡ್ಗಳನ್ನು ಹೊಂದಿತ್ತು. ಪ್ರಾರ್ಥನಾ ಬೆಹೆರೆ ಹಾಗೂ ಶ್ರೇಯಸ್ ತಲ್ಪಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಧಾರಾವಾಹಿಯನ್ನು ಕನ್ನಡಕ್ಕೆ ‘ಸೀತಾ ರಾಮ’ ಹೆಸರಲ್ಲಿ ರಿಮೇಕ್ ಮಾಡಲಾಯಿತು. ಈಗ ಧಾರಾವಾಹಿ ಹಿಂದಿಗೂ ರಿಮೇಕ್ ಆಗುತ್ತಿದೆ.
ಜೀ ಟಿವಿಯಲ್ಲಿ ‘ಮೇ ಹೂ ಸಾತ್ ತೆರೆ’ ಧಾರಾವಾಹಿ ಪ್ರಸಾರ ಕಾಣಲಿದೆ. ಸದ್ಯ ಪ್ರೋಮೋಗಳ ಮೂಲಕ ಧಾರಾವಾಹಿ ಗಮನ ಸೆಳೆಯುತ್ತಿದೆ. ಕನ್ನಡದಲ್ಲಿ ಗಗನ್ ಚಿನ್ನಪ್ಪ ಮಾಡಿರೋ ಪಾತ್ರವನ್ನು ಹಿಂದಿಯಲ್ಲಿ ಕರಣ್ ವೋಹ್ರಾ ಮಾಡುತ್ತಿದ್ದಾರೆ. ವೈಷ್ಣವಿ ಗೌಡ ಅವರ ಪಾತ್ರವನ್ನು ಉಲ್ಕಾ ಗುಪ್ತಾ ಮಾಡುತ್ತಿದ್ದಾರೆ. ಉಲ್ಕಾ ಗುಪ್ತಾ ಅವರು ‘ಜಾನ್ಸಿ ಕಿ ರಾಣಿ’ ಧಾರಾವಾಹಿ ಮೂಲಕ ಪ್ರಸಿದ್ಧರಾಗಿದ್ದಾರೆ.
ಕಥೆಯಲ್ಲಿ ಬದಲಾವಣೆ :
ಕನ್ನಡದಲ್ಲಿ ಕಥಾ ನಾಯಕ ಉದ್ಯಮಿ. ಹಿಂದಿಯಲ್ಲಿ ಕರಣ್ ಅವರು ಉದ್ಯಮಿಯ ಪಾತ್ರವನ್ನೇ ಮಾಡುತ್ತಿದ್ದಾರೆ. ಕನ್ನಡದಲ್ಲಿ ಕಥಾ ನಾಯಕಿ ಮಧ್ಯಮ ವರ್ಗದ ಹುಡುಗಿ. ಹಿಂದಿಯಲ್ಲಿ ಕಥಾ ನಾಯಕಿ ಸಿಂಗರ್ ಆಗಬೇಕು ಎಂದು ಕನಸು ಕಾಣುವ ಸಿಂಗಲ್ ಪೇರೇಂಟ್ ಆಗಿ ತೋರಿಸಲಾಗಿದೆ. ಹಿಂದಿಯಲ್ಲಿ ಕಥಾ ನಾಯಕಿಗೆ ಮಗ ಇರುವುದಾಗಿ ತೋರಿಸಲಾಗಿದೆ ಆದರೆ ಕನ್ನಡದಲ್ಲಿ ಕಥಾ ನಾಯಕಿಗೆ ಮಗಳಿದ್ದಾಳೆ. ಏಪ್ರಿಲ್ನಿಂದ ಈ ಧಾರಾವಾಹಿ ಪ್ರಸಾರ ಆಗೋ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ‘ಫುಲ್ ಹೌಸ್ ಮೀಡಿಯಾ’ ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದೆ.
bangalore
ಗುದದ್ವಾರಕ್ಕೆ ಗಾಳಿ ಬಿಟ್ಟ ಸ್ನೇಹಿತ; ಕರುಳು ಬ್ಲಾ*ಸ್ಟ್ ಆಗಿ ಯುವಕನ ದುರ್ಮರ*ಣ
ಬೆಂಗಳೂರು : ಏರ್ ಪ್ರೆಶರ್ ಪೈಪ್ನಿಂದ ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದರಿಂದ ಹೊಟ್ಟೆಯೊಳಗೆ ಕರುಳು ಬ್ಲಾಸ್ಟ್ ಆಗಿ ಯುವಕ ಮೃ*ತಪಟ್ಟಿದ್ದಾನೆ. ಹುಡುಗಾಟದಲ್ಲಿ ಆಡಿದ ಆಟ ಘನಘೋರ ಅಂತ್ಯ ಕಂಡ ಘಟನೆ ಬೆಂಗಳೂರಲ್ಲಿ ನಡೆದಿದೆ. ಯೋಗೀಶ್(28) ಮೃ*ತ ಯುವಕ.
ಹುಡುಗಾಟಕ್ಕೆ ಹೋಯ್ತು ಪ್ರಾಣ…!
ಮಾರ್ಚ್ 25ರಂದು ಬೈಕ್ ರಿಪೇರಿಗಾಗಿ ಸಂಪಿಗೆಹಳ್ಳಿಯ ಸಿಎನ್ಸಿ (CNS) ಬೈಕ್ ಸರ್ವೀಸ್ ಸೆಂಟರ್ಗೆ ಯೋಗೀಶ್ ಎಂಬ ಯುವಕ ತೆರಳಿದ್ದ. ಅದೇ ಸರ್ವೀಸ್ ಸೆಂಟರ್ನಲ್ಲಿ ಯೋಗೀಶ್ ಸ್ನೇಹಿತ ಮುರುಳಿ ಎಂಬಾತ ಕೆಲಸ ಮಾಡುತ್ತಿದ್ದ. ಸ್ನೇಹಿತರಿಬ್ಬರೂ ಒಬ್ಬರಿಗೊಬ್ಬರು ತರ್ಲೆ, ತಂಟೆ ಮಾಡಿಕೊಂಡು ಆಟವಾಡುತ್ತಿದ್ದರು. ಸರ್ವೀಸ್ ಸೆಂಟರ್ನಲ್ಲಿದ್ದ ಏರ್ ಪ್ಲೇಶರ್ ಪೈಪ್ನಿಂದ ಇಬ್ಬರು ಆಟ ಆಡುತ್ತಿದ್ದರು.
ಮೊದಲಿಗೆ ಮುರುಳಿ, ಯೋಗೀಶ್ನ ಮುಖ ಹಾಗೂ ಹೊಟ್ಟೆಗೆ ಗಾಳಿ ಬಿಟ್ಟಿದ್ದ. ಇದಾದ ಬಳಿಕ ಯೋಗಿಶ್ ಗುದದ್ವಾರಕ್ಕೆ ಏರ್ ಪ್ಲೇಶರ್ನಿಂದ ಗಾಳಿ ಬಿಟ್ಟಿದ್ದಾನೆ. ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದರಿಂದ ಯೋಗೇಶ್ ಹೊಟ್ಟೆ ಊದಿಕೊಂಡು ಕರುಳು ಬ್ಲಾ*ಸ್ಟ್ ಆಗಿದೆ. ತಕ್ಷಣ ಯೋಗೀಶ್ ನರಳಾಟ ಕಂಡು ಮುರುಳಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯೋಗಿಶ್ ಮೃ*ತಪಟ್ಟಿದ್ದಾನೆ.
ಸದ್ಯ ಯೋಗೀಶ್ ಪೋಷಕರು ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 304 ಅಡಿ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಮುರಳಿಯನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಡಿಸಿಪಿ ಲಕ್ಷ್ಮೀ ಪ್ರಸಾದ್ ಮಾಹಿತಿ ನೀಡಿದ್ದಾರೆ.
LATEST NEWS
ಕನ್ಯಾನ ಸದಾಶಿವ ಶೆಟ್ಟಿಗೆ ಮಾತೃ ವಿಯೋಗ
ಬೆಳ್ತಂಗಡಿ : ಕೊಡುಗೈ ದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರ ತಾಯಿ, ಕನ್ಯಾನ ದಿವಂಗತ ಪಕೀರ ಶೆಟ್ಟಿ ಅವರ ಪತ್ನಿ ಲೀಲಾವತಿ ಶೆಟ್ಟಿ ನಿಧ*ನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಅವರು ಮಕ್ಕಳಾದ ಕನ್ಯಾನ ಸದಾಶಿವ ಶೆಟ್ಟಿ, ಚಂದ್ರಹಾಸ ಶೆಟ್ಟಿ, ರಘುರಾಮ ಶೆಟ್ಟಿ, ರವೀಂದ್ರ ಶೆಟ್ಟಿ, ವಿಜಯಲಕ್ಷ್ಮೀ ಶೆಟ್ಟಿ, ದಿವಾಕರ ಶೆಟ್ಟಿ, ನಿತ್ಯಾನಂದ ಶೆಟ್ಟಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಗಣ್ಯರ ಸಂತಾಪ :
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉದ್ಯಮಿ ಶಶಿಧರ್ ಶೆಟ್ಟಿ, ಯಕ್ಷಧ್ರುವ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.