Connect with us

LATEST NEWS

ಮಂಗಳೂರು: ಟೈಮಿಂಗ್‌ ವಿಚಾರದಲ್ಲಿ ಖಾಸಗಿ ಸಿಟಿ ಬಸ್‌ ಮಧ್ಯೆ ಗಲಾಟೆ- ಬಸ್‌ ವಶಕ್ಕೆ

Published

on

ಮಂಗಳೂರು: ಟೈಮಿಂಗ್‌ ವಿಚಾರದಲ್ಲಿ ಖಾಸಗಿ ಬಸ್‌ಗಳನ್ನು ರಸ್ತೆ ಮಧ್ಯೆ ನಿಲ್ಲಿಸಿ ಬೈದಾಡಿ, ತಳ್ಳಾಡುತ್ತಿದ್ದ ಪ್ರಕರಣದಲ್ಲಿ ಎರಡು ಬಸ್‌ಗಳನ್ನು ವಶಕ್ಕೆ ಪಡೆದು ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಸಾಂದರ್ಭಿಕ ಚಿತ್ರ

ಆರೋಪಿಗಳನ್ನು ಗುಣರಾಜ್ ಶೆಟ್ಟಿ, ಸ್ಟೀವನ್ ನೆಲ್ಸನ್ ನೊರೊನ್ಹ, ಧನರಾಜ್, ಶರತ್ ಎಂದು ಗುರುತಿಸಲಾಗಿದೆ.
ಮಾ.18ರಂದು ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಲೇಡಿಹಿಲ್ ಬಸ್ ನಿಲ್ದಾಣದ ಎದುರು ರಸ್ತೆಯಲ್ಲಿ ರೂಟ್ ನಂಬ್ರ 1 ಹಾಗೂ ರೂಟ್ ನಂಬ್ರ 1Bನೇ ಡ್ರೈವರ್‌-ನಿರ್ವಾಹಕರ ಮಧ್ಯೆ ಬೆಳಿಗ್ಗೆ 11.25ಕ್ಕೆ ಟೈಮಿಂಗ್‌ ವಿಚಾರದಲ್ಲಿ ಗಲಾಟೆಯಾಗಿದೆ.

ಗಲಾಟೆ ತಾರಕಕ್ಕೇರಿ ಅಡ್ಡಾದಿಡ್ಡಿಯಾಗಿ ರಸ್ತೆಯಲ್ಲಿ ಎರಡೂ ಬಸ್‌ ನಿಲ್ಲಿಸಿ ನಾಲ್ವರು ಒಬ್ಬರನ್ನೊಬ್ಬರು ಬೈದಾಡಿಕೊಳ್ಳುತ್ತಾ, ತಳ್ಳಾಡುತ್ತಿದ್ದರು. ಈ ಬಗ್ಗೆ ಉರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. KA-19-D-6829 ನೇ ನೋಂದಣಿ ನಂಬ್ರದ ಬಸ್ಸು ಮತ್ತು KA-19-D-2671 ನೇ ನೋಂದಣಿ ನಂಬ್ರದ ಬಸ್ಸುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆ ನಡೆಯುತ್ತಿದೆ.

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

FILM

ಟಿ ಆರ್ ಪಿ ಪಟ್ಟಿಯಲ್ಲಿ ಯಾವ ಧಾರಾವಾಹಿಗೆ ಸಿಕ್ಕಿದೆ ಮೊದಲ ಸ್ಥಾನ?

Published

on

ಬೆಂಗಳೂರು : ‘ಕಿರುತೆರೆ’ ಜನರ ನೆಚ್ಚಿನ ಮನರಂಜನಾ ತಾಣ. ಇಲ್ಲಿ ಸಾವಿರಾರು ಧಾರಾವಾಹಿಗಳು, ರಿಯಾಲಿಟಿ ಶೋ ಗಳದೇ ದರ್ಬಾರು. ಮನೆಮಂದಿಯೆಲ್ಲಾ ಕಿರುತೆರೆಯನ್ನು ನೆಚ್ಚಿಕೊಂಡಿದ್ದಾರೆ. ದೈನಂದಿನ ದಿನಚರಿಯಲ್ಲಿ ಧಾರಾವಾಹಿಗಳೂ ಸೇರಿಕೊಂಡಿವೆ. ತಮ್ಮ ನೆಚ್ಚಿನ ಧಾರಾವಾಹಿಗಳನ್ನು ನೋಡಲು ಕಾಯುತ್ತಿರುತ್ತಾರೆ.

ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೆ ಎಲ್ಲರೂ ಧಾರಾವಾಹಿ ಪ್ರಿಯರು. ಮಧ್ಯಾಹ್ನ, ರಾತ್ರಿ ಪ್ರಸಾರವಾಗುವ ಧಾರಾವಾಹಿಗಳನ್ನು ಬಿಡದೆ ನೋಡುವ ವರ್ಗವಿದೆ. ಆಯಾ ಧಾರಾವಾಹಿಗೆ ಆಯಾ ವೀಕ್ಷಕ ವರ್ಗವಿದೆ. ಹೀಗಿರುವ ಯಾವ ಧಾರಾವಾಹಿ ಎಷ್ಟು ಟಿ ಆರ್ ಪಿ ಹೊಂದಿದೆ ಅನ್ನೋ ಡಿಟೇಲ್ಸ್ ಇಲ್ಲಿದೆ.

ಟಾಪ್ 5 ಧಾರಾವಾಹಿಗಳು :

ಪುಟ್ಟಕ್ಕನ ಮಕ್ಕಳು


ಮೂವರು ಹೆಣ್ಣುಮಕ್ಕಳ ತಾಯಿಯಾಗಿ ಕಷ್ಟ ಕಾರ್ಪಣ್ಯಗಳಿಂದ ಬೆಂದಿರುವ ಮಹಿಳೆಯ ಪ್ರಧಾನ ಕಥೆ ಒಳಗೊಂಡಿರುವ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’. ಹಿರಿಯ ನಟಿ ಉಮಾಶ್ರೀ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಪುಟ್ಟಕ್ಕನ ಮಕ್ಕಳು ಧಾರಾವಾಹಿ 17ನೇ ವಾರದ ಟಿಆರ್​ಪಿ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ವೀಕ್ಷಕರ ಅಚ್ಚುಮೆಚ್ಚಿನ ಧಾರಾವಾಹಿಯಾಗಿ ಹೊರಹೊಮ್ಮಿದೆ. ಹಿರಿಯ ನಟಿ ಉಮಾಶ್ರೀ, ಹಿರಿಯ ನಟ ರಮೇಶ್‌ ಪಂಡಿತ್‌, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಪಾತ್ರವಾಗಿದೆ.

ಲಕ್ಷ್ಮೀ ನಿವಾಸ

ಇತ್ತೀಚೆಗೆ ಆರಂಭಗೊಂಡ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದೀಗ ಟಿಆರ್‌ಪಿ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮೊದ ಮೊದಲು ಮೊದಲ ಸ್ಥಾನದಲ್ಲಿದ್ದ ಲಕ್ಷ್ಮೀ ನಿವಾಸ ಧಾರಾವಾಹಿ ಈ ವಾರ ಕೆಲವೇ ಕೆಲವು ಪಾಯಿಂಟ್‌ ಅಂತರದಲ್ಲಿ ಎರಡನೇ ಸ್ಥಾನದದಲ್ಲಿದೆ. ಕೌಟುಂಬಿಕ ಕಥಾಹಂದರವುಳ್ಳ ಈ ಧಾರಾವಾಹಿ ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ನವಿರಾದ ಪ್ರೇಮಕಥೆ, ಸಂಸಾರದ ತಲ್ಲಣಗಳಿವೆ.

ಸೀತಾ ರಾಮ


ನವಿರಾದ ಪ್ರೇಮಕಥೆ ಇರುವ ಸೀತಾ ರಾಮ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ. ಜನಮನ ಗೆದ್ದಿರುವ ಈ ಧಾರಾವಾಹಿಯಲ್ಲಿ ಪುಟಾಣಿ ಸಿಹಿ ಎಲ್ಲರಿಗೂ ಅಚ್ಚುಮೆಚ್ಚು. ದಿನದಿಂದ ದಿನಕ್ಕೆ ಸೀತಾ ರಾಮ ಧಾರಾವಾಹಿ ಕುತೂಹಲ ಪೂರ್ಣವಾಗಿ ಸಾಗುತ್ತಿದೆ, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ರೀತು ಸಿಂಗ್ ಮೊದಲಾದವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ : ಅಭಿಮಾನಿಗಳಿಗೆ ಹೊಸ ಸಿನಿಮಾದ ಗುಡ್ ನ್ಯೂಸ್ ಕೊಟ್ಟ ಶಾರುಖ್

ಶ್ರಾವಣಿ ಸುಬ್ರಮಣ್ಯ


ಇತ್ತೀಚೆಗೆ ಆರಂಭಗೊಂಡ ವಿಭಿನ್ನ ಕಥಾ ಹಂದರ ಹೊಂದಿರುವ ಶ್ರಾವಣಿ ಸುಬ್ರಮಣ್ಯ ಧಾರಾವಾಹಿ ಟಿಆರ್​ಪಿ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಮಿನಿಸ್ಟರ್‌ ಮಗಳು ಶ್ರಾವಣಿಯ ತರಲೆ, ಮಿನಿಸ್ಟರ್‌ ಬಲಗೈ ಬಂಟ ಸುಬ್ರಮಣ್ಯನ ಕಥೆ ಧಾರಾವಾಹಿಯಲ್ಲಿದೆ. ಮಗಳನ್ನು ದ್ವೇಷಿಸುವ ತಂದೆ, ತಂದೆಯನ್ನು ಪ್ರೀತಿಸುವ ಮಗಳು, ಒಂದಷ್ಟು ಸಸ್ಪೆನ್ಸ್ ಧಾರಾವಾಹಿಯ ಜೀವಾಳ.

ರಾಮಾಚಾರಿ :


ವಿಭಿನ್ನ ಕತೆಯನ್ನೊಳಗೊಂಡ ರಾಮಾಚಾರಿ ಆರಂಭದಿಂದಲೂ ಜನಮನ ಗೆದ್ದಿತ್ತು. ಟಿಆರ್​ಪಿ ಪಟ್ಟಿಯಲ್ಲಿ ರಾಮಾಚಾರಿ ಐದನೇ ಸ್ಥಾನದಲ್ಲಿದೆ. ಸದ್ಯ ಧಾರಾವಾಹಿ ಬೇರೆಯೇ ಆದ ಆಯಾಮಕ್ಕೆ ಹೊರಳಿದೆ. ರಾಮಾಚಾರಿಗೊಬ್ಬ ತಮ್ಮನೂ ಎಂಟ್ರಿ ಕೊಟ್ಟಾಗಿದೆ. ಅಣ್ಣ-ತಮ್ಮ ಹಾಗೂ ಚಾರು ಒಂದಾಗಿ ಶತ್ರುಗಳ ವಿರುದ್ಧ ಗೆಲ್ಲುವ ಹೋರಾಟಕ್ಕೆ ಇಳಿದಿದ್ದಾರೆ.

Continue Reading

LATEST NEWS

Trending