LATEST NEWS
ಉಡುಪಿ: ಮನೆ ಬಿಟ್ಟು ಬಂದ ಇಬ್ಬರು ಅಪ್ರಾಪ್ತ ಬಾಲಕಿಯರ ರಕ್ಷಣೆ
ಉಡುಪಿ: ಮನೆ ಬಿಟ್ಟು ಬಂದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಣೆ ಮಾಡಿದ ಘಟನೆ ಅಕ್ಟೋಬರ್ 18 ರಂದು ಮಲ್ಪೆ ಬೀಚ್ನಲ್ಲಿ ನಡೆದಿದೆ.
ರಕ್ಷಿಸಲಾದ ಮಕ್ಕಳು ಹಾವೇರಿಯವರು ಎಂದು ತಿಳಿದುಬಂದಿದೆ. ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸುವ ಆಸೆಯನ್ನು ಹೊಂದಿದ್ದರೂ ಪೋಷಕರ ಬೆಂಬಲವಿಲ್ಲದೆ ಅಸಹಾಯಕರಾಗಿದ್ದೇವೆ. ಹೀಗಾಗಿ ತಮ್ಮ ವಿದ್ಯಾಭ್ಯಾಸಕ್ಕೆ ಹಣ ಸಂಗ್ರಹಿಸುವ ಉದ್ದೇಶದಿಂದ ಹಾವೇರಿಯಿಂದ ಉಡುಪಿಗೆ ಬಂದಿದ್ದೇವೆ ಎಂದು ಬಾಲಕಿಯರು ತಿಳಿಸಿದ್ದಾರೆ.
ಬೀಚ್ನಲ್ಲಿ ಈ ಇಬ್ಬರು ಬಾಲಕಿಯರ ಚಲನವಲನಗಳು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು. ಹೀಗಾಗಿ ಬೀಚ್ ಗಸ್ತು ಸಿಬ್ಬಂದಿ ಸುರೇಶ್ ಅಂಚನ್ ಬಾಲಕಿಯರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ಬಾಲಕಿಯರು ಮನೆ ಬಿಟ್ಟು ಬಂದಿರುವುದು ಬೆಳಕಿಗೆ ಬಂದಿದೆ.
ವಿಷಯ ತಿಳಿದ ಕೂಡಲೇ ಅಂಚನ್ ಅವರು ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ನಂತರ ಒಳಕಾಡು ಅವರು ಮಕ್ಕಳ ಕಲ್ಯಾಣ ಸಮಿತಿ ಮತ್ತು ಮಕ್ಕಳ ರಕ್ಷಣಾ ಘಟಕಕ್ಕೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಬಳಿಕ ಒಳಕಾಡು ನಗರ ಮಹಿಳಾ ಪೊಲೀಸ್ ಠಾಣೆ ಪಿಎಸ್ ಐ ಪ್ರೇಮನ್ ಗೌಡ ಪಾಟೀಲ್ ಹಾಗೂ ಕಾನ್ ಸ್ಟೆಬಲ್ ಮಹದೇವ್ ಅವರೊಂದಿಗೆ ಬೀಚ್ ಗೆ ಆಗಮಿಸಿ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ರಕ್ಷಿಸಲ್ಪಟ್ಟ ಅಪ್ರಾಪ್ತರಿಗೆ ನಿಟ್ಟೂರು ಬಾಲಕಿಯರ ಆಶ್ರಯದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ. ಇನ್ನು ರಕ್ಷಣಾ ಮತ್ತು ಪುನರ್ವಸತಿ ಪ್ರಕ್ರಿಯೆಯಲ್ಲಿ ಮಕ್ಕಳ ರಕ್ಷಣಾ ಘಟಕದ ಮಹೇಶ್ ಹಾಜರಿದ್ದರು.
FILM
ಯುವರಾಣಿಯಂತೆ ರೆಡಿ ಆಗಿ ಬಂದ ರಾಧಿಕಾ ಪಂಡಿತ್; ಫೋಟೋಗೆ ಫ್ಯಾನ್ಸ್ ಫಿದಾ
ನಟಿ ರಾಧಿಕಾ ಪಂಡಿತ್ ಅವರು ನಟನೆಯಿಂದ ದೂರವೇ ಉಳಿದುಕೊಂಡಿದ್ದಾರೆ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರೀಗ ಯುವರಾಣಿಯಂತೆ ಕಾಣಿಸಿಕೊಂಡಿದ್ದು, ಫೋಟೋ ವೈರಲ್ ಆಗಿದೆ.
ರಾಧಿಕಾ ಪಂಡಿತ್ ಅವರ ಹೊಸ ಫೋಟೋಗಳು ಗಮನ ಸೆಳೆದಿವೆ. ಅವರು ಸೀರೆ ಉಟ್ಟು ಗಮನ ಸೆಳೆದಿದ್ದಾರೆ. ನಟಿಯ ಸೌಂದರ್ಯವನ್ನು ಎಲ್ಲರೂ ಹಾಡಿಹೊಗಳಿದ್ದಾರೆ. ಯಾವ ಕಾರಣಕ್ಕೆ ರಾಧಿಕಾ ಈ ರೀತಿಯ ಫೋಟೋ ಹಂಚಿಕೊಂಡಿದ್ದಾರೆ ಎಂಬುದು ರಿವೀಲ್ ಆಗಿಲ್ಲ.
ರಾಧಿಕಾ ಪಂಡಿತ್ ಎರಡು ಮಕ್ಕಳ ತಾಯಿ. ಅವರಿಗೆ ಆಯ್ರಾ ಹಾಗೂ ಯಥರ್ವ್ ಹೆಸರಿನ ಮಕ್ಕಳು ಇದ್ದಾರೆ. ಈಗಲೂ ರಾಧಿಕಾ ಪಂಡಿತ್ ಅವರು ಸಖತ್ ಯಂಗ್ ಆಗಿ ಕಾಣಿಸುತ್ತಾರೆ. ರಾಧಿಕಾ ಪಂಡಿತ್ ಅವರು 2016ರಲ್ಲಿ ಮದುವೆ ಆದರು. ಆ ಬಳಿಕ ರಾಧಿಕಾ ಅವರು ನಟನೆಯಿಂದ ದೂರವೇ ಉಳಿದುಕೊಂಡಿದ್ದಾರೆ. ಈ ಬಗ್ಗೆ ಫ್ಯಾನ್ಸ್ಗೆ ಬೇಸರ ಇದೆ.
ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಲೈಫ್ ಅಪ್ಡೇಟ್ನ ಅವರು ನೀಡುತ್ತಾ ಇರುತ್ತಾರೆ. ರಾಧಿಕಾ ಪಂಡಿತ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗಲೂ ಅವರು ಚಿತ್ರರಂಗಕ್ಕೆ ಮರಳಬೇಕು ಎಂದು ಅನೇಕರು ಬಯಸುತ್ತಿದ್ದಾರೆ. ಆದರೆ, ಸದ್ಯಕ್ಕಂತೂ ಅದು ಸಾಧ್ಯವಿಲ್ಲ.
LATEST NEWS
ಕುಟುಂಬಸ್ಥರ ಅನುಮತಿಯೊಂದಿಗೆ ಅದ್ದೂರಿ ವಿವಾಹ: ಮಂಗಳಮುಖಿಯೊಂದಿಗೆ ಯುವಕನ ನವ ದಾಂಪತ್ಯ
ಮಂಗಳೂರು/ತೆಲಂಗಾಣ: ಯುವಕನೊಬ್ಬ ಕುಟುಂಬಸ್ಥರ ಸಮ್ಮುಖದಲ್ಲಿ ತಾನು ಪ್ರೀತಿಸಿದ ತೃತೀಯಲಿಂಗಿಯೊಂದಿಗೆ ಅದ್ದೂರಿಯಾಗಿ ವಿವಾಹವಾಗಿದ್ದಾನೆ. ಈ ಕುರಿತ ಸುದ್ಧಿ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದ್ದು, ನವ ಜೋಡಿಗೆ ನೆಟ್ಟಿಗರು ಶುಭ ಹಾರೈಸಿದ್ದಾರೆ.
ಪ್ರೀತಿ ಯಾವಾಗ ಯಾರ ಮೇಲೆ ಹುಟ್ಟುತ್ತೆ ಅಂತ ಹೇಳೋಕೆ ಸಾಧ್ಯವಿಲ್ಲ. ಇದೇ ಕಾರಣಕ್ಕೆ ಪ್ರೀತಿ ಕುರುಡು ಅಂತ ಹೇಳ್ತಾರೆ. ಪ್ರೀತಿಸುವ ಜೀವಗಳೂ ಅಷ್ಟೇ ಜಾತಿ, ವಯಸ್ಸು, ಅಂತಸ್ತು ಇದ್ಯಾವುದನ್ನೂ ಲೆಕ್ಕಿಸದೆ, ಸಮಾಜದ ಕೊಂಕು ಮಾತುಗಳಿಗೆ ತಲೆ ಕೆಡಿಸಿಕೊಳ್ಳದೆ ತಾವು ಪ್ರೀತಿಸಿದ ಜೀವದ ಜೊತೆ ಜೀವನಪರ್ಯಂತ ಬಾಳಬೇಕು ಎಂದು ಬಯಸುತ್ತಾರೆ.
ಅಂತರ್ಜಾತಿಯರನ್ನು ಪ್ರೀತಿಸಿದರೆ ಅಥವಾ ಮದುವೆಯಾದರೆ ಈ ಸಮಾಜ ನೂರೆಂಟು ಕೊಂಕು ಮಾತುಗಳನ್ನಾಡುತ್ತದೆ. ಅಂತದ್ರಲ್ಲಿ ಇಲ್ಲೊಬ್ಬ ಯುವಕ ಸಮಾಜದ ಕಟ್ಟುಪಾಡು, ಕೊಂಕು ಮಾತುಗಳಿಗೆ ತಲೆಕೆಡಿಸಿಕೊಳ್ಳದೆ, ಎಲ್ಲಾ ಅಡೆತಡೆಗಳನ್ನು ಮೆಟ್ಟಿನಿಂತು ಕುಟುಂಬಸ್ಥರ ಸಮ್ಮುಖದಲ್ಲಿಯೇ ಅದ್ಧೂರಿಯಾಗಿ ಮದುವೆಯಾಗಿದ್ದಾನೆ.
ಈ ಘಟನೆ ತೆಲಂಗಾಣದ ಕರೀನಗರದಲ್ಲಿ ನಡೆದಿದ್ದು, ಜಗಿತ್ಯಾಲ ಜಿಲ್ಲೆಯ ಗೊಲ್ಲಪಲ್ಲಿ ಮಂಡಲದ ಲಕ್ಷೀಪುರ ಗ್ರಾಮದ 24 ವರ್ಷದ ಶ್ರೀನಿವಾಸ ಎಂಬ ಯುವಕ ತನ್ನ ಕುಟುಂಬಸ್ಥರ ಮನವೊಲಿಸಿ 23 ವರ್ಷದ ಕರುಣಾಂಜಲಿಯನ್ನು ಅದ್ದೂರಿಯಾಗಿ ಮದುವೆಯಾಗಿದ್ದಾನೆ. ಈ ಇಬ್ಬರೂ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಇದೀಗ ಸಮಾಜದ ಎಲ್ಲಾ ಅಡೆತಡೆಗಳನ್ನು ಮುರಿದು ಕುಟುಂಬಸ್ಥರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದಾರೆ.
ಈ ವಿಚಾರವನ್ನು ChotaNewsTelugu ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರು ಈ ಜೋಡಿಯ ಸುಂದರ ದಾಂಪತ್ಯ ಜೀವನಕ್ಕೆ ಶುಭ ಕೋರಿದ್ದಾರೆ.
BIG BOSS
ಮತ್ತೆ ಜೈಲು ಸೇರಿದ ಚೈತ್ರಾ ಕುಂದಾಪುರ
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11, ನಾಲ್ಕನೇ ವಾರಕ್ಕೆ ಕಾಲಿಡುತ್ತಿದೆ. ಇದೇ ಹೊತ್ತಲ್ಲಿ ಚೈತ್ರಾ ಕುಂದಾಪುರ ಬಿಗ್ಬಾಸ್ ಮನೆಯ ಜೈಲು ಪಾಲಾಗಿದ್ದಾರೆ. ಬಿಗ್ಬಾಸ್ ಮನೆಗೆ ಕಾಲಿಟ್ಟಿದ್ದ ಚೈತ್ರಾ ಕುಂದಾಪುರ ನೇರವಾಗಿ ನರಕಕ್ಕೆ ಎಂಟ್ರಿ ಕೊಟ್ಟಿದ್ದರು.
ಬಿಗ್ ಬಾಸ್ ಸೀಸನ್ 11ರಲ್ಲಿ ಚೈತ್ರಾ ಕುಂದಾಪುರ ಅವರು ಮೊದಲ ಬಾರಿಗೆ ಜೈಲಿಗೆ ಹೋಗಿದ್ದಾರೆ. ಮೂರನೇ ವಾರದಲ್ಲಿ ಮನೆಯಲ್ಲಿದ್ದ 14 ಸ್ಪರ್ಧಿಗಳಿಗೆ ಬಿಗ್ಬಾಸ್ ಟಾಸ್ಕ್ವೊಂದನ್ನು ನೀಡಿದ್ದರು. ಬಿಗ್ಬಾಸ್ ಮನೆಯಲ್ಲಿ ಅಪ್ರಾಮಾ ಣಿಕ ಯಾರು ಹಾಗೂ ಕುತಂತ್ರಿ ಯಾರು ಅಂತ ಹೇಳಿ ಎಂದಿದ್ದರು.
ಬಿಗ್ಬಾಸ್ ಮನೆಯಲ್ಲಿರೋ ಸ್ಪರ್ಧಿಗಳು ಅತಿ ಹೆಚ್ಚಾಗಿ ಹಣೆ ಪಟ್ಟಿಯನ್ನು ಚೈತ್ರಾ ಕುಂದಾಪುರ ಅವರಿಗೆ ಕೊಟ್ಟಿದ್ದಾರೆ. ಹೀಗಾಗಿ ಪ್ರಕ್ರಿಯೆಯ ಅನುಸಾರ ಚೈತ್ರಾ ಕುಂದಾಪುರ ಬಿಗ್ಬಾಸ್ ಜೈಲಿಗೆ ಹೋಗಿದ್ದಾರೆ. ಬಿಗ್ಬಾಸ್ ಅವರ ಮುಂದಿನ ಆದೇಶದವರೆಗೂ ಚೈತ್ರಾ ಜೈಲಿನಲ್ಲೇ ಇರಬೇಕಾಗುತ್ತದೆ.
- LATEST NEWS6 days ago
‘ಸೆಕ್ಸ್’ ಗೆ ಅಡ್ಡಿಯಾದ ಇಬ್ಬರು ಮಕ್ಕಳನ್ನೇ ಹತ್ಯೆ ಮಾಡಿದ ಪಾಪಿ ತಾಯಿ.!
- BIG BOSS6 days ago
ಯಾರೂ ಊಹಿಸದ ವ್ಯಕ್ತಿಗೆ ಈ ವಾರ ಕಿಚ್ಚನ ಚಪ್ಪಾಳೆ, ಬಿಗ್ಬಾಸ್ ಮನೆಯಲ್ಲಿ ಇದೇ ಮೊದಲು
- LATEST NEWS6 days ago
ಹಿರಿಯಡ್ಕ: ಉದ್ಯಮಿ ಪ್ರಸನ್ನ ಶೆಟ್ಟಿ ತೀರ್ಥಹಳ್ಳಿಯ ವಸತಿ ಗೃಹದಲ್ಲಿ ಆತ್ಮಹ*ತ್ಯೆ
- FILM4 days ago
ಖ್ಯಾತ ಹಾಸ್ಯ ನಟ ಇನ್ನಿಲ್ಲ: ಅತುಲ್ ಪರ್ಚುರೆ ವಿಧಿವಶ