Connect with us

BELTHANGADY

ಬೆಳ್ತಂಗಡಿಯಲ್ಲಿ ನಾರಾಯಣ ಗುರು ಪಠ್ಯ ಸೇರ್ಪಡೆಗಾಗಿ ಜು.4 ರಂದು ಪ್ರತಿಭಟನೆ

Published

on

ಬೆಳ್ತಂಗಡಿ: 10 ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯ ಸೇರ್ಪಡೆ ಮಾಡದಿರುವುದರ ವಿರುದ್ಧ ಪ್ರತಿಭಟನೆ ನಡೆಸುವ ಹಿನ್ನೆಲೆ ಇಂದು ಬೆಳ್ತಂಗಡಿಯ ಗುರು ನಾರಾಯಣ ಸಭಾ ಭವನದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು.


ಪತ್ರಿಕಾಗೋಷ್ಠಿಯಲ್ಲಿ ಚಿದಾನಂದ ಎಳ್ದಕ್ಕ ಅಧ್ಯಕ್ಷರು ಬಿಲ್ಲವ ವೇದಿಕೆ ಬೆಳ್ತಂಗಡಿ, ಜಯವಿಕ್ರಮ್ ಕಳ್ಳಪು ಪ್ರಧಾನ ಕಾರ್ಯದರ್ಶಿ ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ಮತ್ತು ನಿತೀಶ್ ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ಮುಂತಾದವರು ಉಪಸ್ಥಿತರಿದ್ದು ಮಾತನಾಡಿ ‘ಬಸವಣ್ಣ, ಡಾ ಬಿ. ಆರ್ ಅಂಬೇಡ್ಕರ್, ಕುವೆಂಪು ಸೇರಿದಂತೆ ನಾಡಿನ ವಿವಿಧ ಸಮಾಜ ಸುಧಾರಕರ ಕುರಿತು ಪಠ್ಯ ಪರಿಷ್ಕರಣೆಯಲ್ಲಿ ಆಗಿರುವ ತಪ್ಪುಗಳಿಗೆ ಸಮಾಜದ ವಿವಿಧ ವಲಯಗಳಿಂದ ಕೇಳಿ ಬಂದ ವಿರೋಧಗಳಿಗೆ ಸ್ಪಂದಿಸಿರುವ ಶಿಕ್ಷಣ ಇಲಾಖೆ ಎಂಟು ತಿದ್ದುಪಡಿ ಮಾಡಿ ಪಠ್ಯದಲ್ಲಿ ಅಳವಡಿಸುವಂತೆ ಆದೇಶ ಹೊರಡಿಸಿದೆ.

ಆದರೆ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು 10 ನೇ ತರಗತಿಯ ಪಠ್ಯದಲ್ಲಿ ಮರು ಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸುಮುದಾಯ ಹಾಗೂ ಗುರುಗಳ ಅನುಯಾಯಿಗಳ ಬೇಡಿಕೆಗೆ ಸರಕಾರ ಇದುವರೆಗೆ ಸ್ಪಂದಿಸಿಲ್ಲ. ಸರಕಾರದಲ್ಲಿ ನಮ್ಮ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರು ಇದ್ದರೂ ಈ ಬಗ್ಗೆ ಮಾತನಾಡಿ ಸರಿಪಡಿಸದೇ ಇರುವುದು ನಮಗೆ ನೋವು ತಂದಿದೆ.

ನಾರಾಯಣ ಗುರುಗಳ ಕುರಿತ ಪಠ್ಯವನ್ನು 10ನೇ ತರಗತಿಯ ಕನ್ನಡ (ಐಚ್ಚಿಕ) ಪಠ್ಯದಲ್ಲಿ ಸೇರಿಸಲಾಗಿದೆ ಎಂದು ಸರಕಾರ ಮತ್ತು ಸರಕಾರದ ಜವಾಬ್ದಾರಿಯುತ ಸ್ಥಾನದಲ್ಲಿರುವ ಕೆಲ ಮುಖಂಡರು ಸಮಜಾಯಿಷಿ ನೀಡುತ್ತಿದ್ದಾರೆ. ಆದರೆ ಈ ರೀತಿ ಹಿಂಬಡ್ತಿ ನೀಡಿರುವ ಷಡ್ಯಂತ್ರದ ಹಿಂದೆ ಇರುವ ಕಾಣದ ಕೈಗಳನ್ನು ಪ್ರಶ್ನಿಸುವ ಧೈರ್ಯ ಅವರುಗಳಿಗೆ ಯಾಕಿಲ್ಲ? ಕನ್ನಡ ಭಾಷಾ ಪಠ್ಯವನ್ನು ಶೇಖಡಾ 20% ರಷ್ಟು ವಿದ್ಯಾರ್ಥಿಗಳ ಮಾತ್ರ ಓದುತ್ತಾರೆ.

ಉಳಿದ ಭಾಷಾ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳು ಗುರುಗಳ ಕುರಿತು ಮಾಹಿತಿಯನ್ನು ಎಲ್ಲಿ ಪಡೆಯಬೇಕು ಎಂಬುದರ ಬಗ್ಗೆ ಸರಕಾರ ಯಾಕೆ ಚಿಂತನೆ ಮಾಡುತ್ತಿಲ್ಲ ಎಂಬುವುದು ಯಕ್ಷ ಪ್ರಶ್ನೆಯಾಗಿದೆ.

ಈ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಮತ್ತೆ 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಸೇರಿಸದ ಗುರುಗಳಿಗೆ ಮತ್ತು ಅವರ ಅನುಯಾಯಿಗಳಿಗೆ ಅವಮಾನ ಮಾಡಿರುವ ರಾಜ್ಯ ಸರಕಾರದ ಹಠಮಾರಿ ಧೋರಣೆಯ ವಿರುದ್ಧ ಜುಲೈ 4ರಂದು  ನಮ್ಮ ಸಂಘದ ವತಿಯಿಂದ ಬೆಳ್ತಂಗಡಿ ಬಸ್ಸು ತಂಗುದಾಣದಲ್ಲಿ ಬೆಳಗ್ಗೆ 10.30 ಕ್ಕೆ ಸರಿಯಾಗಿ ಬೃಹತ್‌ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

 

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

LATEST NEWS

Trending