Connect with us

    LATEST NEWS

    ಪಿಎಸ್ಐ ಅಭ್ಯರ್ಥಿಗಳಿಂದ ಪ್ರಧಾನಿಗೆ ರಕ್ತದಲ್ಲಿ ‘ಉಗ್ರ’ ಸಂದೇಶ..!

    Published

    on

    ಬೆಂಗಳೂರು : ದೇಶದಲ್ಲೇ ಅಲ್ಲೋಲ ಕಲ್ಲೋಲ ಎಬ್ಬಿಸಿರುವ ಕರ್ನಾಟಕದ ಪಿಎಸ್ಐ ಪರೀಕ್ಷಾ ಹಗರಣದ ತನಿಖೆ ಮುಂದುವರೆದಿದೆ.

    ಪ್ರಮುಖ ಆರೋಪಿ ದಿವ್ಯಾ ಹಾಗರಗಿ, ವೀರೇಶ್, ವೈಜನಾಥ್, ಮಂಜುನಾಥ್ ಮೇಳಕುಂದಿ, ಅರ್ಚನಾ, ಸುನೀತಾ, ಕಾಳಿದಾಸ್‌, ಸುನೀತಾ ಪಾಟೀಲ್‌, ಸುರೇಶ್ ಕಾಟೇಗಾವ್‌, ಸದ್ದಾಂ ಸೇರಿದಂತೆ ಇದುವರೆಗೂ 55ಕ್ಕೂ ಹೆಚ್ಚು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ.

    ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಪಿಎಸ್ಐ ಅಭ್ಯರ್ಥಿಗಳು ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ ಎನ್ನಲಾದ ಪತ್ರವೊಂದು ವೈರಲ್ ಆಗಿದೆ.

    ಎರಡು ಪುಟಗಳ ಪತ್ರ ಬರೆದಿರುವ ಅಭ್ಯರ್ಥಿಗಳು ನ್ಯಾಯ ಓದಗಿಸುವಂತೆ ಮನವಿ ಮಾಡಿದ್ದಾರೆ. ಆದರೆ ಈ ಪತ್ರದಲ್ಲಿ ಪತ್ರ ಬರೆದಿರುವವರ ಹೆಸರು ಮಾತ್ರ ಬಹಿರಂಗ ಮಾಡಿಲ್ಲ.

    ಪಿಎಸ್ ಐ ಪರೀಕ್ಷೆಯ ಅಕ್ರಮದಿಂದಾಗಿ ಮೋಸ ಹೋದವರಿಗೆ ನ್ಯಾಯ ಸಿಗಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ. ಅನ್ಯಾಯ ಮಾಡಿದವರನ್ನ ಜೈಲಿಗೆ ಹಾಕಬೇಕು, ಬದಲಾಗಿ ನಿಯತ್ತನಿಂದ ಪರೀಕ್ಷೆ ಬರೆದವರಿಗೆ ಮೋಸವಾಗಬಾರದು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

    ಕರ್ನಾಟಕದಲ್ಲಿ ಹಣ ಇದ್ದವರಿಗೆ ಮಾತ್ರ ಸರ್ಕಾರಿ ಹುದ್ದೆಗಳು ಎನ್ನುವಂತ ವ್ಯವಸ್ಯೆ ಬಂದುಬಿಟ್ಟಿದೆ. ಸರ್ಕಾರದ ಈ ವ್ಯವಸ್ಥೆಯಿಂದ ಮಾನಸಿಕವಾಗಿ ಸತ್ತುಹೋಗಿದ್ದೇವೆ ಎಂದು ತಮ್ಮ ನೀವು ತೋಡಿಕೊಂಡಿದ್ದಾರೆ.

    ಮಾತ್ರವಲ್ಲ ಇನ್ನು ಮುಂದೆ ಸರ್ಕಾರಿ ಹುದ್ದೆಗಳಿಗಾಗಿ ಕರೆಯುವ ಯಾವ ಪರೀಕ್ಷೆಗಳನ್ನೂ ಬರೆಯುವುದಿಲ್ಲ ಎಂದಿದ್ದಾರೆ. ಅಲ್ಲದೆ 2021ರಲ್ಲಿ ನಡೆದ ಎಫ್ ಡಿಎ ಪರೀಕ್ಷೆಯಲ್ಲಿಯೂ ಅಕ್ರಮವಾಗಿದೆ ಎಂದು ಆರೋಪಿಸಿರುವ ಅಭ್ಯರ್ಥಿಗಳು ಈ ಬಗ್ಗೆ ಕೂಡಾ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಮಗೆ ಅಪಾರ ಗೌವರವಿದೆ. ಹಾಗಾಗಿ ಅವರು ಈ ಬಗ್ಗೆ ತನಿಖೆ ನಡೆಸಿ ನ್ಯಾಯ ಕೊಡಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದಿದ್ದಾರೆ.

    ಒಂದು ವೇಳೆ ನಮಗೆ ನ್ಯಾಯಕೊಡಿಸದೇ ಹೋದಲ್ಲಿ ಮುಂದೆ ಟೆರರಿಸ್ಟ್ ಗಳ ಕೈಜೋಡಿಸುವ ಎಚ್ಚರಿಕೆಯನ್ನು ಕೂಡಾ ಈ ಪತ್ರದ ಮೂಲಕ ನೀಡಲಾಗಿದೆ.

    ಮಾತ್ರವಲ್ಲ, ಟೆರೆರಿಸ್ಟ್ ಗಳ ಜೊತೆ ನಕ್ಸಲ್ ಸಂಘಟನೆ ಸೇರಲು ಇಚ್ಛಿಸಿರುವುದಾಗಿಯೂ ಹೇಳಿದ್ದಾರೆ. ಒಟ್ಟು ಎಂಟು ಮಂದಿ ಇದ್ದು, ಎಲ್ಲರೂ ಒಟ್ಟಾಗಿ ಈ ನಿರ್ಧಾರ ಮಾಡಿರುವುದಾಗಿ ಪ್ರಧಾನಿಗೆ ಪತ್ರ ಬರೆದಿದ್ದಾರೆ.

     

    LATEST NEWS

    VIRAL VIDEO: ತಾಯಿಯೊಂದಿಗೆ ಎಂಟು ತಿಂಗಳ ಕಂದಮ್ಮನ ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಣ

    Published

    on

    ಮಂಗಳೂರು: ಪುಟ್ಟ ಕಂದಮ್ಮಗಳ ಜೊತೆ ತುಸು ಘಳಿಗೆ ಇದ್ದರೂ ಸಿಗುವ ಖುಷಿಯೇ ಬೇರೆ. ಮುಗ್ಧ ಮನಸ್ಸುಗಳು ನಿಸ್ವಾರ್ಥದಿಂದ ಆಡುವ ಪ್ರತಿಯೊಂದು ತೊದಲು ಮಾತನ್ನು ಕೇಳುವಾಗ ಕಿವಿಗೆ ಇಂಪೆನಿಸುತ್ತದೆ. ಮಕ್ಕಳ ಮುದ್ದಾದ ವಿಡಿಯೋಗಳು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ತಾಯಿಯೊಂದಿಗೆ ಎಂಟು ತಿಂಗಳ ಮಗುವೊಂದು ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಿಸಿದ್ದು, ಸಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದೆ.

    ಅರ್ಜುನನ ಪುತ್ರ ಅಭಿಮನ್ಯು ತಾಯಿಯ ಗರ್ಭದಲ್ಲಿರುವಾಗಲೇ ಚಕ್ರವ್ಯೂಹವನ್ನು ಭೇದಿಸುವ ಕಲೆಯನ್ನು ತಂದೆಯಿಂದ ಕಲಿತಿರುತ್ತಾನೆ. ಅಂತೆಯೇ ಈ ಮಗು ತಾಯಿಯಿಂದ ಶ್ರೀ ಕೃಷ್ಣ ದಾಮೋದರಾಷ್ಟಕಂ ಅನ್ನು ಕಲಿತಿದೆ ಎನ್ನುವ ಸಾಲುಗಳೊಂದಿಗೆ ಈ ವಿಡಿಯೋವನ್ನು Vaidik Gyaan ಹೆಸರಿನ ಖಾತೆಯಲ್ಲಿ  ಹಂಚಿಕೊಳ್ಳಲಾಗಿದೆ. ಶ್ರೀ ಕೃಷ್ಣ ದಾಮೋದರಾಷ್ಟಕಂ ಶ್ಲೋಕ ಪಠಿಸುತ್ತಿರುವಾಗ ಅದರ ಕೊನೆಯ ಪದವನ್ನು ಮಗುವು ಮುದ್ದಾಗಿ ಉಚ್ಚರಿಸುತ್ತಿದೆ.
    ಸಮಾಜಿಕ ಜಾಲತಾಣದಲ್ಲಿ ಅಧಿಕ ವೀಕ್ಷಣೆ ಕಂಡಿದ್ದು. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಮಗುವಿನ ಈ ಆಧ್ಯಾತ್ಮಕ ಸಾಧನೆಯನ್ನು ಒಬ್ಬರು ಹೊಗಳಿದ್ದಾರೆ. ಮತ್ತೊಬ್ಬರು, ಜೈ ಸನಾತನ ಧರ್ಮ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ‘ಮಗುವಿನ ಬಾಯಿಂದ ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಣ ಕೇಳುವುದೇ ಕಿವಿಗೆ ಇಂಪು’ ಎಂದಿದ್ದಾರೆ.

     

    watch this video : 

    Continue Reading

    LATEST NEWS

    ಪ್ರೀತಿಸಿ ಮಂಗಳಮುಖಿಯನ್ನು ಮದುವೆಯಾದ ಯುವಕ

    Published

    on

    ಆಂಧ್ರಪ್ರದೇಶ: ಯುವಕನೊಬ್ಬ ಮಂಗಳಮುಖಿಯನ್ನು ಮೂರು ವರ್ಷಗಳಿಂದ ಪ್ರೀತಿಸಿ ಮದುವೆಯಾಗಿರುವ ಘಟನೆ ಆಂಧ್ರಪ್ರದೇಶದ ಎನ್.ಟಿಆರ್ ಜಿಲ್ಲೆಯಲ್ಲಿ ನಡೆದಿದೆ.

    ವಿಸ್ಸನ್ನಪೇಟೆ ನಿವಾಸಿ ನಂದು ಮತ್ತು ಎಂಕೂರಿನ ತೃತೀಯಲಿಂಗಿ ನಕ್ಷತ್ರಾ ಮದುವೆಯಾದ ನವ ಜೋಡಿ. ಸದ್ಯ ಇವರಿಬ್ಬರ ಮದುವೆಯ ಫೋಟೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

    ತೃತೀಯಲಿಂಗಿ ಸಮುದಾಯದ ಪ್ರತಿನಿಧಿಗಳ ಸಮ್ಮುಖದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಇತ್ತೀಚಿಗಷ್ಟೇ ಮದುವೆ ನಡೆದಿದೆ.  ನಾನು ಮಂಗಳಮುಖಿಯನ್ನು ಮದುವೆಯಾಗುವುದು ನನ್ನ ಕುಟುಂಬದವರಿಗೆ ಇಷ್ಟವಿಲ್ಲ. ಆದರೆ ನಾವಿಬ್ಬರು ಸುದೀರ್ಘ ಚರ್ಚೆ ನಡೆಸಿ ಮದುವೆಯಾಗಲು ನಿರ್ಧರಿಸಿದೆವು.

    Continue Reading

    LATEST NEWS

    ನೇ*ಣುಬಿಗಿದ ಸ್ಥಿತಿಯಲ್ಲಿ ಮಹಿಳೆ ಶ*ವ ಪತ್ತೆ; ಇದು ಆ*ತ್ಮಹತ್ಯೆನಾ ? ಕೊ*ಲೆನಾ ?

    Published

    on

    ಮಂಗಳೂರು/ಬೆಂಗಳೂರು: ನೇ*ಣುಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಮಹಿಳೆ ಶ*ವ ಬೆಂಗಳೂರಿನ ವಿವೇಕನಗರದಲ್ಲಿ ಪತ್ತೆಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ಮೇಘನಾ ಶೆಟ್ಟಿ(27) ಮೃ*ತ ಮಹಿಳೆ.


    ಮೇಘನಾ ಅವರು ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಎರಡು ವರ್ಷದ ಹಿಂದೆ ತೀರ್ಥಹಳ್ಳಿಯ ಮೂಲದ ಇಂಜಿನಿಯರ್ ಸುದೀಪ್ ಶೆಟ್ಟಿ ಜೊತೆ ವಿವಾಹವಾಗಿತ್ತು. ಜೊತೆಗೆ ದಂಪತಿಗೆ ಒಂದು ವರ್ಷದ ಹೆಣ್ಣು ಮಗು ಸಹ ಇದೆ.
    ಮೃ*ತ ದೇಹ ಹೇಗೆ ಪತ್ತೆಯಾಗಿದೆ ಗೊತ್ತಾ ?
    ಎಲ್ಲವೂ ಚೆನ್ನಾಗಿದ್ದ ಕುಟುಂಬದಲ್ಲಿ ಇತ್ತೀಚೆಗೆ ಪದೇಪದೆ ಹಣಕ್ಕಾಗಿ ಪತಿ ಕುಟುಂಬದಿಂದ ಕಿರು*ಕುಳ ನೀಡುತ್ತಿದ್ದು, ನಿನ್ನೆ(ಅ.04) ರಾತ್ರಿ ಇದೇ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿದೆ ಎನ್ನಲಾಗಿದೆ. ಇಂದು(ಅ.5) ಬೆಳಗ್ಗೆ ಕಿಟಕಿಗೆ ನೇ*ಣು ಬಿಗಿದುಕೊಂಡ ಸ್ಥಿತಿಯಲ್ಲಿ ಶ*ವ ಪತ್ತೆಯಾಗಿದೆ.
    ಪತ್ನಿಯನ್ನು ಪತಿಯೇ ಕೊ*ಲೆ ಮಾಡಿದ್ದಾ ?
    ಘಟನಾ ಸ್ಥಳಕ್ಕೆ ವಿವೇಕನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃ*ತ ಮೇಘನಾ ಪೋಷಕರು, ಅಳಿಯ ಸುದೀಪ್ ಮೇಲೆ ಕೊ*ಲೆ ಆರೋಪ ಹೇರಿದ್ದು, ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಮೇಘನಾ ಪತಿ ಸುದೀಪ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    Continue Reading

    LATEST NEWS

    Trending