LATEST NEWS
ರೋಹಿತ್ ಚಕ್ರತೀರ್ಥಗೆ ನಾಳೆ ನಾಗರಿಕ ಸನ್ಮಾನ: ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ದೇಶಪ್ರೇಮಿ ಸಂಘಟನೆಗಳ ನಿರ್ಧಾರ
ಮಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಬ್ರಹ್ಮರ್ಷಿ ನಾರಾಯಣ ಗುರು, ಕುವೆಂಪು, ಬಾಬಾ ಸಾಹೇಬ್ ಅಂಬೇಡ್ಕರ್, ಕಯ್ಯಾರ ಕಿಂಞಣ್ಣ ರೈ ಮುಂತಾದ ಖ್ಯಾತನಾಮರನ್ನು ಅವಮಾನಿಸಿದ,
ಸಾಮಾಜಿಕ ಜಾಲತಾಣದಲ್ಲಿ ಮಹಾನ್ ಚೇತನಗಳು, ಸಾಹಿತಿ ಬರಹಗಾರರನ್ನು ಹೀನಾಯವಾಗಿ ನಿಂದಿಸುವ ರೋಹಿತ್ ಚಕ್ರತೀರ್ಥಗೆ ಮಂಗಳೂರಿನಲ್ಲಿ ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆಯ ಸೇವಾಂಜಲಿ ಟ್ರಸ್ಟ್ ಸಹಯೋಗದಲ್ಲಿ ನಾಗರಿಕ ಸನ್ಮಾನ ಏರ್ಪಡಿಸಿರುವುದು,
ಜೊತೆಗೆ ಅಧ್ಯಕ್ಷತೆಯನ್ನು ಮಂಗಳೂರು ವಿ.ವಿ ಕುಲಪತಿ ಪ್ರೊ. ಯಡಪಡಿತ್ತಾಯರು ವಹಿಸಿರುವುದಕ್ಕೆ ‘ದೇಶಪ್ರೇಮಿ ಸಂಘಟನೆಗಳ ಒಕ್ಕೂಟ’ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಜೊತೆಗೆ ಕಾರ್ಯಕ್ರಮ ರದ್ದತಿಗೆ ಆಗ್ರಹಿಸಿದೆ.
ನಾಳೆ(ಜೂನ್ 25) ಸಮಾನ ಮನಸ್ಕ ಸಂಘಟನೆಗಳು, ನಾಗರಿಕರ ಸಹಯೋಗದೊಂದಿಗೆ ಬೃಹತ್ ಮೆರವಣಿಗೆಯಲ್ಲಿ ತೆರಳಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ.
ನಾಡಿನ ಇತಿಹಾಸವನ್ನು ವಿಕೃತವಾಗಿ ತಿರುಚಲು, ಶ್ರೇಣೀಕೃತ ಜಾತಿ ಶ್ರೇಷ್ಟತೆಯನ್ನು ಪಠ್ಯ ಪುಸ್ತಕದಲ್ಲಿ ಅಳವಡಿಸಿರುವ ರೋಹಿತ್ ಚಕ್ರತೀರ್ಥ ವಿರುದ್ದ ಕರ್ನಾಟಕದ ಉದ್ದಗಲಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ನಾರಾಯಣ ಗುರು, ಕಯ್ಯಾರ ಕಿಂಞಣ್ಣ ರೈಗಳ ಮಹತ್ವವನ್ನು ಪಠ್ಯಪುಸ್ತಕದಲ್ಲಿ ಗೌಣಗೊಳಿಸಲು ಯತ್ನಿಸಿರುವುದು ಕರಾವಳಿ ಜಿಲ್ಲೆಗಳಲ್ಲೂ ಅಸಮಾಧಾನಕ್ಕೆ ಕಾರಣವಾಗಿದೆ.
ಎಲ್ಲಡೆ ಪ್ರತಿಭಟನೆಗಳು ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್ ಮಂಗಳೂರಿನಲ್ಲಿ ಚಕ್ರತೀರ್ಥ ಗೆ ನಾಗರಿಕ ಸನ್ಮಾನ ಏರ್ಪಡಿಸಿರುವುದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವ ವಿದ್ಯಾನಿಲಯದ ಕುಲಪತಿಗಳು ವಹಿಸುತ್ತಿರುವುದು ವಿದ್ಯಾವಂತರ ನಗರ ಮಂಗಳೂರಿನ ನಾಗರಿಕರು ತಲೆ ತಗ್ಗಿಸುವಂತೆ ಮಾಡಿದೆ.
ವಿ ವಿ ಯ ಕುಲಪತಿಗಳಾದ ಯಡಪಡಿತ್ತಾಯರು ನಾರಾಯಣ ಗುರು, ಕುವೆಂಪು, ಅಂಬೇಡ್ಕರ್ ವಿರೋಧಿಯಾಗಿರುವ ಚಕ್ರತೀರ್ಥ ರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು,
ನಾಗರಿಕ ಸನ್ಮಾನವನ್ನು ಆಯೋಜಕರು ರದ್ದುಗೊಳಿಸಬೇಕು ಎಂದು ದೇಶಪ್ರೇಮಿ ಸಂಘಟನೆಗಳ ಒಕ್ಕೂಟದಲ್ಲಿ ನಡೆದ ಸಭೆಯಲ್ಲಿ ಒತ್ತಾಯಿಸಿದೆ.
ಕಾರ್ಯಕ್ರಮ ರದ್ದುಗೊಳಿಸಲು ಒತ್ತಾಯಿಸಿ ನಾಳೆ (ಜೂನ್ 25) ಸಂಜೆ 4 :30 ಕ್ಕೆ ಸಿಟಿ ಸೆಂಟರ್ ಮಾಲ್ ಸಮೀಪ ಸಮಾನ ಮನಸ್ಕ ಸಂಘಟನೆಗಳು,
ನಾಗರಿಕರು ಒಟ್ಟು ಸೇರಿ ಅಲ್ಲಿಂದ ಕಾರ್ಯಕ್ರಮ ನಡೆಯುವ ಡೊಂಗರಕೇರಿ ಕೆನರಾ ಹೈಸ್ಕೂಲ್ ಗೆ ಮೆರವಣಿಗೆಯಲ್ಲಿ ತೆರಳಲು ನಿರ್ಧರಿಸಲಾಯಿತು.
ಮಂಗಳೂರಿನ ಪ್ರಜ್ಞಾವಂತ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಲು ಸಭೆ ಮನವಿ ಮಾಡಿತು.
ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಿಂಡಿಕೇಟ್ ಸದಸ್ಯ ಎಮ್ ಜಿ ಹೆಗ್ಡೆ, ದಲಿತ ನಾಯಕ ಎಂ ದೇವದಾಸ್, ಮಾಜಿ ಉಪ ಮೇಯರ್ ಮುಹಮ್ಮದ್ ಕುಂಜತ್ತಬೈಲ್,
ಸಿಪಿಐಎಂ ಮುಖಂಡರಾದ ಯಾದವ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಪ್ರಕಾಶ್ ಸಾಲ್ಯಾನ್, ಸಿಐಟಿಯು ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ಸಮರ್ಥ್ ಭಟ್,
ಕಾರ್ಪೊರೇಟರ್ ಲತೀಫ್ ಕಂದಕ್, ಡಿವೈಎಫ್ಐ ಮುಖಂಡರಾದ ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಮನೋಜ್ ವಾಮಂಜೂರು,
ಯುವ ಕಾಂಗ್ರೆಸ್ ನ ಇಸ್ಮಾಯಿಲ್, ಫಯಾಜ್ ಜೆಡಿಎಸ್ ಮುಂದಾಳುಗಳಾದ ಸುಮತಿ ಎಸ್ ಹೆಗ್ಡೆ, ಅಲ್ತಾಫ್ ತುಂಬೆ ಸಭೆಯಲ್ಲಿ ಹಾಜರಿದ್ದರು.
LATEST NEWS
ಮುಂದಿನ 5 ದಿನ ರಾಜ್ಯದ 25 ಜಿಲ್ಲೆಗಳಲ್ಲಿ ಬಿಸಿ ಗಾಳಿ ಸಾಧ್ಯತೆ; ಎಲ್ಲೆಲ್ಲಿ?
ಮಂಗಳೂರು : ರಾಜ್ಯದಲ್ಲಿ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದು, ಬಿಸಿಲಾಘಾತದಿಂದ ಜನ, ಜಾನುವಾರು ಮತ್ತು ಪಕ್ಷಿ ಸಂಕುಲ ತತ್ತರಿಸಿದೆ. ನೀರಿಗೆ ತತ್ವಾರ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೇ ಇದೀಗ ಹವಾಮಾನ ಇಲಾಖೆಯು ರಾಜ್ಯದ 25 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಿದೆ. ಇಂದಿನಿಂದ 5 ದಿನಗಳ ಕಾಲ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ಯಾವ ಜಿಲ್ಲೆಗಳಿಗೆ ಬಿಸಿಲಾಘಾತ?
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಮೇ 5 ರವರೆಗೂ ಇದೇ ಪರಿಸ್ಥಿತಿ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಮೇ 4 ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವಿರುವ ಸಂಭವವಿದೆ.
ಮಳೆಯಾಗುವ ಸಾಧ್ಯತೆ :
ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ಕೆಲವೆಡೆ ಬುಧವಾರ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ನಾಲ್ಕುದಿನ ಒಣಹವೆ ಇರಲಿದೆ.
ಮೇ 6 ರಿಂದ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!
ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ :
ಇಂದಿನಿಂದ(ಮೇ 1 ರಿಂದ) ಮುಂದಿನ ಐದು ದಿನಗಳು ಬಾಗಲಕೋಟೆ, ಕಲಬುರಗಿ ಹಾಗೂ ಕೊಪ್ಪಳದಲ್ಲಿ ರಾತ್ರಿಯ ಅವಧಿಯೂ ಬಿಸಿ ವಾತಾವರಣದಿಂದ ಕೂಡಿರುವ ಸಾಧ್ಯತೆಯಿದೆ. ಮಂಗಳವಾರ ಬೆಳಿಗ್ಗೆ 8.30 ರಿಂದ ಬುಧವಾರ ಬೆಳಗ್ಗಿನ ತನಕದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.8 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 38.2 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಮೂರು ದಿನ 38 ಡಿಗ್ರಿ ಸೆಲ್ಸಿಯಸ್ ದಾಟಿದೆ.
DAKSHINA KANNADA
ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.
ಮಂಗಳೂರಿನ ಪ್ರೆಸ್ ಕ್ಲಬ್ ವತಿಯಿಂದ ನಡೆದ ಪ್ರೆಸ್ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಯಕ್ಷಗಾನದಲ್ಲಿ ಪ್ರತಿಯೊಬ್ಬ ಗುರು ತಮ್ಮದೇ ಆದ ಶೈಲಿಯಲ್ಲಿ ನಾಟ್ಯವನ್ನು ಕಲಿಸುತ್ತಾರೆ. ಯಕ್ಷಗಾನ ಕಲಿಕೆಗೆ ಒಂದು ಚೌಕಟ್ಟು ರೂಪಿಸುವ ಮೂಲಕ ಏಕರೂಪತೆ ತರಬೇಕಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ನ ಯಕ್ಷ ಶಿಕ್ಷಣ ಯೋಜನೆಯು ಪಠ್ಯ ರೂಪಿಸಿದ್ದು, ಫೌಂಡೇಶನ್ನ ಶಿಕ್ಷಕರು ಇದರ ಪ್ರಕಾರವೇ ನಾಟ್ಯ ಕಲಿಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆಂದೇ ಒಂದು ಸೀಲೆಬಸ್ ಮಾಡಿ ಅದರ ಮುಖೇನ ಯಕ್ಷಗಾನ ನಾಟ್ಯ ಕಲಿಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.
LATEST NEWS
ಬೆಳಗ್ಗೆ ಏಳುವಾಗ ಬಲಗಡೆಯಿಂದ ಯಾಕೆ ಏಳಬೇಕು ಗೊತ್ತೇ..?
ಮಂಗಳೂರು: ರಾತ್ರಿ ಮಲಗೋದು ಎಷ್ಟು ಮುಖ್ಯವೋ ಬೆಳಗ್ಗಿನ ಜಾವ ಏಳೋದು ಕೂಡ ಅಷ್ಟೇ ಮುಖ್ಯವಾಗುತ್ತದೆ. ಸನಾತನ ಹಿಂದೂ ಧರ್ಮದಲ್ಲಿ ಒಂದು ವಿಶೇಷ ಸಂಪ್ರದಾಯ ಇದೆ. ಬೆಳಿಗ್ಗೆ ಬಲಗಡೆಯಿಂದ ಎದ್ದು ಅಂಗೈ ಉಜ್ಜಿ ಕಣ್ಣು ಮುಚ್ಚಿ ಕರಾಗ್ರೆ ವಸತೆ ಲಕ್ಷ್ಮಿ ಎನ್ನುವ ಶ್ಲೋಕ ಹೇಳುವುದು. ಬಾಲ್ಯದಲ್ಲಿ ನಮ್ಮ ಹಿರಿಯರು ಹಾಗೂ ನಮ್ಮ ಅಮ್ಮಂದಿರು ಬಲಗಡೆಗೆ ಏಳು ಅಂತ ಹೇಳಿರುವುದನ್ನು ಕೇಳಿರುತ್ತೇವೆ. ಅಥವಾ ನಾವು ಎಡ ಬದಿಯಿಂದ ಎಳುವುದ್ದನ್ನು ನೋಡಿದಾಗ ನಮ್ಮನ್ನು ಬಲಗಡೆಯಿಂದ ಎಬ್ಬಿಸಲು ಟ್ರೈ ಮಾಡಿರಬಹುದು.
ಬಲ ಭಾಗದಿಂದ ಎದ್ದರೆ ಅದೃಷ್ಟ
ಬಲ ಭಾಗದಿಂದ ಎದ್ದರೆ ಒಳ್ಳೆಯದು ಅನ್ನೋದು ಹೇಳಿದ್ದನ್ನ ನಾವು ಕೇಳಿರಬಹುದು. ಬಲ ಭಾಗದಿಂದ ಎಚ್ಚರಗೊಂಡರೆ ದಿನವಿಡೀ ಅದೃಷ್ಟ ಇತ್ಯಾದಿ ಕಲ್ಪನೆಗಳು ನಮ್ಮಲ್ಲಿ ಇರುತ್ತದೆ. ಇನ್ನೊಂದು ವಿಚಾರ ಏನು ಅಂದ್ರೆ ನಮ್ಮ ದೇಹ ನಿದ್ದೆಗೆ ಜಾರಿದಾಗ ನಮ್ಮ ದೇಹದಲ್ಲಿ ಸ್ನಾಯುಗಳು ರೆಸ್ಟ್ ಅಲ್ಲಿ ಇರುತ್ತವೆ.
ವೈಜ್ಞಾನಿಕ ಕಾರಣ
ವೈಜ್ಞಾನಿಕವಾಗಿ ಹೇಳುವುದಾದರೆ ನಮ್ಮ ಹೃದಯ ದೇಹದ ಎಡ ಭಾಗದಲ್ಲಿ ಇದೆ. ಅದರ ಸುತ್ತಲೂ ಹಲವಾರು ಸ್ನಾಯುಗಳು ಇವೆ. ನಾವು ಎಡ ಭಾಗದಿಂದ ಧಿಡೀರ್ ಅಂತ ಇದ್ರೆ ನಮ್ಮ ಇಡೀ ದೇಹದ ಒತ್ತಡ ಆ ಸ್ನಾಯುಗಳ ಮೇಲೆ ಬೀಳುತ್ತೆ. ಆ ಸ್ನಾಯುಗಳಿಗೆ ಸ್ವಲ್ಪ ಪೆಟ್ಟು ಬಿದ್ರೆ ಕೂಡ ಅದು ನಮ್ಮ ಹೃದಯಕ್ಕೆ ತುಂಬಾ ಅಪಾಯಕಾರಿ. ಆದ್ದರಿಂದ ನಮ್ಮ ಹಿರಿಯರು ಬಲ ಭಾಗದಿಂದ ಏಳಬೇಕು ಅಂತ ಹೇಳುತ್ತಿದ್ದರು.
ಇನ್ನು ಎಡಭಾಗದಿಂದ ಎದ್ದರೆ ದಿನ ಒಳ್ಳೆಯದಿರುವುದಿಲ್ಲ, ಏನಾದರೂ ಕೆಟ್ಟದ್ದು ಆಗುವ ಸಾಧ್ಯತೆಗಳು ಇರುತ್ತದೆ ಎಂಬುದು ಜನರ ನಂಬಿಕೆಯಾಗಿರುತ್ತದೆ. ಹಾಗಾಗಿ ಈಗಲೂ ಹೆಚ್ಚಿನ ಜನರು ಬೆಳ್ಳಗ್ಗಿನ ಜಾವ ಎಡಭಾಗದಿಂದ ಏಳದೇ ಬಲಭಾಗದಿಂದ ಏಳುತ್ತಾರೆ. ಬೆಳಗ್ಗೆ ಬಲ ಬದಿಯಿಂದ ಏಳುವುದರಿಂದ ನಿಮ್ಮ ಅಂದಿನ ದಿನ ಶಾಂತಿಯುತವಾಗಿಯೂ ಹಾಗೂ ಒತ್ತಡವಿಲ್ಲದೇ ಕಳೆಯಬಹುದು.
- FILM7 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA7 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ