LATEST NEWS
“ನಾನು ಮಲಗಿದ್ದಾಗ ಟಿಶರ್ಟ್ ಮೇಲೆತ್ತಿ ಎದೆಯ ಮೇಲೆ ಕೈ ಹಾಕಿದ್ದರು”- ಬ್ರಿಜ್ ಭೂಷಣ್ ವಿರುದ್ಧ ಆರೋಪಗಳು ಬಹಿರಂಗ..!
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಇತ್ತೀಚೆಗೆ ಎಫ್ಐಆರ್ ದಾಖಲಿಸಿದ್ದರು. ಈ ಎಫ್ಐಆರ್ನಲ್ಲಿ ದಾಖಲಾದ ಆರೋಪಗಳು ಈಗ ಒಂದೊಂದೇ ಬಯಲಾಗಿವೆ.
ನವದೆಹಲಿ :ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಇತ್ತೀಚೆಗೆ ಎಫ್ಐಆರ್ ದಾಖಲಿಸಿದ್ದರು. ಈ ಎಫ್ಐಆರ್ನಲ್ಲಿ ದಾಖಲಾದ ಆರೋಪಗಳು ಈಗ ಒಂದೊಂದೇ ಬಯಲಾಗಿವೆ.
’ನಾನು ಮ್ಯಾಟ್ ಮೇಲೆ ಮಲಗಿದ್ದೆ. ಬ್ರಿಜ್ಭೂಷಣ್ ಸಿಂಗ್ (Brij Bhushan Sharan Singh) ನನ್ನ ಬಳಿ ಬಂದು ಅನುಮತಿ ಇಲ್ಲದೆ ಟೀ ಶರ್ಟ್ ಎಳೆದಿದ್ದರು.
ನನ್ನ ಉಸಿರಾಟ ಪರಿಶೀಲನೆಯ ನೆಪದಲ್ಲಿ ನನ್ನ ಎದೆಯ ಮೇಲೆ ಕೈ ಹಾಕಿದರು. ನಂತರ ಹೊಟ್ಟೆಗೆ ಕೈ ಜಾರಿಸಿದ್ದರು. ಮೆಲ್ಲನೇ ತನ್ನ ಕೈಯನ್ನು ನನ್ನ ಹಣೆಯ ಮೇಲಿಟ್ಟರು‘..
ಹೀಗಂತ ಮಹಿಳಾ ಕುಸ್ತಿಪಟುವೊಬ್ಬರು ಭಾರತೀಯ ಕುಸ್ತಿ ಫೆಡರೇಷನ್ (WFI) ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಇತ್ತೀಚೆಗೆ ಎಫ್ಐಆರ್ ದಾಖಲಿಸಿದ್ದರು.
ಈ ಎಫ್ಐಆರ್ನಲ್ಲಿ ದಾಖಲಾದ ಆರೋಪಗಳು ಈಗ ಬಯಲಾಗಿವೆ. ಅಸಮರ್ಪಕ ಸ್ಪರ್ಶ, ಮೈ ಸವರುವುದು, ಮುಜುಗರ ಪ್ರಶ್ನೆಗಳನ್ನು ಕೇಳುವುದು, ಲೈಂಗಿಕ ಸುಖಕ್ಕೆ ಬೇಡಿಕೆ ಇಡುವುದು ಸೇರಿದಂತೆ ಪ್ರಮುಖ ಆರೋಪಗಳನ್ನು ದೂರಿನಲ್ಲಿ ದಾಖಲಿಸಲಾಗಿದೆ.
ಭಾರತದ ಅಗ್ರಮಾನ್ಯ ಕುಸ್ತಿಪಟುಗಳು ಕಳೆದ 40 ದಿನಗಳಿಂದಲೂ ಬ್ರಿಜ್ ಭೂಷಣ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ (Wrestlers Protest) ನಡೆಸುತ್ತಿದ್ದಾರೆ.
ದೂರಿನಲ್ಲಿರುವ ಆರೋಪಗಳೇನು?
ಕುಸ್ತಿಪಟು 1
ಬ್ರಿಜ್ ಭೂಷಣ್ ತಮ್ಮೊಂದಿಗೆ ನಡೆಸಿಕೊಂಡ ಬಗ್ಗೆ ಮಹಿಳಾ ಕುಸ್ತಿಪಟುಗಳು ದುಃಖವನ್ನು ವ್ಯಕ್ತಪಡಿಸಿ ಹೇಳಿಕೆ ನೀಡಿದ್ದಾರೆ. ನಾನು ವಿದೇಶದಲ್ಲೊಮ್ಮೆ ಸ್ಪರ್ಧೆಯ ಸಂದರ್ಭದಲ್ಲಿ ಗಾಯಗೊಂಡಿದ್ದೆ. ಆಗ ಲೈಂಗಿಕವಾಗಿ ಸಹಕರಿಸಿದರೆ ನಿಮ್ಮ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸಂಸ್ಥೆಯೇ ನೋಡಿಕೊಳ್ಳಲಿದೆ ಬ್ರಿಜ್ ಭೂಷಣ್ ಆಮೀಷ ಒಡ್ಡಿದ್ದರು ಎಂದು ಕುಸ್ತಿಪಟು ಆರೋಪಿಸಿದ್ದಾರೆ.
ಕುಸ್ತಿಪಟು 2
ನಾನು ಒಂದು ದಿನ ಹೋಟೆಲ್ನ ರೆಸ್ಟೋರೆಂಟ್ನಲ್ಲಿ ಊಟ ಮಾಡುತ್ತಿದ್ದೆ. ಆಗ ಬ್ರಿಜ್ ಭೂಷಣ್ ಅವರು ನನ್ನನ್ನು ಪ್ರತ್ಯೇಕ ಡೈನಿಂಗ್ ಟೇಬಲ್ಗೆ ಕರೆದರು. ಆಗ ನನ್ನ ಒಪ್ಪಿಗೆ ಇಲ್ಲದೆ, ಎದೆಯ ಮೇಲೆ ಕೈ ಹಾಕಿದರು. ನಂತರ ಆ ಕೈಗಳು ಹೊಟ್ಟೆಯ ಭಾಗಕ್ಕೆ ಜಾರಿಸಿದರು. ಮತ್ತೆ ಕೈಗಳನ್ನು ಎದೆಯ ಭಾಗದತ್ತ ಕೊಂಡೊಯ್ದರು. ಹೀಗೆ ನಾಲ್ಕೈ ಬಾರಿ ಮಾಡಿದರು. ನಾನು ಒಮ್ಮೆ ಬ್ರಿಜ್ ಭೂಷಣ್ ಸಿಂಗ್ ಕಚೇರಿಗೆ ಹೋಗಿದ್ದೆ. ಆಗ ಏಕಾಏಕಿ ಒಪ್ಪಿಗೆ ಇಲ್ಲದೆ ನನ್ನ ಅಂಗೈ, ಮೊಣಕಾಲು, ತೊಡೆಗಳು ಹಾಗೂ ಭುಜಗಳ ಮೇಲೆ ಅನುಚಿತವಾಗಿ ಸ್ಪರ್ಶಿಸಿದರು. ನಾವು ಕುಳಿತಿದ್ದಾಗ ಅವರ ಪಾದಗಳಿಂದ ನಮ್ಮ ಪಾದಗಳನ್ನು ಒತ್ತುತ್ತಿದ್ದರು ಎಂದು ಮತ್ತೊಬ್ಬ ಕುಸ್ತಿಪಟು ಎಫ್ಐಆರ್ನಲ್ಲಿ ದಾಖಲಿಸಿದ್ದಾರೆ.
ಕುಸ್ತಿಪಟು 3
ಮ್ಯಾಟ್ ಮೇಲೆ ನಾನು ಮಲಗಿದ್ದೆ. ನನ್ನ ಬಳಿ ಬಂದು ಕೂತಿದ್ದರು. ಆ ಸಂದರ್ಭದಲ್ಲಿ ನನ್ನ ಕೋಚ್ ಇರಲಿಲ್ಲ. ನನ್ನ ಅನುಮತಿ ಇಲ್ಲದೆ ನನ್ನ ಟಿ ಶರ್ಟ್ ಎತ್ತಿದರು. ಉಸಿರಾಟ ಪರೀಕ್ಷೆಯ ನೆಪದಲ್ಲಿ ಎದೆಯ ಮೇಲೆ ಕೈ ಇಟ್ಟರು. ನಂತರ ಹೊಟ್ಟೆಯ ಮೇಲೆ ಕೈ ಜಾರಿಸಿದ್ದರು. ನನ್ನನ್ನು ಫೆಡರೇಷನ್ ಕಚೇರಿಗೆ ಕರೆದಿದ್ದರು. ಆಗ ಸಹೋದರನ ಜೊತೆ ಹೋಗಿದ್ದೆ. ತಮ್ಮನನ್ನು ಹೊರಗಿರುವಂತೆ ಹೇಳಿದರು. ನಾನು ಒಳಗೆ ಹೋಗುತ್ತಿದ್ದಂತೆ ಬಾಗಿಲು ಹಾಕಿದರು. ದೈಹಿಕ ಸಂಪರ್ಕಕ್ಕೆ ಯತ್ನಿಸಿದರು ಎಂದು ಮತ್ತೊಬ್ಬ ಕುಸ್ತಿಪಟು ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.
ಕುಸ್ತಿಪಟು 4
ನಾನು ಊಟ ಮಾಡಲು ಡೈನಿಂಗ್ ಟೇಬಲ್ ಬಳಿ ಕುಳಿತಿದ್ದೆ. ಆಗ ಬ್ರಿಜ್ ಭೂಷಣ್ ನನ್ನ ಬಳಿ ಬಂದರು. ಆರೋಗ್ಯ ಮತ್ತು ಪ್ರದರ್ಶನ ನೀಡಲು ಈ ಆಹಾರ ಉತ್ತಮ. ಈ ಆಹಾರ ತಿನ್ನುವಂತೆ ಸೂಚಿಸಿದ್ದರು. ಇದೇ ವೇಳೆ ನನ್ನ ಹೊಟ್ಟೆಯ ಮೇಲೆ ಕೈ ಹಾಕಿದರು. ಆದರೆ ಆ ಖಾದ್ಯವನ್ನು ನಾನೆಂದೂ ಕೇಳಿಯೇ ಇರಲಿಲ್ಲ. ಆದರೆ ನಮ್ಮ ಕೋಚ್ ಅದಕ್ಕೆ ಒಪ್ಪಿಗೆ ಕೊಟ್ಟಿರಲಿಲ್ಲ ಎಂದು ಮತ್ತೊಬ್ಬರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕುಸ್ತಿಪಟು 5
ತಂಡದೊಂದಿಗೆ ಫೋಟೋ ತೆಗೆಸಿಕೊಳ್ಳಲು ನಾನು ಕೊನೆಯ ಸಾಲಿನಲ್ಲಿ ನಿಂತಿದ್ದೆ. ಆಗ ಬ್ರಿಜ್ ಭೂಷಣ್ ನನ್ನ ಬಳಿಗೆ ಬಂದು ನಿಂತರು. ಯಾರೋ ಭುಜದ ಮೇಲೆ ಕೈ ಹಾಕಿದ ಅನುಭವಾಯ್ತು. ಬಳಿಕ ನನ್ನ ಹಿಂಬದಿಯನ್ನು ಅಸಭ್ಯವಾಗಿ ಕೈಗಳಿಂದ ಮುಟ್ಟಿದ್ದರು. ನಾನು ಓಡಿ ಹೋಗಲು ಯತ್ನಿಸಿದಾಗ ನನ್ನ ಭುಜದ ಮೇಲೆ ಕೈ ಹಾಕಿದರು ಎಂದು ಮತ್ತೊಬ್ಬ ಕುಸ್ತಿಪಟು ತನಗಾದ ಅನ್ಯಾಯವನ್ನು ತೋಡಿಕೊಂಡಿದ್ದಾರೆ.
ಕುಸ್ತಿಪಟು 6
ನಾನು ಕುಸ್ತಿ ಆಡಲು ಕೆಲವು ಸಲಕರಣೆಗಳನ್ನು ಖರೀದಿಸಬೇಕಾಗಿತ್ತು. ಅವರಿಗೆ ಸಹಾಯ ಮಾಡಲು ಕೇಳಿದ್ದೆ. ಲೈಂಗಿಕ ಬಯಕೆ ಪೂರೈಸು ಎಂದು ಒತ್ತಾಯಿಸಿದರು. ನನ್ನನ್ನು ಬಲವಂತವಾಗಿ ತಬ್ಬಿಕೊಂಡಿದ್ದರು. ಹಾಸಿಗೆಗೆ ಬರುವಂತೆ ಕೇಳಿದ್ದ. ಅನುಚಿತವಾಗಿ ವರ್ತಿಸುತ್ತಿದ್ದರು. ದೌರ್ಜನ್ಯದ ರೀತಿಯಲ್ಲಿ ಬೆದರಿಕೆ ಹಾಕುತ್ತಿದ್ದರು. ಲೈಂಗಿಕ ಕಿರುಕುಳ ನೀಡುತ್ತಿದ್ದರು. ಭಯದಿಂದ ಅವರ ಕೈಗೆ ಎಲ್ಲರೂ ಗುಂಪು ಗುಂಪಾಗಿ ಓಡುತ್ತಿದ್ದೆವು. ಒಂಟಿಯಾಗಿ ಅವರ ಕೈಗೆ ಸಿಗದಂತೆ ತಪ್ಪಿಸಿಕೊಳ್ಳುತ್ತಿದ್ದೆವು ಎಂದು ಕ್ರೀಡಾಪಟುಗಳು ಆರೋಪಿಸಿದ್ದಾರೆ.
ದಾಖಲಾದ ಸೆಕ್ಷನ್ಗಳೇನು?
ಎರಡೂ ಎಫ್ಐಆರ್ಗಳಲ್ಲಿ ಐಪಿಸಿ ಸೆಕ್ಷನ್ 354 (ಮಹಿಳೆಯ ಘನತೆಗೆ ಧಕ್ಕೆ ತರುವುದು, ಹಲ್ಲೆ ಅಥವಾ ಬಲವಂತ ಪ್ರಯೋಗ), 354 ಡಿ (ಅನುಚಿತ ವರ್ತನೆ), ಮತ್ತು 34 (ಸಾಮಾನ್ಯ ಉದ್ದೇಶ) 354 ಎ (ಲೈಂಗಿಕ ಕಿರುಕುಳ) ಅಡಿ ಪ್ರಕರಣಗಳು ದಾಖಲಾಗಿವೆ. ಇವುಗಳ ಪ್ರಕಾರ ಒಂದರಿಂದ ಮೂರು ವರ್ಷಗಳ ಪ್ರಕಾರ, ಶಿಕ್ಷೆಗೆ ಒಳಪಡಿಸುತ್ತವೆ. ಸೆಕ್ಷನ್ 10ರ ಅಡಿಯಲ್ಲೂ (ಫೋಕ್ಸೋ) ಪ್ರಕರಣ ದಾಖಲಾಗಿದ್ದು, 5 ರಿಂದ 7 ವರ್ಷಗಳ ಶಿಕ್ಷೆಯಾಗಲಿದೆ.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.
LATEST NEWS
ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಕುಂದಾಪುರ : ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿ*ಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ನಡೆದಿದೆ. ಕೋಟ ಮಣೂರು ನಿವಾಸಿ ವಿಕಾಸ್ ಆಚಾರ್ಯ(22) ಮೃ*ತಪಟ್ಟ ಯುವಕ.
ಸೋಮವಾರ ರಾತ್ರಿ 1.30ರ ಸುಮಾರಿಗೆ ವಿಕಾಸ್ ಸಾಸ್ತಾನದಿಂದ ಕೋಟ ಮಣೂರು ಕಡೆ ಬರುತ್ತಿದ್ದ
ವೇಳೆ ಈ ದುರಂ*ತ ಸಂಭವಿಸಿದೆ. ಕೋಟ ಗುಜಿರಿ ಅಂಗಡಿ ಸಮೀಪ ಬೈಕ್ ನಿಯಂತ್ರಣ ತಪ್ಪಿದೆ. ಪರಿಣಾಮ ಹೆದ್ದಾರಿಯ ಡಿವೈಡರ್ ಗೆ ಡಿ*ಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ. ಗಂಭೀ*ರವಾಗಿ ಗಾಯಗೊಂಡ ವಿಕಾಸ್ ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ULLALA : ಮಲಗಿದ್ದಲ್ಲೇ ಹೃದಯಾಘಾ*ತಕ್ಕೆ ಬ*ಲಿಯಾದ ಯುವಕ
DAKSHINA KANNADA
ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?
ಮಂಗಳೂರು: ಇತ್ತೀಚಿನ ದಿನಗಳಲ್ಲಿ ಜನರು ರಾತ್ರಿಯ ಹೊತ್ತನ್ನು ಮೊಬೈಲ್, ಆನ್ಲೈನ್ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಕಳೆಯುತ್ತಾರೆ. ಇದು ಅವರಿಗೆ ನಿದ್ರಾಹೀನತೆ ಸಮಸ್ಯೆಗೂ ಕಾರಣವಾಗುತ್ತದೆ. ರಾತ್ರಿ ಬೇಗ ಮಲಗದೇ ಇರುವುದು ಮತ್ತು ಮಧ್ಯಾಹ್ನ ನಿದ್ದೆ ಮಾಡುವುದು ಹೀಗೆ ಮಾಡಿದರೆ ಆರೋಗ್ಯ ಹಾಳಾಗುತ್ತದೆ. ರಾತ್ರಿಯ ಹೊತ್ತು ಚಿಕ್ಕ ಮಕ್ಕಳು ಅಪ್ಪ ಅಮ್ಮನ ಒಟ್ಟಿಗೆ ಮಲಗುತ್ತಾರೆ. ಅದೇ ರೀತಿ ಗಂಡ ಹೆಂಡತಿಯರು ಒಟ್ಟಿಗೆ ಮಲಗುವುದು ಸರ್ವೇ ಸಾಮಾನ್ಯ.
ಮದುವೆಯ ನಂತರ ಸಾಮಾನ್ಯವಾಗಿ ಗಂಡ ಹೆಂಡತಿ ಒಟ್ಟಿಗೆ ಮಲಗುತ್ತಾರೆ. ಇದು ಸಮಾಜದ ಸಾಮಾನ್ಯ ನಿಯಮ ಸಹ ಹೌದು ಎನ್ನಬಹುದು. ಮದುವೆಯ ನಂತರ ಪತಿ-ಪತ್ನಿಯರ ನಡುವಿನ ಚರ್ಚೆಗಳು, ಮಾತುಗಳು ಸಾಮಾನ್ಯವಾಗಿ ಮಲಗುವ ಸಮಯದಲ್ಲೇ ಆಗುತ್ತದೆ. ಇನ್ನು ಪತಿ-ಪತ್ನಿಯರು ಪ್ರತ್ಯೇಕವಾಗಿ ಮಲಗುವುದರಿಂದಲೂ ಹಲವಾರು ರೀತಿಯ ಪ್ರಯೋಜನಗಳಿವೆ ಎಂದು ವರದಿ ಮೂಲಕ ತಿಳಿದುಬಂದಿದೆ.
ಮೊದಲಿಗೆ, ಈ ವಿಷಯದ ಬಗ್ಗೆ ಮಾಡಿದ ಎಲ್ಲಾ ಸಂಶೋಧನೆಗಳು ಗಂಡ ಮತ್ತು ಹೆಂಡತಿ ಪ್ರತ್ಯೇಕವಾಗಿ ಮಲಗುವುದು ತಪ್ಪಲ್ಲ ಎಂದು ತೋರಿಸುತ್ತದೆ ಮತ್ತು ಪ್ರತಿ ದಂಪತಿಗಳು ತಮ್ಮದೇ ಆದ ನಿಯಮಗಳನ್ನು ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ತಿಳಿಸಿದೆ. ಆದರೆ ಅನೇಕ ಬಾರಿ ಜನರು ಇಂತಹ ಮಾತುಗಳನ್ನು ಕೇಳಲು ವಿಭಿನ್ನವಾಗಿ ಪ್ರತಿಕ್ರಿಯಿಸುತ್ತಾರೆ ಮತ್ತು ಈ ದಂಪತಿಗಳ ಜೀವನದಲ್ಲಿ ಏನೋ ಸರಿಯಾಗಿಲ್ಲ ಎಂದು ಭಾವಿಸುತ್ತಾರೆ.
ಆದರೆ ಅಷ್ಟೇ ಅಲ್ಲ, ಕೆಲವೊಮ್ಮೆ ಬೇರೆ ಬೇರೆ ಕೋಣೆಗಳಲ್ಲಿ ದಂಪತಿಗಳಿಗೆ ಮಲಗುವುದರಿಂದ ದಂಪತಿಗಳಿಗೆನೇ ಹೆಚ್ಚು ಅನುಕೂಲಕರವಾಗಿರುತ್ತದೆ. ಸಂಶೋಧನೆಯ ಪ್ರಕಾರ ನೀವು ಪ್ರತ್ಯೇಕವಾಗಿ ಏಕೆ ಮಲಗುವುದರಿಂದ ಯಾವುದೇ ನಿದ್ರಾ ಭಂಗವನ್ನು ಉಂಟುಮಾಡುವುದಿಲ್ಲ. ಇದರಿಂದ ಸುಖಕರವಾಗಿ ನಿದ್ರೆ ಮಾಡಬಹುದು.
ರಾತ್ರಿಯಲ್ಲಿ ಗೊರಕೆ ಹೊಡೆಯುವುದು, ಒದೆಯುವುದು, ದೇಹದ ಉಷ್ಣತೆಯ ಬದಲಾವಣೆ ವಿಭಿನ್ನವಾಗಿರುತ್ತದೆ. ನೀವು ಕೆಲವೊಮ್ಮೆ ಪ್ರತ್ಯೇಕವಾಗಿ ಮಲಗಲು ಪ್ರಯತ್ನಿಸಿದರೆ ನಿಮ್ಮ ದೇಹವು ಅರಾಮವಾಗಲು ಸಹಾಯಕವಾಗುತ್ತದೆ. ಸ್ವಲ್ಪ ಸಮಯದ ಅಂತರವು ನಿಮ್ಮ ಸಂಬಂಧವನ್ನು ಹೆಚ್ಚು ಉತ್ತಮಗೊಳಿಸುತ್ತದೆ. ನಿಮಗೆ ವಿಶ್ರಾಂತಿ ಪಡೆಯಲು ಸಮಯ ಸಿಗುತ್ತದೆ.
ಜೊತೆಗೆ ಕೆಲವೊಮ್ಮೆ ದಂಪತಿಗಳ ನಡುವೆ ಮನಸ್ಥಾಪವಾದಾಗ ಈ ರೀತಿ ಕೆಲ ದಿನ ದೂರ ಮಲಗಿದರೆ ಆ ವಿರಹ ವೇದನೆಯಿಂದ ಕೋಪವೂ ತಣ್ಣಗಾಗುತ್ತದೆ. ದೈಹಿಕ ಅನ್ಯೋನ್ಯತೆ ಮತ್ತು ಭಾವನಾತ್ಮಕ ಪ್ರೀತಿಯ ಅವಶ್ಯಕತೆ ಯಾವಾಗಲೂ ಇರುತ್ತದೆ ಮತ್ತು ಆದ್ದರಿಂದ ಕೆಲವೊಮ್ಮೆ ಪ್ರತ್ಯೇಕವಾಗಿ ಮಲಗುವುದು ಉತ್ತಮ. ಜೊತೆಗೆ ಕೆಲವೊಮ್ಮೆ ಜ್ವರ ರೀತಿಯ ಅನಾರೋಗ್ಯವಿದ್ದಾಗ ದೂರ ಮಲಗಿದರೆ ಒಬ್ಬರಿಂದ ಒಬ್ಬರಿಗೆ ಅದು ಹರಡುವುದಿಲ್ಲ.
ಇದನ್ನೂ ಓದಿ ULLALA : ಮಲಗಿದ್ದಲ್ಲೇ ಹೃದಯಾಘಾ*ತಕ್ಕೆ ಬ*ಲಿಯಾದ ಯುವಕ
ಕೆಲವೊಮ್ಮೆ ದಂಪತಿಗಳಿಗೆ ಸ್ವಲ್ಪ ಅಂತರ ಕಾಯ್ದುಕೊಳ್ಳುವುದು ಅವರ ಲೈಂಗಿಕ ಜೀವನಕ್ಕೆ ಒಳ್ಳೆಯದು ಎಂದು ಸಂಶೋಧನೆ ಸೂಚಿಸುತ್ತದೆ. ಇದರಿಂದ ದಣಿವು ಆಗುವುದು ಕಡಿಮೆ ಆಗುತ್ತದೆ. ಪರಿಣಾಮವಾಗಿ, ಲೈಂಗಿಕ ಜೀವನವನ್ನು ಸುಧಾರಿಸಬಹುದು.
- DAKSHINA KANNADA6 days ago
ಮಂಗಳೂರು : ಬೈಕ್ಗೆ ಕಾರು ಡಿಕ್ಕಿ; ಇಹಲೋಕ ತ್ಯಜಿಸಿದ ವಿದ್ಯಾರ್ಥಿ
- DAKSHINA KANNADA6 days ago
ಸೀರೆ ಉಟ್ರೆ ಕ್ಯಾನ್ಸರ್ ಬರುತ್ತಂತೆ..! ಏನಿದು ಸೀರೆ ಕ್ಯಾನ್ಸರ್?
- DAKSHINA KANNADA7 days ago
ದಂತ ವೈದ್ಯೆಯಾಗಿ ಸೇವೆ ಆರಂಭದ ದಿನವೇ ವಿಧಿಯಾಟ..! ಯುವ ವೈದ್ಯೆ ಸಾ*ವು..!
- DAKSHINA KANNADA7 days ago
ಬಿಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!