ಮಂಗಳೂರು: ನಗರದ ಪಂಪ್ವೆಲ್ ಜಂಕ್ಷನ್ನಿಂದ ಪಡೀಲ್ವರೆಗಿನ ರಸ್ತೆಯನ್ನು ‘ಸ್ಮಾರ್ಟ್ ಸಿಟಿ’ ಯೋಜನೆಯಡಿ ಕಾಂಕ್ರೀಟೀಕರಣ ಕಾಮಗಾರಿಗೆ ನಿನ್ನೆ ಸಂಸದ ನಳಿನ್ ಕುಮಾರ್ ಕಟೀಲ್ ಭೂಮಿಪೂಜೆ ನೆರವೇರಿಸಿದರು.
2023ರ ವೇಳೆಗೆ ಮಂಗಳೂರು ನಗರವನ್ನು ಸಂಪರ್ಕಿಸುವ ಎಲ್ಲ ಹೆದ್ದಾರಿಗಳು ಚತುಷ್ಪಥ ರಸ್ತೆಗಳಾಗಿ ಅಭಿವೃದ್ಧಿಯಾಗಲಿದೆ’.
‘ಮುಂದಿನ ದಿನಗಳಲ್ಲಿ ಪಂಪ್ವೆಲ್ನಲ್ಲಿ ನೂತನ ಬಸ್ನಿಲ್ದಾಣ, ಪಡೀಲ್ನಲ್ಲಿ ಜಿಲ್ಲಾಧಿಕಾರಿ ಕಚೇರಿ ಕಾರ್ಯಾಲಯ ಆರಂಭಗೊಳ್ಳಲಿದ್ದು, ಆ ಒತ್ತಡ ಪಂಪ್ವೆಲ್– ಪಡೀಲ್ ರಸ್ತೆಗೆ ವರ್ಗಾವಣೆಯಾಗಲಿದೆ. ಹೀಗಾಗಿ, ಈ ರಸ್ತೆಯನ್ನು ಆದ್ಯತೆಯಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ’ ಎಂದು ಹೇಳಿದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ‘ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸರ್ಕಾರದ ವಿವಿಧ ಯೋಜನೆಯಡಿ ₹ 3 ಸಾವಿರ ಕೋಟಿಗೂ ಅಧಿಕ ಅನುದಾನ ಮಂಜೂರಾಗಿದೆ. ಅದರಲ್ಲಿ ₹ 500 ಕೋಟಿಯ ಕಾಮಗಾರಿ ಮಾತ್ರ ನಡೆದಿದೆ. ಉಳಿದ ಕಾಮಗಾರಿ ಹಂತಹಂತವಾಗಿ ನಡೆಯಲಿದೆ.
ಮೇಯರ್ ಪ್ರೇಮಾನಂದ ಶೆಟ್ಟಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಮೀನುಗಾರಿಕಾ ನಿಗಮ ಅಧ್ಯಕ್ಷ ನಿತಿನ್ ಕುಮಾರ್, ದಿ. ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿಸ್ ಲಿಮಿಟೆಡ್ನ ಅಧ್ಯಕ್ಷ ಸಂತೋಷ್ ಶೆಟ್ಟಿ ಬೊಳಿಯಾರ್, ಪಾಲಿಕೆಯ ಮುಖ್ಯಸಚೇತಕ ಸುಧೀರ್ ಶೆಟ್ಟಿ ಕಣ್ಣೂರು, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಂದೀಪ್ ಗರೋಡಿ,
ಲೀಲಾವತಿ ಪ್ರಕಾಶ್, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ, ಪಾಲಿಕೆ ಸದಸ್ಯರಾದ ಪ್ರವೀಣ್ಚಂದ್ರ ಆಳ್ವ, ಕೇಶವ ಮರೋಳಿ, ರೂಪಶ್ರೀ ಪೂಜಾರಿ, ಶೋಭಾ ಪೂಜಾರಿ, ವಿಜಯಕುಮಾರ್ ಶೆಟ್ಟಿ, ಭಾಸ್ಕರಚಂದ್ರ, ಪ್ರಭಾಮಾಲಿನಿ, ಮಾಜಿ ಸದಸ್ಯರಾದ ಆಶಾ ಡಿಸಿಲ್ವ, ಜೇಮ್ಸ್ ಡಿಸೋಜ ಇದ್ದರು. ಅರುಣ್ಪ್ರಭಾ ಸ್ವಾಗತಿಸಿದರು.
‘30 ಕೋಟಿ ವೆಚ್ಚದ ಯೋಜನೆ’
ಪಂಪ್ವೆಲ್– ಪಡೀಲ್ ರಸ್ತೆಯು 2,800 ಮೀ. ಉದ್ದವಿದ್ದು, ಇದನ್ನು 24 ಮೀ. ಅಗಲದಲ್ಲಿ ಕಾಂಕೀಟ್ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತದೆ. ಈ ರಸ್ತೆಯಲ್ಲಿ 3.5 ಮೀ. ಅಗಲದ 4 ಲೇನ್ ಕಾಂಕ್ರೀಟ್ ವೇ, ರಸ್ತೆಯ ಇಕ್ಕೆಲಗಳಲ್ಲಿ 3 ಮೀ. ಅಗಲದ ಇಂಟರ್ಲಾಕ್ ಅಳವಡಿಸಲಾಗುತ್ತದೆ. ರಸ್ತೆಯ ಎರಡು ಇಕ್ಕೆಲಗಳಲ್ಲಿ ಮಳೆನೀರು ಚರಂಡಿ, ಯುಟಿಲಿಟಿ ಡಕ್ಟ್, ಪಾದಚಾರಿ ಮಾರ್ಗವನ್ನು ನಿರ್ಮಿಸಲಾಗುತ್ತದೆ. ಈ ರಸ್ತೆಯನ್ನು ಸ್ಮಾರ್ಟ್ಸಿಟಿ ಯೋಜನೆಯ 26 ಕೋಟಿ ಹಾಗೂ ಶಾಸಕರ ನಿಧಿ 4 ಕೋಟಿಯಲ್ಲಿ ಅಭಿವೃದ್ಧಿಯಾಗಲಿದೆ.