Connect with us

    LATEST NEWS

    ಯುವರತ್ನ ‘ಪುನೀತ ನೆನಪು’ ನುಡಿನಮನ: 14ಕ್ಕೂ ಹೆಚ್ಚು ದೇಶಗಳಿಂದ ವೆಬಿನಾರ್‌ನಲ್ಲಿ ಭಾಗಿ

    Published

    on

    ಕುವೈಟ್‌: ಇತ್ತೀಚೆಗೆ ಹೃದಯಸ್ತಂಭನದಿಂದ ನಿಧನರಾದ ನಟ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ ‘ಪುನೀತ ನೆನಪು’ ಎಂಬ ನುಡಿನಮನ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ವೆಬಿನಾರ್‌ ಮೂಲಕ ಆಯೋಜಿಸಿತ್ತು.


    ವಿಶ್ವದ 14ಕ್ಕೂ ಹೆಚ್ಚಿನ ದೇಶಗಳಲ್ಲಿ ನೆಲೆಸಿರುವ 38ಕ್ಕೂ ಹೆಚ್ಚಿನ ಕನ್ನಡ ಪರ ಸಂಘಟನೆಗಳು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಅಪ್ಪು ಅಭಿಮಾನಿಗಳು ತಮ್ಮನ್ನಗಲಿದ ನೆಚ್ಚಿನ ನಟನ ಜೊತೆ ತಮಗಿದ್ದ ಒಡನಾಟ, ಪ್ರೀತಿ, ಅಭಿಮಾನವನ್ನು ಮುಕ್ತವಾಗಿ ಹಂಚಿಕೊಂಡು ನುಡಿನಮನ ಸಲ್ಲಿಸಿದರು.


    ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ರವರು ಪಾಲ್ಗೊಂಡು, ‘ನನ್ನ ಸ್ವಂತ ಮಗನನ್ನು ಕಳೆದುಕೊಂಡಷ್ಟು ದುಃಖವಾಗಿದೆ’ ಎಂದು ಅಪ್ಪು ಜೊತೆಗಿನ ಹಲವು ನೆನಪುಗಳನ್ನು ಹಂಚಿಕೊಂಡರು. ಮಾಜಿ ಗೃಹ ಸಚಿವರಾದ ಎಂ.ಬಿ ಪಾಟೀಲ್ ಮಾತನಾಡಿ ಅಪ್ಪು ಜೊತೆಗಿನ ಸವಿನಯ ಸಂಬಂಧ ಹಾಗೂ ಅವರ ಜೊತೆ ಕೊನೆಯ ಭೇಟಿ ಸಂದರ್ಭದ ಘಟನೆಯನ್ನು ನೆನಪಿಸಿಕೊಂಡು, ಭಾವುಕರಾಗಿ ಶೃದ್ಧಾಂಜಲಿ ಅರ್ಪಿಸಿದರು.

    ಬೆಂಗಳೂರಿನ ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹಾರಿಸ್ ಮಾತನಾಡಿ ಪುನೀತ್ ರಾಜಕುಮಾರ್ ಜೀವನದಲ್ಲಿ ಅಳವಡಿಸಿದ್ದ ಸರಳತೆಯ ಕುರಿತು ನೆನಪಿನಂಗಳದಿಂದ ಹಲವು ಘಟನೆಗಳನ್ನು ಸ್ಮರಿಸಿದರು.
    ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅಪ್ಪು ರವರ ಮೊದಲ ಭೇಟಿಯಲ್ಲೇ ತೋರಿದ ವಿನಯ ಮತ್ತು ಪ್ರೀತಿಯ ಅನುಭವವನ್ನು ಮಾತಿನಲ್ಲಿ ಹಂಚಿಕೊಂಡರು. ಮಂಗಳೂರು ನಗರ ಸಂಚಾರಿ ವಿಭಾಗದ ಎಸಿಪಿ ನಟರಾಜ್ ರವರು ಮಾತನಾಡಿ ಪುನೀತ್ ಜೀವನದಲ್ಲಿ ಅಳವಡಿಸಿಕೊಂಡ ಆದರ್ಶಗಳನ್ನು ಹಲವು ನೆನಪುಗಳ ಸಹಿತ ಮೆಲುಕು ಹಾಕಿದರು.

    ದುಬೈನ ಉದಯೋನ್ಮುಖ ಗಾಯಕ ಉಮರ್ ಸೈಫ್ ರವರು ಪುನೀತ್ ರಾಜಕುಮಾರ್ ರವರ ‘ಬೊಂಬೆ ಹೇಳುತೈತೆ’ ‘ನಿನ್ನಿಂದಲೇ’ ಹಾಡನ್ನು ಮನಮುಟ್ಟುವಂತೆ ಹಾಡಿದಾಗ ನೆರೆದಿದ್ದ ಅಭಿಮಾನಿಗಳೆಲ್ಲರೂ ಅಪ್ಪು ನೆನೆದು ಗದ್ಗದಿತರಾದರು.
    ಕಾರ್ಯಕ್ರಮದ ಸಂಘಟಕ, ಕನ್ನಡಿಗಾಸ್ ಫೆಡರೇಷನ್ ಸಂಚಾಲಕ ಹಿದಾಯತ್ ಅಡ್ಡೂರ್ ಮಾತನಾಡಿ ನಮ್ಮ ಜೀವನದಲ್ಲಿ ಪುನೀತ್ ರವರಂತಹ ಸರಳತೆ, ಪ್ರಚಾರ ಬಯಸದೇ ನೆರವಾಗುವ ಗುಣವನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸೋಣ, ಆ ಮೂಲಕ ನಿಜಾರ್ಥದಲ್ಲಿ ಶೃದ್ಧಾಂಜಲಿ ಅರ್ಪಿಸೋಣ ಎಂದರು.

    ಈ ಸಂದರ್ಭದಲ್ಲಿ ಕನ್ನಡಿಗಾಸ್ ಫೆಡರೇಷನ್ ವತಿಯಿಂದ ಪುನೀತ್ ರವರಿಗೆ ಶೃದ್ಧಾಂಜಲಿ ಅರ್ಪಿಸುವ ವೀಡಿಯೊ ಹಾಗೂ ಕಳೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬಂದು ಪುನೀತ್ ರಾಜಕುಮಾರ್ ಶುಭ ಹಾರೈಸಿದ್ದ ವೀಡಿಯೊ ಸಂದೇಶವನ್ನು ಪ್ರದರ್ಶಿಸಲಾಯಿತು.
    ಬಹರೈನ್ ಕನ್ನಡ ಸಂಘ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಅಬುಧಾಬಿ ಕರ್ನಾಟಕ ಸಂಘ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಹಾಲೆಂಡ್ ಕನ್ನಡ ಸಂಘದ ಅಶೋಕ್, ಕನ್ನಡ ಸಂಘ ಉಗಾಂಡ ಅಧ್ಯಕ್ಷರಾದ ಸುಧೀರ್, ಬ್ಯಾಂಕಾಕ್ ಕನ್ನಡ ಸಂಘದ ಶಿವು ಪೂಜಾರಿ, ಇಟಲಿ ಕನ್ನಡ ಸಂಘದ ಅಧ್ಯಕ್ಷರಾದ ಹೇಮೇಗೌಡ, ಕನ್ನಡಿಗರು ದುಬೈ ಮಾಜಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ಕನ್ನಡ ಮಿತ್ರರು ಯುಎಇ ಅಧ್ಯಕ್ಷ ಶಶಿಧರ ನಾಗರಾಜಪ್ಪ, ನಮ್ಮ ರೇಡಿಯೋ ಸ್ಥಾಪಕ ಅವನಿಧಾರ್ ಹವಾಲ್ದಾರ್, ಓವರ್ಸೀಸ್ ಕನ್ನಡ ಮೂವೀಸ್ ನ ದೀಪಕ್ ಸೋಮಶೇಖರ್ ಪುನೀತ್ ರಾಜಕುಮಾರ್ ರವರಿಗೆ ನುಡಿನಮನ ಸಲ್ಲಿಸಿದರು.
    ದ್ವಾರಕೀಶ್ ರವರ ಪುತ್ರ ಸುಕೇಶ್ ದ್ವಾರಕೀಶ್, ಬಾ! ಮಮತಾ ರಡಾರ್, ಕೆ ಎನ್ ಆರೈ ಫೋರಂ ಯುಎಇ ಸದಸ್ಯರಾದ ದಯಾ ಕಿರೋಡಿಯನ್, ಮಂಗಳೂರಿನ ಖ್ಯಾತ ರೇಡಿಯೋ ಜಾಕಿ ಆರ್.ಜೆ ಎರೋಲ್, ಲಕ್ಷ್ಮೀ ಲಿಂಗದಳ್ಳಿ, ವಡೆಕಾರ್ ಅಬುಧಾಬಿ, ಕನ್ನಡ ಮಿತ್ರರು ತಂಡದ ನಾಗರಾಜ್ ರಾವ್, ಕನ್ನಡಿಗಾಸ್ ಫೆಡರೇಷನ್ ನ ಇಮ್ರಾನ್ ಖಾನ್ ಎರ್ಮಾಳ್, ಸೆಂಥಿಲ್ ಬೆಂಗಳೂರು, ಅನ್ಸಾರ್ ಬಾರ್ಕೂರ್, ಸಮೀರ್ ಉದ್ಯಾವರ್ ಪ್ರೀತಿಯ ಅಪ್ಪು ರವರಿಗೆ ಅಭಿಮಾನದಿಂದ ನುಡಿನಮನ ಸಲ್ಲಿಸಿದರು. ಕಾರ್ಯಕ್ರಮವನ್ನು ವಿಷ್ಣುಮೂರ್ತಿ ಮೈಸೂರು ರವರು ನಿರೂಪಿಸಿದರು ಹಾಗೂ ಪುನೀತ್ ಗೆ ಇಷ್ಟವಾದ ಭಕ್ತಿಗೀತೆಯನ್ನೂ ಹಾಡಿದರು, ಮಮತಾ ಶಾರ್ಜಾ ರವರು ಧನ್ಯವಾದ ಅರ್ಪಿಸಿದರು.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending