Connect with us

LATEST NEWS

ಅಮೆರಿಕಾ: ಭಾರತದ ಮಹಿಳೆ 2 ಹೆಣ್ಣು ಮಕ್ಕಳನ್ನು ಹೆತ್ತದ್ದೇ ತಪ್ಪಾಯ್ತ..?-ಆಕೆಯ ದುರಂತ ಜೀವಾಂತ್ಯ

Published

on

ನ್ಯೂಯಾರ್ಕ್: ಕೌಟುಂಬಿಕ ದೌರ್ಜನ್ಯದಿಂದ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದಿದೆ.

ಭಾರತದ ಉತ್ತರ ಪ್ರದೇಶ ಮೂಲದ ಮಂದೀಪ್ ಕೌರ್ ಮೃತ ದುರ್ದೈವಿ.


ಇವರು ಗಂಡ ಮತ್ತು ಅತ್ತೆ -ಮಾವ ಹಿಂಸೆ ನೀಡುತ್ತಿದ್ದಾರೆ ಎಂದು ಅವರು ವಿಡಿಯೋದಲ್ಲಿ ಆರೋಪಿಸಿದ್ದಾರೆ.”ಗಂಡು ಮಗು ಬೇಕು ಎಂದು ಆಕೆಯ ಗಂಡ ಹಲವು ವರ್ಷಗಳಿಂದ ಕಿರುಕುಳ ನೀಡುತ್ತಿದ್ದರು.

ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬೆಳೆಸುವ ಸಲುವಾಗಿ ಗಂಡನ ಆಸರೆ ಅಗತ್ಯವಿದ್ದರಿಂದ ಅದನ್ನೆಲ್ಲ ಆಕೆ ಸಹಿಸಿಕೊಂಡಿದ್ದಳು” ಎಂದು ಮಂದೀಪ್ ಅವರ ತಂದೆ ತಿಳಿಸಿದ್ದಾರೆ.


ಮಂದೀಪ್ ಮಾಡಿರುವ ವಿಡಿಯೋ ವೈರಲ್ ಆಗಿದ್ದು, ಅವರ ಸ್ಥಿತಿ ಹೃದಯ ಹಿಂಡುವಂತಿದೆ. ಪಂಜಾಬಿಯಲ್ಲಿ ಮಾತನಾಡಿರುವ ಅವರು, “ಎಂಟು ವರ್ಷಗಳಾಯಿತು.

ಪ್ರತಿದಿನದ ಹಿಂಸೆಯನ್ನು ತಡೆದುಕೊಳ್ಳುವುದು ನನ್ನಿಂದ ಸಾಧ್ಯವಾಗುತ್ತಿಲ್ಲ. ಅಪ್ಪಾ, ದಯವಿಟ್ಟು ನನ್ನನ್ನು ಕ್ಷಮಿಸಿ. ನಾನು ಸಾಯಲಿದ್ದೇನೆ” ಎಂದು ಕಣ್ಣೀರಿಟ್ಟು ಹೇಳಿದ್ದಾರೆ.

ತಾನು ಸಾಯುವಂತೆ ಅವರು ಮಾಡುತ್ತಿದ್ದಾರೆ. ತನ್ನ ಸಾವಿಗೆ ಗಂಡ ಮತ್ತು ಅತ್ತೆ ಮಾವ ಕಾರಣ ಎಂದು ತಿಳಿಸಿದ್ದಾರೆ.ಮಂದೀಪ್ ಅವರ ಪತಿ ರಂಜೋಧ್‌ಬೀರ್ ಸಿಂಗ್ ಸಂಧು ಅವರ ಕುಟುಂಬ ಕೂಡ ಉತ್ತರ ಪ್ರದೇಶದ ಬಿಜ್ನೋರ್ ಮೂಲದ್ದಾಗಿದೆ.


ಅವರಿಗೆ ಆರು ಮತ್ತು ನಾಲ್ಕು ವರ್ಷದ ಇಬ್ಬರು ಹೆಣ್ಣುಮಕ್ಕಳಿದ್ದು, ಅವರ ಭವಿಷ್ಯದ ಬಗ್ಗೆ ಆತಂಕಕ್ಕೆ ಒಳಗಾಗಿರುವ ಮಂದೀಪ್ ಕುಟುಂಬ, ಮಕ್ಕಳನ್ನು ಊರಿಗೆ ಕರೆತರಲು ಬಯಸಿದ್ದಾರೆ.ಬಿಜ್ನೋರ್‌ನ ಪೊಲೀಸ್ ಠಾಣೆಯಲ್ಲಿ ಸಂಧು ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ದೂರನ್ನು ಮಂದೀಪ್ ತಂದೆ ಜಸ್ಪಾಲ್ ಸಿಂಗ್ ದಾಖಲಿಸಿದ್ದಾರೆ.

ಸಮೀಪದ ಹಳ್ಳಿಯಲ್ಲಿ ನೆಲೆಸಿರುವ ಅವರ ತಂದೆ ತಾಯಿ ಹೆಸರನ್ನೂ ನಮೂದಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿರುವ ತಮ್ಮ ಸಂಬಂಧಿಕರು ಅಲ್ಲಿನ ಪೊಲೀಸರ ಜತೆ ಮಾತನಾಡುತ್ತಿದ್ದಾರೆ ಎಂದಿರುವ ಜಸ್ಪಾಲ್, ಭಾರತ ಸರ್ಕಾರದ ಸಹಾಯ ಕೋರಿದ್ದಾರೆ.

ಅಮೆರಿಕದಲ್ಲಿ ಟ್ರಕ್ ಚಾಲಕನಾಗಿರುವ ಸಂಧು ಜತೆ 2015ರಲ್ಲಿ ಮಂದೀಪ್ ಮದುವೆಯಾಗಿತ್ತು. ವಿವಾಹವಾಗಿ ಮೂರು ವರ್ಷದ ಬಳಿಕ ಆಕೆ ಅಮೆರಿಕಕ್ಕೆ ಹೋಗಿದ್ದರು.

ಮಂದೀಪ್ ಸಾವಿನ ನಂತರ ಆಕೆಯ ಗಂಡ ಮತ್ತು ಕುಟುಂಬದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅಮೆರಿಕದಲ್ಲಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಂಡ ಬಗ್ಗೆ ಕೂಡ ಖಚಿತ ಮಾಹಿತಿ ಸಿಕ್ಕಿಲ್ಲ.

 

LATEST NEWS

ಅರ್ಚಕರಿಂದಲೇ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ..!! ವಿಡಿಯೋ ವೈರಲ್

Published

on

ಹರಿದ್ವಾರ: ದೇವಸ್ಥಾನದಲ್ಲಿ ವಾಹನ ಪಾರ್ಕಿಂಗ್ ವಿಚಾರದಲ್ಲಿ ಅರ್ಚಕರು ಹಾಗೂ ದೇವಸ್ಥಾನದ ಭಕ್ತರ ನಡುವೆ ಗಲಾಟೆ ನಡೆದ ಘಟನೆ ಉತ್ತಾರಖಂಡದ ಹರಿದವಾರದಲ್ಲಿರುವ ಸಿದ್ಧಪೀಠ ಶ್ರೀ ದಕ್ಷಿಣ ಕಾಳೀ ಮಂದಿರದಲ್ಲಿ ನಡೆದಿದೆ.

halle

ಹರಿದ್ವಾರದಲ್ಲಿನ ಮಂದಿರದಲ್ಲಿ ಈ ಘಟನೆ ನಡೆದಿದ್ದು ಗಲಾಟೆ ಹಿಂಸಾತ್ಮಕವಾಗಿ ನಡೆದಿದ್ದು ಅದರ ವಿಡಿಯೋ ವೈರಲ್ ಆಗಿದೆ.  ಅರ್ಚಕರು ಮತ್ತು  ದೇವಸ್ಥಾನದ ಸಿಬ್ಬಂದಿಗಳು ಭಕ್ತರನ್ನು ದೊಣ್ಣೆಯಿಂದ ಥಳಿಸುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಉತ್ತರ ಪ್ರದೇಶದ ಸಹರಾನ್ ಪುರದಿಂದ ಬಂದಿದ್ದ ಭಕ್ತರು ಪಾರ್ಕಿಂಗ್ ಶುಲ್ಕದ ವಿಚಾರದಲ್ಲಿ ತಗಾದೆ ತೆಗೆದಿದ್ದರು. ಈ ವಿಚಾರದಲ್ಲಿ ಅರ್ಚಕರು ಹಾಗೂ ಭಕ್ತರ ನಡುವೆ ಗಲಾಟೆ ಆರಂಭವಾಗಿತ್ತು . ಬಳಿಕ ಅದು ಹಿಂಸಾತ್ಮಕ ರೂಪ ತಾಳಿದ್ದು, ದೊಣ್ಣೆಯಿಂದ ಭಕ್ತರ ಮೇಲೆ ಹಲ್ಲೆ ನಡೆಸಲಾಗಿದೆ. ಗಲಾಟೆಯಲ್ಲಿ ಹಲವರು ಭಕ್ತರು ಗಾಯಗೊಂಡಿದ್ದು ಆಸ್ಪತ್ರೆ ಸೇರಿದ್ದಾರೆ. ಸ್ಥಳಕ್ಕೆ ಆಗಮಿಸಿದ ಘಾಟ್ ಚೌಕಿಯ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

READ MORE..; ಪ್ರಚಾರದ ಭರದಲ್ಲಿ ತೇಜಸ್ವಿ ಸೂರ್ಯ ಕಿರಿಕ್‌..! ಸಂಸದರಿಗೆ ಡೌನ್ ಡೌನ್ ಎಂದ ಸಭಿಕರು

Continue Reading

DAKSHINA KANNADA

ಬಿಜೆಪಿಗೆ ಸವಾಲಾದ ಬಿರುವೆರ್..! ವರ್ಕೌಟ್‌ ಆಗಿಲ್ಲ ನಮೋ ಪ್ಲ್ಯಾನ್‌…!

Published

on

ಮಂಗಳೂರು : 33 ವರ್ಷದ ಬಳಿಕ ಕ್ಷೇತ್ರ ಉಳಿಸಿಕೊಳ್ಳಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸಿದೆ. ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪ್ರಚಾರದ ವೈಖರಿ ಹಾಗೂ ಪಡೆದುಕೊಳ್ಳುತ್ತಿರುವ ಜನಪ್ರೀಯತೆ ಒಂದು ಕಾರಣವಾದ್ರೆ. ಬಿಜೆಪಿಯಲ್ಲಿದ್ದ ಬಿಲ್ಲವ ಸಮೂದಾಯದ ಬಹುದೊಡ್ಡ ಮತದಾರರು ಪದ್ಮರಾಜ್ ಕಡೆ ವಾಲಿರುವುದು ಮತ್ತೊಂದು ಕಾರಣ . ಈ ಎರಡು ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನೇ ಕರೆಯಿಸಿ ಅವರ ಮೂಲಕ ನಾರಾಯಣಗುರುಗಳಿಗೆ ಮಾಲಾರ್ಪಣೆ ಮಾಡಿ ರೋಡ್ ಶೋ ಮಾಡಿಸಲಾಗಿದೆ.

ಎಚ್ಚರಿಕೆ ನೀಡಿದ್ದ ನಾರಾಯಣಗುರು ವಿಚಾರ ವೇದಿಕೆ..!

ಬಿಲ್ಲವರನ್ನು ಓಲೈಸಿಕೊಳ್ಳಲು ಬಿಜೆಪಿಗೆ ಇದ್ದ ಒಂದೇ ಮಾರ್ಗ ಅಂದ್ರೆ ಅದು ನಾರಾಯಣಗುರು.  ಆ ಒಂದು ಕಾರಣ ಇಟ್ಟುಕೊಂಡು ಕಾರಣಾಂತರದಿಂದ ಸಮಾವೇಶ ರದ್ಧು ಮಾಡಿ ರೋಡ್‌ ಶೋ ನಡೆಸಲಾಗಿತ್ತು ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ. ನಾರಾಯಣ ಗುರುಗಳಿಗೆ ಮಾಲಾರ್ಪಣೆ ಮಾಡಿ ಬಳಿಕ ರೋಡ್‌ ಶೋ ಮಾಡುವ ಬಗ್ಗೆ ಬಿಜೆಪಿ ನಾಯಕರು ತೀರ್ಮಾನಿಸಿದ್ದಾರೆ. ಆದ್ರೆ ಈ ವಿಚಾರ ತಿಳಿಯುತ್ತಿದ್ದಂತೆ ನಾರಾಯಣಗುರು ವಿಚಾರ ವೇದಿಕೆ ಮೂಲಕ ಸತ್ಯಜಿತ್‌ ಸುರತ್ಕಲ್‌ ಬಿಜೆಪಿ ನಾಯಕರಿಗೆ ಹಲವು ಸವಾಲು ಎಸೆದಿದ್ದರು.  ಗಣರಾಜ್ಯೋತ್ಸವದಲ್ಲಿ ನಾರಾಯಣಗುರುಗಳ ಟ್ಯಾಬ್ಲೋ ನಿರಾಕರಣೆ, ರಾಜ್ಯದಲ್ಲಿ ಪಠ್ಯದಿಂದ ನಾರಾಯಣಗುರುಗಳ ಪಾಠ ತೆಗೆದು ಹಾಕಿರುವುದು ಹಾಗೂ ಕೋಟಿ ಚೆನ್ನಯ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆಗೆ ಉತ್ತರ ನೀಡಿ ಎಂದು ಆಗ್ರಹಿಸಿದ್ದರು.  ಇಷ್ಟೆಲ್ಲಾ ಮಾಡಿ ನಾರಾಯಣಗುರುಗಳಿಗೆ ಮಾಲಾರ್ಪಣೆ ಮಾಡಿಸುವ ಬಿಜೆಪಿಯ ನಿರ್ಧಾರವನ್ನು ಟೀಕಿಸಿದ್ದರು.

 

ಬಿಲ್ಲವರ ಕಡೆಗಣನೆ ಮಾಡಿದ ಬಿಜೆಪಿ ನಾಯಕರು…!

ಪ್ರಧಾನಿ ನಾರಾಯಣಗುರುಗಳಿಗೆ ಮಾಲಾರ್ಪಣೆ ಮಾಡಿದ್ರೆ ಎಲ್ಲವೂ ಸರಿಯಾಗಲಿದೆ ಅಂದುಕೊಂಡಿದ್ದರು. ಆದ್ರೆ ಬಹುತೇಕ ಬಿಲ್ಲವರು ಮೋದಿ ಕಾರ್ಯಕ್ರಮದ ವಿಚಾರವಾಗಿ ಸೋಶಿಯಲ್‌ ಮೀಡಿಯಾದಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ. ಪ್ರಧಾನಿ ಮೋದಿ ಗುರುಗಳಿಗೆ ಹಾರ ಹಾಕುವಾಗ ಮಾಡಿದ ಆ ಒಂದು ತಪ್ಪು ಬಿಲ್ಲವ ಸಮೂದಾಯದ ಜನರ ಮನಸಿಗೆ ನೋವುಂಟು ಮಾಡಿದೆ ಎಂಬ ಚರ್ಚೆ ನಡೆಯುತ್ತಿದೆ. ಅಷ್ಟೇ ಅಲ್ಲದೆ ನಾರಾಯಣ ಗುರು ವೃತ್ತ ನಿರ್ಮಾಣದ ರೂವಾರಿಯಾಗಿದ್ದ ಬಿರುವೆರ ಕುಡ್ಲದ ಮುಖಂಡ ಉದಯ ಪೂಜಾರಿಯನ್ನು ಕಡೆಗಣಿಸಿದ್ದೂ ಬಿಲ್ಲವ ಯುವಕರಲ್ಲಿ ಅಸಮಾಧಾನ ಮೂಡಿಸಿದೆ. ಈ ವಿಚಾರವಾಗಿ ಬಿಜೆಪಿ ಜಿಲ್ಲಾಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಾ ಇದೆ.

ಗುರು ಪೀಠದ ಮೇಲೆ ಕಾಲಿರಿಸಿದ ಪ್ರಧಾನಿ..!

ನಾರಾಯಣಗುರುಗಳಿಗೆ ಮಾಲಾರ್ಪಣೆ ಮಾಡಿದ ಪ್ರಧಾನಿ ಮೋದಿ ಗುರುಪೀಠದ ಮೇಲೆ ಕಾಲಿರಿಸಿದ್ದರು. ಇದು ಬಿಲ್ಲವರ ಸ್ವಾಭಿಮಾನದ ಮೇಲೆ ಸ್ಥಳಿಯ ಬಿಜೆಪಿಯ ನಾಯಕರು ಇಟ್ಟ ಕಾಲು ಎಂದು ಟೀಕೆ ವ್ಯಕ್ತವಾಗಿದೆ. ಬಿರುವೆರ ಕುಡ್ಲದ ಉದಯ ಪೂಜಾರಿಯನ್ನು ಕಡೆಗಣಿಸಿದ್ದಲ್ಲದೆ, ಮೋದಿಯವರಿಗೆ ಸರಿಯಾದ ಮಾರ್ಗದರ್ಶನ ನೀಡದೆ ಈ ಪ್ರಮಾದ ಆಗಿದೆ. ಪ್ರಧಾನಿ ಮೋದಿಯ ಮೇಲೆ ಇರುವ ಅಭಿಮಾನ ಬಿಟ್ಟು ಕೊಡದ ಬಿಲ್ಲವ ಯುವಕರು ಇದಕ್ಕೆ ಸ್ಥಳಿಯ ಬಿಜೆಪಿ ನಾಯಕರೇ ಕಾರಣ ಎಂದು ಆರೋಪಿಸುತ್ತಿದ್ದಾರೆ. ಪ್ರಧಾನಿ ಮೋದಿ ಗುರುಪೀಠದ ಮೇಲೆ ಕಾಲು ಇರಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದನ್ನು ಕಾಂಗ್ರೆಸ್‌ ಪಕ್ಷ ಕೂಡಾ ಅಸ್ತ್ರವಾಗಿ ಬಳಸಿಕೊಂಡಿದೆ.

 

ಡ್ಯಾಮೇಜ್‌ ಕಂಟ್ರೋಲ್‌ ಮಾಡಲು ಹೋಗಿ ಬಿಜೆಪಿ ಯಡವಟ್ಟು…!

ಪದ್ಮರಾಜ್‌ ಪೂಜಾರಿ ಅವರಿಗೆ ಟಿಕೇಟ್‌ ಸಿಕ್ಕ ಸಮಯದಲ್ಲಿ ಭಾಷಣ ಮಾಡಿದ್ದ ಬಿಜೆಪಿ ಅಭ್ಯರ್ಥಿ ಬೃಜೇಶ್‌ ಚೌಟ ಪದ್ಮರಾಜ್‌ ಪೂಜಾರಿ ದೇಶ ದ್ರೋಹಿ ಎಂದು ಕರೆದಿದ್ದರು . ಆ ಒಂದು ಹೇಳಿಕೆಯ ಡ್ಯಾಮೇಜ್‌ ಕಂಟ್ರೋಲ್‌ ಮಾಡಲು ಬಿಜೆಪಿ ನಾಯಕರು ಹಲವಾರು ಸರ್ಕಸ್‌ ಮಾಡಿದ್ದಾರೆ. ಜನಾರ್ಧನ ಪೂಜಾರಿ ಕಾಲಿಗೆ ಬಿದ್ದ ಬೃಜೇಶ್‌ ಚೌಟ ಒಂದು ರೀತಿಯಲ್ಲಿ ಬಿಲ್ಲವರ ಮನ ಒಲಿಸುವ ಪ್ರಯತ್ನ ಕೂಡಾ ಮಾಡಿದ್ದಾರೆ. ಆದರೆ ಅದಾಗಲೇ ಬಿಲ್ಲವ ಯುವಕರು ಅದೇನೇ ಆದ್ರೂ ಈ ಬಾರಿ ಪದ್ಮರಾಜ್‌ ಪೂಜಾರಿ ಗೆಲ್ಲಿಸುವ ಪಣತೊಟ್ಟಿದ್ದಾರೆ. ಬಿಜೆಪಿ ಮತಗಳು ಕೇವಲ ಜಾತಿ ಹೆಸರಿನಲ್ಲಿ ಕಾಂಗ್ರೆಸ್‌ ಪಾಲಾಗಲಿದೆ ಅನ್ನೋ ಆತಂಕದಲ್ಲಿ ಬಿಲ್ಲವರ  ಓಲೈಕೆಗೆ ಪ್ರಧಾನಿ ಮೋದಿಯವರನ್ನು ಕರೆಸಲಾಗಿದೆ. ಆದ್ರೆ ಈಗ ಪ್ರಧಾನಿ ಮೋದಿ ಅವರಿಂದ ಆದ ಪ್ರಮಾದ ಹಾಗೂ ಸ್ಥಳೀಯ ನಾಯಕರಿಂದ ಬಿರುವೆರ ಕುಡ್ಲದ ನಾಯಕನ ಕಡೆಗಣನೆ ಬಿಜೆಪಿಗೆ ಮುಳುವಾಗುವ ಲಕ್ಷಣ ಕಾಣಿಸಿದೆ. ಸಾಮಾಜಿಕ ಜಾಲ ತಾಣದಲ್ಲಿ ಪ್ರಧಾನಿ ಬಂದು ಹೋದಾಗಿನಿಂದ ಈ ಚರ್ಚೆ ಜೋರಾಗಿ ನಡೆಯುತ್ತಿದೆ.

Continue Reading

FILM

ಮೂಗುತಿ ಸುಂದರಿ ಮೇಲೆ ತೆಲುಗು ಹೀರೋ ಕಣ್ಣು…!

Published

on

ಮಂಗಳೂರು ( ಸ್ಯಾಂಡಲ್‌ವುಡ್‌ ) : ಸುಪರ್ ಹಿಟ್ ಕಾಂತಾರದ ಮೂಲಕ ಮೂಗುತಿ ಸುಂದರಿ ಅಂತ ಫೇಮಸ್ ಆಗಿದ್ದ ಸಪ್ತಮಿ ಗೌಡ ಮೇಲೆ ತೆಲುಗು ನಿರ್ಮಾಪಕರ ಕಣ್ಣು ಬಿದ್ದಿದೆ. ಹೀಗಾಗಿ ಸಪ್ತಮಿ ಗೌಡಗೆ ತೆಲುಗು ಸಿನೆಮಾದಲ್ಲಿ ಉತ್ತಮ ಅವಕಾಶ ನೀಡಿ ಕರೆಸಿಕೊಂಡಿದ್ದಾರೆ. ಹೀಗಾಗಿ ಕರ್ನಾಟಕದ ಮೂಗುತಿ ಸುಂದರಿ ಸಪ್ತಮಿ ಗೌಡ ತೆಲುಗಿನ ‘ತಮ್ಮುಡು’ ಸಿನೆಮಾದಲ್ಲಿ ಹೀರೋ ನಿತಿನ್ ಜೊತೆ ನಟಿಸಲಿದ್ದಾರೆ.

ಕೆಲ ನಟಿಯರು ಇರೋ ಉದ್ಯಮದಲ್ಲಿ ಏನಾದರೂ ಸಾಧಿಸಿ ಬೇರೆ ಭಾಷೆಯತ್ತ ಮುಖ ಮಾಡ್ತಾರೆ. ಇನ್ನು ಕೆಲ ನಟಿಯರು ಏನಾದರೂ ಸಾಧಿಸಲೆಬೇಕು ಅಂತ ಪಕ್ಕದ ಮನೆಗಳತ್ತ ಮುಖ ಮಾಡ್ತಾರೆ. ಇದಕ್ಕೆ ಸಪ್ತಮಿಗೌಡ ಅತ್ಯುತ್ತಮ ಉದಾಹರಣೆ.ಹೌದು. ಕಾಂತಾರ ಮೂಲಕ ಭಾಷೆಯ ಭೇದ ಭಾವ ಇಲ್ಲದೇ, ಎಲ್ಲ ವರ್ಗದ ಜನರ ಹೃದಯವನ್ನ ಗೆದ್ದ ಸಪ್ತಮಿಗೌಡ ‘ಯುವ’ದಲ್ಲಿಯೂ ತಮ್ಮ ಛಾಪು ಮೂಡಿಸಿದರು. ಕಳೆದ ನಾಲ್ಕು ವರ್ಷದಲ್ಲಿ ಪಾಪ್‌ ಕಾರ್ನ್ ಮಂಕಿ ಟೈಗರ್, ಕಾಂತಾರ, ಯುವ ಹೀಗೆ ಮೂರು ಕನ್ನಡ ಸಿನಿಮಾಗಳನ್ನ ಮಾಡಿರುವ ಸಪ್ತಮಿ ಗೌಡ, ಇದೀಗ ತೆಲುಗು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. `ಜಯಂ’ ಸಿನಿಮಾ ಹೀರೊ ನಿತಿನ್‌ ಅವರ ಮುಂದಿನ ಚಿತ್ರ ʻತಮ್ಮುಡುʼದಲ್ಲಿ ಸಪ್ತಮಿ ಗೌಡ ಹೀರೊಯಿನ್.

ತಮ್ಮುಡು ಚಿತ್ರದಲ್ಲಿನ ತಮ್ಮ ಪಾತ್ರಕ್ಕೆ ನ್ಯಾಯ ಸಲ್ಲಿಸಲು ಸಪ್ತಮಿ ಗೌಡ ತೂಕ ಇಳಿಸಿಕೊಂಡಿದ್ದಾರೆ. ಸ್ಲಿಮ್ ಆಗಿದ್ದಾರೆ. ಇನ್ನೂ ರೇಸ್‌ ಕೋರ್ಸ್ ಮೈದಾನದಲ್ಲಿನ ಜಾಕಿಗಳಿಗೂ ಸೆಡ್ಡು ಹೊಡೆಯುವಂತೆ ಸಪ್ತಮಿ ಗೌಡ ಈ ಚಿತ್ರಕ್ಕೆ ಕುದುರೆ ಸವಾರಿಯನ್ನ ಕಲಿತಿದ್ದಾರೆ.

ಇನ್ನೂ ತಮ್ಮ ಮೊದಲ ತೆಲುಗು ಚಿತ್ರದಲ್ಲಿಯೇ ನಿತಿನ್ ಅವರಂತಹ ಪ್ರತಿಭಾವಂತ ನಟನ ಜೊತೆ ತೆರೆಹಂಚಿಕೊಳ್ಳುತ್ತಿರುವುದಕ್ಕೆ ಸಪ್ತಮಿಗೌಡ ಅವರಿಗೆ ಸಿಕ್ಕಾಪಟ್ಟೆ ಖುಷಿ ಇದೆ. ಸೋನೆ ಪೆ ಸುಹಾಗ ಅನ್ನುವಂತೆ ವಕೀಲ್ ಸಾಬ್ ಅಂತಹ ಚಿತ್ರವನ್ನ ನಿರ್ದೇಶಿಸಿರುವ ವೇಣು ಶ್ರೀರಾಮ್ ಈ ಚಿತ್ರವನ್ನ ನಿರ್ದೇಶಿಸುತ್ತಿದ್ದಾರೆ. ಟಾಲಿವುಡ್‌ನ ಖ್ಯಾತ ನಿರ್ಮಾಪಕ ದಿಲ್ ರಾಜು ಚಿತ್ರವನ್ನ ನಿರ್ಮಾಣ ಮಾಡುತ್ತಿದ್ದಾರೆ. ಇವೆಲ್ಲ ಕಾರಣಗಳಿಂದ ಸಪ್ತಮಿ ಗೌಡ ಸದ್ಯಕ್ಕೆ ಕ್ಲೌಡ್ ನೈನ್‌ ನಲ್ಲಿದ್ದಾರೆ. ಒಟ್ನಲ್ಲಿ ಕನ್ನಡದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿ, ಕನ್ನಡಿಗರ ಮನಗೆದ್ದ ಸಪ್ತಮಿ ಗೌಡ ಈಗ ಬಾಲಿವುಡ್‌ ನಂತರ ಟಾಲಿವುಡ್‌ ಕಡೆ ಹೊರಟಿದ್ದಾರೆ.

Continue Reading

LATEST NEWS

Trending