DAKSHINA KANNADA
ಮಂಗಳೂರು: ಪುರುಷೋತ್ತಮ ಬೆಳ್ಮಣ್ ಅವರಿಗೆ ವಾಗೀಶ್ವರೀ ಸಂಮಾನ
ಮಂಗಳೂರು: ಹಿರಿಯ ಹವ್ಯಾಸಿ ಯಕ್ಷಗಾನ ಚೆಂಡೆ ಮದ್ದಳೆ ವಾದಕ ಪುರುಷೋತ್ತಮ ಬೆಳ್ಮಣ್ ಅವರಿಗೆ ವಾಗೀಶ್ವರೀ ಶತಮಾನೋತ್ಸವ ಸಂಮಾನವು ಮಂಗಳೂರಿನ ಕುಡ್ತೇರಿ ಮಹಾಮಾಯಾ ದೇವಸ್ಥಾನದಲ್ಲಿ ಬಿ.ನಾರಾಯಣ ಪ್ರಭು ಅವರ ಅಧ್ಯಕ್ಷತೆಯಲ್ಲಿ ಜರಗಿತು.
ಕಳೆದ ಐದು ದಶಕಗಳಿಂದ ಮಂಗಳೂರು ಹಾಗೂ ಮುಂಬೈಯ ಹತ್ತಾರು ಹವ್ಯಾಸಿ ಸಂಘಗಳಲ್ಲಿ ಚೆಂಡೆ ಮದ್ದಳೆ ವಾದಕರಾಗಿ , ಸಂಘಟಕರಾಗಿ ಕಲಾಸೇವೆಮಾಡಿರುವ ,ಲಯನ್ಸ್ ಸೇವಾಕ್ಷೇತ್ರದಲ್ಲೂ ಸಕ್ರಿಯರಾಗಿದ್ದ ಹಿರಿಯ ಕಲಾವಿದ ಪುರುಷೊತ್ತಮ ಬೆಳ್ಮಣ್ ಅವರನ್ನು ಭಾಗವತ ಅಶೋಕ್ ಬೋಳೂರು ಅಭಿನಂದಿಸಿದರು.
ಮುಂಬೈಯ ಪ್ರತಿಷ್ಟಿತ ಯಕ್ಷಗಾನ ಸಂಘಗಳಲ್ಲಿ ಹಾಗೂ ಹಿರಿಯ ವೃತ್ತಿಪರ ಭಾಗವತರೊಂದಿಗಿನ ಒಡನಾಟವನ್ನು ಸ್ಮರಿಸಿಕೊಂಡ ಸಂಮಾನಿತರು ವಾಗೀಶ್ವರೀ ಸಂಘದ ಶತಮಾನೋತ್ಸವ ಕಾರ್ಯಕ್ರಮ, ಸಂಸ್ಮರಣೆ, ಸಮ್ಮಾನ ಸ್ತುತ್ಯರ್ಹ ಎಂದರು.
ಭಾಗವತ ಯೋಗೀಶ್ ಆಚಾರ್ಯ ಸಂಸ್ಮರಣೆ
ಹವ್ಯಾಸಿ ಭಾಗವತನಾಗಿ ಹಲವು ದಶಕಗಳಕಾಲ ವಾಗೀಶ್ವರೀ ಸಂಘದಲ್ಲಿ ಸಕ್ರಿಯರಾಗಿದ್ದ ಕೀರ್ತಿಶೇಷ ಯೋಗೀಶ್ ಆಚಾರ್ಯರ ಸಂಸ್ಮರಣೆ ಮಾಡಿದ ಪ್ರಧಾನ ಸಂಚಾಲಕ ಕದ್ರಿ ನವನೀತ ಶೆಟ್ಟಿ ನಗರದ ಹೂವಿನ ವ್ಯಾಪಾರಿಯಗಿದ್ದ ಆಚಾರ್ಯರ ಕಲಾಸಾಧನೆಯನ್ನು ನೆನಪಿಸಿದರು.
ಮುಖ್ಯ ಅತಿಥಿಯಾಗಿದ್ದ ಉದ್ಯಮಿ ರವೀಂದ್ರ ಮಲ್ಯ ಅವರು ಯಕ್ಷಗಾನಕ್ಕೆ ಪ್ರೇಕ್ಷಕರ ಕೊಡುಗೆ ಅಪಾರ. ಇಂತಹ ಕಾರ್ಯಕ್ರಮಗಳ ಮೂಲಕ ಇನ್ನಷ್ಟು ಪ್ರೇಕ್ಷಕರು ಯಕ್ಷಗಾನದತ್ತ ಆಕರ್ಷಿತರಾಗಲಿ ಎಂದು ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘಕ್ಕೆ ಶುಭವನ್ನು ಹಾರೈಸಿದರು.
ಪ್ರಧಾನ ಕಾರ್ಯದರ್ಶಿ ಸಂಜಯ ಕುಮಾರ್ ರಾವ್ ಕಾರ್ಯಕ್ರಮ ನಿರೂಪಿಸಿದರು. ಸಂಘದ ಅಧ್ಯಕ್ಷ ಶ್ರೀನಾಥ್ ಪ್ರಭು , ಶಿವಪ್ರಸಾದ್ ಪ್ರಭು , ಶೋಭಾ ಐತಾಳ್ ಉಪಸ್ಥಿತರಿದ್ದರು.
ಕರ್ನಾಟಕ ಯಕ್ಷಗಾನ ಅಕಾಡಮಿಯ ಸಹಯೋಗದಲ್ಲಿ ನಡೆಯುತ್ತಿರುವ ಶತಮಾನೋತ್ಸವ ಸರಣಿಯ 14 ನೇ ಸಭಾ ಕಾರ್ಯಕ್ರಮದ ಬಳಿಕ ಸಂಘದ ಕಲಾವಿದರಿಂದ “ಚೂಡಾಮಣಿ ” ತಾಳಮದ್ದಳೆ ಜರಗಿತು.
DAKSHINA KANNADA
ಚೆನ್ನೈ ಮಣಿಸಿ ಸೂಪರ್ ಕಮ್ ಬ್ಯಾಕ್ ಮಾಡಿದ ‘ಆರ್ಸಿಬಿ’..! ಜೊತೆಗೂಡಿ ಚಿಯರ್ಅಪ್ ಮಾಡಿದ ರಿಷಬ್, ಕ್ರಿಸ್ಗೇಲ್ ..
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಂದು ಕಡೆ ಮಳೆಯ ಆರ್ಭಟ. ಇನ್ನೊಂದು ಕಡೆ ಸತತ 7 ಪಂದ್ಯಗಳಲ್ಲಿ ಸೋತು ಪ್ಲೇ ಆಫ್ ಕನಸಲ್ಲಿದ್ದ ತಂಡಕ್ಕೆ ಈ ಪದ್ಯ ಅದೃಷ್ಟವನ್ನು ತಂದುಕೊಟ್ಟಿದೆ. ಒಂದು ಕಡೆ ಪ್ಲೇ ಆಫ್ ಗೆ ಹೋಗಲು ರನ್ ಮಾತ್ರ ಅಲ್ಲ, ನಿಗದಿತ ರನ್ನಿನ ಒಳಗಡೆ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಕಟ್ಟಿ ಹಾಕಬೇಕಿತ್ತು.
ಅದೃಷ್ಟ ಹೊತ್ತು ತಂದ ಮಳೆರಾಯ
ಇನ್ನು ವಿಶೇಷ ಅಂದ್ರೆ ಬೆಂಗಳೂರಿನ ಹಲವು ಕಡೆ ಮಳೆರಾಯನ ಆರ್ಭಟ ಜೋರಾಗಿತ್ತು. ಎಡೆಬಿಡದೆ ಸುರಿದ ಮಳೆಯಿಂದ ಸಂಚಾರಕ್ಕೂ ಅಡ್ಡಿ ಉಂಟಾಗಿತ್ತು. ಅದೃಷ್ಟ ಅಂದ್ರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ವಲ್ಪ ಹೊತ್ತಷ್ಟೇ ಮಳೆ ಸುರಿದಿದೆ. ಇದು ಮಳೆರಾಯನ ಕೃಪೆಯೆಂದೇ ನೆಟ್ಟಿಗರು ಹೇಳುತ್ತಿದ್ದಾರೆ. ಒಂದು ವೇಳೆ ಮಳೆಯಬ್ಬರ ಜೋರಾಗಿದ್ದು ಪಂದ್ಯ ಮಳೆಗೆ ಆಹುತಿಯಾಗಿದ್ದರೆ ಆರ್ಸಿಬಿ ಒಂದು ಆಂಕ ಪಡೆದು ಪಂದ್ಯಕೂಟದಿಂದ ನಿರ್ಗಮಿಸಬೇಕಾಗಿತ್ತು.
ಪ್ಲೇಆಫ್ ನಿರೀಕ್ಷೆಯಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೊನೆಯ ಮ್ಯಾಚ್ನಲ್ಲಿ ಸೋಲುಣಿಸಿ ಇದೀಗ ಟಾಪ್-4 ಹಂತಕ್ಕೇರಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿ ಗ್ರೇಟೆಸ್ಟ್ ಕಂಬ್ಯಾಕ್ ಮಾಡಿದೆ. ಆರ್ಸಿಬಿ ಫ್ಯಾನ್ಸ್ ಗಳ ಹರ್ಷ ಹೇಳತೀರದು. ಎಲ್ಲೆಡೆ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ.
ಪಂದ್ಯ ವೀಕ್ಷಣೆಗೆ ಘಟಾನುಘಟಿಗಳು ಭಾಗಿ:
ಇನ್ನೂ ಈ ರೋಚಕ ಪಂದ್ಯ ವನ್ನು ವೀಕ್ಷಿಸಲು ಮಾಜಿ ಕ್ರಿಕೆಟಿಗ ಕ್ರಿಸ್ ಗೇಲ್, ಕಾಂತಾರ ಸಿನೆಮಾ ರಿಷಬ್ ಶೆಟ್ಟಿ ಭಾಗಿಯಾಗಿದ್ದರು. ಇನ್ನೂ ಇವರಿಬ್ಬರು ಜೊತೆಯಾಗಿ ಕಾಣಿಸಿಕೊಂಡು ಚಿಯರ್ ಅಪ್ ಮಾಡಿದ್ದು, ಕ್ಯಾಮೆರಾ ಕಣ್ಣಿಗೆ ಇಬ್ಬರೂ ಪೋಸ್ ನೀಡಿದ್ದಾರೆ. ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಾ ಆರ್ಸಿಬಿ ಫ್ಯಾನ್ ಆಗಿದ್ದು ನಿನ್ನೆಯ ಪಂದ್ಯ ವನ್ನು ವೀಕ್ಷಣೆ ಮಾಡಿದ್ದಾರೆ.
ಬೆಂಗಳೂರು ರಾಯಲ್ ಚಾಲೆಂಜರ್ಸ್ ನ ಮಹಿಳಾ ತಂಡ ಈ ಬಾರಿಯ ಟ್ರೋಫಿಯನ್ನು ತಂದುಕೊಟ್ಟಿದ್ದಾರೆ. ನಿನ್ನೆಯ ಪಂದ್ಯದಲ್ಲಿ ಮಹಿಳಾ ತಂಡ ಜರ್ಸಿಯನ್ನು ತೊಟ್ಟು ಚಿಯರ್ ಅಪ್ ಮಾಡಿದ್ದಾರೆ.
ಇನ್ನು ಎಲಿಮಿನೇಟರ್ ಪಂದ್ಯಕ್ಕೆ ಅರ್ಹತೆ ಪಡೆದಿರುವ ಆರ್ಸಿಬಿ ಪಾಲಿಗೆ ಮತ್ತೊಂದು ಮಾಡು ಇಲ್ಲವೇ ಮಡಿ ಪಂದ್ಯ ಎದುರಾಗಿದೆ. ಮೇ 22 ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್ಸಿಬಿ ಜಯ ಗಳಿಸಿದರೆ ಕ್ವಾಲಿಫೈಯರ್-2 ಗೆ ಅರ್ಹತೆ ಗಿಟ್ಟಿಸಿಕೊಳ್ಳಲಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ಗೇರಲಿದೆಯಾ ಎಂದು ಕಾದು ನೋಡಬೇಕಿದೆ.
DAKSHINA KANNADA
ಅಡುಗೆ ಮನೆಯಲ್ಲಿರುವ ಈ ಒಂದು ವಸ್ತುವನ್ನು ಪ್ರತಿದಿನ ಲಕ್ಷ್ಮೀಗೆ ಅರ್ಪಿಸಿ
ಮಂಗಳೂರು: ಲಕ್ಷ್ಮೀ ನಿಮಗೆ ಒಲಿದರೆ ಆ ವ್ಯಕ್ತಿಗಳು ಐಶ್ವರ್ಯ ದೊರೆತು ಲಕ್ಷ್ಮೀ ಪುತ್ರ ಎನಿಸಿಕೊಳ್ಳುತ್ತಾರೆ. ಲಕ್ಷ್ಮೀಯನ್ನು ಮೆಚ್ಚಿಸಲು ನಿಮ್ಮ ಅಡುಗೆ ಮನೆಯಲ್ಲಿರುವ ಒಂದು ವಸ್ತುವನ್ನು ಆಕೆಗೆ ಅರ್ಪಿಸಿದರೆ ಸಾಕು.
ಮನೆಯ ವಾಸ್ತುವಿಗೂ ಮನೆಯಲ್ಲಿರುವ ವಸ್ತುಗಳಿಗೂ ಸಂಬಂಧ ಇದೆ. ವಿಶೇಷವಾಗಿ ಅಡುಗೆ ಮನೆಯಲ್ಲಿರುವ ವಸ್ತುಗಳಿಗೂ ವಾಸ್ತುವಿಗೂ ಸಂಬಂಧ ಇದೆ. ಅಡುಗೆ ಮನೆಯಲ್ಲಿರುವ ಕೆಲವು ವಸ್ತುಗಳನ್ನು ಜ್ಯೋತಿಷ್ಯದಲ್ಲಿ ಪರಿಹಾರವಾಗಿ ಬಳಸಲಾಗುತ್ತದೆ. ಅಂತಹ ಒಂದು ವಸ್ತು ಯಾವುದೆಂದರೆ ಅದು ಕೊತ್ತಂಬರಿ.
ಪ್ರಮುಖ ಸಂಬಾರ ಪದಾರ್ಥವಾದ ಕೊತ್ತಂಬರಿಯನ್ನು ವಾಸ್ತು ಪರಿಹಾರವಾಗಿಯೂ ಬಳಸುತ್ತಾರೆ. ಜೊತೆಗೆ ಕೊತ್ತಂಬರಿ ಸೊಪ್ಪನ್ನು ವಾಸ್ತು ಪರಿಹಾರದಲ್ಲಿ ಬಳಸಲಾಗುತ್ತದೆ. ಈ ವಸ್ತುಗಳನ್ನು ಸರಿಯಾಗಿ ಬಳಸಿದರೆ ನಿಮ್ಮ ಜೀವನ ಬದಲಾಗಬಹುದು
ಬಹಳಷ್ಟು ಕಡೆ ಲಕ್ಷ್ಮೀಗೆ ಧನಿಯಾ ಕಾಳನ್ನು ಅರ್ಪಿಸಲಾಗುತ್ತದೆ. ಲಕ್ಷ್ಮೀಗೆ ಧನಿಯಾ ಬಹಳ ಇಷ್ಟ ಎಂಬ ನಂಬಿಕೆ ಇದೆ. ದೀಪಾವಳಿ ಹಬ್ಬದಂದು ಲಕ್ಷ್ಮೀಗೆ ಈ ಧನಿಯಾವನ್ನು ಅರ್ಪಿಸಲಾಗುತ್ತದೆ. ಪೂಜೆಯ ನಂತರ ಲಕ್ಷ್ಮೀಗೆ ಅರ್ಪಿಸಿದ ಈ ಧನಿಯಾವನ್ನು ಸುರಕ್ಷಿತವಾಗಿ ಇಡಬೇಕು. ಹೀಗೆ ಪ್ರತಿದಿನ ಲಕ್ಷ್ಮೀ ದೇವಿಗೆ ಧನಿಯಾವನ್ನು ಇಟ್ಟರೆ ಮನೆಯಲ್ಲಿ ಸುಖ-ಶಾಂತಿ-ಸಮೃದ್ಧಿ ಆಗುತ್ತದೆ ಎನ್ನುವ ನಂಬಿಕೆ ಇದೆ.
DAKSHINA KANNADA
”ನಮ್ಮ ಕಂಬಳ ಪ್ರಶಸ್ತಿ ಪ್ರದಾನ 2024”ರ ಸಂಭ್ರಮ; ಕಂಬಳ ಸಾಧಕರನ್ನು ಗುರುತಿಸಿ ಗೌರವಿಸಿದ “ನಮ್ಮ ಕುಡ್ಲ”
ಮಂಗಳೂರು : ತುಳುನಾಡಿನ ಜಾನಪದ ಕ್ರೀಡೆ ಕಂಬಳಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 2023/24 ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಡೆದ ಒಟ್ಟು 24 ಕಂಬಳಗಳ 6 ವಿಭಾಗಗಳಲ್ಲಿ ಪ್ರಶಸ್ತಿ ನೀಡುವ ವಿಶೇಷ ಕಾರ್ಯಕ್ರಮ ಶುಕ್ರವಾರ (ಮೇ 17) ಮಂಗಳೂರಿನ ಸೈoಟ್ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿಯ ಎಲ್.ಎಫ್. ರಸ್ಕಿನ್ಹಾ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.
ನಮ್ಮಕುಡ್ಲ ಟಿವಿ ಚಾನೆಲ್, ನಮ್ಮ ಕಂಬಳ ಟೀಮ್ ದುಬಾಯಿ ಮತ್ತು ಸೈoಟ್ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿಯ ಸಂಯುಕ್ತ ಆಶ್ರಯದಲ್ಲಿ ನಡೆದ ಸಮಾರಂಭವನ್ನು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರ ಅಧ್ಯಕ್ಷತೆಯಲ್ಲಿ ಮೂಲ್ಕಿ ಸೀಮೆ ದುಗ್ಗಣ್ಣ ಸಾವಂತರಸರು ಮತ್ತು ಸೈoಟ್ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿಯ ರೆಕ್ಟರ್ ಫಾ. ಮೆಲ್ವಿನ್ ಜೋಸೆಫ್ ಪಿಂಟೋ ಅವರು ಉದ್ಘಾಟಿಸಿದರು. ನಮ್ಮಕುಡ್ಲ ಚಾನೆಲ್ ನ ಸಿಒಒ ಕದ್ರಿ ನವನೀತ ಶೆಟ್ಟಿ ಪ್ರಸ್ತಾವನೆಗೈದು ‘ನಮ್ಮಕಂಬಳ ಪ್ರಶಸ್ತಿ 2024’ ರ ಬಗ್ಗೆ ಮಾಹಿತಿ ನೀಡಿದರು.
‘ನಮ್ಮ ಕಂಬುಲ ನನ ದುಂಬುಲ’ ಕೈಪಿಡಿ ಬಿಡುಗಡೆ
ಕದ್ರಿ ನವನೀತ ಶೆಟ್ಟಿ ಮತ್ತು ಸನತ್ ಕುಮಾರ್ ಶೆಟ್ಟಿ ದುಬಾಯಿ ಸಂಪಾದಿತ ‘ನಮ್ಮ ಕಂಬುಲ ನನ ದುಂಬುಲ’ ಎಂಬ 2023/24 ನೇ ಸಾಲಿನ ಕಂಬಳದ ಮಾಹಿತಿ ಕೈಪಿಡಿಯನ್ನು ಮೂಲ್ಕಿ ಸೀಮೆ ದುಗ್ಗಣ್ಣ ಸಾವಂತರಸರು ಬಿಡುಗೆಡೆ ಮಾಡಿದರು. ರಿಯಲ್ಎಸ್ಟೇಟ್ಉದ್ಯಮಿ ಹಾಗೂ ಬಿಲ್ಡರ್ ಕ್ಷೇತ್ರದ ಹಿರಿಯ ಸಾಧಕ ರೋಹನ್ ಕಾರ್ಪೋರೇಷನಿನ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಅವರಿಗೆ ಪೇಟ ಧರಿಸಿ, ಫಲಪುಷ್ಪ ಹಾಗೂ ಸ್ಮರಣಿಕೆ ನೀಡಿ ಗೌರವ ಸನ್ಮಾನ ನೀಡಲಾಯಿತು.
ಅಧ್ಯಕ್ಷತೆ ವಹಿಸಿದ್ದ ಡಾ.ಮೋಹನ್ ಆಳ್ವ ಮಾತನಾಡಿ, ಕಾಲದೊಂದಿಗೆ ಬದಲಾದ ಕಂಬಳ ಇಂದು ಜಗತ್ತಿನ ಗಮನ ಸೆಳೆದೆದಿದೆ. ಹಂತ ಹಂತವಾಗಿ ಕಂಬಳ ಬದಲಾಗಿ ಇಂದು ಲಕ್ಷಾಂತರ ಜನರನ್ನು ತಲುಪಿದೆ. ಇಂತಹ ಬದಲಾವಣೆಗಳ ಜತೆಗೆ ಕಂಬಳದಲ್ಲಿ ಕೋಣಗಳನ್ನು ಬಿಡುವ ವಿಚಾರದಲ್ಲೂ ಬದಲಾವಣೆ ಆಗ ಬೇಕು ಎಂದರು.
ರೋಹನ್ ಮೊಂತೆರೊ ಅವರು ಮಾತನಾಡಿ, ಈ ಸನ್ಮಾನದಿಂದ ನನ್ನ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ. ಬಾಲ್ಯದಲ್ಲಿ ತಾನು ಕೂಡಾ 2 ವರ್ಷ ಗದ್ದೆಯಲ್ಲಿ ಉಳುಮೆ ಮಾಡಿದ್ದೇನೆ. ಕೋಣಗಳನ್ನು ಸಾಕುವ ಕಷ್ಟ ನನಗೂ ಗೊತ್ತು ಎಂದು ಹೇಳಿ ನಮ್ಮಕುಡ್ಲ ಚಾನೆಲ್ ಮತ್ತು ಸಂಘಟಕರನ್ನು ಅಭಿನಂದಿಸಿದರು.
ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್, ಪುತ್ತೂರು ಶಾಸಕ, ಬೆಂಗಳೂರು ಕಂಬಳದ ಸಾರಥಿ ಅಶೋಕ್ ಕುಮಾರ್ ರೈ, ಆಭರಣ ಟೈಮ್ ಲೆಸ್ ಜುವೆಲ್ಲರಿ ಬೆಂಗಳೂರು ಇದರ ಮಾಲಕ ಪ್ರತಾಪ್ ಮಧುಕರ ಕಾಮತ್, ಎಸ್.ಎಲ್. ಡೈಮಂಡ್ ಹೌಸ್ ನ ಮಾಲಕ ಪ್ರಶಾಂತ್ ಶೇಟ್, ಜನಪದ ವಿದ್ವಾoಸ ಹಾಗೂ ಕಂಬಳದ ಪ್ರಧಾನ ತೀರ್ಪುಗಾರ ಗುಣಪಾಲ ಕಡoಬ, ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯ ಶಿಸ್ತು ಸಮಿತಿಯ ಅಧ್ಯಕ್ಷ ಭಾಸ್ಕರ ಕೋಟ್ಯಾನ್, ಸೈoಟ್ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿಯ ಡೀನ್ ಡಾ. ಆದರ್ಶ ಗೌಡ, ಅದಾನಿ ಸಂಸ್ಥೆಯ ಸಿಇಒ ಕಿಶೋರ್ ಆಳ್ವ, ಪಟ್ಲ ಫೌಂಡೇಶನಿನ ಸ್ಥಾಪಕ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ನಮ್ಮ ಕುಡ್ಲ ಸಂಸ್ಥೆಯ ನಿರ್ದೇಶಕ ಲೀಲಾಕ್ಷ ಬಿ. ಕರ್ಕೇರ ಸ್ವಾಗತಿಸಿ, ವಂದಿಸಿದರು. ನಿರ್ದೇಶಕರಾದ ಹರೀಶ್ ಬಿ. ಕರ್ಕೇರ, ಸುರೇಶ್ ಬಿ. ಕರ್ಕೇರ, ಮೋಹನ್ ಬಿ. ಕರ್ಕೇರ, ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಸುದರ್ಶನ್, ಅಮಿತಾ, ಸುರೇಖಾ ಶೆಟ್ಟಿ ಮತ್ತಿತರರು ಇದ್ದರು. ನಿತಿನ್ ಸಾಲ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.
120 ಪ್ರಶಸ್ತಿ ಪ್ರದಾನ :
ಕಂಬಳದ ಚಾಂಪಿಯನ್ ಕೋಣ ಹಾಗೂ ಕೋಣದ ಯಜಮಾನರಿಂದ ಹಿಡಿದು ತಂಡದ ಎಲ್ಲಾ ಸದಸ್ಯರನ್ನು ಗುರುತಿಸಿ ವಿವಿಧ ವಿಭಾಗಗಳಲ್ಲಿ ಒಟ್ಟು ಸುಮಾರು 120 ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಕನೆ ಹಲಗೆ ಮತ್ತು ಅಡ್ಡ ಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ, ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ ಭಟ್, ಹಗ್ಗ ಕಿರಿಯ ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ, ನೇಗಿಲು ಹಿರಿಯ ಬೋಳದ ಗುತ್ತು ಸತೀಶ್ ಶೆಟ್ಟಿ, ನೇಗಿಲು ಕಿರಿಯ ಮುನಿಯಾಲ್ ಉದಯಕುಮಾರ್ ಶೆಟ್ಟಿ ಸೇರಿದಂತೆ ಕೋಣಗಳ ಯಜಮಾನರಿಗೆ ಪ್ರಶಸ್ತಿ ನೀಡಲಾಯಿತು.
ಇದನ್ನೂ ಓದಿ : ಕೊನೆಗೂ ಮೌನ ಮುರಿದ ಎಚ್ಡಿ ದೇವೇಗೌಡ..! ಪ್ರಜ್ವಲ್ ಬಗ್ಗೆ ಹೇಳಿದ್ದೇನು?
ಬೈಂದೂರು ಮಹೇಶ್ ಪೂಜಾರಿ, ಭಟ್ಕಳ ಹರೀಶ್, ಬಂಬ್ರಾಣ ಬೈಲ್ ವಂದಿತ್ ಶೆಟ್ಟಿ, ಭಟ್ಕಳ ಶಂಕರ ನಾಯ್ಕ್, ಕಕ್ಕೆ ಪದವು ಪೆರ್oಗಾಲ್ ಕೃತಿಕ್ ಗೌಡ ಮತ್ತು ಮಾಸ್ತಿಕಟ್ಟೆ ಸ್ವರೂಪ್ ಸಹಿತ 6 ವಿಭಾಗಗಳಲ್ಲಿ ಕೋಣ ಓಡಿಸುವವರನ್ನು ನಮ್ಮ ಕಂಬಳ ಪ್ರಶಸ್ತಿ ನೀಡಿ ಗೌರವಿಸಲಾಯಿತು. 6 ವಿಭಾಗಗಳ ಕೋಣಗಳಿಗೆ ಚಾoಪಿಯನ್ ಅವಾರ್ಡ್ ಪ್ರದಾನ ಮಾಡಲಾಯಿತು. ಕಂಬಳ ಸಂಯೋಜಕರು ಮತ್ತು ತೀರ್ಪುಗಾರರನ್ನು ಶಾಲು ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು.