Connect with us

FILM

ರಿಲೀಸ್ ಗೂ ಮುನ್ನ ಭರ್ಜರಿ ಬೇಟೆಯಾಡಿದ ಪುಷ್ಪ-2..; ಎಷ್ಟು ಕೋಟಿ ಗೊತ್ತಾ..?

Published

on

ಅಲ್ಲು ಅರ್ಜುನ್ ನಟನೆಯ ಪುಷ್ಪ ಮೂವಿ ಬಾಕ್ಸ್ ಅಫೀಸ್‌ನಲ್ಲಿ ಧೂಳೆಬ್ಬಿಸಿತ್ತು. ಇದೀಗ ಅದರ ಎರಡನೇ ಭಾಗವಾಗಿರುವ ಪುಷ್ಟ-2 ಕೂಡಾ ನಿರೀಕ್ಷೆಯನ್ನು ದಾಟಿ ಮುಂದೆ ಸಾಗ್ತಾ ಇದೆ.  ಈಗಾಗಲೇ ಪುಷ್ಟಾ-2 ಸಿನೆಮಾ ರಿಲೀಸ್ ಗೂ ಮುನ್ನ ದೊಡ್ಡ ಮಟ್ಟದಲ್ಲಿ ಯಶಸ್ಸನ್ನು ಕಾಣುವ ಸೂಚನೆ ಸಿಕ್ಕಿದೆ.

ಪುಷ್ಪಾ-2 ಸಿನಿಮಾ ರಿಲೀಸ್​ಗೂ ಮೊದಲೇ ಸಾಕಷ್ಟು ಹಕ್ಕುಗಳು ಮಾರಾಟ ಆಗಿದೆ ಎಂದು ವರದಿ ಆಗಿದೆ. ಹೀಗಾಗಿ ಸಿನಿಮಾ ರಿಲೀಸ್​ಗೂ ಮೊದಲೇ 1000 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆಯಂತೆ. ಇದರಿಂದ ನಿರ್ಮಾಪಕರು ಭರ್ಜರಿ ಲಾಭ ಪಡೆದುಕೊಂಡಿದ್ದು, ಈ ಚಿತ್ರದ ಮೂರನೇ ಪಾರ್ಟ್ ಕೂಡಾ ಬರಲಿದೆ ಎಂದು ಈಗಾಗಲೆ ಸುದ್ದಿಯಾಗಿದೆ.

ಈ ಹಿಂದೆ ಬಾಕ್ಸ್ ಆಫೀಸ್‌ನಲ್ಲಿ  ಸಿನೆಮಾ 100 ಕೋಟಿ ಲಾಭವನ್ನು ಗಳಿಸಿದ್ರೆ ಅದು ದೊಡ್ಡ ವಿಷಯ. ವರ್ಷಗಳು ಕಳೆದಂತೆ ನಿರ್ಮಾಣ ವೆಚ್ಚ ಹೆಚ್ಚಾಗುತ್ತಿದೆ. ಸಿನೆಮಾ ಟಿಕಿಟ್ ಬೆಲೆ ಕೂಡಾ ಏರುತ್ತಿದೆ. ಹೀಗಾಗಿ ಸಿನೆಮಾದ ಗೆಲುವನ್ನು  500 ಕೋಟಿಯಿಂದ 1000 ಕೋಟಿ ತನಕ ಬೆಂಚ್ ಮಾರ್ಕ್ ನಿಂದ ಅಳೆಯಲಾಗಿದೆ. ಈಗಾಗಲೇ ಶಾರುಖ್ ಖಾನ್ ನಟನೆಯ ಎರಡು ಸಿನಿಮಾಗಳು 2023ರಲ್ಲಿ ರಿಲೀಸ್ ಆಗಿ ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಮಾಡಿವೆ. ಈಗ ‘ಪುಷ್ಪ 2’ ಸಿನಿಮಾ ರಿಲೀಸ್​ಗೂ ಮೊದಲೇ 1000 ಕೋಟಿ ರೂಪಾಯಿ ಬಿಸ್ನೆಸ್ ಮಾಡಿರುವುದು ವಿಶೇಷವಾಗಿದೆ.

ಮುಂದೆ ಓದಿ..; ದೀಪಿಕಾ ಪಡುಕೋಣೆ ಜೊತೆ ಒಪ್ಪಂದ ಮಾಡಿಕೊಂಡ ನಿಶಾ ಅಂಬಾನಿ..! ಏನು ಗೊತ್ತಾ?

‘ಪುಷ್ಪ 2’ ಸಿನಿಮಾದ ಬಜೆಟ್ 500 ಕೋಟಿ ರೂಪಾಯಿ ದಾಟಿದೆ ಎಂದು ಮೂಲಗಳು ತಿಳಿಸಿದೆ. ಈ ಚಿತ್ರದ ಆಂಧ್ರ ಹಾಗೂ ತೆಲಂಗಾಣ ಭಾಗದ ಹಂಚಿಕೆ ಹಕ್ಕು 200 ಕೋಟಿ ರೂಪಾಯಿಗೆ ಮಾರಾಟ ಆಗಿದೆ. ಹಿಂದಿಯಲ್ಲಿ ಈ ಸಿನಿಮಾ ದೊಡ್ಡ ಗೆಲುವು ಕಂಡಿದೆ. ಹೀಗಾಗಿ, ಆ ಭಾಗದಲ್ಲೂ ಸಿನಿಮಾದ ಹಂಚಿಕೆ ಹಕ್ಕು ದೊಡ್ಡ ಮಟ್ಟಕ್ಕೆ ಮಾರಾಟ ಆಗಿದೆ ಎನ್ನಲಾಗುತ್ತಿದೆ. ಇದರ ಜೊತೆಗೆ ಟಿವಿ ಹಕ್ಕು, ಒಟಿಟಿ ಹಕ್ಕು, ಸಾಂಗ್ ರೈಟ್ಸ್ ಕೂಡ ದೊಡ್ಡ ಮಟ್ಟಕ್ಕೆ ಮಾರಾಟ ಆಗಿದ್ದು, ಸಿನಿಮಾದ ಬಿಸ್ನೆಸ್ 1000 ಕೋಟಿ ರೂಪಾಯಿ ದಾಟಿದೆ.

ಸುಕುಮಾರ್ ಅವರು ‘ಪುಷ್ಪ 2’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರು ಚಿತ್ರದ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಆಗಸ್ಟ್ 15ರಂದು ಐದು ಭಾಷೆಗಳಲ್ಲಿ ಪುಷ್ಪಾ-2 ಸಿನಿಮಾ ರಿಲೀಸ್ ಆಗುತ್ತಿದೆ.

FILM

ಬೆಳ್ಳಿತೆರೆಯಲ್ಲಿ ಮತ್ತೊಮ್ಮೆ ಅಬ್ಬರಿಸಲಿದೆ ‘ಪುನೀತ್’ ಸಿನೆಮಾ..! ಯಾವ ಸಿನೆಮಾ?

Published

on

ಬೆಂಗಳೂರು: ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅಭಿನಯದ ಫ್ಯಾಮಿಲಿ ಪ್ಯಾಕೇಜ್, ಹಿಟ್ ಮೂವಿಯೊಂದು ರಿ ರಿಲೀಸ್‌ಗೆ ರೆಡಿಯಾಗಿದೆ. ಮಾರ್ಚ್‌ ನಲ್ಲಿ ಅಪ್ಪು ಅಭಿನಯದ ಜಾಕಿ ಚಿತ್ರ ರಿ ರಲೀಸ್‌ ಆಗಿದ್ದು ಹಿಟ್‌ ಲಿಸ್ಟ್‌ಅಲ್ಲಿ ಸೇರಿಕೊಂಡಿದೆ. ಇದೀಗ ಅವರ ಅಭಿನಯದ ಮತ್ತೊಂದು ಸಿನೆಮಾ ‘ಅಂಜನಿಪುತ್ರ’ ರಿ ರಲೀಸ್‌ಗೆ ತಯಾರಾಗಿದೆ.

anjani

ರಿ ರಿಲೀಸ್ ಯಾವಾಗ?

ಪುನೀತ್‌ ರಾಜ್‌ಕುಮಾರ್, ರಶ್ಮಿಕಾ ಮಂದಣ್ಣ, ರಮ್ಯಾ ಕೃಷ್ಣನ್‌ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ಅಂಜನಿ ಪುತ್ರ ಸಿನಿಮಾ ಇದೀಗ ಮರು ಬಿಡುಗಡೆ ಆಗುತ್ತಿದೆ. ಹರ್ಷ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ, ಎನ್‌ಎಮ್‌ಕೆ ಮೂವೀಸ್ ಲಾಂಛನದಲ್ಲಿ ಬಿಡುಗಡೆಗೊಂಡಿತ್ತು.  2017ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಈಗ ಆರು ವರ್ಷಗಳ ಬಳಿಕ ಮತ್ತೆ ಚಿತ್ರಮಂದಿರಕ್ಕೆ ಬರುತ್ತಿದೆ.  ರಾಜ್ಯದ  ಹಲವು ಚಿತ್ರಮಂದಿರಗಳಲ್ಲಿ ಮೇ.10ರಂದು ಸಿನೆಮಾ ರಿಲೀಸ್ ಆಗಲಿದೆ ಎಂದು ನಿರ್ಮಾಪಕ ಎಮ್‌ಎನ್ ಕುಮಾರ್ ತಿಳಿಸಿದ್ದಾರೆ.

 

ಮುಂದೆ ಓದಿ..; ನೇ*ಣಿಗೆ ಶರಣಾದ ಯುವ ನಟಿ..! ಸಾ*ವಿಗೂ ಮುನ್ನ ವ್ಯಾಟ್ಸಾಪ್ ಸ್ಟೇಟಸ್‌ನಲ್ಲಿ ಬರೆದಿದ್ದೇನು..!

ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ ಹಿಟ್‌ ಸಾಂಗ್‌ಗಳನ್ನು ಒಳಗೊಂಡಿದೆ. ಅದರಲ್ಲೂ’ಭಾರಿ ಖುಷಿ ಮರ್ರೆ ನನ್ನ ಹೆಂಡ್ತಿ ಕಂಡ್ರೆ’ ಸಾಂಗ್ ಎಲ್ಲರ ತುಟಿಯಂಚಿನಲ್ಲಿ ಈಗಲೂ ಗುಣುಗುಟ್ಟುವಂತಿದೆ. ಮುಂದಿನ ದಿನಗಳಲ್ಲಿ ಪುನೀತ್ ಹಲವು ಸಿನೆಮಾಗಳು ರಿ ರಿಲೀಸ್ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.

Continue Reading

FILM

ನೇ*ಣಿಗೆ ಶರಣಾದ ಯುವ ನಟಿ..! ಸಾ*ವಿಗೂ ಮುನ್ನ ವ್ಯಾಟ್ಸಾಪ್ ಸ್ಟೇಟಸ್‌ನಲ್ಲಿ ಬರೆದಿದ್ದೇನು..!

Published

on

ಬಿಹಾರ್: ಯುವ ನಟಿಯೊಬ್ಬರು ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎ.27ರಂದು ಬಿಹಾರದಲ್ಲಿ ನಡೆದಿದೆ. ಜೋದ್‌ಪುರಿ ನಟಿ ಅಮೃತಾ ಪಾಂಡೆ ಆತ್ಮಹ*ತ್ಯೆಗೆ ಶರಣಾದವರು. ಆತ್ಮಹ*ತ್ಯೆಗೂ ಮೊದಲು ನಿಗೂಢಾರ್ಥದಲ್ಲಿ ವ್ಯಾಟ್ಸಪ್ ಸ್ಟೇಟಸ್ ಬರೆದು ಹಾಕಿದ್ದರು.

amrutha

ಪೊಲೀಸರಿಗೆ ಅದಾಮ್‌ಪುರದ ದಿವ್ಯಾಧರ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮ*ಹತ್ಯೆ ನಡೆದಿದೆ ಎಂದು ಕರೆ ಬರುತ್ತದೆ. ಪೊಲೀಸರು ಬಂದು ಪರಿಶೀಲಿಸಿದಾಗ ಬೆಡ್‌ ಮೇಲೆ ಅಮೃತಾ ಮೃತದೇಹ ಇತ್ತು. ಇದಕ್ಕೆ ಮೊದಲು ಅಮೃತಾಳ ಸಹೋದರಿ ರೂಂ ನ ಒಳಗಡೆ ಹೋಗಿದ್ದಾರೆ. ಅಕ್ಕನನ್ನು ನೋಡಿ ಶಾಕ್ ಆಗಿದ್ದರು. ಆ ಕೂಡಲೇ ಕೆಳಗಿಳಿಸುವ ಪ್ರಯತ್ನ ಮಾಡಿದ್ದಾರೆ. ಆಗಾಗಲೇ ಸಮಯ ಮಿಂಚಿ ಹೋಗಿತ್ತು.

ಮುಂದೆ ಓದಿ..; ಈ ತಿಂಗಳಿನಲ್ಲಿ ಬರುತ್ತೆ ಪಿಎಂ ಕಿಸಾನ್ ಯೋಜನೆಯ 17ನೇಕಂತು..!

ಅದೇನಿತ್ತು ವ್ಯಾಟ್ಸಾಪ್ ಸ್ಟೇಟಸ್‌ನಲ್ಲಿ..!

ಅಮೃತಾ ಸಾಯುವುದಕ್ಕೂ ಮೊದಲು ವ್ಯಾಟ್ಸಾಪ್‌ ನಲ್ಲಿ ಸ್ಟೇಟಸ್ ಹಾಕಿದ್ದರು. “ಅವರ ಜೀವನ ಎರಡು ದೋಣಿಗಳ ಮೇಲಿದೆ. ನಾವು ನಮ್ಮ ದೋಣಿಯನ್ನು ಮುಳುಗಿಸುವ ಮೂಲಕ ಅವರ ಮಾರ್ಗವನ್ನು ಸಡಿಲಗೊಳಿಸಿದ್ದೇವೆ” ಎಂದು ಬರೆದು ಸ್ಟೇಟಸ್ ಹಾಕಿದ್ದಾರೆ. ಇದನ್ನೆಲ್ಲಾ ಗಮನಿಸಿದಾಗ ಪತಿ ಚಂದ್ರಮಣಿ ಇನ್ನೋರ್ವಳನ್ನು ಪ್ರೀತಿಸುತ್ತಿದ್ದರೇ ಎನ್ನುವ ಅನುಮಾನ ಹುಟ್ಟಿಹಾಕಿದೆ. ಇನ್ನು ಅಮೃತಾಳ ಪತಿ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, 2022ರಲ್ಲಿ ಅಮೃತಾ ಚಂದ್ರಮಣಿಯನ್ನು ಮದುವೆ ಆಗಿದ್ದರು.

ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು

ಇನ್ನೂ ಕುಟುಂಬ ಸದಸ್ಯರು ಅಮೃತಾ ಖಿನ್ನತೆಗೆ ಒಳಗಾಗಿದ್ದಳು. ಸಿನೆಮಾದಲ್ಲಿ ಸರಿಯಾದ ಚಾನ್ಸ್‌ ಸಿಗುತ್ತಿಲ್ಲ ಎಂದು ಖಿನ್ನತೆ ಒಳಗಾಗಿದ್ದಳು ಎಂದು ಹೇಳಿದ್ದಾರೆ. ಅವರು ‘ಪ್ರತಿಶೋಧ’ ಹೆಸರಿನ ಸೀರಿಸ್​ನಲ್ಲಿ ನಟಿಸಿದ್ದರು. ಅವರು ‘ದೀವಾನಪನ್’ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದರು. ಅವರ ಸಾವಿಗೆ ನಿಜಕ್ಕೂ ಖಿನ್ನತೆ ಕಾರಣವೇ ಅಥವಾ ಬೇರೆ ಏನಾದರೂ ಬೇರೆ ಕಾರಣವೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Continue Reading

FILM

ದುಬಾರಿ ಕಾರು ಖರೀದಿಸಿದ ಸಂಭ್ರಮದಲ್ಲಿ ಸಿಂಹಪ್ರಿಯಾ; ಬೆಲೆ ಎಷ್ಟು ಗೊತ್ತಾ?

Published

on

ಬೆಂಗಳೂರು : ಸೆಲೆಬ್ರಿಟಿಗಳಿಗೆ ಕಾರಿನ ಕ್ರೇಝ್ ಹೆಚ್ಚಾಗಿರುತ್ತದೆ. ದುಬಾರಿ ಬೆಲೆಯ ಕಾರುಗಳನ್ನು ಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾರು ಖರೀದಿಸಿದ್ದ ಸುದ್ದಿ ವೈರಲ್ ಆಗಿತ್ತು. ಅವರು ಆಡಿ ಕ್ಯೂ7 ಮಾದರಿಯ ಗ್ರೇ ಬಣ್ಣದ ಕಾರನ್ನು ಖರೀದಿಸಿದ್ದರು. ಅವರ ಐಷಾರಾಮಿ ಕಾರಿನ ಆನ್ ರೋಡ್ ಬೆಲೆಯು ರೂ.1.10 ಕೋಟಿಯಾಗಿದೆ. ಇದೀಗ ಹರಿಪ್ರಿಯಾ – ವಸಿಷ್ಠ ಸಿಂಹ ಹೊಸ ಕಾರೊಂದನ್ನು ಖರೀದಿಸಿದ್ದಾರೆ.

ಬೆಲೆ ಎಷ್ಟು? :


ಕಾರನ್ನು ಕೊಳ್ಳುವ ಮೂಲಕ ವಸಿಷ್ಠ ಸಿಂಹ ತಮ್ಮ ಕನಸೊಂದನ್ನು ನನಸಾಗಿಸಿಕೊಂಡಿದ್ದಾರೆ. ಮರ್ಸಿಡಿಸ್ ಬೆಂಝ್ ನಿರ್ಮಾಣದ ಜಿಎಲ್ಇ 450ಡಿ ಕಾರನ್ನು ಅವರು ಖರೀದಿಸಿದ್ದಾರೆ. ಮರ್ಸಿಡಿಸ್ ಬೆಂಝ್ ಜಿಎಲ್ಇ 450ಡಿ ಆವೃತ್ತಿಯು ಸದ್ಯ ಬೆಂಗಳೂರಿನಲ್ಲಿ ಆನ್ ರೋಡ್ ಪ್ರಕಾರ ರೂ. 1.44 ಕೋಟಿ ಬೆಲೆ ಹೊಂದಿದೆ.

ಇದನ್ನೂ ಓದಿ : ‘ಮಹಾನಟಿ’ ರಿಯಾಲಿಟಿ ಶೋ ವಿರುದ್ಧ ಬಿತ್ತು ಕೇಸ್; ಯಾಕೆ ಗೊತ್ತಾ!?

ಹೊಸ ಕಾರು ಖರೀದಿ ಮಾಡಿದ ವಿಡಿಯೋವನ್ನು ವಸಿಷ್ಠ ಸಿಂಹ ತಮ್ಮ ಇನ್​ಸ್ಟಾಗ್ರಾಮ್ ​ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಸ್ಟಾರ್ ​ದಂಪತಿ ಕಾರು ಶೋ ರೂಮ್​ಗೆ ಎಂಟ್ರಿ ಕೊಡುವುದರೊಂದಿಗೆ ವೀಡಿಯೋ ಆರಂಭಗೊಳ್ಳುತ್ತದೆ.


ಬಳಿಕ ಹೊಸ ದುಬಾರಿ ಕಾರಿನ ವಿತರಣೆಯನ್ನು ಪಡೆದುಕೊಂಡಿದ್ದಾರೆ. ಹೊಸ ಕಾರು ಕೊಂಡ ತಮ್ಮ ನೆಚ್ಚಿನ ನಟ – ನಟಿಗೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. ಸದ್ಯ ಸಿಂಹಪ್ರಿಯಾ ಖರೀದಿಸಿದ ಹೊಸ ಕಾರಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Continue Reading

LATEST NEWS

Trending