Connect with us

    DAKSHINA KANNADA

    ಪುತ್ತೂರು ಕಾಂಗ್ರೆಸ್‌ ಮುಖಂಡನ ಅಶ್ಲೀ*ಲ ವೀಡಿಯೋ ವೈರಲ್‌..!

    Published

    on

    ಪುತ್ತೂರು : ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡನೊಬ್ಬನ ಅಶ್ಲೀ*ಲ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಜನರಿಗೆ ಪುಕ್ಕಟೆ ಸಲಹೆ ನೀಡುತ್ತಿದ್ದ ಅದ್ದು ಪಡೀಲ್‌ ಎಂಬ ಈ ಕಾಂಗ್ರೆಸ್‌ ನಾಯಕ ಈಗ ಅಶ್ಲೀ*ಲ ವೀಡಿಯೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸುದ್ಧಿಯಾಗಿದ್ದಾರೆ.

    ಸಾರ್ವಜನಿಕರ ಆಕ್ರೋಶ; ನಾನಲ್ಲ ಎಂದ ಅದ್ದು :

    ಹಣ ಪಾವತಿಸಿದರೆ ಸಿಗುವ ಆನ್‌ಲೈನ್ ಸೆ*ಕ್ಸ್‌ ಫ್ಲಾಟ್‌ಫಾರಂನಲ್ಲಿ ಅದ್ದು ಪಡೀಲ್‌ ವೀಡಿಯೋ ಚಾಟಿಂಗ್ ಮಾಡಿದ್ದಾರೆ. ಧಾರ್ಮಿಕ ಕೇಂದ್ರವೊಂದರಲ್ಲಿ ಈ ವೀಡಿಯೋ ಚಾಟಿಂಗ್ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ.  ಊರಿಗೆ ಬುದ್ದಿ ಹೇಳುವ ವ್ಯಕ್ತಿಯ ಈ ರೀತಿಯ ವರ್ತನೆ ಎಷ್ಟು ಸರಿ ಎಂಬ ಬಗ್ಗೆ ಜನರೇ ಅದ್ದು ಪಡೀಲ್ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ.

    ಆದ್ರೆ, ಈ ವಿಡಿಯೋ ಬಗ್ಗೆ ಮಾತನಾಡಿರುವ ಅದ್ದು ಪಡೀಲ್‌ ಈ ವೀಡಿಯೋಗು ನನಗೂ ಯಾವುದೇ ಸಂಬಂಧವಿಲ್ಲ. ಇದು ಟೆಕ್ನಾಲಜಿ ಬಳಸಿ ಮಾರ್ಫಿಂಗ್ ಮಾಡಿ ನನ್ನಂತೆ ತೋರಿಸಲಾಗಿದೆ ಎಂದು ಸಮಜಾಯಿಸಿ ನೀಡಿದ್ದಾರೆ.

    ಇದನ್ನೂ ಓದಿ : ವಿಮಾನದಲ್ಲಿ ನೀಡಿದ ಆಮ್ಲೆಟ್‌ನಲ್ಲಿ ಜಿರಳೆ..! ಪೋಸ್ಟ್‌ ವೈರಲ್‌ ..!

    ಆದ್ರೆ, ಅದ್ದು ಪಡೀಲ್ ಅವರ ಈ ಉತ್ತರ ಪುತ್ತೂರಿನ ಜನ ನಂಬಿಲ್ಲ. ಈ ಬಗ್ಗೆ ತನಿಖೆ ನಡೆಸಲು ಅದ್ದು ಪಡೀಲ್ ಅವರೇ ಪೊಲೀಸರಿಗೆ ದೂರು ನೀಡಿ ಎಂದು ಸಲಹೆ ನೀಡಿದ್ದಾರೆ. ಆನ್‌ಲೈನ್‌ನಲ್ಲಿ ಸಿಗುವ ಇಂತಹ ಸೈಟ್‌ಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸ್ ಇಲಾಖೆ ಈ ಹಿಂದೆಯೇ ಎಚ್ಚರಿಕೆ ನೀಡಿತ್ತು

    DAKSHINA KANNADA

    ಕೆಸಿಸಿಐ ನೂತನ ಅಧ್ಯಕ್ಷರಾಗಿ ಆನಂದ್ ಜಿ.ಪೈ ನೇಮಕ

    Published

    on

    ಮಂಗಳೂರು : 2024-25 ನೇ ಸಾಲಿನ ಮಂಗಳೂರಿನ ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ (ಕೆಸಿಸಿಐ) ನೂತನ ಅಧ್ಯಕ್ಷರಾಗಿ ಆನಂದ್ ಜಿ.ಪೈ ಆಯ್ಕೆಯಾಗಿದ್ದಾರೆ. ಸೆಪ್ಟೆಂಬರ್ 27 ರಂದು ಶುಕ್ರವಾರ ನಡೆದ ಕೆಸಿಸಿಐನ 84 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ. ಇವರು ಭಾರತ್ ಬೀಡಿ ವರ್ಕ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರಿನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.

    ಭಾರತ್ ಗ್ರೂಪ್‌ನ ಕಾರ್ಯತಂತ್ರದ ಯೋಜನೆ ಮತ್ತು ವೈವಿಧ್ಯೀಕರಣದ ಉಸ್ತುವಾರಿ ವಹಿಸಿಕೊಂಡರು. ಇವರು ಯುಎಸ್‌ನ ಮಿಚಿಗನ್‌ ನಲ್ಲಿರುವ ಆಂಡ್ರ್ಯೂಸ್ ವಿಶ್ವವಿದ್ಯಾಲಯದಿಂದ ಇಂಡಸ್ಟ್ರಿಯಲ್ ಪ್ರೊಡಕ್ಷನ್ ಇಂಜಿನಿಯರ್ ಆಗಿ ಪದವಿ ಪಡೆದರು. ನಂತರ ಅದೇ ವಿಶ್ವವಿದ್ಯಾಲಯದಿಂದ ಸಾಫ್ಟ್‌ವೇರ್ ಇಂಜಿನಿಯರ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

    ಇದನ್ನೂ ಓದಿ : ಉಡುಪಿ : ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್ ಇನ್ನಿಲ್ಲ

    2024-25 ನೇ ಸಾಲಿನ ಇತರ ಪದಾಧಿಕಾರಿಗಳ ವಿವರ :

    ಉಪಾಧ್ಯಕ್ಷರಾಗಿ ಪಿ.ಬಿ.ಅಹ್ಮದ್ ಮುದಸ್ಸರ್, ಗೌರವ ಕೋಶಾಧಿಕಾರಿಯಾಗಿ ಅಬ್ದುರ್ ರಹಮಾನ್ ಮುಸ್ಬಾ , ಗೌರವ ಕಾರ್ಯದರ್ಶಿಯಾಗಿ ಅಶ್ವಿನ್ ಪೈ ಮಾರೂರ್, ಆದಿತ್ಯ ಪದ್ಮನಾಭ ಪೈ ಜೊತೆಗೆ 12 ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ.

    Continue Reading

    DAKSHINA KANNADA

    ಯಕ್ಷಧ್ರುವ ಪಟ್ಲ ಫೌಂಡೇಶನ್  ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಗೆ ಸನ್ಮಾನ

    Published

    on

    ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್  ಹಾಗೂ ಯಕ್ಷಧ್ರುವ ಕೊ-ಆಪರೇಟಿವ್ ಸೊಸೈಟಿ ಅಧ್ಯಕ್ಷ  ಪಟ್ಲ ಸತೀಶ್ ಶೆಟ್ಟಿಯವರು ಅಮೇರಿಕಾದ 22 ದೇಶಗಳಲ್ಲಿ ನಡೆಸಿದ ಯಕ್ಷ ಯಾನ ಯಶಸ್ವಿಗಾಗಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಪಟ್ಲ ಸತೀಶ್ ಶೆಟ್ಟಿ ದಂಪತಿಯನ್ನು ಕಾವೂರು ಶ್ರೀ ಹಿಲ್ ಸೈಡ್ ಸಭಾಂಗಣದಲ್ಲಿ  ಸನ್ಮಾನಿಸಿ ಗೌರವಿಸಿದರು.

    ಈ ಸಂದರ್ಭ ಒಕ್ಕೂಟದ ಪೋಷಕರು ಹಾಗೂ ಪಟ್ಲ ಫೌಂಡೇಶನ್ ನ ಮಾರ್ಗದರ್ಶಕ ಸವಣೂರು ಸೀತಾರಾಮ್ ರೈ, ಸುಧಾಕರ್ ಪೂಂಜಾ, ಗಿರೀಶ್ ಎಂ. ಶೆಟ್ಟಿ ಕಟೀಲ್, ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಸಂತೋಷ್ ಕುಮಾರ್ ಶೆಟ್ಟಿ, ಲೋಕೇಶ್ ಭರಣಿ, ಪುರುಷೋತ್ತಮ್ ಭಂಡಾರಿ, ರವಿಚಂದ್ರ ಶೆಟ್ಟಿ, ಕೊಲ್ಲಾಡಿ ಬಾಲಕೃಷ್ಣ ರೈ, ಆರತಿ ಆಳ್ವ, ತನುಜಾ ಕೆ.ಅಡ್ಯoತಾಯ ಮೊದಲಾದವರು ಉಪಸ್ಥಿತರಿದ್ದರು.

    Continue Reading

    Baindooru

    ಬಿಗ್ ಬಾಸ್ ಗೆ ಮೂರನೇ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟ ಹಿಂದೂ ಫೈರ್ ಬ್ರಾಂಡ್ ಚೈತ್ರಾ

    Published

    on

    ಮಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿ ಬರೋ ಈ ಶೋಗೆ ಸ್ಪರ್ಧಿಗಳು ಯಾರಾಗ್ತಾರೆ ಅನ್ನೋದು ಕುತೂಹಲವೇ ಹೆಚ್ಚು. ಈ ಬಾರಿ ಅಂದ್ರೆ ಸೀಸನ್ 11 ರ ಸ್ಪರ್ಧಿಗಳು ಯಾರು ಅನ್ನೋ ‘ರಾಜ ರಾಣಿ’ ರಿಯಾಲಿಟಿ ಶೋ ನ ಗ್ರ್ಯಾಂಡ್ ಫಿನಾಲೇಲಿ ರಿವೀಲ್ ಆಗುತ್ತಿದೆ.

    ಎಂಟ್ರಿ ಕೊಟ್ಟ ಚೈತ್ರಾ!

    ಮೊದಲ ಸ್ಪರ್ಧಿಯಾಗಿ ‘ಸತ್ಯ’ ಧಾರಾವಾಹಿ ನಟಿ ಗೌತಮಿ ಜಾಧವ್, 2ನೇ ಸ್ಪರ್ಧಿಯಾಗಿ ಲಾಯರ್ ಜಗದೀಶ್‌ ಬಿಗ್ ಬಾಸ್ ಮನೆ ಸೇರುತ್ತಿದ್ದು, ಇನ್ನೂ 3ನೇ ಸ್ಪರ್ಧಿಯಾಗಿ ‘ಬಿಗ್ ಬಾಸ್‌’ ಮನೆಯೊಳಗೆ ಫೈರ್ ಬ್ರ್ಯಾಂಡ್ ಭಾಷಣಕಾರ್ತಿ ಚೈತ್ರಾ ಎಂಟ್ರಿ ಕೊಟ್ಟಿದ್ದಾರೆ.
    ಖಡಕ್‌ ಮಾತುಗಳಿಂದಲೇ, ಹಿಂದುತ್ವದ ಹೆಸರಿನಲ್ಲಿ ಭಾಷಣ ಮಾಡಿ, ತಮ್ಮದೇ ಆದ ಅಪಾರ ಹಿಂಬಾಲಕರನ್ನು ಹೊಂದಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಚೈತ್ರಾ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
    ಅಲ್ಲದೇ, ಖಾಸಗಿ ವಾಹಿನಿ, ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವವೂ ಇದೆ.

    ಇದನ್ನು ಓದಿ: ನಟಿ ಸುಕೃತಾ ನಾಗ್ ಸಿಲ್ಕ್ ಸೀರೆಯಲ್ಲಿ ಮಿಂಚಿಂಗ್… ಬಿಗ್ ಬಾಸ್ ಗೆ ಸ್ವಾಗತ ಅಂತಿದ್ದಾರೆ ಜನ!

    ವಂಚನೆ ಪ್ರಕರಣ:
    ಪ್ರಖರ ಭಾಷಣಗಳ ಮೂಲಕ ಗಮನ ಸೆಳೆದಿದ್ದ ಚೈತ್ರಾ ಕಾಂಟ್ರವರ್ಸಿಗಳ ಮೂಲಕವೂ ಸದ್ದು ಮಾಡಿದ್ದಾರೆ. ಅಲ್ಲದೇ, ಬಿಜೆಪಿ ಟಿಕೆಟ್ ಕೊಡುವ ವಿಚಾರದಲ್ಲಿ ಬೈಂದೂರಿನ ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪದಡಿ ಜೈಲು ಪಾಲಾಗಿದ್ದರು.
    ಸದ್ಯ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದಿರುವ ಚೈತ್ರಾ ಅಲ್ಲಿ ಹೇಗಿರ್ತಾರೆ? ಅನ್ನೋದನ್ನ ಕಾದು ನೋಡಬೇಕಿದೆ.

    Continue Reading

    LATEST NEWS

    Trending