Connect with us

LATEST NEWS

ಪುತ್ತೂರು: ಶಿಥಿಲಾವಸ್ಥೆಯಲ್ಲಿ ಮಣಿಕರ ಸರ್ಕಾರಿ ಶಾಲೆ-ಗಮನ ಹರಿಸದ ಶಾಸಕರ ವಿರುದ್ಧ ಸ್ಥಳೀಯರು ಗರಂ

Published

on

ಪುತ್ತೂರು: ಶಾಲಾ ಕೊಠಡಿಗಳು ಸಂಪೂರ್ಣವಾಗಿ ಶಿಥಿಲಾವಸ್ಥೆಯಲ್ಲಿದ್ದು ಮಕ್ಕಳು ಹೊರಗಡೆಯೇ ಕೂತು ಪಾಠ ಕೇಳುವ ದುರ್ಗತಿ ಬಂದಿದ್ದರೂ ಸ್ಥಳೀಯ ಶಾಸಕ ಇದರ ಬಗ್ಗೆ ಗಮನ ವಹಿಸದಿರುವುದನ್ನು ಗ್ರಾಮಸ್ಥರು ಆರೋಪಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.


ಪುತ್ತೂರು ತಾಲೂಕಿನ ಮಣಿಕರ ಜಿ.ಪಂ.ಹಿ.ಪ್ರಾ.ಶಾಲೆ, ಪುತ್ತೂರು ಶಾಸಕರ ಕಾರ್ಯವ್ಯಾಪ್ತಿಯಲ್ಲಿ ಬರುವ ಶಾಲೆ. ಈ ಶಾಲೆಯಲ್ಲಿ ಸುಮಾರು 88 ವಿದ್ಯಾರ್ಥಿಗಳು ಮಳೆಯಲ್ಲಿ ನೆನೆಯುತ್ತಾ, ಬಿಸಿಲಲ್ಲಿ ಬೇಯುತ್ತಾ ಪಾಠ ಕೇಳುವ ಗತಿಗೇಡು ಎದುರಾಗಿದೆ.

ಆದರೆ ಪುತ್ತೂರು ಶಾಸಕರು ಈ ಕಡೆ ಮುಖ ಮಾಡಿ ಇಲ್ಲಿನ ಸಮಸ್ಯೆ ಆಲಿಸದೇ ಪುಟ್ಟ ಮಕ್ಕಳ ಜೀವದ ಜೊತೆಗೆ ಚೆಲ್ಲಾಟ ಆಡುತ್ತಿದ್ದಾರೆ ಎಂಬುದು ಇಲ್ಲಿನ ಪೋಷಕರ ಮತ್ತು ಶಾಲಾ ಅಭಿವೃದ್ಧಿ ಸಮಿತಿಯ ಆರೋಪ.

ಮಣಿಕರ ಶಾಲೆಯ ಮೂರು ತರಗತಿ ಕೊಠಡಿಗಳು ತೀವ್ರ ಶಿಥಿಲಾವಸ್ಥೆಯಲ್ಲಿರುವುದರಿಂದ 2017-18 ನೇ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಇಲಾಖಾಧಿಕಾರಿಗಳ ಸೂಚನೆಯಂತೆ ಈ ಕೊಠಡಿಗಳಿಗೆ ಈಗಾಗಲೇ ಬೀಗ ಜಡಿದು ಇದೀಗ ನಾಲ್ಕು ವರ್ಷಗಳಾಗಿವೆ.

ಉಳಿದಂತೆ ಕಟ್ಟಡದಲ್ಲಿರುವ ಮೂರು ಕೊಠಡಿಗಳೂ ಈ ಶೈಕ್ಷಣಿಕ ವರ್ಷದಿಂದ ಶಿಥಿಲಾವಸ್ಥೆಗೆ ತಲುಪಿರುವುದನ್ನು ಮನಗಂಡ ಇಲಾಖೆಯು ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸೂಚನೆ ನೀಡಿದೆ. ಇದೀಗ ಈ ಶಾಲೆಯ ಪುಟ್ಟ ಮಕ್ಕಳ ಪಾಠ ಪ್ರವಚನದಿಂದ ಹಿಡಿದು ಕ್ಷೀರಭಾಗ್ಯ, ಬಿಸಿಯೂಟ, ಸೇರಿದಂತೆ ಇನ್ನಿತರ ಹಲವಾರು ಶೈಕ್ಷಣಿಕ ಚಟುವಟಿಕೆಗಳನ್ನು ತರಗತಿ ಕೋಣೆಗಳಿಲ್ಲದೆ ಸಂಕಷ್ಟದಲ್ಲಿ ನಡೆಯುತ್ತಿದೆ.

ಈ ಸರಕಾರಿ ಶಾಲೆಯಲ್ಲಿ ಮಕ್ಕಳ ಕೊರತೆ ಇಲ್ಲ ಬದಲಾಗಿ ಇಲ್ಲಿ ಸುಮಾರು 88 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೊಸ ನೋಂದಾವಣೆ ಮಾಡಲು ಮಕ್ಕಳ ಪೋಷಕರು ಆಗಮಿಸುತ್ತಿದ್ದಾರೆ ಆದರೆ ಶಾಲಾ ಕೊಠಡಿ ಇಲ್ಲದೇ ವಾಪಾಸಾಗುತ್ತಿದ್ದಾರೆ.

ಈ ಶಾಲಾ ಕಟ್ಟಡಕ್ಕೆ ಅನುದಾನ ಕೋರಿ ಹಲವಾರು ಬಾರಿ ಪುತ್ತೂರು ಶಾಸಕರು, ಹಾಗೂ ಸಂಬಂಧಪಟ್ಟ ಎಲ್ಲಾ ಅಧಿಕಾರಿಳು ಹಾಗೂ ಜನಪ್ರತಿನಿಧಿಗಳಿಗೂ ಕಳೆದ ಮೂರು ವರ್ಷಗಳಿಂದ ಪೋಷಕರು, ಶಾಲಾ ಅಭಿವೃದ್ಧಿ ಸಮಿತಿಯವರು ಅರ್ಜಿ ಸಲ್ಲಿಸುತ್ತಲೇ ಬಂದಿದ್ದಾರೆ.

ಆದರೆ ಎಲ್ಲರೂ ತಿರಸ್ಕಾರ ಭಾವನೆಯಿಂದ ಈ ಶಾಲೆಯನ್ನು ನೋಡುತ್ತಾರೆ ಎನ್ನುವುದು ಪೋಷಕರ ಆರೋಪ.

ಒಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಈ ಸರಕಾರಿ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣವನ್ನು ಕಾಯ್ದುಕೊಳ್ಳುವ ಮೂಲಕ ಇಲ್ಲಿನ ಪುಟ್ಟ ಮಕ್ಕಳ ಸುರಕ್ಷತೆಯ ನಿಟ್ಟಿನಲ್ಲಿ, ತರಗತಿ ಕೋಣೆಗಳಿಗೆ ಅನುದಾನ ಒದಗಿಸಿ ಕೊಟ್ಟು ಶಾಲೆಯ ಮೂಲಭೂತ ಕೊರತೆಯನ್ನು ನೀಗಿಸಿ ಕೊಡುವ ನಿಟ್ಟಿನಲ್ಲಿ ಸಂಭಂಧಪಟ್ಟ ಶಿಕ್ಷಣ ಸಚಿವರು, ಸ್ಥಳೀಯ ಶಾಸಕರು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ ಮತ್ತು ಈ ಅತ್ಯುತ್ತಮ ಸರಕಾರಿ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕಾಗಿದೆ.

Click to comment

Leave a Reply

Your email address will not be published. Required fields are marked *

bengaluru

ಮನ್ಸಿಂದ ಯಾರೂನು ಕೆಟ್ಟೋರಲ್ಲ..ಬಿಗ್ ಬಾಸ್ ವಿನಯ್ ಕಣ್ಣೀರು

Published

on

ಬೆಂಗಳೂರು : ಬಿಗ್​ಬಾಸ್ ಮನೆಯಲ್ಲಿ ವಿನಯ್ ಅತ್ಯಂತ ಗಟ್ಟಿ ಸ್ಪರ್ಧಿ ಎಂದು ಕರೆಸಿಕೊಳ್ಳುವ ವಿನಯ್ ಗೌಡ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.ಮಂಗಳವಾರ ಪ್ರಸಾರವಾದ ಎಪಿಸೋಡ್​ನಲ್ಲಿ ಮಾತ್ರ ವಿನಯ್ ಕಣ್ಣೀರು ಹಾಕಿದ್ದಾರೆ.

ಮನೆಗೆ ಇಬ್ಬರು ಹೊಸ ಸ್ಪರ್ಧಿಗಳು ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಂದಿದ್ದಾರೆ. ಅವರಲ್ಲಿ ಒಬ್ಬರಾದ ಪವಿ ಪೂವಪ್ಪ ಅವರು ಸ್ನೇಹಿತ್, ವಿನಯ್ ಜೊತೆ ಮಾತನಾಡುತ್ತಿದ್ದಾಗ ಸ್ನೇಹಿತ್ ಬಿಗ್​ಬಾಸ್ ಮನೆಯ ಸ್ಪರ್ಧಿಗಳ ಬಗ್ಗೆ ಹೊರಗಿರುವ ಅಭಿಪ್ರಯಾದ ಬಗ್ಗೆ ತಿಳಿಸುವಂತೆ ಹೇಳ್ತಾರೆ.ಆಗ ಪವಿ ಬಳೆಯ ಎಪಿಸೋಡ್ ಭಾರಿ ಸದ್ದು ಮಾಡಿತು ಎಂದರು.ಆ ವಿಷಯ ಸೋಷಿಯಲ್ ಮೀಡಿಯಾಗಳಲ್ಲಿ ಬಹಳ ಚರ್ಚೆಯಾಯಿತು ಎಂದು ಸಹ ಹೇಳಿದರು.

ಇದರಿಂದಾಗಿ ವಿನಯ್‌ ತೀರಾ ಡಲ್‌ ಆಗ್ಬಿಟ್ಟರು. ಬಾತ್‌ರೂಮ್‌ ಒಳಗೆ ಹೋಗಿ ವಿನಯ್ ಗಳಗಳನೆ ಅತ್ತುಬಿಟ್ಟರು. ಬಳಿಕ ‘ಬಿಗ್ ಬಾಸ್‌’ ಬಳಿ ಮಾತನಾಡಿದ್ಮೇಲೆ ವಿನಯ್ ಸಮಾಧಾನಗೊಂಡರು.

Continue Reading

DAKSHINA KANNADA

Sullia : ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ

Published

on

ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ. ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Continue Reading

bangalore

ಕ್ಷೀಣಿಸುತ್ತಿದೆ ಹಿರಿಯ ನಟಿ ಲೀಲಾವತಿ ಆರೋಗ್ಯ-ಡಿಕೆಶಿ, ನಟ ಶಿವಣ್ಣ ಆರೋಗ್ಯ ವಿಚಾರಣೆ

Published

on

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದು ಅವರ ಆರೋಗ್ಯ ವಿಚಾರಿಸುವುದಕ್ಕಾಗಿ ಅನೇಕ ನಟ ನಟಿಯರು ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.ಜೊತೆಗೆ ನಿನ್ನೆ ನಟ ಶಿವಣ್ಣ ದಂಪತಿ ಕೂಡ ಮನೆಗೆ ಭೆಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.


ಮನೆಗೆ ಆಗಮಿಸಿದ ಶಿವಣ್ಣ ಅವರನ್ನು ವಿನೋದ್‌ ರಾಜ್‌ಕುಮಾರ್‌ ಹೆಚ್ಚು ಆತ್ಮೀಯವಾಗಿ ಬರಮಾಡಿಕೊಂಡು ತಾಯಿಯ ಆರೋಗ್ಯದ ಕುರಿತು ವಿವರಣೆ ನೀಡಿದ್ದಾರೆ..


ಇನ್ನು ಮೊನ್ನೆಯಷ್ಟೇ ನಟ ಅರ್ಜುನ್‌ ಸರ್ಜಾ ಲೀಲಾವತಿ ಅವರ ಮನೆಗೆ ತೆರಳಿ ಅವರ ಆರೋಗ್ಯ ವಿಚಾರಸಿದ್ದರು.. ಅಲ್ಲದೇ ದರ್ಶನ್‌ ಸಹ ಅವರ ಮನೆಗೆ ಭೇಟಿ ನೀಡಿದ್ದರು.. ಡಿಕೆಶಿ ಕೂಡ ಆರೋಗ್ಯ  ವಿಚಾರಿಸಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಯಲ್ಲಿನ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ..

Continue Reading

LATEST NEWS

Trending