ಜುಜುಬಿ 2 ಲೀಟರ್ ಮಧ್ಯ ಹಾಗೂ 360 ರೂ. ಹಣ ವಸೂಲಿ..!
ಜುಜುಬಿ 2 ಲೀಟರ್ ಮಧ್ಯ ಹಾಗೂ 360 ರೂ. ಹಣ ವಸೂಲಿ..!
ಪುತ್ತೂರು: ಇದೀಗ ದೇಶದೆಲ್ಲೆಡೆ ಕೊರೊನಾ ಮಹಾಮಾರಿಯಿಂದಾಗಿ ಸೂತಕದ ಛಾಯೆ ಆವರಿಸಿದೆ, ಬಡ ಹೆಂಗಸರಿಗೆ ಮನೆ ನಡೆಸೋ ಚಿಂತೆಯಾದ್ರೆ, ಕುಡುಕರಿಗೆ ಸಾರಾಯಿ ಇಲ್ಲದೆ ಹೇಗಪ್ಪಾ..? ಅಂತ ಚಿಂತೆ ಹತ್ತಿದೆ.
ಕೆಲವರಂತೂ ಆಕಾಶವೇ ಕಳಚಿ ತಮ್ಮ ತಲೆ ಮೇಲೆ ಬಿದ್ದ ಹಾಗೆ ನಟಿಸುತ್ತಾರೆ. ಈ ನಡುವೆ ಸಾರಾಯಿ ಹೊಟ್ಟೆಗೆ ಸುರಿಯದೇ, ಕುಂತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಕೆಲವರು ಮನೆಯಲ್ಲಿ ಸಾರಾಯಿ ತಯಾರಿ ಕೆಲಸ ಶುರು ಹಚ್ಚಿಕೊಂಡಿದ್ದಾರೆ.
ಇವಾಗ ಹೇಗೋ ಗೇರು ಹಣ್ಣಿನ ಸೀಸನ್ ಬೇರೆ,, ಒಳ್ಳೊಳ್ಳೆ ಗೇರು ಹಣ್ಣನ್ನ ಆಯ್ದು ಪ್ಲಾಸ್ಟಿಕ್ ಕೊಡಪಾನದಲ್ಲಿ ಹಾಕಿಟ್ಟು ಅದನ್ನು ಚೆನ್ನಾಗಿ ಕೊಳೆಸೋಕೆ ಸಾಕಷ್ಟು ಟೈಮ್ ಅನ್ನ ಕೂಡ ಲಾಕ್ ಡೌನ್ ಒದಗಿಸಿದೆ ಬಿಡಿ.
ಇಷ್ಟೆಲ್ಲಾ ಸೌಕರ್ಯ ಇರೋವಾಗ ಯಮ ಕುಡುಕರು ಬಿಡ್ತಾರಾ ಕೇಳಿ. ಮನೆಯಲ್ಲೇ ಕಳ್ಳಭಟ್ಟಿ ಸಾರಾಯಿ ದಂಧೆ ಆರಂಭಿಸಿದ್ದಾರೆ.
ಇದನ್ನು ತಿಳಿದ ಪೊಲೀಸರು ಸುಮ್ಮನಿರ್ತಾರಾ.?. ತಮ್ಮ ತಂಡವನ್ನೇ ಹಿಡ್ಕೊಂಡು ಧಾಳಿ ಮಾಡ್ತಾರೆ.
ಹೌದು.. ಇದೀಗ ಕಳ್ಳಭಟ್ಟಿ ದಂಧೆಗೆ ಜಾಲ ಬೀಸಿದ ಪೊಲೀಸರು ಜುಜುಬಿ 2 ಲೀಟರ್ ಮಧ್ಯ ಹಾಗೂ 360 ರೂ. ಹಣ ವಸೂಲಿ ಮಾಡಿದ ಸ್ವಾರಸ್ಯಕರ ಘಟನೆಯೊಂದು ಪುತ್ತೂರಿನಲ್ಲಿ ವರದಿಯಾಗಿದೆ.
ಪುತ್ತೂರು ತಾಲೂಕು ಪಡುವನ್ನೂರ್ ಗ್ರಾಮದ ಮಾಪಳ ಎಂಬಲ್ಲಿ ಅಕ್ರಮವಾಗಿ ಕಳ್ಳ ಭಟ್ಟಿ ತಯಾರಿಸುತ್ತಿರುವಲ್ಲಿಗೆ ಧಾಳಿ ನಡೆಸಿದ ಪೊಲೀಸರು,
ಪುತ್ತೂರು ಅರಿಯಡ್ಕ ಗ್ರಾಮದ ಶರತ್ ಕುಮಾರ್ (24) ಎಂಬಾತನನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ಕೇಶವ ಗೌಡ ಎಂಬಾತ ತಪ್ಪಿಸಿಕೊಂಡಿದ್ದಾನೆ.
ಹಾಗಾಗಿ ಪೊಲೀಸರು ಸ್ಥಳದಲ್ಲಿ ದೊರೆತ ಅಂದಾಜು 2 ಲೀಟರ್ ಪ್ರಮಾಣದ ಕಳ್ಳ ಬಟ್ಟಿ ಸಾರಾಯಿ ಹಾಗೂ 200 ಲೀಟರ್ ಸಾಮರ್ಥ್ಯದ ಪ್ಲಾಸ್ಟಿಕ್ ಡ್ರಮ್ಮ್,
100 ಲೀಟರ್ ಹುಳಿರಸ ಹಾಗೂ ಕಳ್ಳ ಬಟ್ಟಿ ತಯಾರಿಸಲು ಬಳಸಿದ ಪಾತ್ರೆ, ಬಟ್ಟೆ, ಸಾರಾಯಿ ಮಾರಾಟದಿಂದ ಬಂದಿರುವ ಕೇವಲ 360 ರೂಪಾಯಿ ನಗದನ್ನ ವಶಪಡಿಸಿಕೊಂಡಿದ್ದಾರೆ.
ಈ ಘಟನೆ ಒಂಥರಾ ಹಾಸ್ಯಾಸ್ಮದ ಆದರೂ ಕೂಡ, ಪಾಪ ಪೊಲೀಸ್ ಸಿಬ್ಬಂದಿಗಳು ಅವರೇನು ಮಾಡೋಕಾಗುತ್ತೆ. ಲಾಕ್ ಡೌನ್ ಟೈಮಲ್ಲಿ ತಮ್ಮ ಕರ್ತವ್ಯವನ್ನ ನಿಭಾಯಿಸಲೇಬೇಕಲ್ಲವೇ.? ನೀವೇನಂತೀರಾ….
DAKSHINA KANNADA
ಹಳ್ಳ ಹಿಡಿದ ಸ್ಮಾರ್ಟ್ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್
ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್ ಪಾಸ್ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.
ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.
ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶ; ಓರ್ವ ಬಂಧನ
ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.
LATEST NEWS
11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ
ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.
ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್ ಮನೆಮದ್ದು ಟ್ರೈ ಮಾಡಿ
ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.
FILM
ಕನ್ನಡದ ಸೀರಿಯಲ್ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ
ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.
ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.
ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!
ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್ಮೆಂಟ್ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್ಮೆಂಟ್ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.