LATEST NEWS
ಹಂತಕರನ್ನು ಬಂಧಿಸಿದ ಪೊಲೀಸರಿಗೆ ಧನ್ಯವಾದ ತಿಳಿಸಿದ ಪ್ರವೀಣ್ ಕುಟುಂಬ
ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಿನ್ನೆಲೆ ಪ್ರವೀಣ್ ನೆಟ್ಟಾರು ಕುಟುಂಬಸ್ಥರು ಪೋಲೀಸ್ ಇಲಾಖೆಗೆ ಧನ್ಯವಾದ ಹೇಳಿದ್ದಾರೆ.
ಈ ಬಗ್ಗೆ ಮಾತಾಡಿದ ಪ್ರವೀಣ್ ನೆಟ್ಟಾರು ತಾಯಿ ‘ಈಗ ಬಂಧಿಸಿದ ಆರೋಪಿಗಳನ್ನು ಇನ್ನು ಮುಂದೆ ಜಾಮೀನು ನೀಡಿಯೋ ಅಥವಾ ಇನ್ನ್ಯಾವುದೋ ರೀತಿಯಲ್ಲಿ ಜೈಲಿನಿಂದ ಹೊರಗೆ ಬಿಡಲೇಬಾರದು. ಒಂದು ವೇಳೆ ಬೆಳ್ಳಾರೆಯ ಪೊಲೀಸರು ಸರಿ ಇರುತ್ತಿದ್ದರೆ ಹೀಗೆ ಆಗುತ್ತಿರಲಿಲ್ಲವೇನೊ. ಬೆಳ್ಳಾರೆ ಪೊಲೀಸರು ಸ್ವಲ್ಪ ಖಾರದಲ್ಲಿ ಇರುತ್ತಿದ್ರೆ ಹೀಗೆ ಆಗುತ್ತಿತ್ತಾ ಹೇಳಿ.
ಅವನನ್ನು ಕೊಲೆ ಮಾಡಿದ ಸಂದರ್ಭ ಅಲ್ಲೆಲ್ಲ ಕರೆಂಟ್ ತೆಗೆದಿದ್ರಂತೆ. ಆ ಸಂದರ್ಭ ಪೊಲೀಸರು ಅಲ್ಲಿರಲಿಲ್ಲವಾ? ಹಂತಕರನ್ನು ಬಂಧಿಸಿದ್ದಾರೆ. ಇನ್ನು ಅವರು ನನ್ನ ಮಗನನ್ನು ಹೇಗೆ ಕೊಂದಿದ್ದಾರೆ ಹಾಗೇ ಅವರನ್ನು ಕೊಚ್ಚಿ ಕೊಲ್ಲಬೇಕು. ಪ್ರವೀಣ್ನನ್ನು ಕೊಂದ ಜಾಗದಲ್ಲೇ ತಂದು ಕೊಚ್ಚಿದ್ರೂ ಪರವಾಗಿಲ್ಲ. ಇದರಿಂದ ಹೋದ ನನ್ನ ಮಗನ ಆತ್ಮಕ್ಕೂ ಶಾಂತಿ, ನಮಗೂ ಸ್ವಲ್ಪ ನೆಮ್ಮದಿ ‘ಎಂದು ಕಣ್ಣೀರಿಟ್ಟರು.
ನನಗೆ 4 ಹೆಣ್ಣುಮಕ್ಕಳು ಮತ್ತು ಒಂದು ಗಂಡು ಮಗ ಇದ್ದದ್ದು. ಮನೆಯ ಎಲ್ಲಾ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದ. ಯಾವ ತಪ್ಪು, ಅನ್ಯಾಯ ಇಲ್ಲದೆ ನನ್ನ ಮಗನನ್ನು ಇವತ್ತು ತೆಗೆದ್ರು. ಕೊಚ್ಚುವ, ಕೊಲ್ಲುವ ಕೆಲಸ ಇಲ್ಲಿಗೆ ಮುಗೀಬೇಕು.
ನಾಳೆ ಇನ್ನೊಬ್ಬರಿಗೂ ಸಮಸ್ಯೆ ಬರಬಹುದು. ನನ್ನ ಹೆಣ್ಣುಮಕ್ಕಳು ಯಾವ ಧೈರ್ಯದಲ್ಲಿ ದಾರಿಯಲ್ಲಿ ನಡೆಯಬೇಕು ಹೇಳಿ. ಯಾವುದಾದರೂ ತಪ್ಪು ಮಾಡಿ, ಅನ್ಯಾಯ ಮಾಡಿ ಯುದ್ಧಕ್ಕೆ ಹೋಗಿದ್ದವನಾದರೆ ಸರಿ. ಆದರೆ ಬರೀ ಹೀಗೇ ಬಂದು ಕೊಲೆ ಮಾಡಿದ್ರೆ ಏನರ್ಥ.
ಅವನು ತೀರಿದ ದಿನ ಬೆಳಿಗ್ಗೆ ನನ್ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ. ಸಂಜೆ 6.45 ಕ್ಕೆ ಕೂಡಾ ನನಗೆ ಕಾಲ್ ಮಾಡಿದ್ದ. ಚಾ ಮಾಡಿಡಿ, ಸ್ನಾನಕ್ಕೆ ಬಿಸಿನೀರು ಕಾಯಿಸಿಡಿ ಅಂತ ಹೇಳಿದ್ದ. ಅವನನ್ನು ಕಾದು ಕಾದು ಸುಸ್ತಾಗಿತ್ತು. ಅವನು ಬರಲೇ ಇಲ್ಲ. ನನ್ನ ಇದ್ದ ಒಂದು ಮಗ ಕೂಡಾ ಹೋದ. ಇನ್ನ್ನ್ಯಾರು ದಿಕ್ಕು ಹೇಳಿ. ನಮಗೆ ಹಣ ಅಲ್ಲ, ಮಗ ಬೇಕು. ಆದ್ರೆ ಇನ್ನು ಬರ್ತಾನಾ?’ ಎಂದು ಗೋಳಿಟ್ಟರು.
ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ಯಾವ ವಕೀಲನೂ ಆರೋಪಿಗಳಿಗೆ ವಕಾಲತು ನಡೆಸಬಾರದು ಎಂದು ಪ್ರವೀಣ್ ಅಕ್ಕ ರೋಹಿಣಿ ಕೂಡಾ ವಕೀಲರಿಗೆ ಮನವಿ ಮಾಡಿದರು.
LATEST NEWS
ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು
ಉಡುಪಿ : ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವನ್ನಪ್ಪಿರುವ ಘಟನೆ ಉಡುಪಿಯ ಹೇರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕೃಷ್ಣ ಗಾಣಿಗ ಮೃ*ತ ದುರ್ದೈವಿ. ಉಡುಪಿ ನಗರ ಸಭೆಯಲ್ಲಿ ಎಲೆಕ್ಟ್ರಿಷನ್ ಆಗಿ ಕೃಷ್ಣ ಕೆಲಸ ಮಾಡುತ್ತಿದ್ದರು. ಸಂತೆಕಟ್ಟೆ ಮಾರ್ಗವಾಗಿ ಬ್ರಹ್ಮಾವರದ ಕಡೆಗೆ ಸಾಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ.
ಲಾರಿ ಕೃಷ್ಣ ಅವನ್ನು ಕೆಲ ದೂರ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ರಸ್ತೆಯಲ್ಲಿ ಕೆಲ ಕಾಲ ಸಂಚಾರ ದಟ್ಟನೆ ಉಂಟಾಗಿತ್ತು.
ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
DAKSHINA KANNADA
ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!
ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್ ಕ್ರೀಮ್ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.
ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.
ಪೊಲೀಸ್ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.
ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.
ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.
ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
DAKSHINA KANNADA
ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!
ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್ನಲ್ಲಿರುವ ಕ್ಯಾಂಟೀನ್ನಲ್ಲಿ ಫಯಾಜ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.
ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫಯಾಜ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫಯಾಜ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.