Connect with us

DAKSHINA KANNADA

puttur : ಸೂತ್ರಬೆಟ್ಟು ವಿಶ್ವನಾಥ ರೈ ಕೊಲೆ ಪ್ರಕರಣ – ಕೋಡಿಂಬಾಡಿ ವಿಶ್ವನಾಥ ಶೆಟ್ಟಿಗೆ ಜೀವಾವಧಿ ಶಿಕ್ಷೆ..!

Published

on

ಪುತ್ತೂರು: ಎರಡು ದಶಕಗಳ ಹಿಂದೆ ನಡೆದ ಕೊಲೆ ಪ್ರಕರಣವನ್ನು ಪುತ್ತೂರು ನ್ಯಾಯಾಲಯ ಇತ್ಯರ್ಥ ಪಡಿಸಿದ್ದು ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ.

ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಪುತ್ತೂರು ಸೂತ್ರಬೆಟ್ಟುವಿನ ವಿಶ್ವನಾಥ ರೈಯವರನ್ನು 20 ವರ್ಷಗಳ ಹಿಂದೆ ಉಪ್ಪಿನಂಗಡಿಯಲ್ಲಿ ಕೊಲೆ ಮಾಡಿದ್ದ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ರುಡಾಲ್ಫ್ ಪಿರೇರಾ ಅಪರಾಧಿಯಾಗಿರುವ ಕೋಡಿಂಬಾಡಿ ನಿವಾಸಿ ವಿಶ್ವನಾಥ ಶೆಟ್ಟಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಕೊಲೆ ಮಾಡಿರುವ ಅಪರಾಧ IPC 302ಕ್ಕಾಗಿ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ.ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ವರ್ಷ ಜೈಲು ಶಿಕ್ಷೆ, ಸಾಕ್ಷಿನಾಶಕ್ಕೆ 5 ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ರೂ.ದಂಡ, ದಂಡ ತೆರಲು ತಪ್ಪಿದಲ್ಲಿ 8 ತಿಂಗಳು ಜೈಲು ಶಿಕ್ಷೆ ಹಾಗೂ ಕೊಲೆ ಬೆದರಿಕೆಯೊಡ್ಡಿದ ಅಪರಾಧಕ್ಕಾಗಿ 3 ವರ್ಷ ಜೈಲು ಶಿಕ್ಷೆ, 25 ಸಾವಿರ ರೂ.ದಂಡ, ದಂಡ ತೆರಲು ತಪ್ಪಿದಲ್ಲಿ 6 ತಿಂಗಳ ಜೈಲು ಶಿಕ್ಷೆ ಅನುಭವಿಸುವಂತೆ ನ್ಯಾಯಾಲಯ ತೀರ್ಪು ನೀಡಿದೆ.

ದಂಡದ ಮೊತ್ತದಲ್ಲಿ 60 ಸಾವಿರ ರೂ.ಗಳನ್ನು ಕೊಲೆಯಾದ ವಿಶ್ವನಾಥ ರೈಯವರ ಪತ್ನಿಗೆ ನೀಡಬೇಕು ಮತ್ತು ರೂ.20 ಸಾವಿರವನ್ನು ಮಾಫಿ ಸಾಕ್ಷಿಯಾಗಿರುವ ಸುಭಾಶ್ಚಂದ್ರ ಗೌಡರಿಗೆ ನೀಡುವಂತೆಯೂ ಮಾನ್ಯ ನ್ಯಾಯಾಲಯ ಆದೇಶಿಸಿದೆ.

ಪ್ರಾಸಿಕ್ಯೂಶನ್ ಪರ ಸರಕಾರಿ ಅಭಿಯೋಜಕ ಪ್ರವೀಣ್ ಕುಮಾರ್ ವಾದಿಸಿದ್ದರು.

ಏನಿದು ಪ್ರಕರಣ..? :

2001ರ ಜೂನ್ 7ರಂದು ರಾತ್ರಿ ವೇಳೆ ಫೈನಾನ್ಸ್ ಉದ್ಯಮಿ ಬಡ್ಡಿ ವಿಶ್ವ ಯಾನೆ ಸೂತ್ರಬೆಟ್ಟು ವಿಶ್ವನಾಥ ರೈಯವರ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ನಡೆಸಲಾಗಿತ್ತು. ಕೊಲೆ ಕೃತ್ಯವೆಸಗಿದ ಬಳಿಕ ಉತ್ತರ ಕನ್ನಡದ ಹೊನ್ನಾವರದವರೆಗೆ ತನ್ನ ಝೆನ್ ಕಾರಿನಲ್ಲಿ ಶವವನ್ನು ಕೊಂಡು ಹೋಗಿ ಅಲ್ಲಿ ಕಂದಕಕ್ಕೆ ಶವವನ್ನು ಬಿಸಾಡಿ ಮರಳಿ ಮಂಗಳೂರು ಕದ್ರಿಯವರೆಗೆ ಅದೇ ಕಾರಲ್ಲಿ ಬಂದಿದ್ದ ಆರೋಪಿ ಪಂಚಮಿ ವಿಶ್ವ ಯಾನೆ ಕೋಡಿಂಬಾಡಿ ವಿಶ್ವನಾಥ ಶೆಟ್ಟಿ ತನ್ನ ಕಾರನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದ. ಕೃತ್ಯ ಎಸಗಿ ಹಲವು ವರ್ಷಗಳಾದರೂ ಆರೋಪಿಯ ಪತ್ತೆಯಾಗದೇ ಇದ್ದುದರಿಂದ ಇದೊಂದು ಎಲ್‌ಪಿಸಿ ಪ್ರಕರಣವಾಗಿ ದಾಖಲಾಗಿತ್ತು. ಕೃತ್ಯದ ಬಳಿಕ ಪರಾರಿಯಾಗಿದ್ದ ಆರೋಪಿ ಪಂಚಮಿ ವಿಶ್ವ ಯಾನೆ ಕೋಡಿಂಬಾಡಿ ವಿಶ್ವನಾಥ ಶೆಟ್ಟಿಯವರನ್ನು 13 ವರ್ಷಗಳ ಬಳಿಕ ಪೊಲೀಸರು ತಮಿಳ್ನಾಡಿನಲ್ಲಿ ಪತ್ತೆ ಮಾಡಿ ಬಂಧಿಸಿ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.ಕೆಲ ಸಮಯದ ಬಳಿಕ ಆರೋಪಿಯು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.ಆ ಬಳಿಕ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆರೋಪಿ ವಿಶ್ವನಾಥ ಶೆಟ್ಟಿ ಮೇಲಿನ ಆರೋಪ ಸಾಬೀತಾಗಿದೆ ಎಂದು ಪ್ರಕಟಿಸಿದೆ..ಹೊನ್ನಾವರ ಸಮೀಪದ ಗೇರುಸೊಪ್ಪ ಬಳಿಯ ಮೂಡ್ಕಾಣಿ ಎಂಬಲ್ಲಿ ೨೦ ಅಡಿ ಆಳದಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿತ್ತು.ಈ ಅಪರಿಚಿತ ಶವದ ಅಂಗಿಯಲ್ಲಿ “ಪುತ್ತೂರು ಸಿಂಧು ಟೈಲರ್” ಎಂಬ ಲೇಬಲ್ ಇತ್ತು.ಇದರ ಆಧಾರದಲ್ಲಿ ಪೊಲೀಸರು ಪುತ್ತೂರಿನ ಟೈಲರ್ ಸುಭಾಶ್ಚಂದ್ರ ಪೂಜಾರಿಯವರನ್ನು ಸಂಪರ್ಕಿಸಿದ್ದರು.ಶವವನ್ನು ನೋಡಿದ್ದ ಟೈಲರ್ ಸುಭಾಶ್ಚಂದ್ರರವರು ‘ಇದು ಬಡ್ಡಿ ವಿಶ್ವಣ್ಣ’ ಎಂದು ಹೇಳಿದ್ದರು. ಪಂಚಮಿ ವಿಶ್ವನೂ ನಾಪತ್ತೆ: ಆದರೆ, ವಿಶ್ವನಾಥ ರೈಯವರನ್ನು ಯಾರು ಕೊಲೆ ಮಾಡಿರಬಹುದು, ಯಾಕೆ ಮಾಡಿರಬಹುದು ಎಂದು ಗೊತ್ತಾಗಿರಲಿಲ್ಲ.ಈ ವೇಳೆ, ಮೃತ ವಿಶ್ವನಾಥ ರೈಯವರ ಆಪ್ತ ಸ್ನೇಹಿತ ಮಾತ್ರವಲ್ಲದೆ,ವಿಶ್ವನಾಥ ರೈಯವರ ಉಪ್ಪಿನಂಗಡಿಯ ಶಿವ ಫೈನಾನ್ಸ್‌ನಲ್ಲಿ ಮೆನೇಜರ್ ಆಗಿದ್ದ ಕೋಡಿಂಬಾಡಿಯ ವಿಶ್ವನಾಥ ಶೆಟ್ಟಿಯೂ ನಾಪತ್ತೆಯಾಗಿದ್ದರು.ವಿಶ್ವನಾಥ ರೈ ಜತೆ ವಿಶ್ವನಾಥ ಶೆಟ್ಟಿಯವರನ್ನೂ ಕೊಲೆ ಮಾಡಿರಬಹುದೇ ಅಥವಾ ಅವರೇ ಈ ಕೊಲೆ ನಡೆಸಿ ಪರಾರಿಯಾಗಿರಬಹುದೇ ಎಂದು ಪೊಲೀಸರಲ್ಲಿ ಗೊಂದಲ ಉಂಟಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಂಗಳೂರು ಸಮೀಪದ ಕದ್ರಿ ಬಳಿ ಅನಾಥ ಸ್ಥಿತಿಯಲ್ಲಿ ಮಾರುತಿ ಝೆನ್ ಕಾರು ಇರುವುದು ಕಂಡು ಬಂದಿತ್ತು.ಕಾರಿನಲ್ಲಿ ರಕ್ತದ ಕಲೆಗಳಿದ್ದವು.ಈ ಕಾರು ಯಾರದ್ದು ಎಂದು ಹುಡುಕಾಟದಲ್ಲಿದ್ದ ಪೊಲೀಸರು ಆರ್‌ಟಿಓ ಅಧಿಕಾರಿಗಳ ಮೂಲಕ ಶೋಧ ನಡೆಸಿದಾಗ ಈ ಕಾರಿನ ಮೂಲ ವಾರಸುದಾರರು ಪತ್ತೆಯಾಗಿದ್ದರಲ್ಲದೆ, ತಾನು ಈ ಕಾರನ್ನು ವಿಶ್ವನಾಥ ಶೆಟ್ಟಿಯವರಿಗೆ ಮಾರಾಟ ಮಾಡಿರುವುದಾಗಿ ಅವರು ತಿಳಿಸಿದ್ದರು. ಕೊಲೆಗೂ ವಿಶ್ವನಾಥ ಶೆಟ್ಟಿಗೂ ನಂಟು ಇದೆ ಎಂದು ಖಚಿತಪಡಿಸಿಕೊಂಡಿದ್ದ ಅಂದಿನ ಪ್ರಭಾರ ಎ.ಎಸ್.ಪಿ. ಹರ್ಡಿ ಹಾಗು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅಂದು ಸರ್ಕಲ್ ಇನ್ಸ್‌ಪೆಕ್ಟರ್ ಆಗಿದ್ದ ಎನ್.ಬಿ. ಕಮಲ್ ನೇತೃತ್ವದ ಪೊಲೀಸ್ ತಂಡ ತನಿಖೆ ಮುಂದುವರಿಸಿ ವಿಶ್ವನಾಥ ಶೆಟ್ಟಿಗಾಗಿ ಶೋಧ ನಡೆಸಿತ್ತು.ಆದರೆ, ಕೊಲೆ ನಡೆದು ೧೩ ವರ್ಷ ಕಳೆದರೂ ಆರೋಪಿ ವಿಶ್ವನಾಥ ಶೆಟ್ಟಿ ಪತ್ತೆಯಾಗಿರಲಿಲ್ಲ.”’ಹೊನ್ನಾವರ ಸಮೀಪದ ಗೇರುಸೊಪ್ಪ ಬಳಿಯ ಮೂಡ್ಕಾಣಿ ಎಂಬಲ್ಲಿ ೨೦ ಅಡಿ ಆಳದಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿತ್ತು.ಈ ಅಪರಿಚಿತ ಶವದ ಅಂಗಿಯಲ್ಲಿ “ಪುತ್ತೂರು ಸಿಂಧು ಟೈಲರ್” ಎಂಬ ಲೇಬಲ್ ಇತ್ತು.ಇದರ ಆಧಾರದಲ್ಲಿ ಪೊಲೀಸರು ಪುತ್ತೂರಿನ ಟೈಲರ್ ಸುಭಾಶ್ಚಂದ್ರ ಪೂಜಾರಿಯವರನ್ನು ಸಂಪರ್ಕಿಸಿದ್ದರು.ಶವವನ್ನು ನೋಡಿದ್ದ ಟೈಲರ್ ಸುಭಾಶ್ಚಂದ್ರರವರು ‘ಇದು ಬಡ್ಡಿ ವಿಶ್ವಣ್ಣ’ ಎಂದು ಹೇಳಿದ್ದರು. ಪಂಚಮಿ ವಿಶ್ವನೂ ನಾಪತ್ತೆ: ಆದರೆ, ವಿಶ್ವನಾಥ ರೈಯವರನ್ನು ಯಾರು ಕೊಲೆ ಮಾಡಿರಬಹುದು, ಯಾಕೆ ಮಾಡಿರಬಹುದು ಎಂದು ಗೊತ್ತಾಗಿರಲಿಲ್ಲ.ಈ ವೇಳೆ, ಮೃತ ವಿಶ್ವನಾಥ ರೈಯವರ ಆಪ್ತ ಸ್ನೇಹಿತ ಮಾತ್ರವಲ್ಲದೆ,ವಿಶ್ವನಾಥ ರೈಯವರ ಉಪ್ಪಿನಂಗಡಿಯ ಶಿವ ಫೈನಾನ್ಸ್‌ನಲ್ಲಿ ಮೆನೇಜರ್ ಆಗಿದ್ದ ಕೋಡಿಂಬಾಡಿಯ ವಿಶ್ವನಾಥ ಶೆಟ್ಟಿಯೂ ನಾಪತ್ತೆಯಾಗಿದ್ದರು.ವಿಶ್ವನಾಥ ರೈ ಜತೆ ವಿಶ್ವನಾಥ ಶೆಟ್ಟಿಯವರನ್ನೂ ಕೊಲೆ ಮಾಡಿರಬಹುದೇ ಅಥವಾ ಅವರೇ ಈ ಕೊಲೆ ನಡೆಸಿ ಪರಾರಿಯಾಗಿರಬಹುದೇ ಎಂದು ಪೊಲೀಸರಲ್ಲಿ ಗೊಂದಲ ಉಂಟಾಗಿತ್ತು. ಝೆನ್ ಕಾರು ಪತ್ತೆ: ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಂಗಳೂರು ಸಮೀಪದ ಕದ್ರಿ ಬಳಿ ಅನಾಥ ಸ್ಥಿತಿಯಲ್ಲಿ ಮಾರುತಿ ಝೆನ್ ಕಾರು (ಕೆ.ಎ.೧೯-ಪಿ.೧೧೩)ಇರುವುದು ಕಂಡು ಬಂದಿತ್ತು.ಕಾರಿನಲ್ಲಿ ರಕ್ತದ ಕಲೆಗಳಿದ್ದವು.ಈ ಕಾರು ಯಾರದ್ದು ಎಂದು ಹುಡುಕಾಟದಲ್ಲಿದ್ದ ಪೊಲೀಸರು ಆರ್‌ಟಿಓ ಅಧಿಕಾರಿಗಳ ಮೂಲಕ ಶೋಧ ನಡೆಸಿದಾಗ ಈ ಕಾರಿನ ಮೂಲ ವಾರಸುದಾರರು ಪತ್ತೆಯಾಗಿದ್ದರಲ್ಲದೆ, ತಾನು ಈ ಕಾರನ್ನು ವಿಶ್ವನಾಥ ಶೆಟ್ಟಿಯವರಿಗೆ ಮಾರಾಟ ಮಾಡಿರುವುದಾಗಿ ಅವರು ತಿಳಿಸಿದ್ದರು.ಕೊಲೆಗೂ ವಿಶ್ವನಾಥ ಶೆಟ್ಟಿಗೂ ನಂಟು ಇದೆ ಎಂದು ಖಚಿತಪಡಿಸಿಕೊಂಡಿದ್ದ ಅಂದಿನ ಪ್ರಭಾರ ಎ.ಎಸ್.ಪಿ. ಹರ್ಡಿ ಹಾಗು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅಂದು ಸರ್ಕಲ್ ಇನ್ಸ್‌ಪೆಕ್ಟರ್ ಆಗಿದ್ದ ಎನ್.ಬಿ. ಕಮಲ್ ನೇತೃತ್ವದ ಪೊಲೀಸ್ ತಂಡ ತನಿಖೆ ಮುಂದುವರಿಸಿ ವಿಶ್ವನಾಥ ಶೆಟ್ಟಿಗಾಗಿ ಶೋಧ ನಡೆಸಿತ್ತು.ಆದರೆ, ಕೊಲೆ ನಡೆದು ೧೩ ವರ್ಷ ಕಳೆದರೂ ಆರೋಪಿ ವಿಶ್ವನಾಥ ಶೆಟ್ಟಿ ಪತ್ತೆಯಾಗಿರಲಿಲ್ಲ.

DAKSHINA KANNADA

MANGALURU : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟು; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿ ಅನಾಹುತ

Published

on

ಮಂಗಳೂರು : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟಿನಿಂದ ಕಾರಿಗೆ ಪೆಟ್ರೋಲ್ ತುಂಬಿಸುವ ಬದಲು ಡೀಸೆಲ್ ತುಂಬಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪರಿಣಾಮ ಕಾರು ಇಂಜಿನ್ ಸಂಪೂರ್ಣ ಹಾಳಾಗಿ ಲಕ್ಷಾಂತರ ರೂ.ನಷ್ಟವಾಗಿದೆ ಎಂದು ಕಾರು ಮಾಲಕ ಆರೋಪಿಸಿದ್ದಾರೆ.

ಹೊಟೇಲ್ ಉದ್ಯಮಿ ಜೀವನ್ ಶೆಟ್ಟಿ ಎಂಬವರು ತಮ್ಮ ಹುಂಡೈ ಐ 10 ಗ್ರ್ಯಾಂಡ್ ಕಾರ್ ಗೆ ಪೆಟ್ರೋಲ್ ತುಂಬಿಸುವ ಸಲುವಾಗಿ, ಎಪ್ರಿಲ್ 5 ರಂದು ಮಧ್ಯಾಹ್ನ 12 ರ ಸುಮಾರಿಗೆ ಬಲ್ಮಠದ ಜ್ಯೂಸ್ ಜಂಕ್ಷನ್ ಮುಂಭಾಗದ ಹೆಚ್ ಪಿ ಪೆಟ್ರೋಲ್ ಬಂಕ್ ಗೆ ಬಂದಿದ್ದರು. ಕ್ಯಾಪ್ ಮೇಲೆ ಪೆಟ್ರೋಲ್ ಎಂದು ಬರೆದಿದ್ದರೂ, ಸಿಬ್ಬಂದಿ ಮಾತ್ರ ಕಾರಿಗೆ ಡೀಸೆಲ್ ತುಂಬಿಸಿದ್ದಾರೆ.

 

ಪರಿಣಾಮ ಕಾರು ಕೆಲವೇ ಕಿಲೋ ಮೀಟರ್ ಸಂಚರಿಸಿ ಮುಂದಕ್ಕೆ ಹೋಗದೆ ನಿಂತಿದೆ. ಪರಿಶೀಲಿಸಿದಾಗ ಬಂಕ್ ಸಿಬ್ಬಂದಿ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪ್ರಶ್ನಿಸಿದಾಗ ಪೆಟ್ರೋಲ್ ಬಂಕ್ ಮ್ಯಾನೇಜರ್ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರು ಇಂಜಿನ್ ದುರಸ್ಥಿಗೆ 2 ಲಕ್ಷಕ್ಕೂ ಅಧಿಕ ಖರ್ಚು ಆಗಲಿದೆ. ಆದರೆ, ಪೆಟ್ರೋಲ್ ಬಂಕ್ ಮಾಲಕ ಬರೀ 30 ಸಾವಿರ ಕೊಟ್ಟು ಸುಮ್ಮನಾಗಿದ್ದಾರೆ ಎಂದು ಜೀವನ್ ಶೆಟ್ಟಿ ದೂರಿದ್ದಾರೆ. ಕಡಿಮೆ ಸಂಬಳಕ್ಕೆ ಅನುಭವವಿಲ್ಲದ ಕಾರ್ಮಿಕರನ್ನು ನೇಮಿಸುತ್ತಾರೆ. ಇಂತಹ ಸಮಸ್ಯೆಯಾದಾಗ ತಮ್ಮ ಇನ್ಶೂರೆನ್ಸ್ ನಲ್ಲಿ ಪರಿಹಾರ ನೀಡುವ ಅವಕಾಶವಿದ್ದರೂ ಬಂಕ್ ಮಾಲಕರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ತಾನು ಪರಿಹಾರಕ್ಕಾಗಿ ಗ್ರಾಹಕ ನ್ಯಾಯಾಲಯದ ಮೊರೆ ಹೋಗುವುದಾಗಿ ಜೀವನ್ ಶೆಟ್ಟಿ ಹೇಳಿದ್ದಾರೆ.

Continue Reading

DAKSHINA KANNADA

ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್‌..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು

Published

on

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.

sweet corn burn

ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.

Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

sweet corn burn 2

Continue Reading

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

LATEST NEWS

Trending