Connect with us

    PUTTUR

    ನೇತ್ರಾವತಿ ನದಿಯಲ್ಲಿ ಮುಳುಗುತ್ತಿದ್ದವನಿಗೆ ಮರುಜೀವ ನೀಡಿದ ಪುತ್ತೂರು ತಹಶೀಲ್ದಾರ್..!

    Published

    on

    ನೇತ್ರಾವತಿ ನದಿಯಲ್ಲಿ ಮುಳುಗುತ್ತಿದ್ದವನಿಗೆ ಮರುಜೀವ ನೀಡಿದ ಪುತ್ತೂರು ತಹಶೀಲ್ದಾರ್..!

    ಪುತ್ತೂರು : ಪುತ್ತೂರು ತಹಶೀಲ್ದಾರ್ ನೇತೃತ್ವದ ಪ್ರವಾಹ ರಕ್ಷಣಾ ತಂಡ ರಕ್ಷಣಾ ಕಾರ್ಯಚರಣೆ ನಡೆಸಿ ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಮುಳುಗುವ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಕಾಪಾಡಿದ್ದಾರೆ.

    ಇಂದು ಮದ್ಯಾಹ್ನ 11:30ರ ವೇಳೆ ಸದಾನಂದ ಶಟ್ಟಿ ಎಂಬ ವ್ಯಕ್ತಿ ಮೈಮೇಲೆ ವಸ್ತ್ರಧರಿಸದೆ ಬರ್ಬುಂಡ ಚಡ್ಡಿ ಧರಿಸಿ ದೇವಾಲಯದ ಸುತ್ತ ಮುತ್ತ ತಿರುಗಾಡುತ್ತಿದ್ದರು. ಬಳಿಕ ಸ್ಥಾನಘಟ್ಟದ ಬಳಿ ನೀರಿಗೆ ಇಳಿಯಲು ಮುಂದಾಗಿದ್ದರು.

    ಈ ವೇಳೆಗೆ ಅಲ್ಲಿ ಕರ್ತವ್ಯದಲ್ಲಿದ್ದ ಪ್ರವಾಹರಕ್ಷಣಾ ಗೃಹರಕ್ಷಕರು ಹಾಗೂ ಈಜುಗಾರರು ಈ ವೇಳೆಗೆ ನೀರಿಗೆ ತೆರಳಬೇಡಿ ಅಪಾಯ ಇದೆ ಎಂದಿದ್ದರು.

    ಆದ್ರೆ ಮಾತು ಧಿಕ್ಕರಿಸಿ ನದಿಗೆ ಇಳಿದ ಸದಾನಂದ ಶಟ್ಟಿ ನೀರಿನ ಸೆಳೆತಕ್ಕೆ ಸಿಕ್ಕಿ ಮುಳುಗುತ್ತಿದ್ದರು.

    ಸ್ಥಳದಲ್ಲೇ ಇದ್ದ ಪುತ್ತೂರು ತಹಶೀಲ್ದಾರ್ ನೇತೃತ್ವದ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡ ಹಾಗೂ ಈಜುಗಾರರು ದೋಣಿಯಲ್ಲಿ ಹುಟ್ಟು ಹಾಕುತ್ತಾ ನದಿ ಮದ್ಯಕ್ಕೆ ತೆರಳಿ ಮುಳುಗುತ್ತಿದ್ದ ವ್ಯಕ್ತಿಯ ರಕ್ಷಣೆಗೆ ಧಾವಿಸಿದರು.

    ನೀರಿನ ಸೆಳೆದ ಜಾಸ್ತಿ ಇದ್ದಿದ್ದರಿಂದ ವ್ಯಕ್ತಿಯನ್ನು ದೋಣಿಯಲ್ಲಿ ಕುಳ್ಳಿರಿಸಿ ಕಡವಿನ ಬಾಗಿಲಿನ ದಡಕ್ಕೆ ತಲುಪಿ, ಬಳಿಕ ಅಲ್ಲಿಂದ ಓಬಿಎಂ ಯಂತ್ರದ ಮೂಲಕ ದೇವಾಲಯದ ಮುಂಬಾಗದಲ್ಲಿ ತಂದು ಬಿಡಲಾಯಿತು.

    ಪ್ರಭಾರ ಘಟಕಾಧಿಕಾರಿ ದಿನೇಶ್. ಬಿ,, ಗೃಹರಕ್ಷಕ ವಸಂತ.ಕೆ, ಈಜುಗಾರರಾದ ಸುದರ್ಶನ್, ಚೆನ್ನಪ್ಪ, ವಿಶ್ವನಾಥ್ ಶೆಟ್ಟಿಗಾರ್, ಹಾಜಿ ಇಸ್ಮಾಯಿಲ್ ಕಾರ್ಯಪ್ರವೃತ್ತರಾಗಿ ಜೀವ ಉಳಿಸಿದ್ದಾರೆ.

    DAKSHINA KANNADA

    ಭಾರೀ ಮಳೆಗೆ ಧರೆ ಕುಸಿದು ಮನೆಗೆ ಹಾನಿ, ಮಣ್ಣಿನಡಿ ಸಿಲುಕಿದ ಮಕ್ಕಳ ರಕ್ಷಣೆ

    Published

    on

    ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನು ತಂದೆಯೇ ಪಾರು ಮಾಡಿದ ಘಟನೆ ಬನ್ನೂರು ಸಮೀಪದ ಜೈನರಗುರಿಯಲ್ಲಿ ನಡೆದಿದೆ.

    ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿತವಾಗಿದೆ. ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಕುಸಿದು ಹಾನಿ ಉಂಟಾಗಿದೆ. ಮಜೀದ್ ಮತ್ತು ಇಬ್ಬರು ಮಲಗಿದ್ದ ಕೊಠಡಿ ಮೇಲೆ ಮಣ್ಣು ಬಿದ್ದಿದ್ದು ತಕ್ಷಣ ಎಚ್ಚೆತ್ತು ಮಣ್ಣಿನಡಿ ಇದ್ದ ಇಬ್ಬರು ಮಕ್ಕಳನ್ನ ತಂದೆ ಪಾರು ಮಾಡಿದ್ದಾರೆ.

    ಮನೆ ಪಕ್ಕದ ಧರೆಯೊಂದು ಸಡಿಲಗೊಂಡು ಮನೆ ಮೇಲೆ ಬಿದ್ದು ಹಾನಿ ಉಂಟಾಗಿದೆ. ಘಟನಾ ಸ್ಥಳಕ್ಕೆ ನಗರಸಭಾ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನಗರಸಭೆ ಮತ್ತು ಸ್ಥಳೀಯರಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

    Continue Reading

    DAKSHINA KANNADA

    ಕುಂಬಳೆ: ಪತ್ನಿಯ ಸೀಮಂತಕ್ಕಾಗಿ ವಿದೇಶದಿಂದ ಊರಿಗೆ ಬಂದಿದ್ದ ಯುವಕ ಬೈಕ್ ಅಪಘಾತದಲ್ಲಿ ಮೃತ್ಯು

    Published

    on

    ಕಾಸರಗೋಡು: ಎರಡು ದಿನಗಳ ಹಿಂದೆಯಷ್ಟೇ ಪತ್ನಿಯ ಸೀಮಂತ ಕಾರ್ಯಕ್ರಮಕ್ಕಾಗಿ ಕೊಲ್ಲಿಯಿಂದ ಊರಿಗೆ ಬಂದಿದ್ದ ಯುವಕ ಬೈಕ್‌ ಅಪಘಾತದಲ್ಲಿ ಸಾವಿಗೀಡಾದ ಘಟನೆ ನಡೆದಿದೆ. ಬಂಬ್ರಾಣ ಉಜಾರು ನಿವಾಸಿ ದಿ|ಅಮ್ಮು ಶೆಟ್ಟಿ ಅವರ ಪುತ್ರ ಅಜಿತ್‌ ಶೆಟ್ಟಿ(32) ಸಾವಿಗೀಡಾದವರು.

    ಜೂ.24 ರಂದು ರಾತ್ರಿ 9.30ಕ್ಕೆ ಆರಿಕ್ಕಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಬೈಕ್‌ ಅಪಘಾತದಲ್ಲಿ ಈ ಸಾವು ಸಂಭವಿಸಿದೆ.

    ಅವರು ಕತಾರ್‌ನಲ್ಲಿ ಉದ್ಯೋಗದಲ್ಲಿದ್ದರು. ಜೂ. 22ರಂದು ಊರಿಗೆ ಬಂದಿದ್ದರು. ಜೂ. 23ರಂದು ಪತ್ನಿಯ ಸೀಮಂತ ಕಾರ್ಯಕ್ರಮ ನಡೆದಿತ್ತು. ಜೂ. 24ರಂದು ರಾತ್ರಿ ಕುಂಬಳೆ ಪೇಟೆಗೆ ಬಂದ ಅಜಿತ್‌ ಶೆಟ್ಟಿ ಆಹಾರ ವಸ್ತುಗಳನ್ನು ಖರೀದಿಸಿ ಬುಲೆಟ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ ಆರಿಕ್ಕಾಡಿ ಶ್ರೀ ಹನುಮಾನ್‌ ದೇವಸ್ಥಾನ ಸಮೀಪ ಬೈಕ್‌ ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಹಾಗು ಇತರ ಪ್ರಯಾಣಿಕರು ಕುಂಬಳೆಯ ಜಿಲ್ಲಾ ಸರಕಾರಿ ಆಸ್ಪತ್ರೆಗೆ ತಲುಪಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದರು. ಮೃತರು ತಾಯಿ, ಪತ್ನಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

    Continue Reading

    DAKSHINA KANNADA

    ಕರಾವಳಿಯಲ್ಲಿ ಬಿರುಸು ಪಡೆದುಕೊಂಡ ಮಳೆ; ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ

    Published

    on

    ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜೂ.26ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್‌ ಅಥವಾ ರೆಡ್‌ ಅಲರ್ಟ್‌ನ ಮುನ್ಸೂಚನೆ ನೀಡಿದೆ. ಹಾಗಾಗಿ ದಕ್ಷಿಣ ಕನ್ನಡ ಸಹಿತ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಂಭವ ಇದ್ದು, ಈ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಸೂಚನೆ ನೀಡಿದ್ದಾರೆ.

    ಇನ್ನು ಬಂಟ್ವಾಳದ ಬಿ.ಸಿ.ರೋಡ್‌- ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಭಾಗವಾಗಿ ಕಲ್ಲಡ್ಕದಲ್ಲಿ ನಿರ್ಮಾಣಗೊಳ್ಳುವ ಫ್ಲೈಓವರ್‌ ಕಾಮಗಾರಿಯಿಂದ ಹೆದ್ದಾರಿ ಅವ್ಯವಸ್ಥೆ ಮುಂದುವರಿದಿದ್ದು, ನಿನ್ನೆ ಮಧ್ಯಾಹ್ನದ ಬಳಿಕ ಸುರಿದ ಧಾರಾಕಾರ ಮಳೆಯಿಂದಾಗಿ ಕಲ್ಲಡ್ಕದ ಸರ್ವೀಸ್‌ ರಸ್ತೆಯಲ್ಲಿ ಕೃತಕ ನೆರೆ ಸೃಷ್ಟಿಯಾಗಿತ್ತು. ಮಳೆ ನೀರು ಹರಿಯಲು ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ಇಲ್ಲಿ ನಿರಂತರ ಸಮಸ್ಯೆಯಾಗುತ್ತಿದ್ದು, ವಾಹನಗಳು ನೀರಿನಲ್ಲೇ ಸಂಚರಿಸುವಂತಾಗಿತ್ತು.

    ಸಣ್ಣ ವಾಹನಗಳ ಚಕ್ರಗಳು ಪೂರ್ತಿ ಮುಳುಗುವಷ್ಟರ ಮಟ್ಟಿಗೆ ರಸ್ತೆಯಲ್ಲಿ ನೀರು ತುಂಬಿತ್ತು. ಹೆದ್ದಾರಿ ಕಾಮಗಾರಿ ಪ್ರಾರಂಭವಾದಂದಿನಿಂಲೂ ಸಂಚಾರ ನಿರಂತರ ತೊಂದರೆಯಾಗುತ್ತಿದೆ. ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು, ನೂತನ ಸಂಸದರು ಜನರಿಗೆ ತೊಂದರೆಯಾಗದ ರೀತಿಯಲ್ಲಿ ಕಾಮಗಾರಿ ನಿರ್ವಹಿಸುವಂತೆ ಪದೇಪದೆ ಸೂಚನೆ ನೀಡಿದ್ದು, ಸ್ವತಃ ದ.ಕ.ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿ ಸಮರ್ಪಕ ಕಾಮಗಾರಿ ನಿರ್ವಹಣೆಗೆ ನಿರ್ದೇಶನ ನೀಡಿದರೂ ಸಮಸ್ಯೆ ಯಥಾಸ್ಥಿತಿಯಲ್ಲೇ ಇದೆ ಎನ್ನುವುದಕ್ಕೆ ರವಿವಾರದ ಕೃತಕ ನೆರೆ ಸಾಕ್ಷಿಯಾಯಿತು.

    ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಇದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಂಭಾವ್ಯ ಅನೀರಿಕ್ಷಿತ ಅನಾಹುತಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪ್ರಾಕೃತಿಕ ವಿಕೋಪದ ಸಮಸ್ಯೆಗಳಿಗೆ ಪಾಲಿಕೆಯಲ್ಲಿ ಕಂಟ್ರೋಲ್‌ ರೂಂ ತೆರೆಯಲಾಗಿದೆ. ದೂರವಾಣಿ ಸಂಖ್ಯೆ 0824 -2220306 ಅಥವಾ ವಾಟ್ಸಾಪ್ ಸಂಖ್ಯೆ 9449007722 ಸಂಪರ್ಕಿಸಿ ಸಾರ್ವಜನಿಕರು ಮಳೆಯಿಂದ ಉಂಟಾದ ಯಾವುದೇ ಸಮಸ್ಯೆಗಳನ್ನು ಪರಿಹರಿಸಬಹುದಾಗಿದೆ ಎಂದು ಮಹಾನಗರಪಾಲಿಕೆ ಪ್ರಕಟಣೆ ತಿಳಿಸಿದೆ.

    Continue Reading

    LATEST NEWS

    Trending