LATEST NEWS
ಚಲಿಸುತ್ತಿದ್ದ ಕಾರಿನಲ್ಲಿ ಹೆಬ್ಬಾವು ಪ್ರತ್ಯಕ್ಷ..! ಬೋನೆಟ್ನಲ್ಲಿ ಬೆಚ್ಚಗೆ ಮಲಗಿದ್ದ ಹೆಬ್ಬಾವು..!!
ಉಡುಪಿ: ಬೈಂದೂರಿನ ನಾಡ ಗ್ರಾಮದ ಕೋಣ್ಕಿ ಚಂದ್ರಪ್ರಕಾಶ್ ಶೆಟ್ಟಿ ಅವರ ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ. ಇವರು ಬಡಾಕೆರೆ ಜೋಯಿಸರ ಬೆಟ್ಟು ನಿವಾಸಿಯಾಗಿದ್ದು, ಕಾರಿನ ಬೋನೆಟ್ ಒಳಗೆ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದೆ.
ಎಂದಿನಂತೆ ಕಾರು ಚಲಾಯಿಸುತ್ತಾ ಬರುತ್ತಿರುವಾಗ ದಾರಿ ಮಧ್ಯದಲ್ಲಿ ಕಾರಿನ ಬೋನೆಟಿನಲ್ಲಿ ವಿಪರೀತ ಶಬ್ದವಾಗಿದೆ. ಇಳಿದು ಗಮನಿಸಿದಾಗ 12 ಫೀಟ್ ಉದ್ದದ ಹೆಬ್ಬಾವು ಇರುವುದು ಕಂಡು ಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾಗಿ ಅರಣ್ಯ ಅಧಿಕಾರಿಗಳಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ತಕ್ಷಣ ಅಧಿಕಾರಿಗಳು ಆಗಮಿಸಿ ಕಾರಿನ ಬೋನಟ್ ಒಳಗಿರುವ ಹೆಬ್ಬಾವನ್ನು ಸತತ ಕಾರ್ಯಾಚರಣೆಯಿಂದ ಹೊರತೆಗೆದಿದ್ದಾರೆ.
ಮಾವನ ಮನೆಯ ಪಿತೃಪಕ್ಷ ಊಟಕ್ಕೆ ಪೊಲೀಸ್ ಜೀಪ್ ಕರೆಸಿಕೊಂಡ ಭೂಪ..!
ಬೃಹತ್ ಗಾತ್ರದ ಹೆಬ್ಬಾವನ್ನು ಸ್ಥಳೀಯರ ಸಹಾಯ ಪಡೆದುಕೊಂಡು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಡಲಾಗಿದೆ. ಈ ಸಂದರ್ಭದಲ್ಲಿ ಅರಣ್ಯ ಅಧಿಕಾರಿಗಳು ಗ್ರಾಮ ಪಂಚಾಯಿತಿ ಸದಸ್ಯರು ಸಹಕರಿಸಿದರು.
LATEST NEWS
ಸೆ.29ರಂದು ಕೋಟಿ ಗಾಯತ್ರಿ ಜಪಾಯಜ್ಞ ಸಂಕಲ್ಪ ದಿನ
ಮಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಕೇಂದ್ರ ಸಮಿತಿ ಹಾಗೂ ಮಹಾಸಭಾದ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಜಂಟಿಯಾಗಿ ಮಂಗಳೂರಿನ ಚಿತ್ರಾಪುರ ಮಠದ ಸಹಕಾರದೊಂದಿಗೆ ಅ. 26 ಮತು 27ರಂದು ನಡೆಸಲು ಉದ್ದೇಶಿಸಿದ ಗಾಯತ್ರಿ ಸಂಗಮ ಸಾಂಘಿಕ ಕೋಟಿ ಗಾಯತ್ರೀ ಜಪಯಜ್ಞದ ಪೂರ್ವಾಭಾವಿಯಾಗಿ ಸೆ. 29ನೇ ಭಾನುವಾರ ಬೆಳಗ್ಗೆ 10.00 ಗಂಟೆಗೆ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ಸನ್ನಿಧಾನದಲ್ಲಿ ಸಂಕಲ್ಪ ದಿನ ಆಯೋಜಿಸಲಾಗಿದೆ.
ಇದೇ ವೇಳೆ ಮಾತೆಯರು ಸರ್ವಮಂಗಳ ಮಾಂಗಲ್ಯ ಸ್ತೋತ್ರ ಪಠಣ ಸಂಕಲ್ಪ ಮಾಡಲಿದ್ದಾರೆ ಎಂದು ಪ್ರಧಾನ ಸಂಚಾಲಕ ಶ್ರೀಧರ ಹೊಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ರಾಹ್ಮಣ ಸಮುದಾಯದ ಎಲ್ಲ ಜ್ಞಾನಿಗಳು, ವಿದ್ವಾಂಸರು, ವಿಪ್ರರು, ಮುಂದಾಳುಗಳು, ಹಿರಿಯರು, ಯುವಸಮುದಾಯ, ಮಕ್ಕಳು, ಮಹಿಳೆಯರು ಹೀಗೆ ಎಲ್ಲರೂ ಸೇರಿ ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮತೇಜದ ಬೆಳಕಲಿ ಎಂಬ ಸದಾಶಯದೊಂದಿಗೆ ಕಡಲ ಕಿನಾರೆ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಕೋಟಿ ಗಾಯತ್ರಿ ಜಪಯಜ್ಞ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪೂರ್ವಾಭಾವಿಯಾಗಿ ನಡೆಯುವ ಸಂಕಲ್ಪ ದಿನದಂದು ರಾಜ್ಯ ಧಾರ್ಮಿಕ ಪರಿಷತ್ನ ಮಾಜಿ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಆಶಯ ಭಾಷಣ ಮಾಡಲಿದ್ದಾರೆ.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷ ನ್ಯಾಯವಾದಿ ಮಹೇಶ್ ಕಜೆ ಅವರು ಮಹಾಸಭಾದ ಧ್ಯೇಯ ಉದ್ದೇಶಗಳನ್ನು ಜನರಿಗೆ ತಿಳಿಸಲಿದ್ದಾರೆ. ಯಾಗ ಸಮಿತಿಯ ಸಂಚಾಲಕ ಕಟೀಲಿನ ಅನುವಂಶಿಕ ಅರ್ಚಕ ಶ್ರೀಹರಿ ನಾರಾಯಣ ದಾಸ ಆಸ್ರಣ್ಣ ಅವರು ಯಜ್ಞದ ಬಗ್ಗೆ ಮಾಹಿತಿ ನೀಡಲಿರುವರು.
ಶರವು ಕ್ಷೇತ್ರದ ಶಿಲೆಶಿಲೆ ಆಡಳಿತ ಮೊಕ್ತೇಸರ ಶರವು ಶ್ರೀ ರಾಘವೇಂದ್ರ ಶಾಸ್ತ್ರಿ, ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಆಡಳಿತ ಮೊಕ್ತೇಸರ ವೇ.ಮೂ. ವಾಸುದೇವ ಆಸ್ರಣ್ಣರು, ಬ್ರಹ್ಮಶ್ರೀ ಕುಡುಪು ಕೃಷ್ಣರಾಜ ತಂತ್ರಿಗಳು, ಜ್ಯೋತಿಷಿ ನಾಗೇಂದ್ರ ಭಾರದ್ವಾಜ್, ಕರ್ನಾಟಕ ಬ್ಯಾಂಕಿನ ನಿಕಟ ಪೂರ್ವ ಅಧ್ಯಕ್ಷರಾದ ಎಂ.ಎಸ್. ಮಹಾಬಲೇಶ್ವರ ಭಟ್, ಧರ್ಮದರ್ಶಿ ಹರಿಕೃಷ್ಣ ಪುನರೂರು, ವೇದಮೂರ್ತಿ ಕೃಷ್ಣ ಭಟ್ ಪಾವಂಜೆ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ದೇವಾಲಯದ ಅರ್ಚಕರು, ಜಿಲ್ಲೆಯ ಎಲ್ಲ ಪುರೋಹಿತರು, ಸಹಾಯಕ ಪುರೋಹಿತರು, ಸಂಸ್ಕೃತ ಶಿರೋಮಣಿಗಳು, ವೇದಜ್ಞರು ಭಾಗವಹಿಸಲಿರುವರು.
ಕೋಟಿ ಗಾಯತ್ರಿ ಜಪಯಜ್ಞ ಯಶಸ್ವಿಗಾಗಿ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಬ್ರಾಹ್ಮಣ ಸಮುದಾಯ ಸಂಕಲ್ಪ ಮಾಡಿ ಜಪ ಆರಂಭಿಸಿರುತ್ತಾರೆ. ಯಶಸ್ವಿಗಾಗಿ ಹಲವು ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.
BANTWAL
ಹಿರಿಯ ಸಾಮಾಜಿಕ ಮುಂದಾಳು ಉದ್ಯಮಿ ರಘು ಸಪಲ್ಯ ನಿ*ಧನ
ಮಂಗಳೂರು: ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯದಲ್ಲಿ ಸಕ್ರೀಯರಾಗಿದ್ದ ಮತ್ತು ಹಲವು ದೇವಸ್ಥಾನಗಳ ಅಧ್ಯಕ್ಷರಾಗಿ, ದೇವಸ್ಥಾನಗಳ ಅಭಿವೃದ್ದಿಗೆ ಕಾರಣೀಕರ್ತರಾಗಿದ್ದ ಉದ್ಯಮಿ ರಘು ಸಪಲ್ಯ ನಿ*ಧನರಾಗಿದ್ದಾರೆ.
ಬಂಟ್ವಾಳ ತಾಲೂಕು ಗಾಣಿಗ ಸಂಘದ ಅಧ್ಯಕ್ಷರಾಗಿ, ಸುಮಂಗಲ ಹಾಲ್ ಹಾಗೂ ಸುಮಂಗಲ ಕೋ ಅಪರೇಟ್ ಬ್ಯಾಂಕ್ ಸ್ಥಾಪನೆಯ ಮೂಲಕ ಸಹಕಾರಿ ಕ್ಷೇತ್ರಕ್ಕೂ ತಮ್ಮ ಕೊಡುಗೆ ನೀಡಿದ್ದಾರೆ. ಜ್ಯೋತಿ ಬೀಡಿ ಎಂಬ ಬೀಡಿ ಉದ್ಯಮದ ಮೂಲಕ ಅನೇಕ ಬಡ ಕುಟುಂಬಗಳಿಗೆ ಬದುಕು ಕಟ್ಟಿಕೊಟ್ಟ ಹೆಗ್ಗಳಿಕೆ ಇವರದ್ದು. ಬಡವರಿಗೆ ಅಶಕ್ತರಿಗೆ ಹಾಗೂ ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಗಳಿಗೆ ಕೊಡುಗೈ ಧಾನಿಯಾಗಿ ಇವರು ಗುರುತಿಸಿಕೊಂಡಿದ್ದರು.
ಅಪಾರ ದೈವ ಭಕ್ತರಾಗಿದ್ದ ರಘು ಸಪಲ್ಯ ಅವರು ಜಿಲ್ಲೆಯಲ್ಲಿ ಮಾತ್ರವಲ್ಲದೆ ಹೊರ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳ ಅಭಿವೃದ್ದಿಗೆ ಸಹಕಾರ ನೀಡಿದ್ದರು. ನೇರ ನಡೆನುಡಿಯವರಾಗಿದ್ದರೂ ಅಜಾತ ಶತ್ರು ಎಂಬ ಹೆಸರು ಗಳಿಸಿದ್ದ ಇವರು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂಘದ ಸ್ವಯಂ ಸೇವಕರಾಗಿ ಹೋರಾಟದಲ್ಲಿ ಭಾಗಿಯಾಗಿದ್ದರು.
ಪಾಣೆ ಮಂಗಳೂರು ಭಯಂಕೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಟ್ರಸ್ಟ್, ಉಳಿಯ ಕ್ಷೇತ್ರ, ಅತ್ತಾವರ ಉಮಾಮಹೇಶ್ವರ ಕ್ಷೇತ್ರ, ಕೀರ್ತಿಶ್ವರ ಕ್ಷೇತ್ರ ಮಂಜೇಶ್ವರ, ಕೋದಂಡ ರಾಮ ಭಜನಾ ಮಂದಿರ ಹೀಗೆ ಹಲವಾರು ಧಾರ್ಮಿಕ ಕ್ಷೇತ್ರದಲ್ಲಿ ಇವರು ಸೇವೆ ಸಲ್ಲಿಸಿದ್ದಾರೆ.
DAKSHINA KANNADA
ಪಂಜುರ್ಲಿ ದೈವದ ವೇಷ ಧರಿಸಿ ಅಸಭ್ಯ ನೃತ್ಯ ಆರೋಪ: ಜೈ ತುಳುನಾಡು ಸಂಘಟನೆಯಿಂದ ದೂರು
ಇತ್ತೀಚೆಗೆ ಸಾರ್ವಜನಿಕವಾಗಿ ತುಳುನಾಡ ದೈವಗಳ ಅವಹೇಳನ ನಡೆಯುತ್ತಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ಡ್ಯಾನ್ಸ್ ಅಕಾಡೆಮಿಯೊಂದರಲ್ಲಿ ಪಂಜುರ್ಲಿ ದೈವದ ವೇಷ ಹಾಕಿ ನರ್ತಿಸಿದ್ದೂ ಅಲ್ಲದೆ ಆಕ್ಷೇಪ ವ್ಯಕ್ತಪಡಿಸಿದ್ದ ಕರಾವಳಿ ಯುವಕರನ್ನ ಸಭಾಂಗಣದಿಂದ ಹೊರ ಹಾಕಲಾಗಿತ್ತು. ಇದಾದ ಬಳಿಕ ಗಣೇಶೋತ್ಸವದಲ್ಲೂ ಇಂತಹದೇ ಘಟನೆ ಮರುಕಳಿಸಿತ್ತು. ಮತ್ತಿಕೆರೆ ಯಲ್ಲಮ್ಮ ದೇವಸ್ಥಾನದ ಅರ್ಚಕ ವೆಂಕಟೇಶ್ ಎಂಬವರು ದೈವದ ವೇಷ ಧರಿಸಿ ಅಸಭ್ಯವಾಗಿ ನೃತ್ಯ ಮಾಡಿದ್ದರು. ಇದಕ್ಕೂ ಕೂಡಾ ಸ್ಥಳೀಯವಾಗಿದ್ದ ಕರಾವಳಿಯ ಯುವಕರ ವಿರೋಧ ವ್ಯಕ್ತಪಡಿಸಿದ್ದರು.
ಇದೀಗ ಜೈ ತುಳುನಾಡು ಎಂಬ ಸಂಘಟನೆ ಯಶವಂತರ ಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದೆ. ಮತ್ತಿಕೆರೆ ಯಲ್ಲಮ್ಮ ದೇವಸ್ಥಾನದ ಅರ್ಚಕರು ಉದ್ದೇಶ ಪೂರ್ವಕವಾಗಿ ತುಳುನಾಡ ದೈವಗಳಿಗೆ ಅಪಚಾರ ಮಾಡಿದ್ದು, ದೈವಾರಾಧಕರಾದ ನಮ್ಮ ಭಾವನೆಗೆ ದಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇನ್ನು ಮುಂದೆ ಇಂತಹ ದೈವದ ಅವಹೇಳನ ಪುನಾರಾವರ್ತನೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
- FILM6 days ago
ಕನ್ನಡದ ಸೀರಿಯಲ್ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ
- DAKSHINA KANNADA6 days ago
ಕನ್ನಡದಲ್ಲಿ ಔಷಧ ಚೀಟಿ ಬರೆದು ಗಮನ ಸೆಳೆದ ಕಾಸರಗೋಡು ಜಿಲ್ಲೆಯ ದಂತ ವೈದ್ಯ..!
- LATEST NEWS5 days ago
ವೃಶ್ಚಿಕದಲ್ಲಿ ಬುಧ-ಶುಕ್ರ ಯುತಿ; ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ
- LATEST NEWS5 days ago
ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ರೈಲನ್ನು ಸ್ಫೋಟಿಸಲು ಯತ್ನ