Connect with us

    DAKSHINA KANNADA

    ಮೂಡುಬಿದ್ರೆ: ಗ್ರಾಮಸಭೆಯಲ್ಲಿ ವಾಗ್ವಾದ-ಆಣೆ ಪ್ರಮಾಣಕ್ಕೆ ಮುಂದಾದ ಸದಸ್ಯ

    Published

    on

    ಮೂಡುಬಿದ್ರೆ: ಕುಡುಬಿ ಜನಾಂಗದ 6 ಕುಟುಂಬಗಳಿಗೆ 164 ಸರ್ವೇ ನಂಬ್ರದಲ್ಲಿ ಮನೆಕಟ್ಟಿ ಕುಳಿತುಕೊಳ್ಳಲು ಅವಕಾಶ ಮಾಡಿಕೊಡಬೇಕೆಂದು ತಹಶೀಲ್ದಾರ್ ಪುಟ್ಟರಾಜು ಕಳೆದ ತಿಂಗಳು “ಗ್ರಾಮ ವಾಸ್ತವ್ಯ” ಸಂದರ್ಭದಲ್ಲಿ ಸೂಚನೆ ನೀಡಿದ್ದರು.

    ಅದರ ಬೆನ್ನಲೇ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಸೂಚಿಸಿದ್ದು ಇದಕ್ಕೆ ಕಾರಣ ಜಿ.ಪಂ. ನಿರ್ಗಮನ ಸದಸ್ಯ ಕೆ.ಪಿ.ಸುಚರಿತ ಶೆಟ್ಟಿ ಎಂದು ಆರೋಪಿಸಿ ಮೂಡುಬಿದಿರೆಯ ತೆಂಕಮಿಜಾರು ಗ್ರಾಮಸಭೆಯಲ್ಲಿ ನಿನ್ನೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.


    ತೆಂಕಮಿಜಾರು ಗ್ರಾ.ಪಂ ಅಧ್ಯಕ್ಷೆ ರುಕ್ಮಿಣಿ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ನಡೆದ ಎರಡನೇ ಸುತ್ತಿನ ಗ್ರಾಮಸಭೆಯಲ್ಲಿ ನಡೆದ ಚರ್ಚೆಯಲ್ಲಿ ತೆಂಕಮಿಜಾರು ಗ್ರಾ.ಪಂ. ವ್ಯಾಪ್ತಿಯ ಪಲ್ಕಿಟ್ಲ ಗುಡ್ಡ ಪ್ರದೇಶದಲ್ಲಿ ಸರಿಯಾದ ಮೂಲಭೂತ ಸೌಕರ್ಯವಿಲ್ಲದೆ ತಗಡುಶೀಟ್ ಹಾಕಿ ಮನೆ ಕಟ್ಟಿ ಕುಳಿತುಕೊಂಡಿದ್ದ ಕುಡುಬಿ ಜನಾಂಗದ ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿಕೊಡಬೇಕು ಎಂಬ ವಿಷಯದಲ್ಲಿ ಅನೇಕ ವಾಗ್ವಾದಗಳು ನಡೆದವು.

    ಒಂಟಿಮಾರಿನಲ್ಲಿ 2003ರಲ್ಲಿ 26 ಸೈಟ್‌ಗಳಿಗೆ ಹಕ್ಕುಪತ್ರವನ್ನು ನೀಡಲಾಗಿತ್ತು. ಆದರೆ ಕೆಲವರು ಬೇರೆ ಕಡೆಗಳಲ್ಲಿ ನಿವೇಶನವನ್ನು ಹೊಂದಿದ್ದಾರೆ.

    ಕಳೆದ ತಿಂಗಳು ತಹಶೀಲ್ದಾರ್ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಅವರು ಮೂಲಭೂತ ಸೌಕರ್ಯವಿಲ್ಲದ 6 ಕುಟುಂಬಗಳಿಗೆ ಮನೆಕಟ್ಟಿ ಕುಳಿತುಕೊಳ್ಳಲು ಒಂಟಿಮಾರಿನಲ್ಲಿ ಅವಕಾಶ ಕಲ್ಪಿಸಬೇಕೆಂದು ಸೂಚಿಸಿದ್ದರು.

    ಆದರೆ ಅಲ್ಲಿಂದ ಇನ್ನೊಂದು ಕಡೆಗೆ ಪರಿಶೀಲನೆ ನಡೆಸಲು ಹೋದ ಸಂದರ್ಭದಲ್ಲಿ ಅಲ್ಲಿಗೆ ಜಿ.ಪಂ.ನಿರ್ಗಮನ ಸದಸ್ಯೆ ಸುಚರಿತ ಶೆಟ್ಟಿ ಬಂದಿದ್ದು ತಹಶೀಲ್ದಾರ್ ಜತೆ ಮಾತನಾಡಿ ಹೋಗಿದ್ದರು.
    ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಅವರಿಗೆ ಎರಡು ಫೋನ್ ಕರೆಗಳು ಬಂದಿದ್ದವು.

    ಆ ನಂತರ ಪಂಚಾಯತ್‌ನವರೊಂದಿಗೆ ಮಾತನಾಡಿದ ತಹಶೀಲ್ದಾರ್ ತಾನು ಬದಲಿ ವ್ಯವಸ್ಥೆ ಮಾಡಲು ಸೂಚಿಸಿರುವ ಮನೆಗಳಿಗೆ ತಡೆ ಹಿಡಿಯುವಂತೆ ಶಾಸಕರು ತಿಳಿಸಿದ್ದಾರೆಂದು ಹೇಳಿದ್ದರು.
    ಇದನ್ನೇ ತಪ್ಪಾಗಿ ಗ್ರಹಿಸಿದ ಗ್ರಾಮಸ್ಥರು ಇದು ಸುಚರಿತ ಶೆಟ್ಟಿಯೇ ಹೇಳಿರಬಹುದೆಂದು ಗ್ರಾಮದಲ್ಲಿ ಪ್ರಚಾರ ಮಾಡಿದ್ದರು.

    ಸೈಟ್‌ನ್ನು ತಡೆ ಹಿಡಿಯಲು ತಾನು ಶಾಸಕರ ಬಳಿ ಹೇಳಿಲ್ಲ ಆದರೆ ಸುಮ್ಮನೆ ನನ್ನ ಮೇಲೆ ಅಪಪ್ರಚಾರ ಮಾಡಲಾಗಿದೆ.

    ಈ ಬಗ್ಗೆ ತಾನು ಸತ್ಯ ಹೇಳಲು ಜಾರಂದಾಯನ ಕ್ಷೇತ್ರಕ್ಕೆ ಬರಲು ಸಿದ್ಧ ಎಂದು ಹೇಳಿ ಸಭೆಯಿಂದ ಕೆಳಗಿಳಿದರು.

    ಭಾಸ್ಕರ್ ಶೆಟ್ಟಿ ಹಾಗೂ ದಿನೇಶ್ ಅವರನ್ನು ಸಮಧಾನಪಡಿಸಿ ಗ್ರಾಮಸಭೆಯನ್ನು ಮುಂದುವರೆಸಲು ಅವಕಾಶ ನೀಡುವಂತೆ ವಿನಂತಿಸಿದರು. ಇದಕ್ಕೆ ಒಪ್ಪಿದ ಬಳಿಕ ಗ್ರಾಮಸಭೆ ಮುಂದುವರೆಯಿತು.

     

    DAKSHINA KANNADA

    ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು

    Published

    on

    ತೆಲಂಗಾಣ: ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಶುಕ್ರವಾರ ನಡೆದಿದೆ.

    ಅಂಜಲಿ ಕಾರ್ತಿಕಾ (9) ಮೃ*ತ ಬಾಲಕಿ. ಮೊಬೈಲ್​​​ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ.

    ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃ*ತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

    ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಕೆಲ ಹೊತ್ತಿನ ಹಿಂದೆ ಮನೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಪ್ರಾ*ಣ ಕಳೆದುಕೊಂಡಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    ಮೃ*ತ ಬಾಲಕಿ ಅಂಜಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ. ತಂದೆ ರಾಮಕೃಷ್ಣ ದೂರಿನ ಮೇರೆಗೆ ಎಸ್‌ಎಸ್‌ಐ ನಾಗುಲ್ಮೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    DAKSHINA KANNADA

    ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

    Published

    on

    ಚಾರ್ಮಾಡಿ: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಆದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.

    ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿಘಾಟ್‌ನ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್​ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಬಳಿಕ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯ್ತು.

    ಅತ್ತ ಮಂಗಳೂರಿಗೆ ತೆರಳುವವರನ್ನು ಪೊಲೀಸರು ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲೇ ವಾಹನಗಳನ್ನು ತಡೆದು ವಾಪಸ್ ಕಳಿಸಿದ್ದಾರೆ. ಅತ್ತ ಉಜಿರೆ ಬಳಿಯೂ ಚಾರ್ಮಾಡಿ ಘಾಟ್ ಪ್ರವೇಶ ನಿರ್ಬಂಧಿಸಲಾಗಿತ್ತು.

    Continue Reading

    DAKSHINA KANNADA

    ಅರ್ಜುನ್​ ಪತ್ತೆಗೆ ಸೇನೆಗೆ ಸಹಾಯ..! ಶಿರೂರಿಗೆ ಈಶ್ವರ ಮಲ್ಪೆಗೆ ಬುಲಾವ್..!

    Published

    on

    ಅಂಕೋಲ: ಶಿರೂರು ಗುಡ್ಡ ಕುಸಿತ ಪ್ರಕರಣ ಸಂಭವಿಸಿ ಇಂದಿಗೆ 12 ದಿನವಾಗಿದೆ. ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನದಿಯ ದಡದಲ್ಲಿ ಈಗಾಗಲೇ ಹುಡುಕಾಟ ಮುಗಿದಿದ್ದು, ಲಾರಿ ಮತ್ತು ಚಾಲಕ ಅರ್ಜುನ್​ ನದಿಯೊಳಗೆ ಇದ್ದಾರೆ ಎಂದು ಹೇಳಲಾಗುತ್ತಿದೆ. ಅತ್ತ ಗೋಕಾಕ್ ನಿಂದ ಬಂದ ಪೋಕ್ಲೈನ್ ತನ್ನ ಕೆಲಸ ಮುಗಿಸಿದ್ದು, ವಾಪಾಸ್ ಆಗುತ್ತಿದೆ.

    ಇಂದು ಅರ್ಜುನ್​ಗಾಗಿ ಮುಳುಗು ತಜ್ಞರಿಂದ ಹುಡುಕಾಟ ನಡೆಯಲಿದೆ. ಈಶ್ವರ್ ಮಲ್ಪೆ ತಂಡ ಇಂದು ಶಿರೂರಿಗೆ ಬರಲಿದ್ದು, ಅರ್ಜುನ್​​ಗಾಗಿ ಹುಡುಕಾಡಲಿದ್ದಾರೆ. ಜಿಲ್ಲಾಡಳಿತದ ಮನವಿ ಮೇರೆಗೆ ಮುಳುಗು ತಜ್ಞರ ತಂಡ ಶಿರೂರಿಗೆ ಆಗಮಿಸಲಿದ್ದಾರೆ.

     

    ಗಂಗಾವಳಿ ನದಿಯಲ್ಲಿ ನೀರಿನ ವೇಗ ಹೆಚ್ಚಿರುವ ಹಿನ್ನಲೆಯಲ್ಲಿ, ನೀರಿನೊಳಗೆ ಹೋಗಲು ನೌಕಾದಳದ ಮುಳುಗು ತಜ್ಞರು ಹಿಂದೇಟು ಹಾಕಿದ್ದಾರೆ. ಈ ವೇಳೆ ಶಾಸಕ ಸತೀಶ್ ಸೈಲ್ ಸ್ಥಳೀಯ ಮೀನುಗಾರ ಹಾಗೂ ಈಶ್ವರ್ ಮಲ್ಪೆ ಸಹಾಯ ಕೇಳಿದ್ದಾರೆ.

    ಇಂದು ಅರ್ಜುನ್​ ಮತ್ತು ಲಾರಿ ಪತ್ತೆಯಾದರೆ ನದಿಯ ಕೆಳಗೆ ಸುಮಾರು 20 ಅಡಿ ಆಳದಲ್ಲಿರುವ ಲಾರಿ ಮೇಲಕ್ಕೆ ಎತ್ತಲು ಪ್ರಯತ್ನ ನಡೆಯಲಿದೆ.

    Continue Reading

    LATEST NEWS

    Trending