LATEST NEWS
ಸೂರ್ಯ ಮುಳುಗದ ಸಾಮ್ರಾಜ್ಯದ ಮಹಾರಾಣಿಯ ‘ಇನ್ನೊಂದು ಮುಖ’
ಲಂಡನ್: ಸೂರ್ಯ ಮುಳುಗದ ದೇಶ ಬ್ರಿಟನ್ ರಾಣಿ ಎಲಿಜಬೆತ್ II ಅವರು ದೀರ್ಘಕಾಲದ ಅನಾರೋಗ್ಯದಿಂದ ನಿನ್ನೆ ರಾತ್ರಿ ನಿಧನರಾದರು.
ಇದೀಗ ರಾಣಿಯ ಹಿರಿಯ ಮಗ, ವೇಲ್ಸ್ನ ರಾಜಕುಮಾರ 73 ಹರೆಯದ ಚಾರ್ಲ್ಸ್ ಅವರು ತಕ್ಷಣದಿಂದಲೇ ಅನ್ವಯವಾಗುವಂತೆ ರಾಜನಾಗಿ ಕರ್ತವ್ಯ ನಿಭಾಯಿಸುವರು.
ರಾಣಿ ಎಲಿಜಬೆತ್ ಅವರ 96 ವರ್ಷಗಳ ಜೀವಿತಾವಧಿಯಲ್ಲಿ ಅನೇಕ ಪ್ರಥಮಗಳ ಒಡತಿಯಾಗಿದ್ದರು. ಜೊತೆಗೆ ಹಲವು ವಿಶೇಷತೆಗಳನ್ನು ಅವರು ಹೊಂದಿದ್ದರು.
ಎಲಿಜಬೆತ್ ಬಗ್ಗೆ ಅತೀ ಹೆಚ್ಚು ಸರ್ಚ್
ರಾಣಿ ಎಲಿಜಬೆತ್ ನಿಧರಾದಾಗಿನಿಂದ ಆಕೆಯ ಬಗ್ಗೆ ಗೂಗಲ್ನಲ್ಲಿ ಅತೀ ಹೆಚ್ಚು ಸರ್ಚ್ ಮಾಡಿದ್ದಾರೆ. ಕಾರಣ ಆಕೆಯಲ್ಲಿ ಹಲವು ವಿಶೇಷತೆಗಳಿದ್ದವು. ಆಕೆಯ ಹವ್ಯಾಸ, ರಾಜಮನೆತನ ಸೇರಿದಂತೆ ಹಲವು ವಿಷಯಗಳನ್ನು ಸರ್ಚ್ ಮಾಡಿದ್ದಾರೆ. ‘ರಾಣಿ ಎಲಿಜಬೆತ್ II’ ಎಂಬ ಪದ ಗೂಗಲ್ ಸರ್ಚ್ ಎಂಜಿನ್ನಲ್ಲಿ ಅತೀ ಹೆಚ್ಚು ಸರ್ಚ್ ಆಗಿದೆ.
ವರ್ಷದಲ್ಲಿ ಎರಡು ಬಾರಿ ಬರ್ತ್ಡೇ ಆಚರಿಸುತ್ತಿದ್ದ ರಾಣಿ ಎಲಿಜಬೆತ್
ಬ್ರಿಟನ್ ರಾಣಿ ಎಲಿಜಬೆತ್ ಅವರು ವರ್ಷಕ್ಕೆ ಎರಡು ಬಾರಿ ಅಂದರೆ ಏಪ್ರಿಲ್ 21 ಮತ್ತು ಜೂನ್ 11ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಒಂದು ಅವರ ಅಧಿಕೃತ ಜನ್ಮದಿನ. ಅಂದು ಕುಟುಂಬಸ್ಥರೊಂದಿಗೆ ಕಾಲ ಕಳೆಯುತ್ತಿದ್ದರು. ಮತ್ತೊಂದು ಪ್ರಜೆಗಳಿಗಾಗಿ ಮೀಸಲಾಗಿರುವ ಹುಟ್ಟು ಹಬ್ಬ.
ಬ್ರಿಟೀಷರ ಅತ್ಯಂತ ಸುಧೀರ್ಘ ಅವಧಿಯ ರಾಣಿ
ಎಲಿಜಬೆತ್ II ಸುಧೀರ್ಘ ಆಡಳಿತ ನಡೆಸುವ ಮೂಲಕ ತನ್ನ ಅಜ್ಜಿ ವಿಕ್ಟೋರಿಯಾ ಹೆಸರಲ್ಲಿದ್ದ ದಾಖಲೆಯನ್ನೂ ಮುರಿದಿದ್ದರು.
ಪಾಸ್ಪೋರ್ಟು-ಡ್ರೈವಿಂಗ್ ಲೈಸೆನ್ಸ್ ಇಲ್ಲ
ಬ್ರಿಟನ್ನ ಯಾವುದೇ ರಸ್ತೆಯಲ್ಲಿ ವಾಹನ ಪರವಾನಗಿ ಇಲ್ಲದೆ ಚಲಾಯಿಸಲು ಅನುಮತಿ ಪಡೆದ ಏಕೈಕ ವ್ಯಕ್ತಿ ಕೂಡ ರಾಣಿ ಎಲಿಜಬೆತ್. ಮತ್ತೊಂದು ವಿಶೇಷತೆ ಅಂದರೆ ಇವರು ಪಾಸ್ಪೋರ್ಟ್ ಇಲ್ಲದೆ ಈ ಜಗತ್ತಿನಲ್ಲಿ ಎಲ್ಲಿ ಬೇಕಾದರೂ ಪ್ರಯಾಣಿಸಬಹುದಾಗಿತ್ತು.
ರಾಜಮನೆತನದ ಪ್ರತಿಯೊಬ್ಬರಿಗೂ ಪಾಸ್ಪೋರ್ಟ್ ಅಗತ್ಯವಿದೆ. ಆದರೆ ಇವರಿಗೆ ಮಾತ್ರ ಪಾಸ್ಪೋರ್ಟ್ ಅಗತ್ಯವಿಲ್ಲ. ಕಾರಣ ಪ್ರತಿಯೊಂದು ಪಾಸ್ಪೋರ್ಟ್ ಅನ್ನು ರಾಣಿಯ ಹೆಸರಿನಲ್ಲಿ ನೀಡಲ್ಪಡುತ್ತಿತ್ತು.
ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದ ಮೊದಲ ಮತ್ತು ಏಕೈಕ ಮಹಿಳೆ
ರಾಣಿ ಎಲಿಜಬೆತ್ ಬ್ರಿಟಿಷ್ ರಾಜಮನೆತನದ ಇತಿಹಾಸದಲ್ಲಿ ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದ ಮೊದಲ ಮತ್ತು ಏಕೈಕ ಮಹಿಳೆ. ಎರಡನೇ ಮಹಾಯುದ್ಧದ ಸಮಯದಲ್ಲಿ ಈಕೆಗೆ 18 ವರ್ಷ ವಯಸ್ಸಾಗಿತ್ತು. ಈ ವೇಳೆ ರಾಣಿ ಎಲಿಜಬೆತ್ II ಮೆಕ್ಯಾನಿಕ್ ಮತ್ತು ಟ್ರಕ್ ಡ್ರೈವರ್ ಆಗಿ ಸೇವೆ ಸಲ್ಲಿಸಿದ್ದರು.
ಭಾರತಕ್ಕೆ ಮೂರು ಬಾರಿ ಭೇಟಿ ಮಾಡಿದ್ದ ರಾಣಿ ಎಲಿಜಬೆತ್
ರಾಣಿ ತನ್ನ ಆಳ್ವಿಕೆಯಲ್ಲಿ 100ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಭೇಟಿ ನೀಡಿದ್ದರು. ಭಾರತಕ್ಕೂ ಮೂರು ಬಾರಿ ಭೇಟಿ ನೀಡಿದ್ದರು. 1961, 1983, 1997ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು. ಇದರ ಜೊತೆಗೆ ಫ್ರಾನ್ಸ್ಗೆ 13 ಬಾರಿ ಮತ್ತು ಕೆನಡಾಕ್ಕೆ 22 ಬಾರಿ ಭೇಟಿ ನೀಡಿದ್ದರು.
ವಿಶೇಷ ಧಿರಿಸಿನಿಂದಲೇ ಆಕರ್ಷವಾಗಿ ಕಾಣುತ್ತಿದ್ದರು
ಕೋಟು, ಟೋಪಿ ಅವರ ಹೆಗ್ಗುರುತಿನ ಧಿರಿಸಾಗಿತ್ತು. ಉಡುಪಿನ ವಿನ್ಯಾಸಕ್ಕೆ ವಿಶೇಷ ಗಮನ ನೀಡುತ್ತಿದ್ದ ಅವರು, ‘ವಿಭಿನ್ನ ಉಡುಪು ಧರಿಸುವುದು ನನ್ನ ಜನರಿಗಾಗಿಯಷ್ಟೇ ಅಲ್ಲ, ಮುಂದಿನ ಪೀಳಿಗೆಗೂ ಕೂಡಾ’ ಎಂದು ಹೇಳಿದ್ದರು. ಮಾಧ್ಯಮಗಳ ಎದುರು ಬರುವಾಗ ಝಗಮಗಿಸುವ, ಆಕರ್ಷಕ ಉಡುಪು ಧರಿವುದನ್ನು ಮರೆಯುತ್ತಿರಲಿಲ್ಲ. ಸಮೂಹದಲ್ಲಿ ಪ್ರತ್ಯೇಕವಾಗಿಯೇ ಕಾಣಲು ಬಯಸುತ್ತಿದ್ದರು.
LATEST NEWS
ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?
ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.
ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.
ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.
ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್ಟೈಮ್ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.
ಈ ಸೀರಿಯಲ್ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್ ತಂಡ ಸಂತಸ ಹಂಚಿಕೊಂಡಿದೆ.
LATEST NEWS
ಕೊಡಗು: ಮದುವೆ ಊಟ ಸೇವಿಸಿ ಅಸ್ವಸ್ಥ.. ಆಸ್ಪತ್ರೆ ಸೇರಿದ 150ಕ್ಕೂ ಹೆಚ್ಚು ಜನರು
ಕೊಡಗು: ಮದುವೆಯಲ್ಲಿ ಊಟ ಮಾಡಿದ ನೂರಾರು ಜನತೆ ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಪರಿಣಾಮ ಸುಮಾರು 150 ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ್ದಾರೆ.
ನಿನ್ನೆ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಜನರು ಸೇವಿಸಿದ್ದಾರೆ. ಊಟ ಸೇವಿಸಿದ ಬಳಿಕ ಸಂಜೆಯ ವೇಳೆಗೆ ಹಲವರಲ್ಲಿ ವಾಂತಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ಜನರು ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮದುವೆ ಊಟದಿಂದಾಗಿ ಕುಶಾಲನಗರದ ಆಸ್ಪತ್ರೆ ಕ್ಲೀನಿಕ್ ಗಳು ಫುಲ್ ಆಗಿವೆ. ಅತ್ತ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೂ ಹೊಗಿದ್ದಾರೆ. ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ ನೀಡಿ ಜನರ ಆರೋಗ್ಯ ವಿಚಾರಿಸಿದ್ದಾರೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.